ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ಶಬರಿಮಲೆ ಅಯ್ಯಪ್ಪ ಸ್ವಾಮಿ ಸೇವಾ ಸಮಾಜಂ(ಸಾಸ್) ಶಿವಮೊಗ್ಗ ನಗರ ಘಟಕ ವತಿಯಿಂದ ಹಮ್ಮಿಕೊಂಡಿದ್ದ ಶಬರಿಮಲೈ #Shabarimalai ಸನ್ನಿಧಾನಕ್ಕೆ ಬರುವ ಸ್ವಾಮಿ ಮಾರಗಳಿಗೆ ಅನ್ನದಾನಕ್ಕಾಗಿ ಪ್ರತಿ ಮನೆಯಿಂದ ಒಂದು ಮುಷ್ಟಿ ಅಕ್ಕಿ ಹಾಗೂ ಇತರ ಸಾಮಗ್ರಿಗಳ ಸಂಗ್ರಹ ಅಭಿಯಾನಕ್ಕೆ #Mushti Akki Abhiyana ಇಂದು ಬೊಮ್ಮನಕಟ್ಟೆ ಅನ್ನಪೂರ್ಣೇಶ್ವರಿ ದೇವಾಲಯದಲ್ಲಿ ಪೂಜೆ ಸಲ್ಲಿಸಿ ಆದಿಚುಂಚನಗಿರಿ ಶಾಖಾಮಠದ ಶ್ರೀ ಸಾಯಿನಾಥ ಶ್ರೀಗಳು ಚಾಲನೆ ನೀಡಿದರು.
ಈ ಸಂದರ್ಭದಲ್ಲಿ ಶ್ರೀಗಳು ಆಶೀರ್ವಚನ ನೀಡಿ ಇದೊಂದು ಪವಿತ್ರವಾದ ಕಾರ್ಯಕ್ರಮ. ಅನ್ನದಾನ ಶ್ರೇಷ್ಠದಾನವಾಗಿದೆ. ನಾವು ಅರಿತೋ ಅರಿಯದೆಯೋ ಮಾಡಿದ ಪಾಪ ಕರ್ಮಗಳು ದೂರವಾಗಬೇಕಾದರೆ ದಾನಗಳನ್ನು ಮಾಡಲೇಬೇಕು. ದಾನದ ಮುಖ್ಯ ಉದ್ದೇಶ ಕರ್ಮಗಳನ್ನು ತೊಳೆದುಕೊಳ್ಳುವುದು. ಅಕ್ಕಿ ದಾನ ವಿವಿಧ ಕಡೆಗಳಲ್ಲಿ ವಿವಿಧ ರೂಪ ತೆಗೆದುಕೊಳ್ಳುತ್ತದೆ. ದೇವಾಲಯಗಳಲ್ಲಿ ಪ್ರಸಾದ ಎಂದೆನಿಸುತ್ತದೆ. ಅಕ್ಕಿಗೆ ಅರಸಿನ ಬೆರೆಸಿದರೆ ಅದು ಅಕ್ಷತೆಯಾಗುತ್ತದೆ. ನಾನಾ ರೂಪಗಳಲ್ಲಿ ಅಕ್ಕಿಯನ್ನು ಬಳಸುತ್ತಾರೆ. ಸನಾತನ ಸಂಸ್ಕøತಿಯಲ್ಲಿ ದಾನಕ್ಕೆ ಬಹಳ ಮಹತ್ವವಿದೆ. ಹಸಿವನ್ನು ನೀಗಿಸುವುದು ಶ್ರೇಷ್ಠ ಕಾರ್ಯ ಈ ಕಾರ್ಯ ಯಶಸ್ವಿಯಾಗಲಿ ಎಲ್ಲರ ಮನಸಾಭಿಷ್ಟ ಸಿದ್ಧಿಯಾಗಲಿ ಎಂದು ಹಾರೈಸಿದರು.

Also read: ಮಲೆನಾಡು ಗಿಡ್ಡ ಗೋತಳಿ ಸಂಶೋಧನೆಯನ್ನು ಪ್ರೋತ್ಸಾಹಿಸಿ | ಶಾಸಕ ಡಿ.ಎಸ್. ಅರುಣ್ ಒತ್ತಾಯ
ಬಳಿಕ ಗುರುಗಳು ಸೇರಿದಂತೆ ಮನೆ ಮನೆಗೆ ತೆರಳಿ, ಅಕ್ಕಿ ಹಾಗೂ ಇತರ ಸಾಮಾಗ್ರಿಗಳನ್ನು ಸಂಗ್ರಹ ಮಾಡುವುದರ ಮೂಲಕ ಅಭಿಯಾನಕ್ಕೆ ಚಾಲನೆ ನೀಡಲಾಯಿತು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news







Discussion about this post