ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ
ಶಿವಮೊಗ್ಗ: ಕೋವಿಡ್ ಸುರಕ್ಷಾ ಪಡೆಯಿಂದ ನಗರದ ನಾಗರಿಕರಿಗೆ ವಿತರಣೆ ಮಾಡುತ್ತಿರುವ ಆಯುರ್ವೇದಿಕ್ ಕಿಟ್ ಸಂಪೂರ್ಣ ಉಚಿತವಾಗಿದ್ದು, ಯಾರೂ ಹಣ ನೀಡಬೇಕಿಲ್ಲ ಎಂದು ಜಿಲ್ಲಾ ಪಂಚಾಯ್ತಿ ಆರೋಗ್ಯ ಮತ್ತು ಶಿಕ್ಷಣ ಸ್ಥಾಯಿ ಸಮಿತಿ ಅಧ್ಯಕ್ಷ ಕೆ.ಇ. ಕಾಂತೇಶ್ ಹೇಳಿದ್ದಾರೆ.
ಈ ಕುರಿತಂತೆ ಮಾತನಾಡಿರುವ ಅವರು, ಈಗಾಗಲೇ ನಮ್ಮ ಕಾರ್ಯಕರ್ತರು ಮನೆ ಮನೆಗೆ ತೆರಳಿ, ಆಧಾರ್ ಕಾರ್ಡ್ ಪರಿಶೀಲಿಸಿ ಆಯುರ್ವೇದಿಕ್ ಕಿಟ್ ವಿತರಣೆ ಮಾಡುತ್ತಿದ್ದಾರೆ. ಒಟ್ಟು ನಾಲ್ಕು ಲಕ್ಷ ಮಂದಿಗೆ ನಗರದಲ್ಲಿ ಈ ಕಿಟ್ ವಿತರಣೆ ಮಾಡಲಾಗುತ್ತಿದೆ. ಈ ಕಿಟ್ ಸಂಫೂರ್ಣ ಉಚಿತವಾಗಿದ್ದು, ಯಾರೂ ಹಣ ನೀಡಬೇಕಿಲ್ಲ. ಇಂತಹ ಸಂದರ್ಭದಲ್ಲಿ ಕಿಟ್ ನೀಡಲು ಯಾರಾದರೂ ಹಣದ ಬೇಡಿಕೆ ಇಟ್ಟರೆ ತಕ್ಷಣವೇ ನಮಗೆ ಹಾಗೂ ನಮ್ಮ ಕಾರ್ಯಕರ್ತರ ಗಮನಕ್ಕೆ ತನ್ನಿ ಎಂದು ಕೋರಿದ್ದಾರೆ.

Get In Touch With Us info@kalpa.news Whatsapp: 9481252093
 
	    	

 Loading ...
 Loading ... 
							



 
                
Discussion about this post