ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ಯಾರೇ ಸಾರ್ವಜನಿಕ ಆಸ್ತಿಪಾಸ್ತಿಗೆ ನಷ್ಟ ಉಂಟು ಮಾಡುವುದು, ಕಾನೂನು ಕೈಗೆತ್ತಿಕೊಳ್ಳುವುದು ಖಂಡನೀಯ. ಕಿಡಿಗೇಡಿಗಳನ್ನು ಹಿಡಿದು ಕಾನೂನಿನ ಸುಪರ್ದಿಗೆ ಒಪ್ಪಿಸಬೇಕು. ಶಾಂತಿ ಭಂಗ ಮಾಡುವ, ಸಾರ್ವಜನಿಕ ಆಸ್ತಿಗೆ ಹಾನಿ ಮಾಡುವ, ಕಾನೂನನ್ನು ಮುರಿಯುವವರ ವಿರುದ್ಧ ಮುಲಾಜಿಲ್ಲದ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಜಿಲ್ಲಾಉಸ್ತುವಾರಿ ಸಚಿವ ಮಧು ಬಂಗಾರಪ್ಪ Minister Madhu Bangarappa ತಿಳಿಸಿದ್ದಾರೆ.
ರಾಗಿಗುಡ್ಡದಲ್ಲಿ ಕಲ್ಲು ತೂರಾಟ ಘಟನೆ ಸಂಬಂಧ ಪತ್ರಿಕಾ ಹೇಳಿಕೆ ಬಿಡುಗಡೆ ಮಾಡಿರುವ ಅವರು, ಶಿವಮೊಗ್ಗ ಜಿಲ್ಲೆಯು ಸಾಹಿತ್ಯ, ಸಂಸ್ಕೃತಿ, ಕಲೆ, ಪ್ರಕೃತಿ ಸೌಂದರ್ಯ ಮತ್ತು ಸಾಮರಸ್ಯಕ್ಕೆ ಹೆಸರಾಗಿದೆ. ಜಿಲ್ಲೆಯಲ್ಲಿ ಎಲ್ಲ ವರ್ಗದವರು ಶಾಂತಿ, ಸಹಬಾಳ್ವೆಯಿಂದ ಜೀವನ ನಡೆಸುತ್ತಿದ್ದಾರೆ. ಅದರಂತೆ ಹಿಂದೂ ಮಹಾಸಭಾದ ಗಣಪತಿ ವಿಸರ್ಜನಾ ಕಾರ್ಯಕ್ರಮ ಶಾಂತಿಯುತವಾಗಿ ನೆರವೇರಿದೆ. ಆದರೆ ಈದ್ ಮಿಲಾದ್ Eid Milad ಹಬ್ಬದಂದು ಅಹಿತಕರ ಘಟನೆ ನಡೆದಿರುವುದು ವಿಷಾದನೀಯ ಎಂದು ತಿಳಿಸಿದ್ದಾರೆ.
Also read: ಧಗ ಧಗ, ಕೊತ ಕೊತ ಇಲ್ಲ | ಅನಾವಶ್ಯಕವಾಗಿ ವದಂತಿ ಹಬ್ಬಿಸದಿರಿ | ಪೊಲೀಸರಿಗೆ ಸಹಕರಿಸಿ
ಶಾಂತಿ ಭಂಗಮಾಡುವ, ಸಾರ್ವಜನಿಕ ಆಸ್ತಿಗೆ ಹಾನಿ ಮಾಡುವ, ಕಾನೂನು ಮುರಿಯುವ ವ್ಯಕ್ತಿಗಳ ವಿರುದ್ಧ ಮುಲಾಜಿಲ್ಲದ ಕಠಿಣ ಕ್ರಮ ಕೈಗೊಳ್ಳಲಾಗುವುದು. ನಮ್ಮ ಜಿಲ್ಲೆಯಲ್ಲಿ ಇಂತಹ ಯಾವುದೇ ಕೃತಕ್ಕೆ ಅವಕಾಶವಿಲ್ಲ. ಜನರು ಶಾಂತಿ ಕಾಪಾಡಬೇಕು ಎಂದು ಮಧು ಬಂಗಾರಪ್ಪ ಮನವಿ ಮಾಡಿದ್ದಾರೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post