No Result
View All Result
Rani KoHEnur Calls Transgender Bill “Absurd”, Questions Lawmakers in Explosive Podcast Interview
English Articles

Rani KoHEnur Calls Transgender Bill “Absurd”, Questions Lawmakers in Explosive Podcast Interview

by ಕಲ್ಪ ನ್ಯೂಸ್
April 9, 2026
0

Kalpa Media House  |  Mumbai | Artist, drag performer, and activist Rani KoHEnur (Sushant Divgikar) has ignited widespread conversation following...

Read moreDetails
RPF team Seized 40.495 Kgs Ganja at Ballari Railway station

RPF team Seized 40.495 Kgs Ganja at Ballari Railway station

April 7, 2026
ಶ್ರೀ ಕೊಟ್ಟೂರೇಶ್ವರ ಜಾತ್ರೆ ಪ್ರಯುಕ್ತ | ಹೊಸಪೇಟೆ – ತೊಳಹುಣಸೆ ನಡುವೆ ವಿಶೇಷ ರೈಲು ಸಂಚಾರ

Extension of Special Train Services to Manage Summer Rush

April 7, 2026
Interior / upgradation of Next-Generation Amrit Bharat Coaches. Sample coach ready

Interior / upgradation of Next-Generation Amrit Bharat Coaches. Sample coach ready

April 6, 2026
ಶ್ರೀ ಕೊಟ್ಟೂರೇಶ್ವರ ಜಾತ್ರೆ ಪ್ರಯುಕ್ತ | ಹೊಸಪೇಟೆ – ತೊಳಹುಣಸೆ ನಡುವೆ ವಿಶೇಷ ರೈಲು ಸಂಚಾರ

Special Train Between Bengaluru Cantt and Chennai

April 3, 2026
  • Advertise With Us
  • Grievances
  • About Us
  • Contact Us
Friday, April 10, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ

ಆಧುನಿಕತೆಯ ಬಾಣಕ್ಕೆ ಸಿಲುಕಿ‌ ಹಾಳಾಗುತ್ತಿರುವ ಕನ್ನಡದ ಬೇರು: ಪುರುಷೋತ್ತಮ ಬಿಳಿಮಲೆ ಅಭಿಪ್ರಾಯ

ಎ.ಟಿ.ಎನ್.ಸಿ.ಸಿ | ಪದವಿ ಕನ್ನಡ ಪಠ್ಯಪುಸ್ತಕಗಳು : ಸಾಧ್ಯತೆಗಳು ಹಾಗೂ ಸವಾಲುಗಳು ಒಂದು ದಿನದ ‌ವಿಚಾರ ಕಮ್ಮಟ 

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
April 12, 2025
in ಶಿವಮೊಗ್ಗ
0
ಆಧುನಿಕತೆಯ ಬಾಣಕ್ಕೆ ಸಿಲುಕಿ‌ ಹಾಳಾಗುತ್ತಿರುವ ಕನ್ನಡದ ಬೇರು: ಪುರುಷೋತ್ತಮ ಬಿಳಿಮಲೆ ಅಭಿಪ್ರಾಯ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ  |

ಪ್ರಾಥಮಿಕ ಶಿಕ್ಷಣದ ಹಂತದಲ್ಲಿ ಆಳವಾಗಿ ಒಡಮೂಡಬೇಕಾಗಿದ್ದ ಕನ್ನಡದ ಬೇರು ಆಧುನಿಕತೆಯ ಬಾಣಕ್ಕೆ ಸಿಲುಕಿ‌ ಹಾಳಾಗಿ ಹೋಗುತ್ತಿದೆ ಎಂದು ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಡಾ. ಪುರುಷೋತ್ತಮ ಬಿಳಿಮಲೆ #Purushotham Bilemale ಅಭಿಪ್ರಾಯಪಟ್ಟರು.

ನಗರದ ಎ.ಟಿ.ಎನ್.ಸಿ ಕಾಲೇಜಿನ ಚಂದನ ಸಭಾಂಗಣದಲ್ಲಿ ರಾಷ್ಟ್ರೀಯ ಶಿಕ್ಷಣ ಸಮಿತಿ, ಕುವೆಂಪು ವಿಶ್ವವಿದ್ಯಾಲಯ, #Kuvempu University ಆಚಾರ್ಯ ತುಳಸಿ ರಾಷ್ಟ್ರೀಯ ವಾಣಿಜ್ಯ ಕಾಲೇಜು ಹಾಗೂ ಕುವೆಂಪು ವಿವಿ ಪದವಿ ಕಾಲೇಜು ಕನ್ನಡ ಅಧ್ಯಾಪಕರ ವೇದಿಕೆಯ ಸಂಯುಕ್ತಾಶ್ರಯದಲ್ಲಿ ಶುಕ್ರವಾರ ಏರ್ಪಡಿಸಿದ್ದ ಪದವಿ ಕನ್ನಡ ಪಠ್ಯಪುಸ್ತಕಗಳು : ಸಾಧ್ಯತೆಗಳು ಹಾಗೂ ಸವಾಲುಗಳು ಒಂದು ದಿನದ ‌ವಿಚಾರ ಕಮ್ಮಟ ಉದ್ಘಾಟಿಸಿ ಮಾತನಾಡಿದರು.
ಪ್ರಾಥಮಿಕ ಹಂತದಲ್ಲಿ ಹಾಳಾಗುತ್ತಿರುವ ಕನ್ನಡ ಬೇರಿನಿಂದ ಕನ್ನಡದ ನಿಜವಾದ ಅವನತಿ ಪ್ರಾರಂಭವಾದಂತೆ ಆಗುತ್ತದೆ.‌ ಮೊದಲು ಶಿಕ್ಷಕರು ಮಕ್ಕಳಿಗೆ ಕನ್ನಡ‌ ಕಲಿಸುವತ್ತ ಆಸಕ್ತಿ ತೋರಬೇಕು. ಎಷ್ಟೇ ಉತ್ತಮ ಪಠ್ಯ ಕೊಟ್ಟರು, ಶಿಕ್ಷಕರು ಸರಿಯಾಗಿ ಕಲಿಸದೆ ಇದ್ದರೆ, ಎಲ್ಲವೂ ವ್ಯರ್ಥ. ಹೀಗೆ ಮುಂದುವರೆದರೆ ಇನ್ನು ಮೂರು ವರ್ಷಗಳಲ್ಲಿ ಕನ್ನಡ ಆಡು ಭಾಷೆಯಾಗಿ ಉಳಿದರೆ, ಐದು ವರ್ಷಗಳಲ್ಲಿ ಕನ್ನಡದ ಶಾಲೆಗಳು ಮುಚ್ಚಿಹೋಗುವುದರಲ್ಲಿ ಆಶ್ಚರ್ಯವಿಲ್ಲ.

ಪ್ರಾಥಮಿಕದಲ್ಲಿ ಕನ್ನಡವನ್ನು ಹೇಳಿಕೊಡುವ ವಿಧಾನ ಐವತ್ತು ವರ್ಷ ಹಿಂದಿನದ್ದಾಗಿದೆ. ಪುಸ್ತಕದ ಭಾರದ ಆಧಾರದ ಮೇಲೆ‌ ಕಲಿಯುವ ಕಾಲಘಟ್ಟದಲ್ಲಿ ನಾವಿದ್ದೇವೆ. ಹೀಗಾಗಿ ಕನ್ನಡ ಪುಸ್ತಕಗಳನ್ನು ತಾಂತ್ರಿಕವಾಗಿ ರೂಪಿಸುವ ಅಗತ್ಯವಿದೆ. ಕುಮಾರವ್ಯಾಸರ ಗಮಕ ಕೇಳುವ ಮನಸ್ಥಿತಿಯನ್ನು ಕನ್ನಡದ ವಿದ್ಯಾರ್ಥಿಗಳು ಬೆಳೆಸಿಕೊಳ್ಳಬೇಕಿದೆ. ಮೇಷ್ಟ್ರಿಗೆ ಗಮಕ ಪಾಠ ಮಾಡಲು ಬರೊಲ್ಲ ಎನ್ನುವಾಗ, ತಮ್ಮನ್ನು ತಾವು ಇಂತಹ ಕಮ್ಮಟಗಳ ಮೂಲಕ ಉನ್ನತಿಕರಿಸಿಕೊಳ್ಳಬೇಕಿದೆ ಎಂದು ಸಲಹೆ ನೀಡಿದರು.

http://kalpa.news/wp-content/uploads/2025/03/PES-Video.mp4

ಇತ್ತಿಚೆಗೆ ಕ್ರಿಟಿಕಲ್‌ ಥಿಂಕಿಂಗ್ ಬಂದುಬಿಟ್ಟಿದೆ. ಕಣ್ಣಿಗೆ ಕಾಣುವ ಯಾವ ವಿಷಯಗಳನ್ನು ನಂಬದೆ, ವಿಮರ್ಶಿಸಿಯೇ ಸ್ವೀಕರಿಸುವ ಕಾಲ ಮಾನದಲ್ಲಿ ನಾವಿದ್ದೆವೆ. ನಿಮ್ಮ ಭವಿಷ್ಯದ ಜವಾಬ್ದಾರಿಗಳನ್ನು ನೀವೆ ತೆಗೆದುಕೊಳ್ಳುವಂತಾಗಬೇಕು. ವಿದ್ಯಾರ್ಥಿಗಳು ತಮ್ಮ ಶೈಕ್ಷಣಿಕ ಚಟುವಟಿಕೆಗಳಲ್ಲಿ ಕನಿಷ್ಟ 2 ಲಕ್ಷ ಪದಗಳನ್ನು ಓದಬೇಕು. ಪಠ್ಯದೊಳಗಿನ ಪದಗಳನ್ನು ವಿಶಿಷ್ಟವಾಗಿ ಗ್ರಹಿಸಲು ಪ್ರಯತ್ನಿಸಬೇಕು.

ಅನೇಕ ಕನ್ನಡದ‌ ಉಪನ್ಯಾಸಕರು ಕೆಲಸ ಸಿಕ್ಕಿದ ಮೇಲೆ ತಮ್ಮಲ್ಲಿದ್ದ ಸೃಜನಶೀಲತೆಯನ್ನು ಸಾಯಿಸಿಬಿಡುತ್ತಾರೆ. ಅಧ್ಯಾಪಕರ ಮನೆಗಳಲ್ಲಿ ಗ್ರಂಥಾಲಯವಿಲ್ಲ. ಪ್ರತಿದಿನ ಪತ್ರಿಕೆಗಳನ್ನು ಓದಲ್ಲ. ಸತ್ತು ಹೋದ ಪಠ್ಯವನ್ನು ಇನ್ನಷ್ಟು ಸಾಯಿಸುತ್ತಿದ್ದಾರೆ. ತಮ್ಮ ಕೆಲಸದ ಜೊತೆಗೆ ಅಧ್ಯಾಪಕರು ರಿಯಲ್ ಎಸ್ಟೇಟ್ ಗೆ ಇಳಿದಿದ್ದಾರೆ. ಕನ್ನಡದ ಅಧ್ಯಾಪಕರು ಒಂದಿಷ್ಟು ಅಪ್ಡೇಟ್ ಆಗಬೇಕಿದೆ. ಭಾಷಾಂತರದ ಪೋಸ್ಟಗಳು ಸಮಾಜಿಕ ಜಾಲತಾಣದಲ್ಲಿ ಸಿಗುತ್ತಿದೆ. ಅದರೆಡೆಗೆ ಒಂದಿಷ್ಟು ನಾವೀನ್ಯ ಪೂರ್ಣವಾಗಿ ಗಮನಹರಿಸಿ. ಕನ್ನಡ ಎಂಎ ಮಾಡಿ ಅದರ ಸುತ್ತಲೆ ಸುತ್ತುತ್ತಿದ್ದರೆ ಉದ್ಯೋಗ ಪಡೆಯುವುದಾದರು ಹೇಗೆ?. ಕನ್ನಡ ಭಾಷೆಯ ಜೊತೆಗೆ ಇತರೆ ಕೌಶಲ್ಯಗಳನ್ನು ಯುವ ಅಧ್ಯಾಪಕ ಸಮೂಹ ರೂಡಿಸಿಕೊಳ್ಳಬೇಕು ಎಂದು ಹೇಳಿದರು.
ಕುವೆಂಪು ವಿವಿ ಕುಲಪತಿ ಡಾ.ಶರತ್ ಅನಂತಮೂರ್ತಿ #Dr. Sharath Ananthamurthy ಮಾತನಾಡಿ, ಸಾಮಾಜಿಕ ವಿಜ್ಞಾನದ ವಿಷಯಗಳಿಗೆ ಅನುದಾನಗಳಿಲ್ಲ. ಕನ್ನಡವನ್ನು ಕೇವಲ ‌ಸಾಹಿತ್ಯದ ಸಂವೇದನೆ ಎಂದಷ್ಟೇ ನೋಡಬಾರದು. ಒಬ್ಬ ಕನ್ನಡದ ಮೇಷ್ಟು ಸೋಶಿಯಾಜಿಸ್ಟ್ ಮತ್ತು ಅಂತ್ರಪಾಲಾಜಿಸ್ಟ್ ಆಗಿಯು ಕಾರ್ಯನಿರ್ವಹಿಸಬೇಕು. ಪಠ್ಯದ ಜೊತೆಗೆ ಶಿಕ್ಷಕರ ಮ್ಯಾನ್ಯುಯಲ್ ಮಾಡುವ ಅಗತ್ಯವಿದೆ ಎಂದು ಅನಿಸುತ್ತಿದೆ.‌

ಎಲ್ಲರೂ ಎಲ್ಲವನ್ನೂ ಓದಬೇಕು. ವಿಜ್ಞಾನ ವಿದ್ಯಾರ್ಥಿ ಪಂಪ, ರನ್ನರ ಸಾಹಿತ್ಯ ಓದಬೇಕು. ಅಂತರ ಶಿಸ್ತೀಯತೆಯನ್ನು ಬೆಳೆಸಿಕೊಳ್ಳಬೇಕು. ಪರೀಕ್ಷಾ ಕ್ರಮಗಳಿಂದ ಶೈಕ್ಷಣಿಕ ಚಟುವಟಿಕೆ ವಿನಃ ಬೇರೆ ಯಾವುದೇ ಸೃಜನಶೀಲತೆಯನ್ನು ಬಿತ್ತಲಾಗದ ಸ್ಥಿತಿಯಲ್ಲಿ ನಾವಿದ್ದೇವೆ ಎಂದು ಹೇಳಿದರು.

ಎನ್ಇಎಸ್ ಕಾರ್ಯದರ್ಶಿ ಎಸ್.ಎನ್.ನಾಗರಾಜ, ಕನ್ನಡ ಅಧ್ಯಾಪಕರ ವೇದಿಕೆ ಅಧ್ಯಕ್ಷೆ ಡಾ.ಸಬೀತಾ ಬನ್ನಾಡಿ, ಉಪಾಧ್ಯಕ್ಷ ಡಾ.ಕುಂಸಿ ಉಮೇಶ್ ಮಾತನಾಡಿದರು. ಪ್ರಾಂಶುಪಾಲರಾದ  ಪಿ.ಆರ್.ಮಮತಾ ಅಧ್ಯಕ್ಷತೆ ವಹಿಸಿದ್ದರು. ಕಾರ್ಯದರ್ಶಿ ಡಾ.ಮುತ್ತಯ್ಯ, ಕಾರ್ಯಕ್ರಮ ಸಂಚಾಲಕ ಪ್ರವೀಣ್.ಬಿ.ಎನ್ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news     

http://kalpa.news/wp-content/uploads/2025/02/Kumadvati-College-Shikaripura-2025-Video.mp4
http://kalpa.news/wp-content/uploads/2024/04/VID-20240426-WA0008.mp4
Tags: Dr. Sharath AnanthamurthyKannada_NewsKannada_News_LiveKannada_News_Online ShivamoggaKannada_WebsiteKannadaNewsWebsiteKuvempu UniversityLatestNewsKannadaLocalNewsMalnadNewsNews_in_KannadaNews_KannadaPurushotham BilemaleShimogaShivamoggaNewsಕುವೆಂಪು ವಿಶ್ವವಿದ್ಯಾಲಯಡಾ. ಪುರುಷೋತ್ತಮ ಬಿಳಿಮಲೆಡಾ. ಶರತ್ ಅನಂತಮೂರ್ತಿಮಲೆನಾಡು_ಸುದ್ಧಿಶಿವಮೊಗ್ಗಶಿವಮೊಗ್ಗ_ನ್ಯೂಸ್
Share196Tweet123Send
Previous Post

ಹನುಮ ಜಯಂತಿ | ಶ್ರೀ ಕುಲಗೋಡು ಹನುಮ ಮಂದಿರದಲ್ಲಿ ಕೇಂದ್ರ ಸಚಿವ ಪ್ರಲ್ಹಾದ ಜೋಶಿ ವಿಶೇಷ ಪೂಜೆ ಸಲ್ಲಿಕೆ

Next Post

ನ್ಯಾಯಾಲಯದ ಆದೇಶ ಉಲ್ಲಂಘನೆ | ಯೂಟ್ಯೂಬರ್ ಸಮೀರ್ ವಿರುದ್ಧ 10 ಕೋಟಿ ಮಾನನಷ್ಟ ಮೊಕದ್ದಮೆ ದಾಖಲು

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ನ್ಯಾಯಾಲಯದ ಆದೇಶ ಉಲ್ಲಂಘನೆ | ಯೂಟ್ಯೂಬರ್ ಸಮೀರ್ ವಿರುದ್ಧ 10 ಕೋಟಿ ಮಾನನಷ್ಟ ಮೊಕದ್ದಮೆ ದಾಖಲು

ನ್ಯಾಯಾಲಯದ ಆದೇಶ ಉಲ್ಲಂಘನೆ | ಯೂಟ್ಯೂಬರ್ ಸಮೀರ್ ವಿರುದ್ಧ 10 ಕೋಟಿ ಮಾನನಷ್ಟ ಮೊಕದ್ದಮೆ ದಾಖಲು

Leave a Reply Cancel reply

Your email address will not be published. Required fields are marked *

  • Trending
  • Latest
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

April 3, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
ಶಿವಮೊಗ್ಗ | ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ | ಕಾರ್ಕಳ ಮೂಲದ ವಿದ್ಯಾರ್ಥಿನಿ ದುರ್ಮರಣ

ಶಿವಮೊಗ್ಗ | ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ | ಕಾರ್ಕಳ ಮೂಲದ ವಿದ್ಯಾರ್ಥಿನಿ ದುರ್ಮರಣ

March 12, 2026
ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

January 16, 2026
ಹುಲಿಕಲ್ ಘಾಟಿಯಲ್ಲಿ ಭಾರೀ ದುರಂತ | ಧರೆ ಕುಸಿದು ಮೂವರು ಕಾರ್ಮಿಕರ ಸಾವು

ಹುಲಿಕಲ್ ಘಾಟಿಯಲ್ಲಿ ಭಾರೀ ದುರಂತ | ಧರೆ ಕುಸಿದು ಮೂವರು ಕಾರ್ಮಿಕರ ಸಾವು

April 9, 2026
ಪಿಯುಸಿ ರಿಸಲ್ಟ್ | ಪೇಸ್ ಕಾಲೇಜಿನ ವಿದ್ಯಾರ್ಥಿನಿ ಮಹಿನ್ ರಾಜ್ಯಕ್ಕೆ 3, ಜಿಲ್ಲೆಗೆ ಪ್ರಥಮ ಸ್ಥಾನ

ಪಿಯುಸಿ ರಿಸಲ್ಟ್ | ಪೇಸ್ ಕಾಲೇಜಿನ ವಿದ್ಯಾರ್ಥಿನಿ ಮಹಿನ್ ರಾಜ್ಯಕ್ಕೆ 3, ಜಿಲ್ಲೆಗೆ ಪ್ರಥಮ ಸ್ಥಾನ

April 9, 2026
ದೇಶ ಸಮೃದ್ಧಿಯಾದಾಗ ನಾವೆಲ್ಲರೂ ಸಮೃದ್ಧಿ: ಸಂಸದ ರಾಘವೇಂದ್ರ

ದೇಶ ಸಮೃದ್ಧಿಯಾದಾಗ ನಾವೆಲ್ಲರೂ ಸಮೃದ್ಧಿ: ಸಂಸದ ರಾಘವೇಂದ್ರ

April 9, 2026
`ನಾನು ಕರುಣಾಕರ್’ ಚಿತ್ರನೋಡಿ, ಹೊಸ ಪ್ರತಿಭೆಗಳನ್ನು ಬೆಂಬಲಿಸಿ: ನಿರ್ಮಾಪಕ ನಮನ್ ನಾರಾಯಣ್ ಸಂತೋಷ್

`ನಾನು ಕರುಣಾಕರ್’ ಚಿತ್ರನೋಡಿ, ಹೊಸ ಪ್ರತಿಭೆಗಳನ್ನು ಬೆಂಬಲಿಸಿ: ನಿರ್ಮಾಪಕ ನಮನ್ ನಾರಾಯಣ್ ಸಂತೋಷ್

April 9, 2026
ಪಿಯುಸಿ ರಿಸಲ್ಟ್ | ಕುಮದ್ವತಿ ಕಾಲೇಜಿಗೆ ಶೇ.100 ರಷ್ಟು ಫಲಿತಾಂಶ | ಹೆಮ್ಮೆಯ ವಿದ್ಯಾರ್ಥಿಗಳಿವರು

ಪಿಯುಸಿ ರಿಸಲ್ಟ್ | ಕುಮದ್ವತಿ ಕಾಲೇಜಿಗೆ ಶೇ.100 ರಷ್ಟು ಫಲಿತಾಂಶ | ಹೆಮ್ಮೆಯ ವಿದ್ಯಾರ್ಥಿಗಳಿವರು

April 9, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL