ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ವಿದ್ಯಾರ್ಥಿಗಳಿಗೆ ಶಾಲೆಯಲ್ಲಿ ಆರೋಗ್ಯಕರ ವಾತಾವರಣವನ್ನು ಸೃಷ್ಟಿಸಿ, ನಮ್ಮ ದೇಶದ ಸಂಸ್ಕೃತಿಯನ್ನು ಉಳಿಸಬೇಕು ಮತ್ತು ಸಮಾಜದ ಮೌಲ್ಯಗಳನ್ನು ಬೆಳಸಬೇಕು ಎಂದು ನಟರಾಜ್ ಭಗವಾದ್ ಹೇಳಿದರು.
ನಗರದ ಜೈನ್ ಪಬ್ಲಿಕ್ ಶಾಲೆಯಲ್ಲಿ ಆಯೋಜಿಸಲಾಗಿದ್ದ 74ನೇ ಗಣರಾಜ್ಯೋತ್ಸವ ಸಮಾರಂಭದಲ್ಲಿ ಭಾಗವಹಿಸಿ ಅವರು ಮಾತನಾಡಿದರು.
ವಿದ್ಯಾರ್ಥಿಗಳು ಶಿಸ್ತುಬದ್ಧವಾದ ನಡವಳಿಕೆಯನ್ನು ಕಾಯ್ದುಕೊಂಡು ತಮ್ಮ ಅಮೂಲ್ಯವಾದ ಜವಾಬ್ದಾರಿಗಳನ್ನು ಸರಿಯಾದ ಮಾರ್ಗದಲ್ಲಿ ಮುನ್ನಡೆಸಿಕೊಂಡು ಹೋಗಬೇಕು. ಹಾಗೂ ಸದಾ ಚಟುವಟಿಕೆಯಿಂದ ಲವಲವಿಕೆಯಿಂದ ಸಿಕ್ಕ ಅವಕಾಶಗಳನ್ನು ಸದುಪಯೋಗಪಡಿಸಿಕೊಳ್ಳಿ ಎಂದು ವಿದ್ಯಾರ್ಥಿಗಳಿಗೆ ಕಿವಿಮಾತು ಹೇಳಿದರು.
ಈ ಸಂದರ್ಭದಲ್ಲಿ ಶಾಲೆಯ ಪ್ರಾಂಶುಪಾಲೆ ಪ್ರಿಯದರ್ಶಿನಿ, ಶಾಲಾ ಸಂಯೋಜಕಿ ದಿವ್ಯ ಶೆಟ್ಟಿ, ಸಿಇಒ ಸುಮಂತ್, ವ್ಯವಸ್ಥಾಪಕರಾದ ವಿಜಯ್ಕುಮಾರ್, ಪೋಷಕರು, ಶಿಕ್ಷಕರು, ವಿದ್ಯಾರ್ಥಿಗಳು, ಆಡಳಿತ ಮತ್ತು ಸಿಬ್ಬಂದಿಗಳು ಉಪಸ್ಥಿತರಿದ್ದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post