No Result
View All Result
ವಿಶ್ವ ಯೋಗಾಸನ ಚಾಂಪಿಯನ್‌ಶಿಪ್ 2026 | ಮೊದಲ ದಿನವೇ ಐದು ಚಿನ್ನದ ಪದಕ ಗೆದ್ದ ಭಾರತ!
English Articles

India Dominates World Yogasana Championship 2026, Wins 5 Golds on Opening Day

by ಕಲ್ಪ ನ್ಯೂಸ್
June 6, 2026
0

Kalpa Media House  |  Ahmedabad  | Host nation India made a dominant start at the inaugural World Yogasana Championship 2026,...

Read moreDetails
INDIA OPENS IMAX ADVANCE BOOKINGS FOR CHRISTOPHER NOLAN’S NEW MYTHIC ACTION EPIC, The Odyssey FROM JUNE 8

INDIA OPENS IMAX ADVANCE BOOKINGS FOR CHRISTOPHER NOLAN’S NEW MYTHIC ACTION EPIC, The Odyssey FROM JUNE 8

June 5, 2026
From the Village Tracks to International Triumphs: The Inspiring Saga of Geetha A. Shetty

From the Village Tracks to International Triumphs: The Inspiring Saga of Geetha A. Shetty

June 5, 2026
ಭದ್ರಾವತಿ | ಹೃದಯಾಘಾತದಿಂದ 23 ವರ್ಷದ ಯುವತಿ ಸಾವು! ಸಾವಿನಲ್ಲೂ ಸಾರ್ಥಕತೆ ಮೆರೆದ ಪೋಷಕರು

Young Woman Dies of Cardiac Arrest; Parents Give New Life Through Organ Donation

June 3, 2026
ಗುಜರಾತ್’ನಲ್ಲಿ ಭೀಕರ ದುರಂತ | ಮಹಾರಾಷ್ಟ್ರ ಸಾರಿಗೆಯ 2 ಬಸ್’ಗಳ ಮುಖಾಮುಖಿ ಡಿಕ್ಕಿ | 7 ಮಂದಿ ಸಜೀವ ದಹನ

Tragic Accident in Gujarat | Head-on Collision Between Two MSRTC Buses | 7 Burnt Alive

June 3, 2026
  • Advertise With Us
  • Grievances
  • About Us
  • Contact Us
Saturday, June 6, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ

ಪ್ರಧಾನಿ ಮೋದಿ ನೇತೃತ್ವದಲ್ಲಿ ದೇಶದ ಸರ್ವಾಂಗೀಣ ಅಭಿವೃದ್ದಿ: ಸಂಸದ ರಾಘವೇಂದ್ರ

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
June 1, 2022
in ಶಿವಮೊಗ್ಗ
0
ಪ್ರಧಾನಿ ಮೋದಿ ನೇತೃತ್ವದಲ್ಲಿ ದೇಶದ ಸರ್ವಾಂಗೀಣ ಅಭಿವೃದ್ದಿ: ಸಂಸದ ರಾಘವೇಂದ್ರ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್   |  ಶಿವಮೊಗ್ಗ  |

ಪ್ರಧಾನಮಂತ್ರಿ ನರೇಂದ್ರ ಮೋದಿಯವರು ವಿವಿಧ ಜನ ಕಲ್ಯಾಣ ಯೋಜನೆಗಳ ಮೂಲಕ ಸಮಾಜದ ಕಟ್ಟಕಡೆಯ ವ್ಯಕ್ತಿಯನ್ನೂ ತಲುಪುತಿದ್ದು, ಅವರ ನೇತೃತ್ವದ ಪ್ರತಿಫಲವಾಗಿ ದೇಶದಲ್ಲಿ ಸಮಗ್ರ ಅಭಿವೃದ್ದಿ ಸಾಧಿಸಲಾಗುತ್ತಿದೆ ಎಂದು ಸಂಸದ ಬಿ.ವೈ. ರಾಘವೇಂದ್ರ MP B Y Raghavendra ನುಡಿದರು.

ಆಜಾದಿ ಕಾ ಅಮೃತ್ ಮಹೋತ್ಸವ ಅಂಗವಾಗಿ ದೇಶದ ಪ್ರಧಾನಮಂತ್ರಿಗಳು ಹಿಮಾಚಲ ಪ್ರದೇಶದ ಶಿಮ್ಲಾದಿಂದ ಕೇಂದ್ರ ಸರ್ಕಾರದ ಒಂಭತ್ತು ಸಚಿವಾಲಯದ ಸುಮಾರು 16 ಯೋಜನೆ-ಕಾರ್ಯಕ್ರಮಗಳ ಫಲಾನುಭವಿಗಳೊಂದಿಗೆ ವರ್ಚುವಲ್ ವೇದಿಕೆ ಮೂಲಕ ಸಂವಾದ ಕಾರ್ಯಕ್ರಮವನ್ನು ನಡೆಸುತ್ತಿರುವ ಹಿನ್ನೆಲೆ ಇಂದು ಜಿಲ್ಲಾ ಪಂಚಾಯತ್ ನಜೀರ್ ಸಾಬ್ ಸಭಾಂಗಣದಲ್ಲಿ ಏರ್ಪಡಿಸಲಾಗಿದ್ದ ಜಿಲ್ಲಾ ಮಟ್ಟದ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.

ಪ್ರಧಾನಮಂತ್ರಿಯವರ ನೇತೃತ್ವದಲ್ಲಿ ಜನಪ್ರತಿನಿಧಿಗಳು, ಅಧಿಕಾರಿಗಳ ತಂಡ ಪರಿಶ್ರಮದಿಂದ ಸಾಮಾನ್ಯ ಮತ್ತು ಬಡ ಜನರಿಗೆ ಅನೇಕ ಜನ ಕಲ್ಯಾಣ ಯೋಜನೆಗಳನ್ನು ತಲುಪಿಸುವ ಕೆಲಸವನ್ನು ಮಾಡುತ್ತಿದ್ದಾರೆ. ನರೇಂದ್ರ ಮೋದಿಯವರ ಸರ್ಕಾರಕ್ಕೆ ಎರಡು ಅವಧಿ ಸೇರಿ ಇದೀಗ 8 ವರ್ಷ ಪೂರ್ಣಗೊಂಡಿದೆ. ಅವರ ನೇತೃತ್ವದಲ್ಲಿ ದೇಶ ಸರ್ವಾಂಗೀಣ ಅಭಿವೃದ್ದಿ ಕಾಣುತ್ತಿದೆ. ಅಕ್ಕಪಕ್ಕದ ದೇಶದಲ್ಲಿ ಅಕ್ಕಿ, ವಿದ್ಯುತ್ ಎಲ್ಲ ದುಬಾರಿಯಾಗಿದ್ದು, ಜನ ಕತ್ತಲಲ್ಲಿದ್ದಾರೆ. ಆದರೆ ನಮ್ಮ ಪ್ರಧಾನಿಯವರು ಇಂತಹ ಸಂದರ್ಭದಲ್ಲೂ ಆರ್ಥಿಕವಾಗಿ ಜೀವ ತುಂಬುವ ಕೆಲಸ ಮಾಡುತ್ತಿದ್ದಾರೆ ಎಂದರು.

ಮುದ್ರ ಯೋಜನೆಯಡಿ ಶಿವಮೊಗ್ಗ ಜಿಲ್ಲೆಯಲ್ಲಿ 94,350 ಫಲಾನುಭವಿಗಳಿದ್ದು ಈವರೆಗೆ ರೂ.700.30 ಕೋಟಿ ಸಾಲ ನೀಡಲಾಗಿದೆ. ಸ್ವಚ್ಚ ಭಾರತ್ ಮಿಷನ್(ಗ್ರಾಮೀಣ) ಅಡಿ 98,655 ಮತ್ತು ಸ್ವಚ್ಚ ಭಾರತ್ ಮಿಷನ್(ನಗರ) 6784 ಫಲಾನುಭವಿಗಳು ವೈಯಕ್ತಿಕ ಶೌಚಾಲಯ ನಿರ್ಮಿಸಿಕೊಂಡಿದ್ದಾರೆ. ಮಾತೃ ವಂದನಾ ಯೋಜನೆಯಡಿ 51,263 ಮತ್ತು ಪೋಷಣ್ ಅಭಿಯಾನದಡಿ 1,43,893 ಫಲಾನುಭವಿಗಳು ವಿವಿಧ ಕಂತುಗಳಲ್ಲಿ ಹಣ ಪಡೆದಿದ್ದಾರೆ. ಜಲಜೀವನ್ ಮಿಷನ್ ಯೋಜನೆಯಡಿ 1,92,325 ಫಲಾನುಭವಿಗಳಿಗೆ ಕಾರ್ಯಾತ್ಮಕ ನಳ ಸಂಪರ್ಕ ನೀಡಲಾಗಿದೆ. ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ಯೋಜನೆಯಡಿ 1.51 ಲಕ್ಷ ರೈತರಿಗೆ ಸಹಾಯಧನ ನೀಡಲಾಗಿದೆ. ಪ್ರಧಾನಮಂತ್ರಿ ಸ್ವನಿಧಿ ಯೋಜನೆಯಡಿ 4811 ಫಲಾನುಭವಿಗಳು ರೂ.10 ಸಾವಿರ ಮತ್ತು 972 ಜನರು ರೂ.20 ಸಾವಿರ ಸಾಲ ಪಡೆದಿದ್ದಾರೆ. ವಸತಿ ಯೋಜನೆಯಡಿ ನಗರದಲ್ಲಿ 3221 ಮನೆಗಳು ಮತ್ತು ಗ್ರಾಮೀಣ ಭಾಗದಲ್ಲಿ 1595 ಮನೆಗಳನ್ನು ನೀಡಲಾಗಿದೆ. ಗರೀಬ್ ಕಲ್ಯಾಣ್ ಅನ್ನ ಯೋಜನೆಯಡಿ 3,88,907 ಫಲಾನುಭವಿಗಳು, ಉಜ್ವಲ ಯೋಜನೆಯಡಿ 77,086 ಮತ್ತು ಒಂದು ದೇಶ ಒಂದು ಪಡಿತರ ಯೋಜನೆಯಡಿ 23,154 ಫಲಾನುಭವಿಗಳಿದ್ದಾರೆ.
ಎಂ.ಎಲ್. ವೈಶಾಲಿ, ಜಿ.ಪಂ ಸಿಇಓ

ಕೋವಿಡ್ ಸಂದರ್ಭದಲ್ಲಿ ಜನತೆಯ ಕೈಹಿಡಿದು ಎಲ್ಲರಿಗೂ 2 ಡೋಸ್ ಕೋವಿಡ್ ಲಸಿಕೆ ನೀಡುವ ಕೆಲಸ ಮಾಡಿದ್ದಾರೆ. ಅಂಗನವಾಡಿ, ಆಶಾ ಕಾರ್ಯಕರ್ತೆಯರು, ಅಧಿಕಾರಿಗಳು ಸೇರಿಂತೆ ಎಲ್ಲರ ಪರಿಶ್ರಮದ ಜೊತೆಗೆ ಮೋದಿಜಿವಯರ ನೇತೃತ್ವದಲ್ಲಿ ಸಮಗ್ರ ಹೆಜ್ಜೆಗಳನ್ನು ಇಡಲಾಗುತ್ತಿದ್ದು, ಈ ಸಂದರ್ಭದಲ್ಲಿ ಅವರಿಗೆ ಧನ್ಯವಾದ ಸಲ್ಲಿಸುತ್ತೇನೆ ಎಂದರು.

ವಿಧಾನ ಪರಿಷತ್ ಶಾಸಕ ಡಿ.ಎಸ್.ಅರುಣ್ ಮಾತನಾಡಿ, ಪಾರದರ್ಶಕತೆ ಏಕೆ ಬೇಕೆಂದು ಪ್ರಧಾನಿ ಮೋದಿಯವರು ತೋರಿಸಿದ್ದಾರೆ. ಯೋಜನೆ, ಸೌಲಭ್ಯಗಳನ್ನು ನೇರವಾಗಿ ಫಲಾನುಭವಿಗಳ ಬ್ಯಾಂಕ್ ಖಾತೆಗೆ ತಲುಪಿಸುತ್ತಿದ್ದಾರೆ. ಪ್ರಸ್ತುತ ದೇಶದಲ್ಲಿ 20 ಕೋಟಿ ಮಹಿಳೆಯರ ಬ್ಯಾಂಕ್ ಖಾತೆ ಇದ್ದು ನೇರವಾಗಿ ಅವರಿಗೆ ಯೋಜನೆಗಳ ಸೌಲಭ್ಯ ದೊರೆಯುತ್ತಿರುವುದು ಹೆಮ್ಮೆಯ ವಿಷಯ ಎಂದರು.

ಅಧ್ಯಕ್ಷತೆ ವಹಿಸಿದ್ದ ಶಾಸಕ ಕೆ.ಎಸ್.ಈಶ್ವರಪ್ಪ ಮಾತನಾಡಿ, ಸೌಲಭ್ಯಗಳು ಎಲ್ಲ ಅರ್ಹರಿಗೆ ತಲುಪಿದಾಗ ಮಾತ್ರ ಆ ಯೋಜನೆ ಸಾರ್ಥಕವಾಗುತ್ತದೆ. ಇಂದು ಜನ ಕಲ್ಯಾಣ ಯೋಜನೆಗಳ ಫಲಾನುಭವಿಗಳೊಂದಿಗೆ ನೇರವಾಗಿ ಮಾತನಾಡಿದ್ದು ಸಂತಸ ತಂದಿದೆ. ಸಂಸತ್ ಸದಸ್ಯರು ಪ್ರತಿ ಗ್ರಾಮಗಳಿಗೆ ಯೋಜನೆಗಳನ್ನು ತಲುಪಿಸುತ್ತಿರುವುದು ಅಭಿನಂದನೀಯವಾಗಿದ್ದು ಡಿಸಿ, ಜಿ.ಪಂ ಸಿಇಓ ರವರ ಕಾರ್ಯ ಕೂಡ ಅಭಿನಂದನಾರ್ಹವಾಗಿದೆ. ಫಲಾನುಭವಿಗಳು ಸಹ ಇತರರಿಗೆ ತಾವು ಪಡೆದ ಸೌಲಭ್ಯಗಳ ಬಗ್ಗೆ ತಿಳಿಸಿ ಸಹಾಯ ಮಾಡಬೇಕು ಎಂದರು.

Also read: ರಕ್ತದ ಮಡುವಿನಲ್ಲಿ ಬಿದ್ದಿದ ವ್ಯಕ್ತಿಯ ಜೀವ ಉಳಿಸಿ ಕರ್ತವ್ಯ ನಿಷ್ಠೆ ಮೆರೆದ ಪೊಲೀಸ್…!

ಫಲಾನುಭವಿಗಳ ಅನಿಸಿಕೆ:
ನಮ್ಮ ಊರಿನಲ್ಲಿ ನನಗೆ ವೈಯಕ್ತಿಕ ಶೌಚಾಲಯವಿಲ್ಲದ ಕಾರಣ ಬಯಲಿನಲ್ಲಿ ಬಹಿರ್ದೆಸೆಗೆ ಹೋಗುತ್ತಿದ್ದೆ. ಒಂದು ರೀತಿಯ ಭಯ, ಅವಮಾನವಾದಂತೆ ಆಗುತ್ತಿತ್ತು. ಸ್ವಚ್ಚ ಭಾರತ್ ಮಿಷನ್‍ನಡಿ ಅರ್ಜಿ ಸಲ್ಲಿಸಿ ಮಂಜೂರಾತಿ ಪಡೆದು ರೂ.15 ಧನಸಹಾಯದಿಂದ ವೈಯಕ್ತಿಕ ಶೌಚಾಲಯ ನಿರ್ಮಿಸಿಕೊಂಡು ಈಗ ಗೌರವಯುತವಾಗಿ ಉಪಯೋಗಿಸುತ್ತಿದ್ದೇನೆ. ಸರ್ಕಾರಕ್ಕೆ ಧನ್ಯವಾದಗಳು
ರುದ್ರಮ್ಮ, ಫಲಾನುಭವಿ

ಮಾತೃವಂದನೆ ಯೋಜನೆಯಡಿ ನೀಡಲಾಗುತ್ತಿರುವ ಹಣದಿಂದ ನನ್ನ ವೈದ್ಯಕೀಯ, ಪೋಷಣೆಗೆ ಸಂಬಂಧಿಸಿದ ಖರ್ಚಿಗೆ ಬಹಳ ಅನುಕೂಲವಾಗಿದೆ.
ನೂರುನ್ನೀಸಾ ಇರ್ಫಾನ್, ಫಲಾನುಭವಿ

ನಾನು ಮೂಲತಃ ಮಧ್ಯಪ್ರದೇಶದ ಗ್ವಾಲಿಯರ್‍ನವನು ಬಟ್ಟೆ ವ್ಯಾಪಾರಕ್ಕೆಂದು ಕರ್ನಾಟಕಕ್ಕೆ ಬಂದಿದ್ದು, ಒನ್ ನೇಷನ್ ಒನ್ ರೇಷನ್ ಕಾರ್ಡ್‍ನಿಂದಾಗಿ ಇಲ್ಲಿಯೂ ಸಹ ನನಗೆ ಪಡಿತರ ದೊರೆಯುತ್ತಿದ್ದು, ಜೀವನ ನಿರ್ವಹಣೆಗೆ ತುಂಬಾ ಸಹಾಯವಾಗಿದೆ.
ಭಾನುರಾವತ್ ಗ್ವಾಲಿಯರ್, ಫಲಾನುಭವಿ

ಪ್ರಧಾನಮಂತ್ರಿ ಮುದ್ರಾ ಯೋಜನೆಯಡಿ ಸಾಲ ಸೌಲಭ್ಯ ಪಡೆದು ಟೈಲರಿಂಗ್ ಮಾಡಿ, ನಂತರ ಸ್ವಂತ ಬಟ್ಟೆವ್ಯಾಪಾರ ಮಾಡುತ್ತಾ, ಇತರರಿಗೂ ಈ ಸೌಲಭ್ಯದ ಬಗ್ಗೆ ತಿಳಿಸಿದ್ದೇನೆ.
ಶ್ವೇತಾ, ಫಲಾನುಭವಿ

ನಗರ ಪ್ರದೇಶದಲ್ಲಿ ಮನೆ ಕಟ್ಟಿಸುವುದು ಕನಸಾಗಿದ್ದ ನನಗೆ ಪ್ರಧಾನಮಂತ್ರಿ ಆವಾಸ್ ಯೋಜನೆಯಡಿ ಸೌಲಭ್ಯ ಪಡೆದು ಈಗ ಮನೆ ಕಟ್ಟಿಸಿಕೊಂಡು ನೆಮ್ಮದಿಯಾಗಿದ್ದೇನೆ.
-ಕೃಷ್ಣಪ್ಪ, ಫಲಾನುಭವಿ

ಕಾರ್ಯಕ್ರಮದಲ್ಲಿ 12 ಜನ ಕಲ್ಯಾಣ ಯೋಜನೆಗಳ ಫಲಾನುಭವಿಗಳೊಂದಿಗೆ ಸಂಸದರು ಮತ್ತು ಶಾಸಕರು ಸಂವಾದಿಸಿದರು. ಶಾಸಕರಾದ ಕೆ.ಬಿ.ಅಶೋಕ್‍ನಾಯ್ಕ, ಜಿಲ್ಲಾಧಿಕಾರಿ ಡಾ.ಆರ್.ಸೆಲ್ವಮಣಿ, ಇತರೆ ಅಧಿಕಾರಿಗಳು ಪಾಲ್ಗೊಂಡಿದ್ದರು.


ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

Tags: Kannada News WebsiteKannadaNewsKannadaNewsLiveKannadaNewsOnlineKannadaWebsiteLatest News KannadaLocal NewsMalnad NewsMP B Y RaghavendraNewsinKannadaNewsKannadaShimogaShivamoggaShivamogga Newsಮಲೆನಾಡು_ಸುದ್ಧಿಶಿವಮೊಗ್ಗಶಿವಮೊಗ್ಗ_ನ್ಯೂಸ್ಸಂಸದ ಬಿ.ವೈ. ರಾಘವೇಂದ್ರ
Share200Tweet123Send
Previous Post

ರಕ್ತದ ಮಡುವಿನಲ್ಲಿ ಬಿದ್ದಿದ ವ್ಯಕ್ತಿಯ ಜೀವ ಉಳಿಸಿ ಕರ್ತವ್ಯ ನಿಷ್ಠೆ ಮೆರೆದ ಪೊಲೀಸ್…!

Next Post

ಪಠ್ಯಪುಸ್ತಕ ಪರಿಷ್ಕರಣೆ ವಿವಾದ: ಶಿಕ್ಷಣ ಸಚಿವರ ವರದಿ ಆಧರಿಸಿ ಕ್ರಮ – ಸಿಎಂ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ಕೇರಳದಿಂದ ಬಂದವರಿಂದ ಮಂಗಳೂರಿನಲ್ಲಿ ಹಿಂಸಾಚಾರ: ಗೃಹ ಸಚಿವ

ಪಠ್ಯಪುಸ್ತಕ ಪರಿಷ್ಕರಣೆ ವಿವಾದ: ಶಿಕ್ಷಣ ಸಚಿವರ ವರದಿ ಆಧರಿಸಿ ಕ್ರಮ - ಸಿಎಂ

Leave a Reply Cancel reply

Your email address will not be published. Required fields are marked *

  • Trending
  • Latest
ಭದ್ರಾವತಿಯ ಆರು ಆರೋಪಿಗಳಿಗೆ 3 & 7 ವರ್ಷ ಕಠಿಣ ಕಾರಾಗೃಹ ಶಿಕ್ಷೆ | ನಡೆದಿದ್ದ ಅಪರಾಧವೇನು?

ಭದ್ರಾವತಿಯ ಆರು ಆರೋಪಿಗಳಿಗೆ 3 & 7 ವರ್ಷ ಕಠಿಣ ಕಾರಾಗೃಹ ಶಿಕ್ಷೆ | ನಡೆದಿದ್ದ ಅಪರಾಧವೇನು?

May 5, 2026
ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

April 28, 2026
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

April 3, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
ಮಾವನನ್ನೇ ಕುತ್ತಿಗೆ ಸೀಳಿ ಹತ್ಯೆಗೆ ಯತ್ನಿಸಿದ ಅಳಿಯ | ಕಾರಣವೇನು?

ಬಂಗಾರದ ನಾಣ್ಯ ಮೋಸ: ಅರ್ಧ ಕೆಜಿ ಬಂಗಾರ ಹೆಸರಿನಲ್ಲಿ ₹10 ಲಕ್ಷ ದೋಚಿದ ಗ್ಯಾಂಗ್!

June 6, 2026
ವಿಶ್ವ ಯೋಗಾಸನ ಚಾಂಪಿಯನ್‌ಶಿಪ್ 2026 | ಮೊದಲ ದಿನವೇ ಐದು ಚಿನ್ನದ ಪದಕ ಗೆದ್ದ ಭಾರತ!

India Dominates World Yogasana Championship 2026, Wins 5 Golds on Opening Day

June 6, 2026
ವಿಶ್ವ ಯೋಗಾಸನ ಚಾಂಪಿಯನ್‌ಶಿಪ್ 2026 | ಮೊದಲ ದಿನವೇ ಐದು ಚಿನ್ನದ ಪದಕ ಗೆದ್ದ ಭಾರತ!

ವಿಶ್ವ ಯೋಗಾಸನ ಚಾಂಪಿಯನ್‌ಶಿಪ್ 2026 | ಮೊದಲ ದಿನವೇ ಐದು ಚಿನ್ನದ ಪದಕ ಗೆದ್ದ ಭಾರತ!

June 6, 2026
ಶಿವಮೊಗ್ಗಕ್ಕೆ ಇಂಡಿಗೋ ಬೆನ್ನಲ್ಲೇ ಸ್ಪೈಸ್ ಜೆಟ್ ವಿಮಾನ ಸೇವೆಯೂ ಸ್ಥಗಿತ | ಕಾರಣವೇನು?

ಶಿವಮೊಗ್ಗಕ್ಕೆ ಇಂಡಿಗೋ ಬೆನ್ನಲ್ಲೇ ಸ್ಪೈಸ್ ಜೆಟ್ ವಿಮಾನ ಸೇವೆಯೂ ಸ್ಥಗಿತ | ಕಾರಣವೇನು?

June 6, 2026
ವೈಮಾನಿಕ ದಾಳಿಯಾದರೆ ತುರ್ತು ಸೇವೆ, ರಕ್ಷಣೆ ಹೇಗಿರುತ್ತೆ? ಶಿವಮೊಗ್ಗದಲ್ಲಿ ನಡೆದ ಅಣುಕು ಪ್ರದರ್ಶನ ಹೇಗಿತ್ತು?

ವೈಮಾನಿಕ ದಾಳಿಯಾದರೆ ತುರ್ತು ಸೇವೆ, ರಕ್ಷಣೆ ಹೇಗಿರುತ್ತೆ? ಶಿವಮೊಗ್ಗದಲ್ಲಿ ನಡೆದ ಅಣುಕು ಪ್ರದರ್ಶನ ಹೇಗಿತ್ತು?

June 6, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL