No Result
View All Result
KRCS Shikaripura Achieves 100% Result in CBSE Class X Board Exams
English Articles

KRCS Shikaripura Achieves 100% Result in CBSE Class X Board Exams

by ಕಲ್ಪ ನ್ಯೂಸ್
April 16, 2026
0

Kalpa Media House  |  Shikaripura | Kumadvathi Residential Central School (KRCS), Shikaripura, has achieved a 100% pass result in the...

Read moreDetails
ಬೆಂಗಳೂರು–ಬಂಗಾರಪೇಟೆ ಮೆಮು ರೈಲುಗಳಿಗೆ ತಾತ್ಕಾಲಿಕ ನಿಲುಗಡೆ

Cancellation of Ashokapuram – KSR Bengaluru MEMU trains

April 16, 2026
First VALORANT Campus Cup Champions Crowned

First VALORANT Campus Cup Champions Crowned

April 15, 2026
Welfare Impossible Without Dharma; Upholding Righteousness is Everyone’s Duty: Yadugiri Yatiraja Swamiji

Welfare Impossible Without Dharma; Upholding Righteousness is Everyone’s Duty: Yadugiri Yatiraja Swamiji

April 13, 2026
Berger Paints Responds to India’s Heat Challenge with ‘Garmi Gone, Thandak On’ Home Cooling Solutions Range

Berger Paints Responds to India’s Heat Challenge with ‘Garmi Gone, Thandak On’ Home Cooling Solutions Range

April 13, 2026
  • Advertise With Us
  • Grievances
  • About Us
  • Contact Us
Tuesday, April 28, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ

ಭಾರತದ ಸಾಂಸ್ಕೃತಿಕ ಪರಂಪರೆಗೆ ಮಹಿಳೆಯರ ಕೊಡುಗೆ ಅಪಾರ: ಶ್ರೀರಂಜಿನಿ ದತ್ತಾತ್ರಿ

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
May 5, 2022
in ಶಿವಮೊಗ್ಗ
0
ಭಾರತದ ಸಾಂಸ್ಕೃತಿಕ ಪರಂಪರೆಗೆ ಮಹಿಳೆಯರ ಕೊಡುಗೆ ಅಪಾರ: ಶ್ರೀರಂಜಿನಿ ದತ್ತಾತ್ರಿ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್   |  ಶಿವಮೊಗ್ಗ  |

ವೈವಿಧ್ಯಮಯ ಸಂಸ್ಕೃತಿಗಳನ್ನು ಹೊಂದಿ ಏಕತೆಯಿಂದ ಇರುವುದು ಭಾರತದ ಹಿರಿಮೆ. ವಿಶ್ವದಲ್ಲೇ ಅತೀ ಉತ್ಕೃಷ್ಟ, ವಿಶಿಷ್ಠ, ವಿಭಿನ್ನ, ವೈಭವ ಭರಿತ ಸಂಸ್ಕೃತಿ ನಮ್ಮ ದೇಶ ಎಂಬ ಹಿರಿಮೆಗೆ ಪಾತ್ರವಾಗಿದೆ. ಭಾರತದ ಸಂಸ್ಕೃತಿ, ಪಾರಂಪರಿಕತೆ, ಭಾಷೆ, ಕಲೆ, ಸಾಹಿತ್ಯ ಆಹಾರ, ಉಡುಪು, ಪ್ರತಿಯೊಂದರಲ್ಲೂ ವೈವಿಧ್ಯತೆ ಇದ್ದರೂ ಭಾವ ಕೋಶದ ಏಕತೆ ನಮ್ಮ ದೇಶದ ಹಿರಿಮೆ. ಈ ಹಿರಿಮೆಯ ಮೂಲ ಸೆಲೆ ನಮ್ಮ ದೇಶದ ಮಹಿಳೆಯರು ಎಂದು ಲೇಖಕಿ ಶ್ರೀರಂಜಿನಿ ದತ್ತಾತ್ರಿ ಅಭಿಪ್ರಾಯಪಟ್ಟರು.

ಆದಿಚುಂಚನಗಿರಿ ಸಮುದಾಯ ಭವನದಲ್ಲಿ ಸೀನಿಯರ್ ಛೇಂಬರ್ ಇಂಟರ್ ನ್ಯಾಷನಲ್ ಸದಸ್ಯಿನಿಯರಿಗಾಗಿ ಹಮ್ಮಿಕೊಂಡಿದ್ದ ಸಾಂಸ್ಕೃತಿಕ ವೈಭವ ಕಾರ್ಯಕ್ರಮದ ನೇತೃತ್ವ ವಹಿಸಿ ಭಾರತದ ಸಾಂಸ್ಕೃತಿಕ ವೈಭವದ ಮೂಲ ಸೆಲೆ ಭಾರತೀಯ ಮಹಿಳೆ ಎಂಬ ವಿಚಾರವಾಗಿ ಅವರು ಮಾತನಾಡಿದರು.

ನಮ್ಮ ದೇಶದಲ್ಲಿ ಪ್ರತೀ 5ಕಿಲೋ ಮೀಟರ್‌ಗೂ ವೈವಿಧ್ಯಮಯ ಸಂಸ್ಕೃತಿಯನ್ನು ಕಾಣುತ್ತೇವೆ. ಪುರಾತನ ಸಂಸ್ಕೃತಿ, ವೇದ ಕಾಲದ ಸಂಸ್ಕೃತಿ, ವೈದಿಕ, ಶೈವ, ಭೌದ್ಧ, ಜೈನ, ಸಿಖ್ ಹೀಗೆ ಯಾವುದೇ ಧರ್ಮದ, ಪ್ರಾಂತದ ಸಂಸ್ಕೃತಿಕ ಇತಿಹಾಸವನ್ನು ಸಂಶೋಧಿಸುತ್ತಾ ಸಾಗಿದರೆ ಮಹಿಳೆಯರ ಕೊಡುಗೆ ಅಪಾರವಾಗಿ ಕಂಡುಬರುತ್ತದೆ. ಮುಂದಿನ ದಿನಗಳಲ್ಲಿ ಈ ಕುರಿತು ಮತ್ತಷ್ಟು ಅಧ್ಯಯನಗಳು ನಡೆಯಬೇಕು ಎಂದರು.

Also read: ಮೇ 6ರಂದು ಅನಂತ ಪ್ರೇರಣಾ ಕೇಂದ್ರ ಲೋಕಾರ್ಪಣೆ: ತೇಜಸ್ವಿನಿ ಅನಂತಕುಮಾರ್

ಈ ದೇಶದ ಸಾಂಸ್ಕೃತಿಕ, ಧಾರ್ಮಿಕ, ಪಾರಂಪರಿಕತೆಗಳ ಜೊತೆಗೆ ಭಾಷೆ, ಕಲೆ, ಸಾಹಿತ್ಯ, ಆಹಾರ, ಉಡುಪು, ತೊಡಪು ಎಲ್ಲದರಲ್ಲೂ ಪ್ರಾಂತ ಪ್ರಾಂತಗಳಲ್ಲೂ ವಿವಿಧತೆಯೊಂದಿಗೆ, ವೈವಿಧ್ಯತೆಯನ್ನೂ ಕಾಣುತ್ತೇವೆ. ಸಂಸ್ಕೃತಿಗಳ ಮಹಾ ಪ್ರವಾಹವೇ ನಮ್ಮ ದೇಶದಲ್ಲಿದೆ. ಹೆದ್ದೆರೆಗಳೋಪಾದಿಯಲ್ಲಿ ಇರುವ ಈ ಸಂಸ್ಕೃತಿಯ ಮೇಲೆ ಸಾವಿರಾರು ವರುಷಗಳಿಂದಲೂ ಆಕ್ರಮಣಗಳು ನಡೆಯುತ್ತಾ ಬಂದರೂ ಏಕತೆಯನ್ನೂ ವೈಭವವನ್ನೂ ಉಳಿಸಿಕೊಂಡು ಸಾಗುತ್ತಿರುವುದಕ್ಕೆ ಪ್ರತೀ ಕುಟುಂಬದ ಮಹಿಳೆಯರೇ ಕಾರಣ ಎಂದರು.

ಪ್ರಸ್ತುತ ದಿನಗಳಲ್ಲಿ ಸಾಂಸ್ಕೃತಿಕ ವೈಭವ ಕಾರ್ಯಕ್ರಮವು ಅತ್ಯಂತ ಮಹತ್ವದ್ದು, ಕಾರಣ ನಾವೆಲ್ಲರೂ ಇಂದು ಒತ್ತಡ ಭರಿತ, ಸ್ವಾರ್ಥಪರ ಚಿಂತನೆಗಳ, ಆಡಂಬರದ ಆಧುನಿಕ ಜೀವನ ಕ್ರಮದಲ್ಲಿ ಬದುಕುತ್ತಿದ್ದೇವೆ. ಇಂತಹ ಜೀವನ ಕ್ರಮದಲ್ಲಿರುವ ನಮಗೆ ಬೇರೆ ದೇಶದ್ದು ಬಿಡಿ, ನಮ್ಮ ಭಾರತ ದೇಶದ ವಿವಿಧ ಸಂಸ್ಕೃತಿ, ಭಾಷೆ, ವೇಷ, ಸ್ಥಳ ಇತ್ಯಾದಿಗಳ ಅಂದ ಚೆಂದಗಳನ್ನು ಸವಿಯುವ ಮನಸ್ಥಿತಿಯನ್ನು ಕಳೆದುಕೊಂಡು ಬಿಟ್ಟಿದ್ದೇವೆ ಅಥವಾ ನಿಲ್ಲಿಸಿಬಿಟ್ಟಿದ್ದೇವೆ. ನಮ್ಮೊಳಗಿನ ಸಂಬಂಧಗಳ ಸೆಲೆಗಳು ಒತ್ತಡ, ಸ್ವಾರ್ಥ, ಲೋಭ, ಮೋಹ ಇತ್ಯಾದಿಗಳಿಂದಾಗಿ ನಶಿಸಿಯೇ ಹೋಗುತ್ತಿವೆ. ಭಾರತದ ಹಿರಿಮೆ, ಉಳಿವು, ನಲಿವುಗಳು ಉಳಿದಿರುವುದೇ ಸಂಸ್ಕೃತಿಗಳ ಹೂರಣದಲ್ಲಿ. ಈ ದಿಸೆಯಲ್ಲಿ ಸಾಂಸ್ಕೃತಿಕ ವೈಭವದಂತಹ ಕಾರ್ಯಕ್ರಮಗಳ ಅವಶ್ಯಕತೆ ಬಹಳವಿದೆ ಎಂದು ತಿಳಿಸಿದರು.

ಸೀನಿಯರ್ ಛೇಂಬರ್ ಇಂಟರ್ ನ್ಯಾಷನಲ್ ಶಿವಮೊಗ್ಗದ ಅಧ್ಯಕ್ಷೆ ಪುಷ್ಪಾ ಎಸ್. ಶೆಟ್ಟಿ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ, ಸಂಸ್ಕೃತಿ, ಸಂಸ್ಕಾರ ನಮ್ಮ ಪೂರ್ವಜರು ನಮಗೆ ನೀಡಿದ ಕೊಡುಗೆ. ಒಂದೊಂದು ರಾಜ್ಯದಲ್ಲೂ ವೈವಿಧ್ಯಮಯ ಸಾಂಸ್ಕೃತಿಕ ವೈಭವ ಕಂಡು ಬರುತ್ತದೆ. ಈ ವೈಭವಗಳನ್ನು ಒಟ್ಟುಗೂಡಿಸಿದರೆ ಅದೆಷ್ಟು ಭವ್ಯ ನಮ್ಮದೇಶ ಎಂಬ ಹೆಮ್ಮೆ ನಮಗುಂಟಾಗುತ್ತದೆ. ಈ ದಿಸೆಯಲ್ಲಿ ಸೀನಿಯರ್ ಛೇಂಬರ್ ಇಂಟರ್ ನ್ಯಾಷನಲ್‌ನಿಂದ ಈ ಬಾರಿ ವಿಶೇಷವಾದ ಸಾಂಸ್ಕೃತಿ ವೈಭವ ಕಾರ್ಯಕ್ರಮ ಹಮ್ಮಿಕೊಂಡಿದ್ದೇವೆ ವಿವಿಧ ಸಂಸ್ಕೃತಿಗಳ ಅಪೂರ್ವ ವೈಭವ, ವಿವಿಧತೆಯಲ್ಲಿ ಏಕತೆಯನ್ನೂ ಸಾರುವುದೇ ಈ ಕಾರ್ಯಕ್ರಮದ ಉದ್ದೇಶವೂ ಆಗಿದೆ ಎಂದು ತಿಳಿಸಿದರು.

ಸೀನಿಯರ್ ಛೇಂಬರ್ ಇಂಟರ್ ನ್ಯಾಷನಲ್ ಶಿವಮೊಗ್ಗದ ಸದಸ್ಯನಿಯರು ತಮ್ಮ ಗುಂಪಿನ ನಾಯಕಿಯರ ನೇತೃತ್ವದಲ್ಲಿ ವಿವಿಧ ರಾಜ್ಯಗಳ ವೇಷಭೂಷಣಗಳನ್ನು ಪ್ರಸ್ತುತಪಡಿಸಿದರು. ಮಧುಮತಿ ಮಂಜುನಾಥ್ ತಂಡದ ಗೋವಾ ವೇಷಭೂಷಣ, ಶಾಂತ ಎಸ್ ಶೆಟ್ಟಿ ತಂಡ ಗುಜರಾಥಿ, ಶಾಂತ ಸುರೇಂದ್ರ ತಂಡ ಬೆಂಗಾಲಿ, ಲಲಿತಾಗುರುಮೂರ್ತಿ ತಂಡ ಕರ್ನಾಟಕ, ಉಮಾ ಚಂದ್ರಪ್ಪ ತಂಡ ಮರಾಠಿ, ವಾತ್ಯಲ್ಯ ತಂಡ ಕೊಡಗು, ಮಮತಾ ಶಿವಕುಮಾರ್ ತಂಡ ಉತ್ತರ ಕರ್ನಾಟಕ, ಎಕ್ಸಿಕ್ಯುಟಿವ್ ಕಮಿಟಿಯಿಂದ ರೆಟ್ರೋ ಸ್ಟೈಲ್, ಶ್ರೀರಂಜಿನಿ ದತ್ತಾತ್ರಿ ತಂಡ ಕೇರಳ ವೇಷ ಭೂಷಣದಲ್ಲಿ ಕಂಗೊಳಿಸಿದರು.

ವಾಣಿರತ್ನಾಕರ್ ನಿರೂಪಣೆ ನೆರವೇರಿಸಿದರು. ಸಂಪಿಗೆ ತಂಡದ ಉಷಾ ಕುಲಕರ್ಣಿ ಕಾರ್ಯಕ್ರಮ ನಿರ್ವಹಿಸಿದರು. ಶಶಿಕಲಾ, ಪುಷ್ಪಾ ಮಂಜಪ್ಪ, ಎಂ. ಪುಷ್ಪಾವತಿ, ಮಮತಾರಾವ್, ಸುಧಾ ಮಹೇಶ್, ಸುಮಿತಾ ಮಂಜುನಾಥ್, ಸುಶ್ಮಾ ನಿರಂಜನ್, ಶಶಿಕಲಾರವರು, ಉಷಾಕುಲಕರ್ಣಿ, ಪುಷ್ಪಮಂಜಪ್ಪ, ಮಮತಾರಾವ್, ಸುಮಿತ್ರಾ ಮಂಜುನಾಥ್, ಸುರೇಖಾ ಮುರಳೀಧರ್, ಭಾರತೀ ರಾಮಕೃಷ್ಣ ಉಪಸ್ಥಿತರಿದ್ದರು.


ಮೊದಲು ಬಂದ ಇಪ್ಪತ್ತು ಸದಸ್ಯನಿಯರಿಗೆ ವಿಶೇಷ ಬಹುಮಾನ ಹಾಗೂ ಸಾಂಸ್ಕೃತಿಕ ವೈಭವದಲ್ಲಿ ಪಾಲ್ಗೊಂಡ ಪ್ರತಿಯೊಬ್ಬರಿಗೂ ಬಹುಮಾನ ನೀಡಿ ಗೌರವಿಸಲಾಯಿತು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

Tags: Kannada News WebsiteKannadaNewsKannadaNewsLiveKannadaNewsOnlineKannadaWebsiteLatest News KannadaLocal NewsMalnad NewsNewsinKannadaNewsKannadaShimogaShivamoggaShivamogga Newsಮಲೆನಾಡು_ಸುದ್ಧಿಶಿವಮೊಗ್ಗಶಿವಮೊಗ್ಗ_ನ್ಯೂಸ್
Share197Tweet123Send
Previous Post

ಮೇ 6ರಂದು ಅನಂತ ಪ್ರೇರಣಾ ಕೇಂದ್ರ ಲೋಕಾರ್ಪಣೆ: ತೇಜಸ್ವಿನಿ ಅನಂತಕುಮಾರ್‌

Next Post

ಸ್ವಸ್ಥ ಸಮಾಜ ನಿರ್ಮಿಸಲು ಕ್ರಾಂತಿಕಾರಿ ಚಳುವಳಿಗೆ ಕಾರಣರಾದ ಬಸವಣ್ಣ ನಿಜವಾದ ದಾರ್ಶನಿಕ: ಪ್ರೊ. ಹಿ. ಚಿ. ಬೋರಲಿಂಗಯ್ಯ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ಸ್ವಸ್ಥ ಸಮಾಜ ನಿರ್ಮಿಸಲು ಕ್ರಾಂತಿಕಾರಿ ಚಳುವಳಿಗೆ ಕಾರಣರಾದ ಬಸವಣ್ಣ ನಿಜವಾದ ದಾರ್ಶನಿಕ: ಪ್ರೊ. ಹಿ. ಚಿ. ಬೋರಲಿಂಗಯ್ಯ

