No Result
View All Result
b-y-raghavendra-freedom-fighters-independence-day
English Articles

Remembering Freedom Fighters Is the Duty of Every Indian: MP B.Y. Raghavendra

by kalpa News
August 17, 2026
0

Kalpa Media House  | SHIKARIPURA  | Remembering the freedom fighters who fought against British rule, made immense sacrifices and secured...

Read moreDetails
Indriya - Krithi Shetty - Brand Ambassador

Indriya announces Krithi Shetty as Brand Ambassador for Southern Markets

August 14, 2026
Mysuru Ninada Griha Sangeet Concert On August 16th

Mysuru to Host Hindustani Classical Vocal Concert on August 16

August 11, 2026
Hubballi drucc meeting passenger friendly initiatives

41st DRUCC Meeting Held at Hubballi; Division Applauded for Passenger-Friendly Initiatives

August 10, 2026
World Padel League august 16 Scores Big Brand Support

World Padel League Secures Strong Brand Backing Ahead of Its Biggest Season Yet

August 8, 2026
  • Advertise With Us
  • Grievances
  • About Us
  • Contact Us
Friday, August 21, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ

ಅವಕಾಶಗಳನ್ನು ಸದುಪಯೋಗಿಸಿಕೊಂಡು ಸಮಾಜಕ್ಕೆ ಕೊಡುಗೆ ನೀಡಿ: ಡಾ. ಶ್ರೀಧರ್ ಕಿವಿಮಾತು

ಸಹ್ಯಾದ್ರಿ ಕಾಲೇಜಿನಲ್ಲಿ `ಹೊರೆಯಾಗದಿರಲಿ ಹರೆಯ' ದತ್ತಿ ಉಪನ್ಯಾಸ ಕಾರ್ಯಕ್ರಮ

kalpa News by kalpa News
December 1, 2022
in ಶಿವಮೊಗ್ಗ
0
ಅವಕಾಶಗಳನ್ನು ಸದುಪಯೋಗಿಸಿಕೊಂಡು ಸಮಾಜಕ್ಕೆ ಕೊಡುಗೆ ನೀಡಿ: ಡಾ. ಶ್ರೀಧರ್ ಕಿವಿಮಾತು
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್   |  ಶಿವಮೊಗ್ಗ  |

ತಾವು ಅಂದುಕೊಂಡಿದ್ದನ್ನು ಸಾಧಿಸಲು ಈ ಕಾಲೇಜು ಪ್ರೇರಣೆ ನೀಡಿದೆ. ಕಷ್ಟದ ದಿನಗಳಲ್ಲಿ ಈ ಕಾಲೇಜಿನಲ್ಲಿ ವಿದ್ಯಾಭ್ಯಾಸ ಕಲಿತು ಸಮಾಜದಲ್ಲಿ ಒಂದು ವ್ಯಕ್ತಿತ್ವ ರೂಪಿಸಿಕೊಳ್ಳಲು ಸಾಧ್ಯವಾಗಿದೆ ಎಂದು ಸಿಮ್ಸ್ ಮೆಡಿಕಲ್ ಡೈರೆಕ್ಟರ್ ಡಾ. ಶ್ರೀಧರ್ ಹೇಳಿದರು.

ಭಾರತೀಯ ವೈದ್ಯಕೀಯ ಸಂಘದ ಕನ್ನಡ ಬರಹಗಾರರ ಸಮಿತಿ, ಭಾರತೀಯ ವೈದ್ಯಕೀಯ ಸಂಘದ ಶಿವಮೊಗ್ಗ ಶಾಖೆ ವತಿಯಿಂದ ಸಹ್ಯಾದ್ರಿ ಕಾಲೇಜಿನಲ್ಲಿ ಆಯೋಜಿಸಲಾಗಿದ್ದ `ಹೊರೆಯಾಗದಿರಲಿ ಹರೆಯ’ ಎಂಬ ವಿಷಯದ ಕುರಿತಾಗಿನ ದತ್ತಿ ಉಪನ್ಯಾಸ ಉದ್ಘಾಟಿಸಿ ಅವರು ಮಾತನಾಡಿದರು.
ಇತ್ತೀಚಿನ ದಿನಗಳಲ್ಲಿ ವಿದ್ಯಾರ್ಥಿಗಳಲ್ಲಿ ಸಾಮಾನ್ಯ ತಿಳುವಳಿಕೆ ಕಡಿಮೆಯಾಗುತ್ತಿದೆ. ತಮ್ಮ ಸಹಪಾಠಿಗಳ ಕಷ್ಟಕ್ಕೆ ಸ್ಪಂದಿಸುವ ಮನೋಭಾವ ಕ್ಷೀಣಿಸುತ್ತಿದೆ. ಆರ್ಥಿಕವಾಗಿ ಸಬಲವಾಗಿರುವ ವಿದ್ಯಾರ್ಥಿಗಳು ದುರ್ಬಲ ಪರಿಸ್ಥಿತಿಯಲ್ಲಿರುವ ತಮ್ಮ ಸ್ನೇಹಿತರಿಗೆ ನೆರವು ನೀಡುವ ಮನಸ್ಥಿತಿ ಹೊಂದದೆ ಇರುವುದು ವಿಷಾದನೀಯ ಸಂಗತಿ. ನಮಗೆ ಕಲಿಸಿದ ಗುರುಗಳನ್ನು ಮರೆಯಬಾರದು. ಸಮಾಜದಲ್ಲಿ ಇರುವಷ್ಟು ದಿನ ಒಳ್ಳೆಯ ಕೆಲಸ ಮಾಡಬೇಕು. ಇರುವ ಅವಕಾಶಗಳನ್ನು ಸದುಪಯೋಗಪಡಿಸಿಕೊಂಡು ಚಟುವಟಿಯಿಂದ ನಮ್ಮ ಸಮಾಜಕ್ಕೆ ಕೊಡುಗೆ ನೀಡಬೇಕು ಎಂದು ವಿದ್ಯಾರ್ಥಿಗಳಿಗೆ ಕಿವಿಮಾತು ಹೇಳಿದರು.

ದತ್ತಿ ಉಪನ್ಯಾಸ ನೀಡುತ್ತಿರುವ ಮಹಿಳಾ ವೈದ್ಯರ ತಂಡದ ಕಾರ್ಯ ಶ್ಲಾಘನೀಯ. ಭಾರತೀಯ ವೈದ್ಯಕೀಯ ಬರಹಗಾರರ ಸಂಘ ಇನ್ನು ಮುಂದಿನ ದಿನಗಳಲ್ಲಿ ಎತ್ತರಕ್ಕೆ ಬೆಳೆಯಲಿ ಎಂದು ಆಶಿಸಿದರು. ಹಾಗೂ ಕಾರ್ಯಕ್ರಮಕ್ಕೆ ಆಹ್ವಾನಿಸಿದ ಡಾ. ನಯ ಶ್ರೀನಿವಾಸ್ ಅವರಿಗೆ ಇದೇ ಸಂದರ್ಭದಲ್ಲಿ ಅಭಿನಂದನೆ ಸಲ್ಲಿಸಿದರು.
ಜೆಎನ್’ಎನ್’ಸಿಇ ಕಾಲೇಜಿನ ನಿರ್ವಹಣಾ ಅಧ್ಯಯನ ವಿಭಾಗದ ಪ್ರಾಧ್ಯಾಪಕರು, ವಿದ್ಯಾರ್ಥಿ ಸಲಹೆಗಾರರಾದ ಡಾ.ಸಿ.ಕೆ. ಅನುರಾಧ ಮಾತನಾಡಿ, ಎಲ್ಲಾ ಮಕ್ಕಳಲ್ಲಿ ಹದಿಹರೆಯದ ಸಮಸ್ಯೆಗಳು ಸಾಮಾನ್ಯ. ಅದನ್ನು ಸಮರ್ಥವಾಗಿ ನಿಭಾಯಿಸಿ, ಪ್ರಬುದ್ಧತೆಯಿಂದ ನಿಮ್ಮ ಗುರಿ ಸಾಧಿಸಿ ಎಂದರು.

ಪರೀಕ್ಷೆಯಲ್ಲಿ ಅಂಕ ಗಳಿಕೆ ಬಗ್ಗೆ ವಿದ್ಯಾರ್ಥಿಗಳಿಗೆ ಪೋಷಕರಿಂದ ಒತ್ತಡ ಹೆಚ್ಚಿದಾಗ ಹಾಗೂ 16ರಿಂದ 18ರ ವಯೋಮಾನದ ಮಕ್ಕಳಲ್ಲಾಗುವ ದೈಹಿಕ, ಮಾನಸಿಕ ಮತ್ತು ಭಾವನಾತ್ಮಕ ಬದಲಾವಣೆಯಿಂದಾಗಿ ಹದಿಹರೆಯದ ಸಮಸ್ಯೆಗಳು ಉದ್ಭವಿಸುತ್ತವೆ. ಪೋಷಕರೊಂದಿಗೆ ಉತ್ತಮ ಸಂವಹನ ಬೆಳೆಸಿಕೊಂಡು ತಮ್ಮ ಮನಸ್ಸಿನ ತುಮುಲಗಳ ಬಗ್ಗೆ ಮನಬಿಚ್ಚಿ ಮಾತನಾಡುವುದರಿಂದ ಹದಿಹರೆಯದ ಘಟ್ಟವನ್ನು ಯಶಸ್ವಿಯಾಗಿ ದಾಟಬಹುದು ಎಂದು ಸಲಹೆ ನೀಡಿದರು.
ಇಂದಿನ ವಿದ್ಯಾರ್ಥಿಗಳಲ್ಲಿ ಮೊಬೈಲ್ ಆರನೇ ಇಂದ್ರಿಯವಾಗಿದೆ. ಮೊಬೈಲ್ ಗೀಳಿಗೆ ಕಡಿವಾಣ ಹಾಕುವುದು ಅತಿ ಅವಶ್ಯವಾಗಿದೆ. ಮುಂಬರುವ ದಿನಗಳಲ್ಲಿ ಉದ್ಯೋಗವಕಾಶಗಳು ಕಡಿಮೆಯಾಗುತ್ತದೆ. ಅದನ್ನು ಮೀರಿ ಯಶಸ್ವಿಯಾಗಲು ನೀವು ಉತ್ತಮ ವಿದ್ಯಾಭ್ಯಾಸ ಹೊಂದಬೇಕು. ಪದವಿ ಜೊತೆಗೆ ಇನ್ನಿತರೆ ಸರ್ಟಿಫಿಕೇಟ್ ಕೋರ್ಸ್’ಗಳನ್ನು ಮಾಡಿ ಬಯೋಡೆಟಾದಲ್ಲಿ ನಮೂದಿಸುವುದರಿಂದ ಉದ್ಯೋಗ ಪಡೆಯಲು ಉಪಯೋಗವಾಗುತ್ತದೆ ಎಂದರು.

ಕನ್ನಡ ನಮ್ಮ ಉಸಿರಾದರೆ ಇಂಗ್ಲಿಷ್ ನಮ್ಮ ವ್ಯವಹಾರಿಕ ಭಾಷೆ. ನಮ್ಮ ಮಲೆನಾಡ ಯುವಜನತೆ ಇಂಗ್ಲಿಷ್ ಮಾಡನಾಡಲು ಹಿಂಜರಿಕೆಪಡುತ್ತಿದ್ದು, ಬೇರೆ ಪ್ರದೇಶಗಳಲ್ಲಿ ಕೆಲಸ ನಿರ್ವಹಿಸಲು ಕಷ್ಟವಾಗುತ್ತದೆ. ಈ ಹಿನ್ನೆಲೆಯಲ್ಲಿ ಪದವಿ ಮಟ್ಟದಲ್ಲಿಯೇ ಇಂಗ್ಲಿಷ್ ಕಲಿಕೆ ಬಗ್ಗೆ ಗಮನ ಕೊಟ್ಟು ಇಂಗ್ಲಿಷ್ ಕಲಿಯಿರಿ ಹಾಗೂ ಕನ್ನಡ ಬೆಳೆಸಿರಿ ಎಂದು ಕರೆ ನೀಡಿದರು.
ಅಂದಿನ ಪಾಠವನ್ನು ಅಂದೇ ಓದುವನ್ನು ಅಳವಡಿಸಿಕೊಳ್ಳಿ. ಸಹ್ಯಾದ್ರಿ ಕಾಲೇಜಿನ ಓದಿದ ವಿದ್ಯಾರ್ಥಿಗಳಲ್ಲಿ ಸದೃಢತೆಯ ಮನೋಭಾವ ಹೆಚ್ಚಿರುತ್ತದೆ. ಇರುವ ಸಮಯದಲ್ಲಿ ವೇಳಾಪಟ್ಟಿ ಹಾಕಿಕೊಂಡು ವಿದ್ಯಾಭ್ಯಾಸ ಮತ್ತು ಇತರೆ ಚಟುವಟಿಕೆಯಲ್ಲಿ ಮಗ್ನರಾಗಿ, ಪ್ರತಿದಿನ ಪುಸ್ತಕ ಓದುವ ಹವ್ಯಾಸ ಮಾಡಿಕೊಳ್ಳುವುದು ಒಂದು ಉತ್ತಮ ಅಭ್ಯಾಸವಾಗಿದೆ. ನಮ್ಮ ಜೀವನ ನಮ್ಮ ಕೈಲಿದೆ ಅದನ್ನು ಉತ್ತಮ ರೀತಿಯಲ್ಲಿ ರೂಪಿಸಿಕೊಂಡು ಯಶಸ್ವಿಯಾಗಿ ಎಂದು ಸಲಹೆ ನೀಡಿದರು.

ಸುಬ್ಬಯ್ಯ ದಂತ ವೈದ್ಯಕೀಯ ಕಾಲೇಜಿನ ಕಾರ್ಯನಿರ್ವಾಹಕ ನಿರ್ದೇಶಕಿ ಡಾ.ವಿನಯ ಶ್ರೀನಿವಾಸ್ ಮಾತನಾಡಿ, ವೈದ್ಯ ಸಾಹಿತ್ಯದ ದತ್ತಿ ಉಪನ್ಯಾಸಗಳ ಕುರಿತಾಗಿ ತಿಳಿಸಿ, ಪ್ರಾಸ್ತಾವಿಕವಾಗಿ ಎಲ್ಲರನ್ನೂ ಸ್ವಾಗತಿಸಿದರು.

ಸಹ್ಯಾದ್ರಿ ಕಾಲೇಜಿನ ಪ್ರಾಂಶುಪಾಲರಾದ ರಾಜೇಶ್ವರಿ, ಮನೋರೋಗ ತಜ್ಞೆ ಡಾ. ಕೆ.ಎಸ್. ಶುಭ್ರತಾ, ಐಎಂಎ ಶಿವಮೊಗ್ಗ ಕಾರ್ಯದರ್ಶಿ ಡಾ. ರಕ್ಷಾ, 1999ರ ಬ್ಯಾಚ್ ವಿದ್ಯಾರ್ಥಿಗಳಾದ ಡಾ.ಎಸ್.ಕೆ. ಕಿರಣ್, ಮಕ್ಕಳ ತಜ್ಞೆ ಡಾ.ಜಯಲಕ್ಷ್ಮಿ ನಾಯಕ್ ಸೇರಿದಂತೆ ಹಲವರು ಇದ್ದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

Tags: Kannada News WebsiteKannadaNewsKannadaNewsLiveKannadaNewsOnlineKannadaWebsiteLatest News KannadaLocal NewsMalnad NewsNewsinKannadaNewsKannadaShimogaShivamoggaShivamogga Newsಮಲೆನಾಡು_ಸುದ್ಧಿಶಿವಮೊಗ್ಗಶಿವಮೊಗ್ಗ_ನ್ಯೂಸ್
Share197Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಭದ್ರಾವತಿಯಲ್ಲಿ ಬೀದಿ ನಾಯಿ ದಾಳಿಗೆ ನಾಲ್ಕು ವರ್ಷದ ಮಗು ಬಲಿ: ಘಟನೆ ನಡೆದಿದ್ದೆಲ್ಲಿ?

Next Post

ಚಂದ್ರಗುತ್ತಿ ರೇಣುಕಾಂಬ ದೇಗುಲಕ್ಕೆ ಹರಕೆ ರೂಪದಲ್ಲಿ ಬಂದ ವಸ್ತುಗಳ ಬಹಿರಂಗ ಹರಾಜು ಪ್ರಕ್ರಿಯೆ ಸಂಪನ್ನ

kalpa News

kalpa News

Next Post
ಚಂದ್ರಗುತ್ತಿ ರೇಣುಕಾಂಬ ದೇಗುಲಕ್ಕೆ ಹರಕೆ ರೂಪದಲ್ಲಿ ಬಂದ ವಸ್ತುಗಳ ಬಹಿರಂಗ ಹರಾಜು ಪ್ರಕ್ರಿಯೆ ಸಂಪನ್ನ

ಚಂದ್ರಗುತ್ತಿ ರೇಣುಕಾಂಬ ದೇಗುಲಕ್ಕೆ ಹರಕೆ ರೂಪದಲ್ಲಿ ಬಂದ ವಸ್ತುಗಳ ಬಹಿರಂಗ ಹರಾಜು ಪ್ರಕ್ರಿಯೆ ಸಂಪನ್ನ

Leave a Reply Cancel reply

Your email address will not be published. Required fields are marked *

No Result
View All Result
b-y-raghavendra-freedom-fighters-independence-day
English Articles

Remembering Freedom Fighters Is the Duty of Every Indian: MP B.Y. Raghavendra

by kalpa News
August 17, 2026
0

Kalpa Media House  | SHIKARIPURA  | Remembering the freedom fighters who fought against British rule, made immense sacrifices and secured...

Read moreDetails
Indriya - Krithi Shetty - Brand Ambassador

Indriya announces Krithi Shetty as Brand Ambassador for Southern Markets

August 14, 2026
Mysuru Ninada Griha Sangeet Concert On August 16th

Mysuru to Host Hindustani Classical Vocal Concert on August 16

August 11, 2026
Hubballi drucc meeting passenger friendly initiatives

41st DRUCC Meeting Held at Hubballi; Division Applauded for Passenger-Friendly Initiatives

August 10, 2026
World Padel League august 16 Scores Big Brand Support

World Padel League Secures Strong Brand Backing Ahead of Its Biggest Season Yet

August 8, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL