ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ಜಿಲ್ಲಾ ಬಿಜೆಪಿಯ ವೈದ್ಯಕೀಯ ಪ್ರಕೋಷ್ಟದ ವತಿಯಿಂದ ಇಂದು ಜಿಲ್ಲಾ ಮೆಗ್ಗಾನ್ ಆಸ್ಪತ್ರೆಗೆ ಭೇಟಿ ನೀಡಿ, ಜಿಲ್ಲೆಯಲ್ಲಿ ಅವ್ಯಾಹತವಾಗಿ ಹರಡುತ್ತಿರುವ ಡೆಂಗ್ಯೂ, #Dengue ಚಿಕೂನ್ ಗುನ್ಯಾ, #Chickengunya ಜಿಕಾ #Zeeka ವೈರಸ್ ಜ್ವರದ ಬಗ್ಗೆ ವಿವರವಾಗಿ ಮಾಹಿತಿ ಪಡೆಯಲಾಯಿತು.
ಅವಶ್ಯಕವಿರುವ ತುರ್ತು ಕ್ರಮಗಳ ಬಗ್ಗೆ ಜಾರಿಗೆ ತರಲು ಮೆಗ್ಗಾನ್ ಆಸ್ಪತ್ರೆಯ #McGann ಅಧೀಕ್ಷಕರಾದ ಡಾ. ತಿಮ್ಮಪ್ಪರವರನ್ನ ಭೇಟಿ ಮಾಡಿ ಆಗ್ರಹಿಸಲಾಯಿತು.
ಆಸ್ಪತ್ರೆಯ ಆವರಣದಲ್ಲಿ ಸೊಳ್ಳೆಗಳ ನಿಯಂತ್ರಣಕ್ಕೆ ಕ್ರಮ ಕೈಗೊಳ್ಳುವುದು, ಆಸ್ಪತ್ರೆಯ ವಾರ್ಡಿನಲ್ಲಿ ಕಿಟಕಿಗಳಿಗೆ ಸೊಳ್ಳೆಪರದೆಗಳನ್ನ ಹಾಕಿಸುವುದು. ಆಸ್ಪತ್ರೆ ಆವರಣ ಹಾಗೂ ಸುತ್ತಮುತ್ತಲೂ ಎಲ್ಲೂ ನೀರು ನಿಲ್ಲದೆ ಇರುವ ಹಾಗೆ ಕ್ರಮ ಕೈಗೊಂಡು ಹಾಗೂ ಅನಾವಶ್ಯಕವಾಗಿ ಬೆಳೆದಿರುವ ಕಾಂಗ್ರೆಸ್ ಗಿಡಗಳನ್ನ ತೆಗೆಸುವುದು. ಆಸ್ಪತ್ರೆ ಆವರಣದಲ್ಲಿ ಮತ್ತು ವಾರ್ಡ್ಗಳಲ್ಲಿ ಕನಿಷ್ಠ ಐದು ಗಂಟೆಗಳಿಗೊಮ್ಮೆ ಫಾಗಿಂಗ್ ಮಾಡಿಸುವುದು (ಅಗತ್ಯ ಬಿದ್ದಲ್ಲಿ ಮಹಾನಗರ ಪಾಲಿಕೆ ಸಹಕಾರ ಪಡೆದು) ಮೆಗ್ಗಾನ್ ಆಸ್ಪತ್ರೆಯ ಬ್ಲಡ್ ಬ್ಯಾಂಕ್ ಗೆ ಭೇಟಿ ನೀಡಿ ಡೆಂಗ್ಯೂ ಕಾಯಿಲೆಯಿಂದ ಬಳಲುತ್ತಿರುವ ರೋಗಿಗಳಿಗೆ ಅವಶ್ಯಕತೆ ಇರುವ ವೈಟ್ ಪ್ಲೇಟ್ಲೆಟ್ಸ್ ಸಂಗ್ರಹದ ಬಗ್ಗೆ ಮಾಹಿತಿ ಪಡೆದು ಹಾಗೂ ಆಸ್ಪತ್ರೆಯ ಲ್ಯಾಬ್ ಗೂ ಭೇಟಿ ನೀಡಿ ರಕ್ತ ಪರೀಕ್ಷೆ ಮಾಡುವ ಕಿಟ್ ಗಳ ಲಭ್ಯತೆ ಬಗ್ಗೆ ಮಾಹಿತಿ ಪಡೆಯಲಾಯಿತು.
Also read: ಈಶ್ವರಪ್ಪ ಬಿಜೆಪಿ ಸೇರ್ಪಡೆ | ಸ್ವತಃ ಅವರೇ ನೀಡಿದ ಸ್ಪಷ್ಟನೆಯೇನು?
ಈ ಸಂದರ್ಭದಲ್ಲಿ ಬಿಜೆಪಿಯ ಪ್ರಕೋಷ್ಟ ರಾಜ್ಯ ಸಂಯೋಜಕ ಎಸ್. ದತ್ತಾತ್ರಿ, ಅವೈದ್ಯಕೀಯ ಪ್ರಕೋಷ್ಟದ ರಾಜ್ಯ ಸಮಿತಿ ಸದಸ್ಯರಾದ ಡಾ. ಸುರೇಶ್ , ವೈದ್ಯಕೀಯ ಪ್ರಕೋಷ್ಟದ ಜಿಲ್ಲಾ ಸಂಚಾಲಕರಾದ ಡಾ. ಹೇಮಂತ್ ಕುಮಾರ್ , ಪ್ರಕೋಷ್ಟ ಗಳ ಜಿಲ್ಲಾ ಸಂಯೋಜಕರಾದ ಹೃಷಿಕೇಶ್ ಪೈ, ಪ್ರಕೋಷ್ಟಗಳ ಜಿಲ್ಲಾ ಸಹ ಸಂಯೋಜಕರಾದ ಡಾ. ಶ್ರೀನಿವಾಸ್ ರೆಡ್ಡಿ , ಡಾ. ಮರುಳಾರಾಧ್ಯ, ಡಾ. ಗೌತಮ್ , ಡಾ. ಸಂತೋಷ್ , ಹಾಗೂ ಮುರಳೀಧರ್ ರವರು ಉಪಸ್ಥಿತರಿದ್ದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news





