ಸ್ವಸ್ಥ ಸಮಾಜ ನಿರ್ಮಿಸಲು ಕ್ರಾಂತಿಕಾರಿ ಚಳುವಳಿಗೆ ಕಾರಣರಾದ ಬಸವಣ್ಣ ನಿಜವಾದ ದಾರ್ಶನಿಕ: ಪ್ರೊ. ಹಿ. ಚಿ. ಬೋರಲಿಂಗಯ್ಯ

Leave a Reply Cancel reply

Your email address will not be published. Required fields are marked *

  • Trending
  • Latest
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

April 3, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
ಶಿವಮೊಗ್ಗ | ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ | ಕಾರ್ಕಳ ಮೂಲದ ವಿದ್ಯಾರ್ಥಿನಿ ದುರ್ಮರಣ

ಶಿವಮೊಗ್ಗ | ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ | ಕಾರ್ಕಳ ಮೂಲದ ವಿದ್ಯಾರ್ಥಿನಿ ದುರ್ಮರಣ

March 12, 2026
ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

January 16, 2026
ಸಂಗೀತ, ನೃತ್ಯದಂತಹ ಕಲೆಗಳು ಮಕ್ಕಳ ಮನೋವಿಕಾಸಕ್ಕೆ ಪೂರಕ | ಫಾದರ್ ರಾಬರ್ಟ್ ಡಿ’ಮೆಲ್ಲೋ

ಸಂಗೀತ, ನೃತ್ಯದಂತಹ ಕಲೆಗಳು ಮಕ್ಕಳ ಮನೋವಿಕಾಸಕ್ಕೆ ಪೂರಕ | ಫಾದರ್ ರಾಬರ್ಟ್ ಡಿ’ಮೆಲ್ಲೋ

April 27, 2026
ಒಲಿಂಪಿಕ್ ಪದಕದ ಕನಸಿಗೆ ಬಳ್ಳಾರಿಯಲ್ಲಿ ಬುನಾದಿ: IIS ನಿಂದ ಹೈ-ಪರ್ಫಾರ್ಮೆನ್ಸ್ ಟೇಕ್ವಾಂಡೋ ತರಬೇತಿ ಕೇಂದ್ರ ಆರಂಭ

ಒಲಿಂಪಿಕ್ ಪದಕದ ಕನಸಿಗೆ ಬಳ್ಳಾರಿಯಲ್ಲಿ ಬುನಾದಿ: IIS ನಿಂದ ಹೈ-ಪರ್ಫಾರ್ಮೆನ್ಸ್ ಟೇಕ್ವಾಂಡೋ ತರಬೇತಿ ಕೇಂದ್ರ ಆರಂಭ

April 27, 2026
ಸೊರಬ | ಏ.29 ರಂದು ಪಂಡಿತಾರಾಧ್ಯರ ಶಿಲಾಮಂಟಪದ ಅಡಿಗಲ್ಲು ಸಮಾರಂಭ

ಸೊರಬ | ಏ.29 ರಂದು ಪಂಡಿತಾರಾಧ್ಯರ ಶಿಲಾಮಂಟಪದ ಅಡಿಗಲ್ಲು ಸಮಾರಂಭ

April 27, 2026
ಗಮನಿಸಿ! ಜ.21-22ರಂದು ಶಿವಮೊಗ್ಗ ನಗರ, ಗ್ರಾಮಾಂತರದ ಈ ಬಡಾವಣೆಗಳಲ್ಲಿ ಕರೆಂಟ್ ಇರಲ್ಲ

ಗಮನಿಸಿ! ಎ.28ರ ನಾಳೆ ಭದ್ರಾವತಿಯ ಹಲವು ಕಡೆ ಕರೆಂಟ್ ಇರಲ್ಲ

April 27, 2026
ಮಂಗಳೂರು ಕುಕ್ಕರ್ ಬಾಂಬ್ ಬ್ಲಾಸ್ಟ್ | ಮಾಸ್ಟರ್ ಮೈಂಡ್ ಶಾರಿಕ್’ಗೆ 10 ವರ್ಷ ಜೈಲು ಶಿಕ್ಷೆ

ಮಂಗಳೂರು ಕುಕ್ಕರ್ ಬಾಂಬ್ ಬ್ಲಾಸ್ಟ್ | ಮಾಸ್ಟರ್ ಮೈಂಡ್ ಶಾರಿಕ್’ಗೆ 10 ವರ್ಷ ಜೈಲು ಶಿಕ್ಷೆ

April 27, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL