ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ರಾಜ್ಯದ ಕಾಂಗ್ರೆಸ್ ಪಾಪರ್ ಆಗಿದ್ದು ನೀರು ಗಂಟಿಗೆ ಸಂಬಳ ನೀಡದೆ ಆತ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಗುಂಡಿಬಿದ್ದ ರಸ್ತೆಗಳನ್ನು ರಿಪೇರಿ ಮಾಡಲಾಗದೆ ಉದ್ಯಮಿ ಕಿರಣ್ ಮುಜಮ್ದಾರ್ ಬೆಂಗಳೂರಿನ 15 ರಸ್ತೆಗಳ ಗುಂಡಿಯನ್ನು ತಮ್ಮ ಸಂಸ್ಥೆಯಿಂದ ಮುಚ್ಚುವುದಾಗಿ ಹೇಳಿದ್ದಾರೆ ಇದು ಗತಿಗೆಟ್ಟ ಸರಕಾರ ಎಂದು ಮಾಜಿ ಉಪಮುಖ್ಯಮಂತ್ರಿ ಕೆ.ಎಸ್. ಈಶ್ವರಪ್ಪ ಟೀಕಿಸಿದ್ದಾರೆ.
ಸುದ್ದಿಗೋಷ್ಠಿಯಲ್ಲಿ ಇಂದು ಮಾತನಾಡಿ, ಈ ಸರ್ಕಾರ ಲಜ್ಜೆಗೆಟ್ಟ ಸರ್ಕಾರವಾಗಿದ್ದು ಗುತ್ತಿಗೆದಾರರಿಗೆ 33,000 ಕೋಟಿ ರೂ. ಹಣ ಬಾಕಿ ಇಟ್ಟುಕೊಂಡಿದೆ. ಅನೇಕ ಗುತ್ತಿಗೆದಾರರು ಸಾಲಭಾದೆಯಿಂದ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಗುತ್ತಿಗೆದಾರರು ಹಣ ಕೇಳಿದರೆ ರಾಜ್ಯದ ಮುಖ್ಯಮಂತ್ರಿ ಕೋರ್ಟಿಗೆ ಹೋಗಲಿ ಎಂದು ಹೇಳುತ್ತಿದ್ದಾರೆ. ಈ ನಿರ್ಲಜ್ಯ ಸರ್ಕಾರಕ್ಕೆ ಮಾನವೀಯತೆ ಇಲ್ಲ ಎಂದರು.

ಇದನ್ನು ಖಂಡಿಸಿ ನಾನು ಅ.24ರಂದು ಬಿಜಾಪುರಕ್ಕೆ ಹೋಗುತ್ತಾ ಇದ್ದೇನೆ. ಸ್ಥಳೀಯ ಮುಖಂಡರುಗಳು ಮತ್ತು ಕಾರ್ಯಕರ್ತರೊಂದಿಗೆ ಜಿಲ್ಲಾಧಿಕಾರಿಗಳನ್ನು ಭೇಟಿಮಾಡಿ ತಕ್ಷಣ ಕನ್ನೇರಿ ಸ್ವಾಮಿಗಳ ಮೇಲಿನ ನಗರ ಪ್ರವೇಶ ತಡೆ ಆದೇಶವನ್ನು ಹಿಂಪಡೆಯಬೇಕು ಎಂದು ಒತ್ತಾಯಿಸುತ್ತೇನೆ ಎಂದರು.

ಯತ್ನಾಳ್ ಅವರು ಹೊಸಪಕ್ಷ ಕಟ್ಟುತ್ತಾರಂತೆ ಎಂಬ ಪ್ರಶ್ನೆಗೆ ಆ ಬಗ್ಗೆ ನನಗೆ ಗೊತ್ತಿಲ್ಲ. ನಾನಂತೂ ಪ್ರಾಣ ಇರುವವರೆಗೆ ಬಿಜೆಪಿ ಬಿಟ್ಟು ಬೇರೆ ಪಕ್ಷಕ್ಕೆ ಹೋಗಲ್ಲ. ಹೋದರೆ ಬಿಜೆಪಿಗೇ ಮತ್ತೆ ಹೋಗುತ್ತೇನೆ ಎಂದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news










Discussion about this post