No Result
View All Result
ಶಿವಮೊಗ್ಗದಲ್ಲಿ ಕ್ರೀಡಾಪಟುಗಳ ಸಾಧನೆ | ದಕ್ಷಿಣ ಭಾರತ ಕುಸ್ತಿ ಚಾಂಪಿಯನ್‌ಶಿಪ್‌ನಲ್ಲಿ ಇಬ್ಬರಿಗೆ ಚಿನ್ನ
English Articles

Shivamogga: Two Wrestlers Win Gold at South India Championship

by ಕಲ್ಪ ನ್ಯೂಸ್
June 8, 2026
0

Kalpa Media House  |  Shivamogga   | Two athletes from the District Youth Empowerment and Sports Department Sports School in Shivamogga...

Read moreDetails
ಫಿಲಿಪೈನ್ಸ್‌ನಲ್ಲಿ ಭೂಕಂಪ | 7.8 ತೀವ್ರತೆಯ ಕಂಪನಕ್ಕೆ 12 ಸಾವು | ಹಲವು ದೇಶಗಳಲ್ಲಿ ಸುನಾಮಿ ಎಚ್ಚರಿಕೆ

Magnitude 7.8 Earthquake Hits Southern Philippines, Kills 12; Tsunami Alerts Issued

June 8, 2026
ದೇಶದ ಭದ್ರತೆಗೆ ಪೂರಕವಾದ ಜೋಜಿಲಾ ಸುರಂಗ ಕಾಮಗಾರಿ ಅಂತಿಮ ಘಟ್ಟಕ್ಕೆ | ಏನಿದರ ವಿಶೇಷತೆ?

Zojila Tunnel Nears Completion | A Milestone in India’s Infrastructure & National Security

June 8, 2026
ವಿಶ್ವ ಯೋಗಾಸನ ಚಾಂಪಿಯನ್‌ಶಿಪ್ | ಭಾರತಕ್ಕೆ ಭರ್ಜರಿ ಜಯ, ಚಿನ್ನದ ಪದಕ ಗೆದ್ದ ಹೀನಾ ರಾಜಗೋರ್!

World Yogasana Championships 2026: Hosts India extend lead at top of medals tally with 22 gold

June 7, 2026
ಮೈಸೂರು ರೈಲ್ವೆ ಸಂಗ್ರಹಾಲಯದಲ್ಲಿ ಐತಿಹಾಸಿಕ ತೂಕದ ಯಂತ್ರ ಅನಾವರಣ | ಏನಿದರ ವಿಶೇಷತೆ?

Heritage Weighing Machine Restored, Unveiled at Mysuru Railway Museum

June 7, 2026
  • Advertise With Us
  • Grievances
  • About Us
  • Contact Us
Monday, June 8, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ

ತಪ್ಪು ಮಾಡಿದ್ದರೆ ಕ್ರಮ ತೆಗೆದುಕೊಳ್ಳಿ | ಅಧಿಕಾರಿಗಳ ಸಮಜಾಯಿಷಿಗೆ ಸಚಿವ ಮಧುಬಂಗಾರಪ್ಪ ಗರಂ

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
November 28, 2024
in ಶಿವಮೊಗ್ಗ
0
ತಪ್ಪು ಮಾಡಿದ್ದರೆ ಕ್ರಮ ತೆಗೆದುಕೊಳ್ಳಿ | ಅಧಿಕಾರಿಗಳ ಸಮಜಾಯಿಷಿಗೆ ಸಚಿವ ಮಧುಬಂಗಾರಪ್ಪ ಗರಂ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ  |

ಇಂದು ಶಿವಮೊಗ್ಗದ ಜಿಲ್ಲಾಡಳಿತ ಕಚೇರಿಯಲ್ಲಿ ಸಚಿವ ಮಧು ಬಂಗಾರಪ್ಪನವರ #Minister Madhu Bangarappa ನೇತೃತ್ವದಲ್ಲಿ ವಿವಿಧ ಇಲಾಖೆಗಳ ಪ್ರಗತಿ ಪರಿಶೀಲನಾ ಸಭೆ ನಡೆಯಿತು.

ಸಭೆಯಲ್ಲಿ ಪ್ರಮುಖವಾಗಿ ಶಾಹೀ ಗಾರ್ಮೆಂಟ್ಸ್, ಸಿಎಸ್ ಷಡಾಕ್ಷರಿ ಅವರ ಮನೆ ಮೇಲೆ ದಾಳಿ, ಅಬ್ಬಲಗೆರೆ ಕೆರೆಯ ಅಕ್ರಮ ಮಣ್ಣು ತೆಗೆತ, ಸೊರಬದಲ್ಲಿ ವಿದ್ಯುತ್ ಇಲಾಖೆಯ ಕಾಮಗಾರಿ ಹಾಗೂ ನೀರಾವರಿ ಯೋಜನೆಗೆ ಸಂಬಂಧಿಸಿದಂತೆ ಮತ್ತು ಫ್ರೀಡಂ ಪಾರ್ಕ್ ಅಭಿವೃದ್ಧಿ ಬಗ್ಗೆ ಚರ್ಚಿಸಿದರು.

ಶಾಹೀ ಗಾರ್ಮೆಂಟ್ಸ್ ಪರಿಸರ ಹಾನಿ ಮಾಡಿ ಜಿಲ್ಲಾಡಳಿತದ ಸೂಚನೆಯನ್ನ ನಿರ್ಲಕ್ಷಿಸುತ್ತಿದ್ದಾರೆ. ಅವರೇನು ಮೇಲಿಂದ ಇಳಿದು ಬಂದಿದ್ದಾರಾ? 250 ಎಕರೆ ಜಮೀನು ಹೇಗೆ ಗಾರ್ಮೆಂಟ್ಸ್ ಗೆ ಹೋಯಿತು? ಅವರಿಗೆ ಬೇಕಾಗಿದ್ದು 10 ಎಕರೆ ಅಷ್ಟೇ, ಹೆಚ್ಚುವರಿ ಸಮೀನು ನೀಡಿದ್ದೇಕೆ. ಕೈಗಾರಿಕಾ ಸಬ್ಸಿಡಿ ಹಣದಲ್ಲೇ ಅವರು ಜಮೀನು ಪಡೆದುಕೊಂಡು ಬಿಟ್ಟಿದ್ದಾರೆ. ಕಾರ್ಖಾನೆಯಲ್ಲಿ 15 ಸಾವಿರ ಜನ ಕೆಲಸ ಮಾಡುತ್ತಿದ್ದಾರೆ. ಆಗಂತ ಅವರ ಕಾರ್ಖಾನೆಯಿಂದ ಸುತ್ತಮುತ್ತಲಿನ ನಾಗರೀಕರಿಗೆ ತೊಂದರೆಯಾಗಬಾರದು. ಪರಿಸರ ಹಾಳಾಗಬಾರದು. ಇಲಾಖೆ ಏನು ಕ್ರಮ ಕೈಗೊಂಡಿದೆ? ತಪ್ಪು ಮಾಡಿದ್ದರೆ ಕ್ರಮ ತೆಗೆದುಕೊಳ್ಳಿ, ಸೀಜ್ ಮಾಡಿ ಎಂದರು.
ಸೀಜ್ ಮಾಡಿ ಎಂದರೆ ಖಡಕ್ ತಪಾಸಣೆ ಮಾಡಿ ಎಂದು, ಅಲ್ಲಿ ಬೇರೆ 15 ಸಾವಿರ ಜನ ಕೆಲಸ ಮಾಡುವುದರಿಂದ ಕಾರ್ಖಾನೆ ಬಂದ್ ಮಾಡಬೇಡಿ ಸೀರಿಯಸ್ ಆಗಿ ಕ್ರಮ ಜರುಗಿಸಿ. ರೈತರು ಜಮೀನನ್ನ ಒತ್ತುವರಿ ಮಾಡಿದರೆ ಸುಮ್ಮನಿರ್ತೀರಾ ಎಂದು ಗರಂ ಆದರು. ಅವರು ಮಾಡುತ್ತಿರುವ ಪರಿಸರ ಹಾನಿ ಬಗ್ಗೆ ಕ್ರಮ ಕೈಗೊಳ್ಳಿ ಎಂದು ಸೂಚಿಸಿದರು.

ಇದಕ್ಕೂ ಗರಂ ಆದ ಸಚಿವರು ವರದಿ ಬಂದಿದೆ. ಇಲಾಖೆ ಕಣ್ಣು ಮುಚ್ಚಿಕೊಂಡಿದೆಯಾ? ಎಂದರು. ಇದಕ್ಕೆ ಉತ್ತರಿಸಿದ ಅಧಿಕಾರಿಗಳು ನಾನು ಅಧಿಕಾರಿಯಾಗಿ ಬಂದು 6 ತಿಂಗಳಾಗಿದೆ ಎಂದು ಸಮ್ಜಾಯಿಷಿ ಕೊಡಲು ಮುಂದಾದರು. ಇದಕ್ಕೂ ಗರಂ ಆದ ಸಚಿವರು ನಾನು ಸಚಿವನಾಗಿ ಬಂದು ಇಂದಿಗೆ, ಒಂದುವರೆ ವರ್ಷ ಆಗಿದೆ ನಾನು ಸಂಬಂಧವಿಲ್ಲವೆಂದು ಕೈತೊಳೆದುಕೊಳ್ಳಬಹುದಾ? ಮೊದಲು ಕ್ರಮ ಜರುಗಿಸಿ ಎಂದು ಗರಂ ಅದರು.

Also read: ಬಸನಗೌಡ ಪಾಟೀಲ್ ಯತ್ನಾಳ್ ವಿರುದ್ಧ ಶಿಸ್ತು ಕ್ರಮಕ್ಕೆ ಬಿಜೆಪಿ ನಿಷ್ಠರ ಬಣ ಒತ್ತಾಯ

ಅಬ್ಬಲಗೆರೆ ಕೆರೆಯ ಮಣ್ಣನ್ನ ಅಕ್ರಮವಾಗಿ ತೆಗೆದಿದ್ದಾರೆ. ಸರ್ಕಾರಿ ನೌಕರರ ರಾಜ್ಯಾಧ್ಯಕ್ಷ ಷಡಾಕ್ಷರಿಯವರು ಹೇಳಿದ್ದಾರೆ ಎಂದ ಮಾತ್ರಕ್ಕೆ ಕ್ರಮ ಕೈಗೊಳ್ಳದಿದ್ದರೆ ಕಷ್ಟವಾಗುತ್ತದೆ. ಸಿಎಂ ಗಮನಿಸುತ್ತಿದ್ದಾರೆ, ಕ್ರಮ ಕೈಗೊಳ್ಳಬೇಕು. ಅವರು ವಾಸವಿರುವ ಮನೆ ಪಿಡಬ್ಲೂಡಿಯಿಂದ ಕೊಡಲಾಗಿದೆ. ಅವರು ಜೆಡ್ ಪ್ಲಸ್ ಮಾದರಿಯಲ್ಲಿ ಕ್ವಾಟ್ರಸ್ ಮನೆಯನ್ನ ಕಟ್ಟಿಸಿಕೊಂಡಿದ್ದಾರೆ ಬೇರೆಯವರಿಗೂ ಹಾಗೆ ಅವಕಾಶ ಕೊಡ್ತೀರಾ ಎಂದ ಸಚಿವರು ಅಧಿಕಾರಿಗಳಿಗೆ ಕ್ಲಾಸ್ ತೆಗೆದುಕೊಂಡರು.

ಮನೆ ನಿರ್ಮಾಣಕ್ಕೆ ಭ್ರಷ್ಟಾಚಾರದ ಹಣ ಬಳಕೆ ಆಗಿದೆ ಎಂಬ ಮಾಹಿತಿ ನನಗೆ ಇದೆ. ಪಿಡಬ್ಲೂಡಿ ಮನೆಗೆ 17 ಲಕ್ಷ ಖರ್ಚಾಗಿದೆ ಎಂದು ಪಿಡಬ್ಲೂಡಿ ತಿಳಿಸಿದೆ. ಆದರೆ ಎರಡು ಕೋಟಿಯಲ್ಲಿ ಮನೆ ಕಟ್ಟಲಾಗಿದೆ. ಮನೆ ರೈಡ್ ಮಾಡಿ, ಪರಿಶೀಲನೆ ನಡೆಸಿ ಎಂದು ಸಚಿವರು ಅಧಿಕಾರಿಗಳಿಗೆ ಖಡಕ್ ಸೂಚನೆ ನೀಡಿದರು.

ಎಸ್ಪಿ ಕಚೇರಿ ಹಿಂಭಾಗದಲ್ಲಿ ಹೊಸ ಜಿಲ್ಲಾಡಳಿತ ಭವನ ಆರಂಭಿಸಲು ಆದಷ್ಟು ಬೇಗ ಕ್ರಮ ಕೈಗೊಳ್ಳಲು ಸಚಿವರು ಸೂಚನೆ ನೀಡಿದರು. ಅಲ್ಲಿ 10 ಎಕರೆ ಜಾಗ ಕಾಯ್ದಿರಿಸಲಾಗಿದೆ. ಈ ಬಜೆಟ್‍ನಲ್ಲಿ ಅನುದಾನ ನೀಡುವುದಾಗಿ ಮುಖ್ಯಮಂತ್ರಿಗಳು ಹೇಳಿದ್ದಾರೆ. ಹೊಸ ಜಿಲ್ಲಾಡಳಿತ ಭವನದಲ್ಲಿ ಎಲ್ಲಾ ಇಲಾಖೆ ಅಲ್ಲೇ ಬರಲಿದೆ. ಅದಕ್ಕೆ ತಗಲುವ ವೆಚ್ಚ ತಿಳಿಸಲು ಡಿಸಿಗೆ ಸಚಿವರು ತಿಳಿಸಿದರು. ಪಿಡಬ್ಲೂಡಿ ಯಿಂದ ಅರ್ಕಿಟೆಕ್ಟ್ ಮುಂದಿನ ವಾರ ಬರಲಿದ್ದಾರೆ. 10 ದಿನಗಳಲ್ಲಿ ಅನುದಾನ ಎಷ್ಟು ಬೇಕು ಎಂಬುದು ತಿಳಿಯಲಿದೆ ಎಂದು ಡಿಸಿ ತಿಳಿಸಿದರು.

ಸೋಗಾನೆಯಲ್ಲಿ ಫುಡ್ ಪಾರ್ಕ್ ನಿರ್ಮಾಣ ವಿಚಾರದಲ್ಲಿ ಅಧಿಕಾರಿಗಳು ಮಾತನಾಡಿ, 47 ಲಕ್ಷ ರೂ ಅನುದಾನ ದೊರೆತಿದೆ. ನಬಾರ್ಡ್ ನಿಂದ ಡಿಪಿಆರ್ ಮಾಡಲಿದ್ದಾರೆ. ಯಾವಾಗ ಬೇಕಾದರೂ ಹಣ ಬಿಡುಗಡೆಯಾಗಬಹುದು. ಅದನ್ನು ಫಾಲೋಅಪ್ ಮಾಡಿ ಎಂದರು.

ಫುಡ್‍ಪಾರ್ಕ್ ಗೆ ಸಿಎಂ ಅನೌನ್ಸ್ ಮಾಡಿದ ಮೇಲೆ ಯಾಕೆ ತಡವೆಂದು ಸಚಿವರು ಕಳವಳ ವ್ಯಕ್ತಪಡಿಸಿದರು. ಇದಕ್ಕೆ ಹಣ ಇಟ್ಟಿರಲಿಲ್ಲ. ಇಲಾಖೆಯಿಂದ ಹಣ ಬಿಡುಗಡೆ ಮಾಡಿಕೊಳ್ಳಲು ನಿಮ್ಮ ಜವಬ್ದಾರಿ ಇಲ್ವಾ ಎಂದು ಅಧಿಕಾರಿಗಳನ್ನ ಕ್ಲಾಸ್ ತೆಗೆದುಕೊಂಡ ಸಚಿವರು, ತಡಮಾಡಬಾಡಿ ಹಣ ಕರ್ಚಾಗದಿದ್ದರೆ ಮತ್ತೆ ಹಣ ಬಿಡುಗಡೆ ಆಗೊಲ್ಲವೆಂದರು.
ನೈಟ್ ಲ್ಯಾಂಡಿಂಗ್ ಆರಂಭ : ಶಿವಮೊಗ್ಗ ವಿಮಾನ ನಿಲ್ದಾಣದಲ್ಲಿ #Shivamogga Airport ನೈಟ್ ಲ್ಯಾಂಡಿಂಗ್ ಇಲ್ಲವಾದ ಕಾರಣ ವಿಮಾನಗಳ ಹಾರಾಟಕ್ಕೆ ತೊಂದರೆ ಉಂಟಾಗಿತ್ತು. ಇದಕ್ಕೆ ಇಂದು ನಡೆದ ಸಭೆಯಲ್ಲಿ ಜನವರಿಯಲ್ಲಿ ನೈಟ್ ಲ್ಯಾಂಡಿಂಗ್ ಕಾಮಗಾರಿ ಆರಂಭವಾಗಲಿದೆ. ಇದಕ್ಕೆ ಹಣ ಇಡಲಾಗುತ್ತಿದೆ. 660 ಕೋಟಿ ರೂ. ಹಣ ಕುಡಿಯುವ ನೀರು ಯೋಜಬೆಯನ್ನ ಶಿರಾಳಕೊಪ್ಪ, ಆನವಟ್ಟಿ ಮತ್ತು ಸೊರಬಕ್ಕೆ ಹಣ ಇಡಲಾಗುತ್ತಿದೆ. ಚಂದ್ರಗುತ್ತಿ ದೇಗುಲದ ಅಭಿವೃದ್ಧಿಗೆ ಅರಣ್ಯ ಇಲಾಖೆಯ ಕ್ಲಿಯರೆನ್ಸ್ ಸಿಕ್ತಾ ಇದೆ. ಶೀಘ್ರದಲ್ಲಿಯೇ ಅಭಿವೃದ್ಧಿ ಪಡಿಸಲಾಗುವುದು. ಇದೊಂದು ಜಿಲ್ಲೆಯ ಪ್ರಸಿದ್ಧ ಪ್ರವಾಸಿ ತಾಣವಾಗಲಿದೆ ಎಂದರು.

ಅಲ್ಲಮಪ್ರಭು ಹುಟ್ಟಿದ ಸ್ಥಳ ಮತ್ತು ಪಾರ್ಕ್ ಅಭಿವೃದ್ಧಿಗೆ ಪ್ರಸ್ತಾವನೆ ಕಳುಹಿಸಲು ಸೂಚನೆ ನೀಡಿದ ಸಚಿವರು. ಶಿವಮೊಗ್ಗದ ಅಲ್ಲಮ ಪ್ರಭು ಪ್ರೀಡಂ ಪಾರ್ಕ್ ಅಭಿವೃದ್ಧಿಗೆ ಮತ್ತು ಬಳ್ಳಿಗಾವಿಯಲ್ಲಿ ಅಲ್ಲಮಪ್ರಭು ಹುಟ್ಟಿದ ಸ್ಥಳದ ಅಭಿವೃದ್ಧಿಗೆ ಹಣದ ಅನುದಾನಕ್ಕೆ ಜನವರಿ ಒಳಗೆ ಪ್ರಸ್ತಾವನೆ ಕಳುಹಿಸಲು ಸೂಚಿಸಿದರು. ಅಲ್ಲಮಪ್ರಭು ಮೊಟ್ಟಮೊದಲ ಸಂಸತ್ ಅಧ್ಯಕ್ಷರು ಆಗಿದ್ದರು. ಹಾಗಾಗಿ ಅದನ್ನು ಅದ್ಭುತವಾಗಿ ನಿರ್ಮಾಣ ಮಾಡಬೇಕು. ಫ್ರೀಡಂಪಾರ್ಕ್ ಗೆ 5 ಕೋಟಿ ಹಣ ಬಿಡುಗಡೆಯಾಗಿದೆ ಇನ್ನೂ ಹೆಚ್ಚಿನ ಪ್ಲಾನ್ ಸಿದ್ದಪಡಿಸಿ ಪ್ರಸ್ತಾವನೆ ಸಲ್ಲಿಸುವಂತೆ ಸೂಚಿಸಿದರು.

ಈ ಸಂದರ್ಭದಲ್ಲಿ ಜಿಲ್ಲಾಧಿಕಾರಿ ಗುರುದತ್ ಹೆಗಡೆ, ಸಿಇಓ ಹೇಮಂತ್‍ಕುಮಾರ್, ಜಿಲ್ಲಾ ರಕ್ಷಣಾಧಿಕಾರಿ ಮಿಥುನ್‍ಕುಮಾರ್ ಇದ್ದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news     

http://kalpa.news/wp-content/uploads/2024/04/VID-20240426-WA0008.mp4
Tags: Kannada_NewsKannada_News_LiveKannada_News_Online ShivamoggaKannada_WebsiteKannadaNewsWebsiteLatestNewsKannadaLocalNewsMalnadNewsMinister Madhu BangarappaNews_in_KannadaNews_KannadaShimogaShivamogga AirportShivamoggaNewsಮಲೆನಾಡು_ಸುದ್ಧಿಶಿವಮೊಗ್ಗಶಿವಮೊಗ್ಗ ವಿಮಾನ ನಿಲ್ದಾಣಶಿವಮೊಗ್ಗ_ನ್ಯೂಸ್ಸಚಿವ ಮಧು ಬಂಗಾರಪ್ಪ
Share196Tweet123Send
Previous Post

ಬಸನಗೌಡ ಪಾಟೀಲ್ ಯತ್ನಾಳ್ ವಿರುದ್ಧ ಶಿಸ್ತು ಕ್ರಮಕ್ಕೆ ಬಿಜೆಪಿ ನಿಷ್ಠರ ಬಣ ಒತ್ತಾಯ

Next Post

ಎನ್‍ಹೆಚ್‍ಎಂ ಸಿಬ್ಬಂದಿಗಳನ್ನು ಕಾಯಂಗೊಳಿಸಿ | ಆರೋಗ್ಯ ಸಚಿವರಿಗೆ ಮನವಿ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ಎನ್‍ಹೆಚ್‍ಎಂ ಸಿಬ್ಬಂದಿಗಳನ್ನು ಕಾಯಂಗೊಳಿಸಿ | ಆರೋಗ್ಯ ಸಚಿವರಿಗೆ ಮನವಿ

ಎನ್‍ಹೆಚ್‍ಎಂ ಸಿಬ್ಬಂದಿಗಳನ್ನು ಕಾಯಂಗೊಳಿಸಿ | ಆರೋಗ್ಯ ಸಚಿವರಿಗೆ ಮನವಿ

Leave a Reply Cancel reply

Your email address will not be published. Required fields are marked *

  • Trending
  • Latest
ಭದ್ರಾವತಿಯ ಆರು ಆರೋಪಿಗಳಿಗೆ 3 & 7 ವರ್ಷ ಕಠಿಣ ಕಾರಾಗೃಹ ಶಿಕ್ಷೆ | ನಡೆದಿದ್ದ ಅಪರಾಧವೇನು?

ಭದ್ರಾವತಿಯ ಆರು ಆರೋಪಿಗಳಿಗೆ 3 & 7 ವರ್ಷ ಕಠಿಣ ಕಾರಾಗೃಹ ಶಿಕ್ಷೆ | ನಡೆದಿದ್ದ ಅಪರಾಧವೇನು?

May 5, 2026
ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

April 28, 2026
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

April 3, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
ಕೆಸಿಇಟಿ ಫಲಿತಾಂಶ | ಕಾರ್ಕಳದ ಕ್ರಿಯೇಟಿವ್ ಕಾಲೇಜಿನ ಅತ್ಯುತ್ತಮ ಸಾಧನೆ

ಕೆಸಿಇಟಿ ಫಲಿತಾಂಶ | ಕಾರ್ಕಳದ ಕ್ರಿಯೇಟಿವ್ ಕಾಲೇಜಿನ ಅತ್ಯುತ್ತಮ ಸಾಧನೆ

June 8, 2026
ಮದ್ಯ ಸೇವಿಸಿ ಶಾಲಾ ವಾಹನ ಚಾಲನೆ : ನಾಲ್ವರು ಚಾಲಕರ ವಿರುದ್ಧ ಕೇಸ್

ಮದ್ಯ ಸೇವಿಸಿ ಶಾಲಾ ವಾಹನ ಚಾಲನೆ : ನಾಲ್ವರು ಚಾಲಕರ ವಿರುದ್ಧ ಕೇಸ್

June 8, 2026
ಶಿವಮೊಗ್ಗದಲ್ಲಿ ಕ್ರೀಡಾಪಟುಗಳ ಸಾಧನೆ | ದಕ್ಷಿಣ ಭಾರತ ಕುಸ್ತಿ ಚಾಂಪಿಯನ್‌ಶಿಪ್‌ನಲ್ಲಿ ಇಬ್ಬರಿಗೆ ಚಿನ್ನ

Shivamogga: Two Wrestlers Win Gold at South India Championship

June 8, 2026
ಪಿಇಎಸ್‌ಐಟಿಎಂನಲ್ಲಿ 16ನೇ ಪದವಿ ಪ್ರದಾನ ಹಾಗೂ ಉದ್ಯೋಗ ನೇಮಕಾತಿ ಪತ್ರ ವಿತರಣೆ

ಪಿಇಎಸ್‌ಐಟಿಎಂನಲ್ಲಿ 16ನೇ ಪದವಿ ಪ್ರದಾನ ಹಾಗೂ ಉದ್ಯೋಗ ನೇಮಕಾತಿ ಪತ್ರ ವಿತರಣೆ

June 8, 2026
ಕನ್ನಡ ಸಾಹಿತ್ಯ ಪರಂಪರೆಗೆ ಬಹುದೊಡ್ಡ ಶಕ್ತಿ ನೀಡಿದವರು ಮಾಸ್ತಿ ವೆಂಕಟೇಶ ಅಯ್ಯಂಗಾರ್: ಸುರೇಶ್ ಋಗ್ವೇದಿ

ಕನ್ನಡ ಸಾಹಿತ್ಯ ಪರಂಪರೆಗೆ ಬಹುದೊಡ್ಡ ಶಕ್ತಿ ನೀಡಿದವರು ಮಾಸ್ತಿ ವೆಂಕಟೇಶ ಅಯ್ಯಂಗಾರ್: ಸುರೇಶ್ ಋಗ್ವೇದಿ

June 8, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL