ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
10 ವರ್ಷದಲ್ಲಿ ಪ್ರಧಾನಿ ನರೇಂದ್ರ ಮೋದಿ #PM Narendra Modi ನೇತೃತ್ವದ ಕೇಂದ್ರ ಸರ್ಕಾರ ಜಾರಿಗೊಳಿಸಿರುವ ಜನಪರ ಯೋಜನೆಗಳನ್ನು ಮನೆ ಮನೆಗೂ ತಲುಪಿಸುವಲ್ಲಿ ಕಾರ್ಯಕರ್ತರು ಕೆಲಸ ಮಾಡಬೇಕು ಎಂದು ವಿಧಾನಪರಿಷತ್ ಸದಸ್ಯ, ರಾಜ್ಯ ಬಿಜೆಪಿ ಕಾರ್ಯದರ್ಶಿ ಡಿ.ಎಸ್. ಅರುಣ್ #D S Arun ಕರೆ ನೀಡಿದರು.
ರವೀಂದ್ರ ನಗರದಲ್ಲಿ ಬೂತ್ ನಂ. 54, ಬೂತ್ ಅಧ್ಯಕ್ಷ ಸತ್ಯನಾರಾಯಣ ಅವರ ಅಧ್ಯಕ್ಷತೆಯಲ್ಲಿ ಮತ್ತು ಚೆನ್ನಪ್ಪ ಲೇಔಟ್ ನ ಬೂತ್ ನಂ: 284, ಬೂತ್ ಅಧ್ಯಕ್ಷ ಶ್ರೀನಿವಾಸ್ ಅವರ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಅವರು ಮಾತನಾಡಿದರು.
ಕಳೆದ 10 ವರ್ಷಗಳಲ್ಲಿ ಮೋದಿಯವರು ಜಾರಿಗೊಳಿಸಿರುವ ನೂರಾರು ಜನಪರ ಯೋಜನೆಗಳ ಕುರಿತಾಗಿ ಜನರಿಗೆ ತಲುಪಿಸುವ ಕೆಲಸವನ್ನು ಕಾರ್ಯಕರ್ತರು ಮನೆ ಮನೆಗೂ ತೆರಳಿ ತಲುಪಿಸಬೇಕು ಎಂದರು.
ಇದರೊಂದಿಗೆ ಸಂಸದರಾಗಿ ಬಿ.ವೈ. ರಾಘವೇಂದ್ರ #B Y Raghavendra ಅವರು ಕ್ಷೇತ್ರದಲ್ಲಿ ಮಾಡಿರುವ ಅಭಿವೃದ್ಧಿ ಕಾರ್ಯಗಳ ಕುರಿತಾಗಿಯೂ ಸಹ ಜನರಿಗೆ ತಲುಪಿಸಿ, ಮನವೊಲಿಸಿ ಎಂದು ಕರೆ ನೀಡಿದರು.
ಲೋಕಸಭಾ ಚುನಾವಣೆಯ ಹಿನ್ನೆಲೆಯಲ್ಲಿ ಬೂತ್ ಸಮಿತಿ ಸದಸ್ಯರೊಂದಿಗೆ ಸಭೆ ನಡೆಸಿ ಬೂತ್ ಮಟ್ಟದ ಸಭೆಗಳು, ಪೇಜ್ ಪ್ರಮುಖರ ಸಭೆಗಳು, ವಾರ್ಡ್ ಸಭೆಗಳು ಮತ್ತು ಮನೆ ಮನೆಗೆ ತೆರಳಿ ಕೇಂದ್ರ ಸರ್ಕಾರದ ಯೋಜನೆಗಳನ್ನು ಜನರಿಗೆ ತಿಳಿಸಿ. ಮತ್ತೊಮ್ಮೆ ನರೇಂದ್ರ ಮೋದಿ ಅವರನ್ನು ಪ್ರಧಾನಮಂತ್ರಿಯಾಗಿ ಮಾಡಬೇಕು. ಸಂಸದರು ಮತ್ತು ಶಿವಮೊಗ್ಗ ಲೋಕಸಭಾ ಕ್ಷೇತ್ರದ ಅಭ್ಯರ್ಥಿ ಬಿ. ವೈ ರಾಘವೇಂದ್ರ ಅವರ ಅಭಿವೃದ್ಧಿ ಕಾರ್ಯಗಳನ್ನು ತಿಳಿಸಿ ಎಂದು ಕರೆ ನೀಡಿದರು.
Also read: ಶಿವಮೊಗ್ಗ | ಎಲೆಕ್ಷನ್ ಟೈಮಲ್ಲಿ ಬಾಲ ಬಿಚ್ಚಿದ್ರೆ ಹುಷಾರ್ | ರೌಡಿ ಶೀಟರ್’ಗಳಿಗೆ ಪೊಲೀಸರ ಎಚ್ಚರಿಕೆ
ಮಹಾಶಕ್ತಿ ಪ್ರಧಾನ ಕಾರ್ಯದರ್ಶಿ ಎಸ್.ಪಿ. ದಿನೇಶ್, ವಾರ್ಡ್ ಅಧ್ಯಕ್ಷರಾದ ರೂಪ ಗಣೇಶ್, ಪ್ರಧಾನ ಕಾರ್ಯದರ್ಶಿ ರಾಜೇಂದ್ರ, ಶಕ್ತಿ ಕೇಂದ್ರ ಪ್ರಮುಖರಾದ ಸಾಯಿನಾಥ್, ಕಾರ್ಯಕರ್ತರಾದ ಗಣೇಶ್, ಸತೀಶ್, ಶ್ರೀನಿವಾಸ್, ವಿರೂಪಾಕ್ಷಪ್ಪ, ರಮೇಶ್, ಸುಶಾಂತ್ ಉಪಸ್ಥಿತರಿದ್ದರು.
ಹೊಳಲೂರಿನಲ್ಲಿ ಎಸ್’ಸಿ ಸಮಾವೇಶ
ಬಿಜೆಪಿ ಶಿವಮೊಗ್ಗ ಗ್ರಾಮಾಂತರ ಮಂಡಲ ವತಿಯಿಂದ ಗ್ರಾಮಾಂತರ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಹೊಳಲೂರಿನ ಹೈಸ್ಕೂಲ್ ಮೈದಾನದಲ್ಲಿ ಎಸ್’ಸಿ ಸಮುದಾಯದ ಬೃಹತ್ ಸಮಾವೇಶ ನಡೆಯಿತು.
ಬಿಜೆಪಿ ಜಿಲ್ಲಾಧ್ಯಕ್ಷ ಮೇಘರಾಜ್, ಕಡಿದಾಳ್ ಗೋಪಾಲ್, ಚನ್ನಬಸಪ್ಪ, ಅರುಣ್, ಶಾರದಾ ಪೂರ್ಯನಾಯಕ್, ಅಶೋಕ್ ನಾಯಕ್, ಮಹೇಶ್, ವೀರಯ್ಯ, ಭಾನುಪ್ರಕಾಶ್ ಸೇರಿದಂತೆ ಅನೇಕ ಮುಖಂಡರು ಇದ್ದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post