Read - 2 minutes
ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ಶಿವಮೊಗ್ಗದ ಪ್ರತಿಷ್ಠಿತ ಸಿಟಿ ಕೋ ಆಪರೇಟಿವ್ ಬ್ಯಾಂಕಿನ 2023-24ನೇ ಸಾಲಿನ ಅಧ್ಯಕ್ಷ ಸ್ಥಾನಕ್ಕೆ ನಡೆದ ಚುನಾವಣೆಯಲ್ಲಿ ಮಾಜಿ ಹಿರಿಯ ಸಹಕಾರಿ ಧುರೀಣರು ಶಿವಮೊಗ್ಗ ನಗರಸಭೆಯ ಮಾಜಿ ಅಧ್ಯಕ್ಷರು ಬ್ಯಾಂಕಿನ ಹಿರಿಯ ನಿರ್ದೇಶಕರಾದ ಎಂ.ಕೆ. ಸುರೇಶ್ಕುಮಾರ್ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.
ಜಿಲ್ಲಾ ಸಹಕಾರ ಸಂಘಗಳ ಸಹಾಯಕ ನಿಬಂಧಕರು, ಚುನಾವಣಾಧಿಕಾರಿಯದ ರುದ್ರಪ್ಪನವರು ಚುನಾವಣಾ ಪ್ರಕ್ರಿಯೆ ನಡೆಸಿಕೊಟ್ಟರು,
ಈ ಸಂದರ್ಭದಲ್ಲಿ ಬ್ಯಾಂಕಿನ ಉಪಾಧ್ಯಕ್ಷ ಕೆ. ರಂಗನಾಥ್, ಖಜಾಂಚಿ ರುಕ್ಮಿಣಿ ವೇದ ವ್ಯಾಸ, ನಿರ್ದೇಶಕ ಎಸ್.ಪಿ. ಶೇಷಾದ್ರಿ, ಸಿ. ಹೊನ್ನಪ್ಪ, ಜಿ. ಚಂದ್ರಶೇಖರ್, ಜಿ. ರಾಜು, ಉಮೇಶ್, ಪುಟ್ಟಪ್ಪ ಎಮ್. ರಾಕೇಶ್, ರೇಖಾ ಚಂದ್ರಶೇಖರ್, ರಘುವೀರ್ ಸಿಂಗ್, ಸೀತಾರಾಮ್ ನಾಯಕ್, ಬ್ಯಾಂಕಿನ ಮುಖ್ಯ ಕಾರ್ಯನಿರ್ವಣಾಧಿಕಾರಿ ಮನೋಜ್ಕುಮಾರ್ ಇದ್ದರು.
Also read: ವಿದ್ಯುತ್ ದರ ಏರಿಕೆ ವಿರೋಧಿಸಿ ಬಿಜೆಪಿ ಪ್ರತಿಭಟನೆ


ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post