ಅಪರೂಪದ ಮತ್ತು ಕಷ್ಟಕರವಾದ ಹೃದಯ ರಕ್ತನಾಳ ಛಿದ್ರಗೊಳ್ಳುವಿಕೆಯ ತೊಂದರೆಗೆ ನಾರಾಯಣ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆಯ ವೈದ್ಯರು ಯಶಸ್ವಿ ಶಸ್ತ್ರ ಚಿಕಿತ್ಸೆ ನಡೆಸಿದ್ದಾರೆ.
ಈ ಕುರಿತು ಇಂದು ಪತ್ರಿಕಾಗೋಷ್ಠಿಯಲ್ಲಿ ವಿವರಣೆ ನೀಡಿದ ಡಾ. ಬಾಲಸುಬ್ರಮಣಿ, 55 ವರ್ಷದ ಸಿರ್ಸಿಯ ಮಹಿಳೆಯೊಬ್ಬರು ಎದೆ ನೋವಿನಿಂದಾಗಿ ಆಸ್ಪತ್ರೆಗೆ ಬಂದಿದ್ದರು. ಅವರನ್ನು ತಪಾಸಣೆ ಮಾಡಿದಾಗಿ ಅತ್ಯಂತ ಅಪಾಯಕಾರಿಯಾದ ಹೃದಯ ತೊಂದರೆ ಕಂಡುಬಂದಿತ್ತು. ಹೃದಯದ ರಕ್ತನಾಳ ಛಿದ್ರಗೊಂಡಿತ್ತು. ಹೀಗೆ ಹೃದಯ ಹರಿದ ತೊಂದರೆಗಳು ತುಂಬಾ ವಿರಳ. ವರ್ಷಕ್ಕೆ ಒಂದೋ ಎರಡೋ ಇರುತ್ತವೆ ಅಷ್ಟೆ. ಈ ರೋಗಿ 30 ನಿಮಿಷ ಬದುಕಲೂ ಕಷ್ಟವಾಗುತ್ತದೆ. ಆದರೆ ಸರಿಯಾದ ಸಮಯಕ್ಕೆ ಅವರು ನಮ್ಮ ಆಸ್ಪತ್ರೆಗೆ ಬಂದರು ಎಂದರು.
Also read: ಶಿವಮೊಗ್ಗ ದಸರಾ: ಅ.22ರಂದು ನಡೆಯಲಿರುವ ವಿಶೇಷ ಕಾರ್ಯಕ್ರಮಗಳ ವಿವರ ಇಲ್ಲಿದೆ
ಶಸ್ತ್ರ ಚಿಕಿತ್ಸೆಗೆ ಒಳಗಾದ ಮಹಿಳೆಯ ಪತಿ ಗಜಾನನ ವಾಲೇಕರ್ ಮಾತನಾಡಿ, ನಮ್ಮ ಪತ್ನಿಗೆ ನಾರಾಯಣ ಆಸ್ಪತ್ರೆಯ ವೈದ್ಯರು ಪುನರ್ಜನ್ಮ ನೀಡಿದ್ದಾರೆ. ಹಣ ನಮಗೆ ಮುಖ್ಯವಾಗಿರಲಿಲ್ಲ. ಆಸ್ಪತ್ರೆಯ ಇಡೀ ವೈದ್ಯರ ತಂಡ ಸಂಪೂರ್ಣ ಸಹಕಾರ ನೀಡಿದ್ದಾರೆ. ಆಪರೇಷನ್ ಆಗುವವರೆಗೂ ನಮಗೆ ನಂಬಿಕೆ ಇರಲಿಲ್ಲ. ವೈದ್ಯರ ಶ್ರಮ ವ್ಯರ್ಥವಾಗಲಿಲ್ಲ. ದೇವರ ದಯದಿಂದ ನನ್ನ ಪತ್ನಿ ಈಗ ಆರೋಗ್ಯವಾಗಿ ಪತ್ರಿಕಾಗೋಷ್ಠಿಗೂ ಬರುವಂತಾಗಿದೆ ಎಂದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post