ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ಕಳೆದ ಎಂಟತ್ತು ವರ್ಷಗಳ ಹಿಂದೆ ಪ್ರಪಂಚವೇ ಭಾರತವನ್ನು ದುರ್ಬಲ ರಾಷ್ಟ್ರ ಎಂದು ಪರಿಗಣಿಸಿತ್ತು, ಆದರೀಗ ನರೇಂದ್ರ ಮೋದಿ ಅವರು ಪ್ರಧಾನಿ ಆದ ಬಳಿಕ ಇಡೀ ವಿಶ್ವವೇ ಬೆರಗುಗಣ್ಣಿನಿಂದ ನೋಡುವಂತೆ ನಮ್ಮ ದೇಶ ಬೆಳೆದು ನಿಂತಿದೆ. ಹಾಗಾಗಿ ನರೇಂದ್ರ ಮೋದಿ ಅವರನ್ನು ಬಲಪಡಿಸಲು ಕರ್ನಾಟಕದಲ್ಲಿ ಸಂಪೂರ್ಣ ಬಹುಮತದ ಬಿಜೆಪಿ ಸರಕಾರವನ್ನು ನೀಡೋಣ ಎಂದು ವಾಗ್ಮಿ ಚಕ್ರವರ್ತಿ ಸೂಲಿಬೆಲೆ Chakravathi Sulibele ಅಭಿಪ್ರಾಯಪಟ್ಟರು.
ನಗರದ ವಿನೋಬನಗರ ಸೋಮಿನಕೊಪ್ಪ ರಸ್ತೆಯ ಸರ್ಜಿ ಇನ್ಸಿಟಿಟ್ಯೂಟ್ನಲ್ಲಿ ಸೋಮವಾರ ಬೆಳಗ್ಗೆ ಜನಹಿತ ಟ್ರಸ್್ಟ ಹಾಗೂ ಮತದಾರರ ಜಾಗೃತ ವೇದಿಕೆ ಹಮ್ಮಿಕೊಂಡಿದ್ದ ಮತದಾನ ಜಾಗೃತಿ ಅಭಿಯಾನ ಕಾರ್ಯಕ್ರಮದಲ್ಲಿ ಮುಖ್ಯಅತಿಥಿಗಳಾಗಿ ಭಾಗವಹಿಸಿ ಅವರು ಮಾತನಾಡಿದರು.

ಕಳೆದ ಎಂಟು ಹತ್ತು ವರ್ಷಗಳ ಹಿಂದೆ ರಾಜಕಾರಣವೆಂದರೆ ಜನರಲ್ಲಿ ವಾಕರಿಕೆ ಮನೋಭಾವ ಇತ್ತು. ಆದರೀಗ ನರೇಂದ್ರ ಮೋದಿಯಂತಹ ನಾಯಕರಿದ್ದರೆ ದೇಶ ಸದೃಢವಾಗಿರಬಲ್ಲುದು ಎಂಬ ನಂಬಿಕೆ ಜನರಲ್ಲಿ ಮೂಡಿದೆ. ನರೇಂದ್ರ ಮೋದಿಯವರನ್ನು ಕೈ ಬಲ ಪಡಿಸಿದರೆ ಭಾರತವನ್ನು ಗಟ್ಟಿ ಮಾಡಿದಂತೆ ಎಂದರು.

ಸಾರ್ವಜನಿಕರು ಪ್ರಶ್ನೆ ಕೇಳುವ ಮೂಲಕ ಸಂದೇಹಗಳನ್ನು ಬಗೆಹರಿಸಿಕೊಂಡರು.











Discussion about this post