No Result
View All Result
MEIL Completes Historic Largest Concrete Pour for PHWR at Kaiga
English Articles

MEIL Completes Historic Largest Concrete Pour for PHWR at Kaiga

by kalpa News
July 6, 2026
0

Kalpa Media House  |  Karwar  | Megha Engineering & Infrastructures Ltd. (MEIL) has successfully completed one of the largest monolithic...

Read moreDetails
SPARSH RR Nagar Launches 5 Plastic Surgery Clinics of Excellence

SPARSH RR Nagar Launches 5 Plastic Surgery Clinics of Excellence

July 4, 2026
SWR GM inspect Goods Terminal

SWR General Manager Inspects Central Workshop, Ashokapuram, Mysuru Railway Station and Goods Terminal

July 4, 2026
HERO MOTOCORP ANNOUNCES RS 3200+ CRORE INVESTMENT IN ANDHRA PRADESH

HERO MOTOCORP ANNOUNCES RS 3200+ CRORE INVESTMENT IN ANDHRA PRADESH

July 4, 2026
Indriya, Aditya Birla Jewellery makes history with India’s Largest Hand-Painted Madhubani Hoarding

Indriya, Aditya Birla Jewellery makes history with India’s Largest Hand-Painted Madhubani Hoarding

July 3, 2026
  • Advertise With Us
  • Grievances
  • About Us
  • Contact Us
Tuesday, July 7, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ

ಜನರ ನಿರೀಕ್ಷೆ ಪೂರೈಸುವಲ್ಲಿ ಪ್ರಸ್ತುತ ರಾಜಕೀಯ ವ್ಯವಸ್ಥೆ ವಿಫಲ: ಜಯರಾಮ್ ಅಮ್ಮಿನ್ ಅಭಿಪ್ರಾಯ

ಸಹ್ಯಾದ್ರಿ ಕಲಾ ಕಾಲೇಜಿನ ಸ್ನಾತಕೋತ್ತರ ರಾಜ್ಯಶಾಸ ಅಧ್ಯಯನ ಮತ್ತು ಸಂಶೋಧನಾ ವಿಭಾಗದ ವತಿಯಿಂದ ಒಂದು ದಿನದ ರಾಷ್ಟ್ರಮಟ್ಟದ ವಿಚಾರ ಸಂಕಿರಣ

kalpa News by kalpa News
April 7, 2022
in ಶಿವಮೊಗ್ಗ
0
ಜನರ ನಿರೀಕ್ಷೆ ಪೂರೈಸುವಲ್ಲಿ ಪ್ರಸ್ತುತ ರಾಜಕೀಯ ವ್ಯವಸ್ಥೆ ವಿಫಲ: ಜಯರಾಮ್ ಅಮ್ಮಿನ್ ಅಭಿಪ್ರಾಯ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್   |  ಶಿವಮೊಗ್ಗ  |

ಸ್ವಾತಂತ್ರ್ಯನಂತರದ ದಿನಗಳಲ್ಲಿ ರಾಜಕೀಯ ಬದಲಾವಣೆಯಾಗುತ್ತಿದ್ದಂತೆ ಜನರಲ್ಲಿ ನಿರೀಕ್ಷೆಯ ಮಟ್ಟ ಹೆಚ್ಚಿದೆ. ಆದರೆ ಈ ನಿರೀಕ್ಷೆಯನ್ನು ಈಗಿನ ರಾಜಕೀಯ ವ್ಯವಸ್ಥೆಯಲ್ಲಿ ಪೂರ್ಣ ಮಾಡಲು ಸಾಧ್ಯವಾಗಿಲ್ಲ ಎಂದು ಮಂಗಳೂರು ವಿವಿಯ ಸ್ನಾತಕೋತ್ತರ ರಾಜ್ಯಶಾಸ ಅಧ್ಯಯನ ವಿಭಾಗದ ಪ್ರಾಧ್ಯಾಪಕ ಪ್ರೊ. ಜಯರಾಮ್ ಅಮ್ಮಿನ್ ಎಂದು ಅಭಿಪ್ರಾಯಪಟ್ಟರು.

ಸಹ್ಯಾದ್ರಿ ಕಲಾ ಕಾಲೇಜಿನ Sahyadri College Shivamogga  ಸ್ನಾತಕೋತ್ತರ ರಾಜ್ಯಶಾಸ ಅಧ್ಯಯನ ಮತ್ತು ಸಂಶೋಧನಾ ವಿಭಾಗದ ವತಿಯಿಂದ ಹಮ್ಮಿಕೊಳ್ಳಲಾಗಿದ್ದ ಒಂದು ದಿನದ ರಾಷ್ಟ್ರಮಟ್ಟದ ವಿಚಾರ ಸಂಕಿರಣವನ್ನು ಉದ್ಘಾಟಿಸಿ ಮಾತನಾಡಿದರು.

ತಥಾಕಥಿತ ರಾಜಕೀಯ ವ್ಯವಸ್ಥೆಯನ್ನು ಬುಡಮೇಲು ಮಾಡುವಂತಹ ಹೊಸ ವ್ಯವಸ್ಥೆ ಹುಟ್ಟುತ್ತಿದೆ. ಇದಕ್ಕೆ ರಾಜಕೀಯ ವ್ಯವಸ್ಥೆ ಹೇಗೆ ಪ್ರತಿಕ್ರಿಯಿಸುತ್ತದೆ ಎಂದು ಕಾದು ನೋಡಬೇಕು. ಸ್ವಾತಂತ್ರ್ಯದ ಬಳಿಕ ಉದ್ಭವಿಸಿದ ರಾಜಕೀಯ ವ್ಯವಸ್ಥೆಯಲ್ಲಿ ಮೌಲ್ಯಗಳಿದ್ದವು. ರಾಜಕೀಯದ ನಡುವೆಯೇ ರಾಜಕೀಯ ನೇತಾರರಲ್ಲಿ ಜ್ಞಾನ ಕಂಡು ಬರುತ್ತಿತ್ತು. ಸದಾ ಅಧ್ಯಯನ ಶೀಲರಾಗಿರುತ್ತಿದ್ದರು. ತಾವು ನಂಬಿದ ಸಿದ್ದಾಂತಗಳು ಏನೇ ಇರಲಿ ಮುಖಾಮುಖಿ ಚರ್ಚೆಯ ಮೂಲಕ ಇದಕ್ಕೆ ತಾರ್ಕಿಕ ಅಂತ್ಯವೊಂದನ್ನು ಕಂಡುಕೊಳ್ಳುತ್ತಿದ್ದರು. ರಾಜಕೀಯ ದ್ವೇಷ, ವೈಮನಸ್ಸು ಅಲ್ಲಿರಲಿಲ್ಲ. ಬದಲಾಗಿ ಇನ್ನೊಬ್ಬರ ಅಭಿಪ್ರಾಯವನ್ನು ಗೌರವಿಸುವ ಮನಃಸ್ಥಿತಿ ಇತ್ತು. ಆಗಿನ ರಾಜಕೀಯ ನಾಯಕರ ಮೌಲ್ಯಯುತ ದಾರಿ ಉಳಿದವರಿಗೆ ಮಾರ್ಗದರ್ಶನವಾಗುತ್ತಿತ್ತು ಎಂದು ವಿಶ್ಲೇಷಿಸಿದ ಅವರು ಈಗ ವರ್ತಮಾನದಲ್ಲಿ ರಾಜಕೀಯ ಮೌಲ್ಯಗಳು ಕುಸಿಯುತ್ತಿವೆ ಎಂದು ವಿಷಾದಿಸಿದರು.

ಸಾಲಡ್ ಮಿಶ್ರಣದಲ್ಲಿ ಎಲ್ಲ ಹಣ್ಣು, ತರಕಾರಿಗಳು ಪ್ರತ್ಯೇಕ ರುಚಿಯನ್ನು ಹಾಗೆಯೇ ಉಳಿಸಿಕೊಳ್ಳುವುದೂ ಮತ್ತು ಇವುಗಳನ್ನು ಗ್ರೈಂಡ್ ಮಾಡಿದಾಗ ಎಲ್ಲವೂ ಒಂದಾಗಿ ಒಂದೇ ರುಚಿ ಮೂಡುವ ಉದಾಹರಣೆ ನೀಡಿದ ಅವರು ಒಂದಾಗಿದ್ದೂ ಪ್ರತ್ಯೇಕ ಅಸ್ತಿತ್ವದ ಬದಲಿಗೆ ಎಲ್ಲವೂ ಒಂದಾಗಿರುವಂತೆ ಈಗಿನ ವ್ಯವಸ್ಥೆ ಭಾಸವಾಗುತ್ತಿದೆ. ಈಗ ಸಂಯೋಜಿತ ರಾಷ್ಟ್ರೀಯತೆಯ ಮನೋಭಾವ ಕಂಡು ಬರುತ್ತಿದೆ ಎಂದು ಅಭಿಪ್ರಾಯಪಟ್ಟರು.

ಜಾತಿ ಆಧಾರಿತ ರಾಜಕಾರಣದಿಂದ ಜಾತಿಯತೆಯ ವಿಜೃಂಭಣೆ, ಭಿನ್ನ ಚಿಂತನೆ- ವೈಚಾರಿಕ ಅಭಿಪ್ರಾಯವನ್ನು ಮುಖಾಮುಖಿಯಾಗಿಸುವಲ್ಲಿನ ವಿಫಲತೆ ಕಾಣುತ್ತಿದ್ದೇವೆ ಎಂದು ಹೇಳಿದರು.

ವೈಪಲ್ಯಗಳ ನಡುವೆಯೂ ಪತ್ರಕರ್ತರ ಕೆಲಸ ದೊಡ್ಡದು:
ಹಿರಿಯ ಪತ್ರಕರ್ತ ಗೋಪಾಲ್ ಯಡಗೆರೆ ಮಾತನಾಡಿ, ಕಾರ್ಯಾಂಗ, ಶಾಸಕಾಂಗದಂತೆ ಮಾಧ್ಯಮ ರಂಗವೂ ಹೂಡಿಕೆಯ ವ್ಯವಸ್ಥೆಯಾಗುತ್ತಿರುವಾಗ ಪ್ರಜಾಪ್ರಭುತ್ವ ಉಳಿವಿಕೆ ಮಾಧ್ಯಮಗಳಿಂದ ಮಾತ್ರ ಬಹಳಷ್ಟು ನಿರೀಕ್ಷೆ ಹೇಗೆ ಸಾಧ್ಯ? ಕಾರ್ಪೋರೇಟ್ ಜಗತ್ತು ಮಾಧ್ಯಮ ರಂಗವನ್ನು ಆಳುತ್ತಿರುವುದರಿಂದ ಸಹಜವಾಗಿಯೇ ಮಾಧ್ಯಮಗಳು ಧ್ವನಿ ಇಲ್ಲದವರಿಗೆ ಧ್ವನಿಯಾಗುವುದಕ್ಕಿಂತ ಹೆಚ್ಚು ಉಳ್ಳವರ ಧ್ವನಿಯಾಗುತ್ತಿದೆ ಎಂದು ಹೇಳಿದರು.

ಅನೇಕ ವೈಪಲ್ಯಗಳ ನಡುವೆಯೂ ಪತ್ರಕರ್ತರು ಇಂದು ಸಮಾಜದ ಕಟ್ಟ ಕಡೆಯ ವ್ಯಕ್ತಿಯ ಸಮಸ್ಯೆಯನ್ನು ಹೊರ ಜಗತ್ತಿಗೆ ತಲುಪಿಸುವಲ್ಲಿ ಯಶಸ್ಸಿನ ಹಾದಿಗೆ ಹೊರಳುತ್ತಿದ್ದಾರೆ. ಆದರೆ ಈ ಚಿಂತನೆಯ ಪತ್ರಕರ್ತರಿಗೆ ಸೂಕ್ತ ರಕ್ಷಣೆಯ ವ್ಯವಸ್ಥೆ, ಮೂಲಭೂತ ವ್ಯವಸ್ಥೆಯ ಬಗ್ಗೆ ಮಾತ್ರ ಸರ್ಕಾರ ಜಾಣ ಮೌನ ತಾಳುತ್ತಿವೆ ಎಂದು ಹೇಳಿದರು.

ಸ್ವಾತಂತ್ರ್ಯಾ ನಂತರದ ರಾಜಕೀಯ ವ್ಯವಸ್ಥೆ ಅನೇಕ ಹೊರಳುವಿಕೆಯಲ್ಲಿ ಇಲ್ಲಿಯವರೆಗೆ ಸಾಗಿ ಬಂದಿದೆ. ವ್ಯಕ್ತಿ ಆಧಾರಿತ ಪಕ್ಷಗಳು, ವ್ಯವಸ್ಥೆಯನ್ನು ಧಿಕ್ಕರಿಸುವ ರಾಜಕೀಯ ವ್ಯವಸ್ಥೆ, ಪುನಃ ವ್ಯಕ್ತಿ ಆಧಾರಿತ ಪಕ್ಷಗಳು, ರಾಷ್ಟ್ರೀಯತೆ ಚಿಂತನೆಯ ರಾಜಕೀಯ ವ್ಯವಸ್ಥೆಗಳು ನಮ್ಮ ಮುಂದಿವೆ. ಇದೀಗ ಕೊನೆಯ ಹೊರಳು ಹಾದಿಯಲ್ಲಿ ಅಭಿವೃದ್ಧಿಯ ಚಿಂತನೆಯ ರಾಜಕೀಯ ವ್ಯವಸ್ಥೆ ಕಂಡು ಬರುತ್ತಿದೆ. ಆದರೆ ಸ್ವಾತಂತ್ರ್ಯದ ಬಳಿಕ ಇದುವರೆಗಿನ ಕಾಲದಲ್ಲಿ ಜನರಿಗೆ ತಮಗೆ ಯಾವ ರೀತಿಯ ರಾಜಕೀಯ ವ್ಯವಸ್ಥೆ ಬೇಕು, ಯಾವ ಪರಿಕಲ್ಪನೆಯ ರಾಜಕೀಯ ಪಕ್ಷಗಳು ಬೇಕು ಎಂಬುದರ ಬಗ್ಗೆ ಇನ್ನೂ ಗೊಂದಲ ಇರುವಂತೆ ಕಂಡು ಬರುತ್ತಿದೆ ಎಂದು ಅಭಿಪ್ರಾಯಪಟ್ಟರು.

ಸರ್ಕಾರಗಳು ಜವಾಬ್ದಾರಿಯುತ್ತ ಮಾಧ್ಯಮಗಳನ್ನು ಬಯಸುತ್ತದೆ. ಎಂದರೆ ಸರ್ಕಾರಕ್ಕೆ ಬದ್ದರಾಗಿರುವ ಮಾಧ್ಯಮಗಳು ಬೇಕು ಎನ್ನುತ್ತವೆ. ಇದು ಸಧ್ಯದ ಸಮಸ್ಯೆ. 2000 ವರ್ಷದವರೆಗೂ ಮಾಧ್ಯಮಗಳ ವರದಿಗೆ ಸ್ಪಂದಿಸುತ್ತಿದ್ದ ಸರ್ಕಾರಗಳು, ರಾಜಕೀಯ ವ್ಯವಸ್ಥೆ ಆ ಬಳಿಕ ಸ್ಪಂದನೆ ಎಂಬುದನ್ನೇ ಮರೆತಿರುವುದು ಕೂಡ ವ್ಯವಸ್ಥೆ ಸೋಲಲು ಕಾರಣವಾಗುತ್ತಿದೆ ಎಂದು ವಿಶ್ಲೇಷಿಸಿದರು.

Also read: ಸಮುದಾಯದಲ್ಲಿ ಜನೋಪಯೋಗಿ ಕಾರ್ಯಗಳಲ್ಲಿ ತೊಡಗಿದಾಗ ಮಾತ್ರ ಸಾರ್ಥಕತೆ ಸಾಧ್ಯ…

ಕುವೆಂಪು ವಿವಿ ಸಿಂಡಿಕೇಟ್ ಸದಸ್ಯ ಹೆಚ್. ರಾಮಲಿಂಗಪ್ಪ ಮಾತನಾಡಿ, ರಾಜಕೀಯ ಶಾಸದ ವಿದ್ಯಾರ್ಥಿಗಳು ಸಮಾನತೆ, ಸಾಮಾಜಿಕ ನ್ಯಾಯದ ಬಗ್ಗೆ ಇನ್ನಷ್ಟು ಅರಿವು ಮೂಡಿಸಿಕೊಳ್ಳಬೇಕು. ಇಂತಹ ವಿಚಾರ ಸಂಕಿರಣದಲ್ಲಿ ಮೂಡಿ ಬರುವ ಹೊಸ ವಿಷಯಗಳನ್ನು ಗ್ರಹಿಸುವ ಮೂಲಕ ತಮ್ಮ ಜ್ಞಾನವನ್ನು ವಿಸ್ತರಿಸಿಕೊಳ್ಳಬೇಕೆಂದರು.

ಅಧ್ಯಕ್ಷತೆ ವಹಿಸಿದ್ದ ಸಹ್ಯಾದ್ರಿ ಕಲಾ ಕಾಲೇಜಿನ ಪ್ರಾಂಶುಪಾಲರಾದ ಪ್ರೊ. ಕೆ. ಬಿ. ಧನಂಜಯ ಅವರು ಮಾತನಾಡಿ ಮುಂದಿನ ದಿನಗಳು ಇನ್ನಷ್ಟು ಸಂಕಷ್ಟ ತರುವ ದಿನಗಳಾಗಿದ್ದು, ವಿದ್ಯಾರ್ಥಿಗಳು ಎಚ್ಚರಿಕೆಯಿಂದ ಹೆಜ್ಜೆ ಇಡಬೇಕೆಂದರು.

ಜಗತ್ತಿನ ಎಲ್ಲೆಡೆ ನಡೆಯುವ ಘಟನೆಗಳನ್ನು ಅವಲೋಕಿಸಬೇಕಿದೆ. ಇದರ ಪರಿಣಾಮಗಳು ನಮ್ಮ ದೇಶದ ಪ್ರಜಾಪ್ರಭುತ್ವ ವ್ಯವಸ್ಥೆಯ ಮೇಲೆ ಬೀರುವ ಪರಿಣಾಮದ ಕುರಿತು ಎಚ್ಚರಿಕೆಯಿಂದ ನೋಡಬೇಕಿದೆ. ಯುವಜನರು ಎಲ್ಲರನ್ನು ಒಳಗೊಂಡ ಸಮಾಜ ನಿರ್ಮಾಣದ ಕನಸನ್ನು ನನಸು ಮಾಡುವತ್ತ ಹೆಜ್ಜೆ ಇಡಬೇಕಿದೆ. ಸುಂದರ ಸಮಾಜ ನಿರ್ಮಾಣದತ್ತ ಸಾಗಬೇಕಿದೆ ಎಂದು ಹೇಳಿದರು.

ವೇದಿಕೆಯಲ್ಲಿ ಗ್ರಾಮೀಣ ಮಹಾವಿದ್ಯಾಲಯದ ಸಹ ಪ್ರಾಧ್ಯಾಪಕ ಡಾ. ಕಳ್ಳಿಮಠ್ ಶಂಕರಯ್ಯ, ಪ್ರೊ. ಅಶೋಕ್ ಇದ್ದರು. ಸಹ್ಯಾದ್ರಿ ಕಲಾ ಕಾಲೇಜಿನ ಸ್ನಾತಕೋತ್ತರ ರಾಜ್ಯಶಾಸ ಅಧ್ಯಯನ ಮತ್ತು ಸಂಶೋಧನಾ ವಿಭಾಗದ ಸಂಘಟನಾ ನಿರ್ದೇಶಕರೂ ಆದ ಪ್ರಾಧ್ಯಾಪಕ ಪ್ರೊ. ಎಂ. ಹೆಚ್. ಪ್ರಹ್ಲಾದಪ್ಪ ಅವರು ಅತಿಥಿಗಳನ್ನು ಸ್ವಾಗತಿಸಿ ಪ್ರಾಸ್ತಾವಿಕವಾಗಿ ಮಾತನಾಡಿದರು. ಡಾ. ಬಿ. ಹೆಚ್. ಸತ್ಯನಾರಾಯಣ ವಂದಿಸಿದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

Tags: Kannada News WebsiteKannadaNewsKannadaNewsLiveKannadaNewsOnlineKannadaWebsiteLatest News KannadaLocal NewsMalnad NewsNewsinKannadaNewsKannadaSahyadri College ShivamoggaShimogaShivamoggaShivamogga Newsಮಲೆನಾಡು_ಸುದ್ಧಿಶಿವಮೊಗ್ಗಶಿವಮೊಗ್ಗ_ನ್ಯೂಸ್ಸಹ್ಯಾದ್ರಿ ಕಾಲೇಜ್
Share197Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಸಮುದಾಯದಲ್ಲಿ ಜನೋಪಯೋಗಿ ಕಾರ್ಯಗಳಲ್ಲಿ ತೊಡಗಿದಾಗ ಮಾತ್ರ ಸಾರ್ಥಕತೆ ಸಾಧ್ಯ…

Next Post

ಅಗತ್ಯ ವಸ್ತುಗಳ ಬೆಲೆ ಏರಿಕೆ ಖಂಡಿಸಿ ಏ.9ರಂದು ಬೃಹತ್ ಪ್ರತಿಭಟನೆ: ಹೆಚ್.ಪಿ. ಗಿರೀಶ್

kalpa News

kalpa News

Next Post
ಅಗತ್ಯ ವಸ್ತುಗಳ ಬೆಲೆ ಏರಿಕೆ ಖಂಡಿಸಿ ಏ.9ರಂದು ಬೃಹತ್ ಪ್ರತಿಭಟನೆ: ಹೆಚ್.ಪಿ. ಗಿರೀಶ್

ಅಗತ್ಯ ವಸ್ತುಗಳ ಬೆಲೆ ಏರಿಕೆ ಖಂಡಿಸಿ ಏ.9ರಂದು ಬೃಹತ್ ಪ್ರತಿಭಟನೆ: ಹೆಚ್.ಪಿ. ಗಿರೀಶ್

Leave a Reply Cancel reply

Your email address will not be published. Required fields are marked *

No Result
View All Result
MEIL Completes Historic Largest Concrete Pour for PHWR at Kaiga
English Articles

MEIL Completes Historic Largest Concrete Pour for PHWR at Kaiga

by kalpa News
July 6, 2026
0

Kalpa Media House  |  Karwar  | Megha Engineering & Infrastructures Ltd. (MEIL) has successfully completed one of the largest monolithic...

Read moreDetails
SPARSH RR Nagar Launches 5 Plastic Surgery Clinics of Excellence

SPARSH RR Nagar Launches 5 Plastic Surgery Clinics of Excellence

July 4, 2026
SWR GM inspect Goods Terminal

SWR General Manager Inspects Central Workshop, Ashokapuram, Mysuru Railway Station and Goods Terminal

July 4, 2026
HERO MOTOCORP ANNOUNCES RS 3200+ CRORE INVESTMENT IN ANDHRA PRADESH

HERO MOTOCORP ANNOUNCES RS 3200+ CRORE INVESTMENT IN ANDHRA PRADESH

July 4, 2026
Indriya, Aditya Birla Jewellery makes history with India’s Largest Hand-Painted Madhubani Hoarding

Indriya, Aditya Birla Jewellery makes history with India’s Largest Hand-Painted Madhubani Hoarding

July 3, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL