ಕಲ್ಪ ಮೀಡಿಯಾ ಹೌಸ್
ಶಿವಮೊಗ: ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯಿಂದ ಪ್ರತಿವರ್ಷ ಪರಿಸರ ಸ್ನೇಹಿ ಗಣೇಶ ಹಬ್ಬ ಆಚರಣೆ ಮಾಡುವ ಬಗ್ಗೆ ಸಾರ್ವಜನಿಕರಲ್ಲಿ, ಶಾಲಾ ಮಕ್ಕಳಲ್ಲಿ ಜಾಗೃತಿ ಮೂಡಿಸಲು ಹಲವಾರು ಜಾಗೃತಿ ಕಾರ್ಯಕ್ರಮವನ್ನು ಹಮ್ಮಿಕೊಳ್ಳುತ್ತಿದ್ದು, ಈ ವರ್ಷವೂ ಸಹ ಪರಿಸರ ಸ್ನೇಹಿ ಗಣೇಶ ಹಬ್ಬ ಆಚರಿಸುವಂತೆ ಅರಶಿನ ಗಣೇಶ ಅಭಿಯಾನವನ್ನು ಹಮ್ಮಿಕೊಂಡಿದೆ.
ಮೈ-ಮನಗಳನ್ನು ರೋಮಾಂಚನಗೊಳಿಸುವ ಈ ದೇಶ ಭಕ್ತಿ ಗೀತೆಯನ್ನೊಮ್ಮೆ ನೋಡಿ
ರೋಗ ನಿರೋಧಕ ಶಕ್ತಿಯುಳ್ಳ ಅರಶಿನ ಮಿಶ್ರಿತವಾದ ಗೋಧಿ ಅಥವಾ ರಾಗಿ ಹಿಟ್ಟು ಸೇರಿಸಿ ಸಣ್ಣ ಸಣ್ಣ ಗಣೇಶನ ಪ್ರತಿಮೆ ತಯಾರಿಸಿ ಪೂಜಿಸುವುದರಿಂದ ಕೋವಿಡ್-19ನ್ನು ಎದುರಿಸಲು ಸಂಕಲ್ಪ ಮಾಡಿ, ಪರಿಸರಕ್ಕೆ ಅಪಾರ ಕೊಡುಗೆ ನೀಡಬಹುದಾಗಿದೆ. ಸಾರ್ವಜನಿಕರು ಇಂತಹ ಪುಟ್ಟ ಪುಟ್ಟ ಪ್ರತಿಮೆಗಳನ್ನು ತಯಾರಿಸಿ, ಪೂಜಿಸಿ ಮನೆಯ ಆವರಣದಲ್ಲಿ ವಿಸರ್ಜನೆ ಮಾಡಿ ಈ ಅಭಿಯಾನದಲ್ಲಿ ಪಾಲ್ಗೊಂಡು 10 ಲಕ್ಷ ಅರಶಿನ ಗಣೇಶ ತಯಾರಿಕಾ ಅಭಿಯಾನ-2021 ವಿಶ್ವ ದಾಖಲೆಯ ಪ್ರಯತ್ನಕ್ಕೆ ಕೈಜೋಡಿಸಿ ಅಭಿಯಾನವನ್ನು ಯಶಸ್ವಿಗೊಳಿಸಲು ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯ ಶಿವಮೊಗ್ಗ ಪ್ರಾದೇಶಿನ ಕಚೇರಿಯ ಪರಿಸರ ಅಧಿಕಾರಿಗಳು ಕೋರಿರುತ್ತಾರೆ.
ಸಾರ್ವಜನಿಕರು ತಯಾರಿಸಿದ ಅರಶಿನ ಗಣೇಶ ವಿಗ್ರಹಗಳನ್ನು ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯ ಜಾಲತಾಣ http://kspcb.karnataka.gov.in ರಲ್ಲಿ ಪರಿಸರ ಸ್ನೇಹಿ ಅರಶಿನ ಗಣೇಶ ವಿಗ್ರಹದ ಛಾಯಾಚಿತ್ರವನ್ನು ಅಪ್ಲೋಡ್ ಮಾಡಿ ಆಕರ್ಷಕ ಬಹುಮಾನವನ್ನು ಗೆಲ್ಲಬಹುದಾಗಿದೆ.
ಹಬ್ಬದ ಸಮಯದಲ್ಲಿ ಸ್ವಚ್ಛ ಪರಿಸರ ಕಾಪಾಡಲು ಹಾಗೂ ಸಾಮಾಜಿಕ ಅಂತರವನ್ನು ಕಾಪಾಡಿಕೊಳ್ಳುವುದರ ಜೊತೆಗೆ ಪರಿಸರ ಮಾಲಿನ್ಯವನ್ನು ತಡೆಗಟ್ಟಬಹುದಾದ ಈ ಅಭಿಯಾನಕ್ಕೆ ಎಲ್ಲಾ ಸಾರ್ವಜನಿಕರು ಹಾಗೂ ಸಂಘಸಂಸ್ಥೆಗಳು ಕೈಜೋಡಿಸಬೇಕೆಂದು ಪರಿಸರ ಅಧಿಕಾರಿಗಳು ಮನವಿ ಮಾಡಿದ್ದಾರೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post