No Result
View All Result
Manipal Institute of Technology, Manipal Concludes NCIIPC–AICTE Pentathon 2026 Advanced Cybersecurity Bootcamp
English Articles

Manipal Institute of Technology, Manipal Concludes NCIIPC–AICTE Pentathon 2026 Advanced Cybersecurity Bootcamp

by ಕಲ್ಪ ನ್ಯೂಸ್
March 18, 2026
0

Kalpa Media House  |  Manipal | Manipal Institute of Technology (MIT), Manipal, a constituent unit of Manipal Academy of Higher...

Read moreDetails
Bengaluru Gets a World-Class Electronics Co-Innovation Hub as Henkel Launches Advanced Application Center

Bengaluru Gets a World-Class Electronics Co-Innovation Hub as Henkel Launches Advanced Application Center

March 17, 2026
Malnad is a Cultural ‘Gharana’ of Great Minds: Dr. Jayamala at Sahyadri Utsava

Malnad is a Cultural ‘Gharana’ of Great Minds: Dr. Jayamala at Sahyadri Utsava

March 13, 2026
ABB deepens Karnataka footprint with new investments to serve high growth emerging sectors

ABB deepens Karnataka footprint with new investments to serve high growth emerging sectors

March 12, 2026
“Rasamum Rasayanamum- Artistry meets Chemistry”

“Rasamum Rasayanamum- Artistry meets Chemistry”

March 11, 2026
  • Advertise With Us
  • Grievances
  • About Us
  • Contact Us
Wednesday, March 18, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ

ಸತ್ ಚಿಂತನೆಗಗಳಿಂದ ಸತ್ಕಾರ್ಯ ಮಾಡಿದಾಗ ಯಶಸ್ಸು ಸಿಗುತ್ತದೆ

ಹರಿಹರಪುರ ಮಠದ ಜಗದ್ಗುರು ಶಂಕರಾಚಾರ್ಯ ಶ್ರೀ ಸ್ವಯಂಪ್ರಕಾಶ ಸಚ್ಚಿದಾನಂದ ಸರಸ್ವತಿ ಮಹಾಸ್ವಾಮಿ ಆಶೀರ್ವಚನ

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
July 9, 2022
in ಶಿವಮೊಗ್ಗ
0
ಸತ್ ಚಿಂತನೆಗಗಳಿಂದ ಸತ್ಕಾರ್ಯ ಮಾಡಿದಾಗ ಯಶಸ್ಸು ಸಿಗುತ್ತದೆ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್   |  ಶಿವಮೊಗ್ಗ  |      

ನಮ್ಮೆಲ್ಲರ ಬದುಕು ಅತ್ಯಮೂಲ್ಯ ಹಾಗೂ ರಹಸ್ಯಾತ್ಮಕ. ಬದುಕಿದ್ದಾಗ ಕನಿಷ್ಠ ನಾಲ್ಕು ಜನರಿಗಾದರೂ ಬದುಕನ್ನು ಕೊಡುವಂತಿರಬೇಕು. ಒಳ್ಳೆಯ ಚಿಂತನೆ, ಒಳ್ಳೆಯ ಕೆಲಸ ಮಾಡುತ್ತಾ ನೂರು ವರ್ಷ ಬದುಕಿರಿ ಎಂಬುದು ಋಷಿ ಮುನಿಗಳು ಆಶೀರ್ವದಿಸುತ್ತಾರೆ. ಅದೇ ರೀತಿ ನಮ್ಮಲ್ಲಿರುವ ಆರು ಶತ್ರುಗಳಾದ ಕಾಮ, ಕ್ರೋಧ, ಲೋಭ, ಮೋಹ, ಮದ, ಮತ್ಸರಗಳನ್ನು ತೊರೆದು ಇಂದ್ರೀಯ ನಿಗ್ರಹಗಳ ಮೂಲಕ ಆ ಆರು ಶತ್ರುಗಳನ್ನು ಜಯಿಸಿದರೆ ಬದುಕು ಪರಿಪೂರ್ನತೆಗೊಳ್ಳುತ್ತದೆ ಎಂದು ಹರಿಹರಪುರ ಮಠದ ಜಗದ್ಗುರು ಶಂಕರಾಚಾರ್ಯ ಶ್ರೀ ಸ್ವಯಂಪ್ರಕಾಶ ಸಚ್ಚಿದಾನಂದ ಸರಸ್ವತಿ ಮಹಾಸ್ವಾಮಿಗಳವರು ಹೇಳಿದರು.

ಅವರು ಇಂದು ನಗರದ ಶುಭಮಂಗಳ ಸಮುದಾಯ ಭವನದಲ್ಲಿ ಶ್ರೀ ಶೈನೈಶ್ಚರ ದೇವಾಲಯ ಸಮಿತಿ ಟ್ರಸ್ಟ್ ವಿನೋಬನಗರ ವತಿಯಿಂದ ಹಮ್ಮಿಕೊಂಡಿದ್ದ ಶ್ರೀ ದೇವಾಲಯದ ಗರ್ಭಗುಡಿಗೆ ಕವಚ ಸಮರ್ಪಣೆ, ಲೋಕಕಲ್ಯಾಣಾರ್ಥವಾಗಿ ನಡೆಯುತ್ತಿರುವ ಶ್ರೀ ಯಜುಸಂಹಿತಾ ಯಾಗ ಮತ್ತು ವೇದನಾರಾಯಣಾನುಗ್ರಹ ಪ್ರಶಸ್ತಿ ಪ್ರದಾನ ಸಮಾರಂಭದ ಸಾನಿಧ್ಯ ವಹಿಸಿ ಆಶೀರ್ವಚನ ನೀಡಿದರು.
ಬದುಕಿನಲ್ಲಿ ಸ್ಥಾನ ಮಾನಗಳು, ಏರಿಳಿತಗಳು ಬರುತ್ತಿರುತ್ತವೆ. ಬದುಕಿನಲ್ಲಿ ಭರವಸೆ ಇಟ್ಟು ಎಲ್ಲವನ್ನು ಸಮಚಿತ್ತದಿಂದ ತೆಗೆದುಕೊಂಡು ಬದುಕಿನ ಭರವಸೆಯ ಸೌಧದಲ್ಲಿ ಅರಸನಂತೆ ಬಾಳಬೇಕು. ಇರುವಷ್ಟು ಕಾಲ ಸದ್ವಿಚಾರ, ಸತ್ ಚಿಂತನೆಗಳನ್ನು ಅಳವಡಿಸಿಕೊಂಡು ಸತ್ಕಾರ್ಯ ಮಾಡಿದಾಗ ಯಶಸ್ಸು ಸಿಗುತ್ತದೆ. ಅ.ಪ. ರಾಮಭಟ್ಟರು ತಮ್ಮ ಜೀವನದಲ್ಲಿ ಇದನ್ನು ಅಳವಡಿಸಿಕೊಂಡಿದ್ದಾರೆ. ಹಾಗಾಗಿ ಇಡೀ ಭಕ್ತ ಸಮೂಹ ಅವರ ಮೇಲೆ ಈ ಅಭಿಮಾನ ತೋರಿಸುತ್ತಿದೆ ಎಂದರು.

ಹೊರನಾಡು ಶ್ರೀ ಅನ್ನಪೂರ್ಣೇಶ್ವರಿ ದೇವಸ್ಥಾನದ ಧರ್ಮದರ್ಶಿ ಡಾ. ಭೀಮೇಶ್ವರ ಜೋಶಿ Dr. Bhimeshwara Joshi ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ, ಯಜ್ಞಕ್ಕೂ ಜೀವನಕ್ಕೂ ಸಾಮ್ಯವಿದೆ. ಜೀವನ ಎಂಬ ಯಜ್ಞದಲ್ಲಿ ರಾಗ, ದ್ವೇಷ, ಕೆಟ್ಟ ಸಂಸ್ಕಾರ, ಕೆಟ್ಟ ಚಿಂತನೆ ಮತ್ತು ಕೆಟ್ಟ ಹವ್ಯಾಸಗಳನ್ನು ಪೂರ್ಣಾಹುತಿ ನೀಡಿದಾಗ ಮಾತ್ರ ಜೀವನದಲ್ಲಿ ಧನ್ಯತೆ ಉಂಟಾಗುತ್ತದೆ ಎಂದರು.
ಅ.ಪ. ರಾಮಭಟ್ಟರಿಗೆ  ವೇದನಾರಾಯಣಾನುಗ್ರಹ ಪ್ರಶಸ್ತಿ ಪ್ರದಾನ ಮಾಡುತ್ತಿರುವುದು ಒಂದು ಸುಯೋಗ ಎನ್ನಬಹುದು. ಇಡೀ ಅರ್ಚಕ ಸಮುದಾಯಕ್ಕೆ ಅ.ಪ. ರಾಮಮಭಟ್ಟರು ಆದರ್ಶಪ್ರಾಯರು ಮತ್ತು ಅನುಕರಣೀಯರು ಎಂದರು.

Also read: ವೈಯಕ್ತಿಕ ಹಿತಾಸಕ್ತಿಯಿಂದ ಪಿಐಎಲ್ ಸಲ್ಲಿಸಿದರೆ ದಂಡ ಗ್ಯಾರೆಂಟಿ! ಹೈಕೋರ್ಟ್ ಎಚ್ಚರಿಕೆ

ಒಂದು ದೇವಾಲಯ ಯಾವ ರೀತಿಯ ಸತ್ಕಾರ್ಯಗಳನ್ನು ಮಾಡಬಹುದು ಎನ್ನುವುದಕ್ಕೆ ರವೀಂದ್ರನಗರದ ಗಣಪತಿ ದೇವಸ್ಥಾನದಲ್ಲಿ ನಿರಂತರವಾಗಿ ಭಜನೆ, ಕೀರ್ತನೆ, ಯಕ್ಷಗಾನ, ವೇದ ಪಾಠ, ಸಂಸ್ಕೃತ ಕಾರ್ಯಕ್ರಮಗಳು, ಉಪನ್ಯಾಸಗಳು, ಸಂಸ್ಕಾರ ಬೆಳೆಯಲು ಮತ್ತು ಸಂಸ್ಕೃತಿ ಕಾಪಾಡಲು ಬೇಕಾದ ಎಲ್ಲಾ ಕಾರ್ಯಕ್ರಮಗಳನ್ನು ದೇವಾಲಯದಲ್ಲಿ ಹಮ್ಮಿಕೊಂಡು ಕಲೆ ಮತ್ತು ಸಂಸ್ಕೃತಿಯ ಪೋಷಕರಾಗಿ ಸಮಾಜಕ್ಕೆ ಅತ್ಯಮೂಲ್ಯ ಕೊಡುಗೆ ನೀಡಿದ್ದಾರೆ ಎಂದರು.
ಗೃಹ ಸಚಿವ ಆರಗ ಜ್ಞಾನೇಂದ್ರ Home Minister Araga Gnanendra ಮಾತನಾಡಿ, ಅ.ಪ. ರಾಮಭಟ್ಟರು ಅವರ ಬದುಕಿನುದ್ದಕ್ಕೂ ಯಾರ ಬಗ್ಗೆಯೂ ಕೆಟ್ಟ ಆಲೋಚನೆ ಮಾಡದೇ ಬದುಕಿದವರು, ಅರ್ಚಕ ವೃತ್ತಿಗೆ ಅವರು ಮಾದರಿ ವ್ಯಕ್ತಿಯಾಗಿದ್ದಾರೆ ಎಂದು ಹೇಳಿದರು.

ಶಾಸಕ ಕೆ.ಎಸ್. ಈಶ್ವರಪ್ಪ MLA Eshwarappa ಮಾತನಾಡಿ, ಅ.ಪ. ರಾಮಭಟ್ಟರು ನಮ್ಮಂತಹ ಲಕ್ಷಾಂತರ ಜನರಿಗೆ ಮಾರ್ಗದರ್ಶಕರು. ಅವರು ಹುಟ್ಟಿದ ಊರು ಶರಾವತಿ ಉಗಮ ಸ್ಥಾನ ಅಂಬುತೀರ್ಥ. ಆ ಸ್ಥಳದ ಅಭಿವೃದ್ಧಿ ಬಗ್ಗೆ ಅವರು ಕನಸು ಕಂಡಿದ್ದರು. ಹಾಗೂ ಅದನ್ನು ಸಂಸದರ ಬಳಿ ಹೇಳಿದ ತದನಂತರ ಪ್ರಸ್ತುತ ಸರ್ಕಾರದಿಂದ ಅದ್ಭುತವಾಗಿ ಅಭಿವೃದ್ಧಿಯಾಗಿದೆ. ಅದೇ ರೀತಿ ಅವರ ಇನ್ನೊಂದು ಕನಸು ರಾಗಿಗುಡ್ಡದಲ್ಲಿ ದೇವಸ್ಥಾನ ಸ್ಥಾಪಿಸಿ ಪ್ರವಾಸೋದ್ಯಮ ಕ್ಷೇತ್ರ ಮಾಡಬೇಕು ಎನ್ನುವುದಾಗಿದ್ದು, ಅದಕ್ಕೂ ಕೂಡ ಸರ್ಕಾರ 5 ಕೋಟಿ ರೂ. ಅನುದಾನ ನೀಡಲಾಗಿದೆ ಎಂದು ಹೇಳಿದರು.
ಸಂಸದ ಬಿ.ವೈ. ರಾಘವೇಂದ್ರ MP Raghavendra ಮಾತನಾಡಿ, ಅ.ಪ. ರಾಮಭಟ್ಟರು ಪ್ರಶಸ್ತಿಗೂ ಮೀರಿ ಯೋಗ್ಯತೆಯುಳ್ಳವರು. ರಾಷ್ಟ್ರೀಯ ವಾದವನ್ನು ಮೈಗೂಡಿಸಿಕೊಂಡ ಋಷಿ ಪ್ರಜ್ಞೆಯ ಅರ್ಚಕರು ಎಂದರು.

ಜಿಲ್ಲಾ ಬ್ರಾಹ್ಮಣ ಮಹಾಸಾಭಾ ಅಧ್ಯಕ್ಷ ನಟರಾಜ್ ಭಾಗವತ್ ಮಾತನಾಡಿ, 32 ಬಾರಿ ಸಂಹಿತಾಯಾಗ ಮಾಡಿ, ನವರಾತ್ರಿ ಸಂದರ್ಭದಲ್ಲಿ ಚಂಡಿಕಾಯಾಗ, ಸಂಕಷ್ಟ ಚತುರ್ಥಿಯಂದು ವಿಶೇಷ ಪೂಜೆ ಏರ್ಪಡಿಸಿ ಇಡೀ ಅರ್ಚಕ ಸಮೂಹಕ್ಕೆ ಅ.ಪ. ರಾಮಭಟ್ಟರು ಮಾದರಿಯಾಗಿದ್ದಾರೆ. ವೇದ ಶಿಬಿರ, ಮುಷ್ಠಿ ಅಕ್ಕಿ ಸಂಗ್ರಹ ಮೊದಲಾದ ಕಾರ್ಯಕ್ರಮಗಳನ್ನು ಹಮ್ಮಿಕೊಂಡು ಸಾಮಾಜಿಕ, ಧಾರ್ಮಿಕ ಮತ್ತು ಸಾಂಸ್ಕೃತಿಕ ಚಟುವಟಿಕೆಗಳ ಕೇಂದ್ರವನ್ನಾಗಿಸಿದರು. ತಮಗೆ ಸ್ವಂತ ಮನೆ ಇಲ್ಲದಿದ್ದರೂ ತಮಗೆ ಅನಾರೋಗ್ಯವಾದಾಗ ಶಸ್ತ್ರಚಿಕಿತ್ಸೆಗೆ ಒಳಗಾದಾಗಲೂ ತನಗೆ ಬಂದ ಎರಡು ಲಕ್ಷ ರೂ.ಗಳನ್ನು ಸುರಭಿ ಗೋಶಾಲೆಗೆ ದಾನ ಮಾಡಿ ಔದಾರ್ಯ ಮೆರೆದವರು. ಜಾತಿ, ಮತ ಬೇಧವಿಲ್ಲದೇ ಎಲ್ಲಾ ಹಿಂದೂ ಸಮಾಜದ ಬಾಂಧವರನ್ನು ಧರ್ಮಕೈಂಕರ್ಯದಲ್ಲಿ ತೊಡಗಿಸಿಕೊಳ್ಳುವಂತೆ ಮಾಡಿದವರು ಎಂದು ಹೇಳಿದರು.
ಈ ಸಂದರ್ಭದಲ್ಲಿ ಅಖಿಲ ಭಾರತ ಕುಟುಂಬ ಪ್ರಭೋದನ್ ಪ್ರಮುಖ ಕಜಂಪಾಡಿ ಸುಬ್ರಹ್ಮಣ ಭಟ್, ವಿಜಯಲಕ್ಷ್ಮಿ ರಾಮಭಟ್ಟರು, ವಿಧಾನ ಪರಿಷತ್ ಸದಸ್ಯ ಡಿ.ಎಸ್. ಅರುಣ್, ಕೆ.ಇ. ಕಾಂತೇಶ್, ವಿನಾಯಕ ಬಾಯರಿ, ಶಬರೀಶ್ ಕಣ್ಣನ್, ಶೈನೇಶ್ವರ ದೇವಾಲಯ ಸಮಿತಿಯ ಪ್ರಮುಖರು ಇದ್ದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

Tags: Dr. Bhimeshwara JoshiHome Minister Araga GnanendraKannada News WebsiteKannadaNewsKannadaNewsLiveKannadaNewsOnlineKannadaWebsiteLatest News KannadaLocal NewsMalnad NewsMLA EshwarappaMP RaghavendraNewsinKannadaNewsKannadaShimogaShivamoggaShivamogga Newsಗೃಹ ಸಚಿವ ಆರಗ ಜ್ಞಾನೇಂದ್ರಡಾ. ಭೀಮೇಶ್ವರ ಜೋಶಿಮಲೆನಾಡು_ಸುದ್ಧಿಶಾಸಕ ಕೆ.ಎಸ್. ಈಶ್ವರಪ್ಪಶಿವಮೊಗ್ಗಶಿವಮೊಗ್ಗ_ನ್ಯೂಸ್ಸಂಸದ ಬಿ.ವೈ. ರಾಘವೇಂದ್ರ
Share197Tweet123Send
Previous Post

ವೈಯಕ್ತಿಕ ಹಿತಾಸಕ್ತಿಯಿಂದ ಪಿಐಎಲ್ ಸಲ್ಲಿಸಿದರೆ ದಂಡ ಗ್ಯಾರೆಂಟಿ! ಹೈಕೋರ್ಟ್ ಎಚ್ಚರಿಕೆ

Next Post

ಶಿವಮೊಗ್ಗದ ಲಯನ್ ಸಫಾರಿಯಲ್ಲಿ ಸಿಂಹ ಸಾವು

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ಶಿವಮೊಗ್ಗದ ಲಯನ್ ಸಫಾರಿಯಲ್ಲಿ ಸಿಂಹ ಸಾವು

ಶಿವಮೊಗ್ಗದ ಲಯನ್ ಸಫಾರಿಯಲ್ಲಿ ಸಿಂಹ ಸಾವು

Leave a Reply Cancel reply

Your email address will not be published. Required fields are marked *

  • Trending
  • Latest
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
ಶಿವಮೊಗ್ಗ | ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ | ಕಾರ್ಕಳ ಮೂಲದ ವಿದ್ಯಾರ್ಥಿನಿ ದುರ್ಮರಣ

ಶಿವಮೊಗ್ಗ | ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ | ಕಾರ್ಕಳ ಮೂಲದ ವಿದ್ಯಾರ್ಥಿನಿ ದುರ್ಮರಣ

March 12, 2026
ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

January 16, 2026
ತಾಳಗುಪ್ಪ-ಬೆಂಗಳೂರು ರೈಲಿನಲ್ಲಿ ದರೋಡೆಕೋರನ ದಾಂಧಲೆ | ಮಾರಕಾಸ್ತ್ರದಿಂದ ಹಲ್ಲೆ ಯತ್ನ

ತಾಳಗುಪ್ಪ-ಬೆಂಗಳೂರು ರೈಲಿನಲ್ಲಿ ದರೋಡೆಕೋರನ ದಾಂಧಲೆ | ಮಾರಕಾಸ್ತ್ರದಿಂದ ಹಲ್ಲೆ ಯತ್ನ

February 12, 2026
National Safety Week 2026 Observed at Carriage Repair Workshop, Hubballi

National Safety Week 2026 Observed at Carriage Repair Workshop, Hubballi

March 18, 2026
7 ತಿಂಗಳಲ್ಲಿ 355 ವಿಶೇಷ ರೈಲುಗಳ ಸಂಚಾರದಿಂದ ನೈಋತ್ಯ ರೈಲ್ವೆ ಗಳಿಸಿದ್ದು ಎಷ್ಟು ಕೋಟಿ ಆದಾಯ?

ಹುಬ್ಬಳ್ಳಿ | ರೈಲ್ವೆ ಇಲಾಖೆ ಪರೀಕ್ಷೆ ಮುಂದೂಡಿಕೆ

March 18, 2026
ಶ್ರೀ ಕೊಟ್ಟೂರೇಶ್ವರ ಜಾತ್ರೆ ಪ್ರಯುಕ್ತ | ಹೊಸಪೇಟೆ – ತೊಳಹುಣಸೆ ನಡುವೆ ವಿಶೇಷ ರೈಲು ಸಂಚಾರ

ಯುಗಾದಿ ಹಬ್ಬ ಹಿನ್ನೆಲೆ: ಯಶವಂತಪುರ ಮತ್ತು ಹೊಸಪೇಟೆ ನಡುವೆ ವಿಶೇಷ ರೈಲು ಸೇವೆ

March 18, 2026
ನವೋದಯ ಪ್ರವೇಶ ಪರೀಕ್ಷೆ | ಅಪೂರ್ವಗೆ ಉತ್ತಮ ಅಂಕ

ನವೋದಯ ಪ್ರವೇಶ ಪರೀಕ್ಷೆ | ಅಪೂರ್ವಗೆ ಉತ್ತಮ ಅಂಕ

March 18, 2026
ಬಡವರ ಆರೋಗ್ಯದ ಜೊತೆ ಸರ್ಕಾರದ ಚೆಲ್ಲಾಟ | ಉಗ್ರಾಣಗಳಲ್ಲಿ 7 ತಿಂಗಳಾದರೂ ಔಷಧಿ ಪೂರೈಕೆಯಿಲ್ಲ: ಶಾಸಕ ಡಾ. ಧನಂಜಯ ಸರ್ಜಿ

ಬಡವರ ಆರೋಗ್ಯದ ಜೊತೆ ಸರ್ಕಾರದ ಚೆಲ್ಲಾಟ | ಉಗ್ರಾಣಗಳಲ್ಲಿ 7 ತಿಂಗಳಾದರೂ ಔಷಧಿ ಪೂರೈಕೆಯಿಲ್ಲ: ಶಾಸಕ ಡಾ. ಧನಂಜಯ ಸರ್ಜಿ

March 18, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL