ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ಪ್ರತಿಯೊಬ್ಬ ವಿದ್ಯಾರ್ಥಿಯು ಒಬ್ಬ ತಪಸ್ವಿಯಂತೆ ಎಂದು ಕುವೆಂಪು ಹೇಳಿದ್ದರು. ಉಪನ್ಯಾಸಕ ವೃತ್ತಿಯಲ್ಲಿ ಸಿಗುವಷ್ಟು ಖುಷಿ ಬೇರೆ ಯಾವುದೇ ವೃತ್ತಿಯಲ್ಲಿ ಸಿಗುವುದಿಲ್ಲ. ಅದು ಪವಿತ್ರ ವೃತ್ತಿ ಎಂದು ಜಿಲ್ಲಾ ಒಕ್ಕಲಿಗರ ಸಂಘದ ಖಜಾಂಚಿ ಟಿ.ಪಿ. ನಾಗರಾಜ್ ಹೇಳಿದ್ದಾರೆ.
ಅವರು ಇಂದು ಕುವೆಂಪು ಶತಮಾನೋತ್ಸವ ಶಿಕ್ಷಣ ಮಹಾವಿದ್ಯಾಲಯದ 2023-24ನೇ ಶೈಕ್ಷಣಿಕ ಸಾಲಿನ ವಿದ್ಯಾರ್ಥಿ ಪರಿಷತ್ ಮತ್ತು ಸಾಂಸ್ಕøತಿಕ ಸಂಘದ ಉದ್ಘಾಟನ ಹಾಗೂ ಪ್ರತಿಭಾ ಪುರಸ್ಕಾರ ಸಮಾರಂಭವನ್ನು ಉದ್ಘಾಟಿಸಿ ಮಾತನಾಡಿದರು.

Also read: ಕಟ್ಟಡ ಸೋರುವ ಕುರಿತು ಸಚಿವ ಮಧು ಹೇಳಿಕೆ | ಆಯನೂರು ಮಂಜುನಾಥ್ ಸ್ಪಷ್ಟನೆಯೇನು?
ಸಂಘದ ನಾಯಕರು ಎಲ್ಲಾ ವಿದ್ಯಾರ್ಥಿಗಳ ಧ್ವನಿಯಾಗಿ ಕೆಲಸ ಮಾಡಬೇಕು. ಶಿಕ್ಷಕರು ಏನು ಹೇಳಿಕೊಡುತ್ತಾರೋ ಮಕ್ಕಳು ಅದನ್ನು ಮನಸ್ಸಿನಲ್ಲಿ ಹುದುಗಿಸಿಕೊಳ್ಳುತ್ತಾರೆ. ಶಿಕ್ಷಕರು ತುಂಬಾ ಶ್ರಮಪಟ್ಟು ಭವಿಷ್ಯದ ವಿದ್ಯಾರ್ಥಿಗಳನ್ನು ರೂಪಿಸಬೇಕು. ಶಿಕ್ಷಕರ ಪಾತ್ರ ದೇಶದ ಅಭಿವೃದ್ಧಿಯಲ್ಲಿ ಮತ್ತು ಸತ್ಪ್ರಜೆಗಳನ್ನು ರೂಪಿಸುವಲ್ಲಿ ಮಹತ್ತರವಾದ್ದದ್ದು ಎಂದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news 










Discussion about this post