ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ಕಾಂಗ್ರೆಸ್ ಸರ್ಕಾರ ಈ ಬಾರಿ ರಾಜ್ಯದಲ್ಲಿ ಅಧಿಕಾರಕ್ಕೆ ಬರುತ್ತದೆ. ಪ್ರಣಾಳಿಕೆಯಲ್ಲಿನ ಅಂಶಗಳನ್ನು ಜಾರಿ ಮಾಡಿ, ಜನರಿಗೆ ತಲುಪಿಸುತ್ತೇವೆ ಎಂದು ಕೆಪಿಸಿಸಿ ಉಪಾಧ್ಯಕ್ಷ ಮಧು ಬಂಗಾರಪ್ಪ Madhu Bangarappa ಹೇಳಿದರು.
ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಪ್ರಣಾಳಿಕೆ ಬಗ್ಗೆ ತಲೆ ಕೆಡಿಸಿಕೊಂಡು, ಸಮಯೋಚಿತವಾಗಿ ಮಾಡಿದ್ದೇವೆ. ಪ್ರಣಾಳಿಕೆ ಅಂಶಗಳನ್ನು ಅನುಷ್ಟಾನಗೊಳಿಸುತ್ತೇವೆ. ನೀಡಿರುವ ಅಷ್ಟು ಭರವಸೆಗಳನ್ನು ಈಡೇರಿಸುತ್ತೇವೆ ಎಂದರು.
ಹ್ಯಾಟ್ರಿಕ್ ಹೀರೋ ಶಿವಣ್ಣ ಅವರು ಕೂಡ ಪ್ರಚಾರದಲ್ಲಿ ಭಾಗಿಯಾಗುತ್ತಿದ್ದಾರೆ. ಲಕ್ಷ್ಮಿ ಹೆಬ್ಬಾಳ್ಕರ್, ಅಶೋಕ್ ಖೇಣಿ, ಜಗದೀಶ್ ಶೆಟ್ಟರ್ ಸೇರಿದಂತೆ ಹಲವು ನಾಯಕರು ಪ್ರಚಾರದಲ್ಲಿ ಭಾಗಿಯಾಗಲಿದ್ದಾರೆ. ಜನರು ಕಾಂಗ್ರೆಸ್ ಪಕ್ಷದ ಪರವಾಗಿದ್ದು, ಈ ಬಾರಿ ನಮ್ಮ ಸರ್ಕಾರ ಬಂದೇ ಬರುತ್ತದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.
ಪ್ರಣಾಳಿಕೆಯಲ್ಲಿ ಹಲವಾರು ಅಂಶಗಳನ್ನು ಸೇರಿಸಿದ್ದೇವೆ. ರಾಜ್ಯದ ಕಲ್ಯಾಣ ಕರ್ನಾಟಕ, ಉತ್ತರ ಕರ್ನಾಟಕ, ಕರಾವಳಿ, ಮೈಸೂರು, ಬೆಂಗಳೂರು ಭಾಗಗಳಿಗೆ ಪ್ರತ್ಯೇಕವಾಗಿ ಅಂಶಗಳನ್ನು ಅಡಕ ಮಾಡಲಾಗಿದೆ. ಕರಾವಳಿ ಭಾಗದ ಸಮಸ್ಯೆಗಳನ್ನು ಪ್ರಣಾಳಿಕೆಯಲ್ಲಿ ಉಲ್ಲೇಖಿಸಲಾಗಿದೆ. ಸರ್ವಜನಾಂಗದ ಶಾಂತಿಯ ತೋಟ ಎಂದು ಪ್ರಣಾಳಿಕೆಯಲ್ಲಿ ಉಲ್ಲೇಖಿಸಲಾಗಿದೆ. ಪ್ರಸ್ತುತ ಇದು ರಾಜ್ಯಕ್ಕೆ ಅಗತ್ಯವಾಗಿದೆ ಎಂದರು.
ಬಜರಂಗದಳ ಬ್ಯಾನ್ ವಿಚಾರ ಕಾಂಗ್ರೆಸ್ ಗೆ ಯಾವುದೇ ನಷ್ಟವಿಲ್ಲ. ನಾವು ಈ ಎಲ್ಲಾ ವಿಚಾರಗಳನ್ನು ಚರ್ಚಿಸಿಯೇ ನಿರ್ಧರಿಸಿದ್ದೇವೆ. ದೊಡ್ಡ ದೊಡ್ಡ ಲೀಡರ್ ಗಳ ಮಕ್ಕಳು ಯಾರಾದರೂ ಬಜರಂಗದಳಲ್ಲಿದ್ದಾರಾ? ಕೇವಲ ಬಡವರ ಮಕ್ಕಳೇ ಅದರಲ್ಲಿ ಬಲಿಯಾಗುತ್ತಿದ್ದಾರೆ. ಮಹೇಂದ್ರ ಕುಮಾರ್ ಅವರೇ ಬಜರಂಗದಳದ ವಿರುದ್ಧ ಈಗ ಭಾಷಣ ಮಾಡಿದ್ದಾರೆ. ಅವರು ನನ್ನ ಜೊತೆ ಜೆಡಿಎಸ್ ನಲ್ಲಿದ್ದರು. ಅವರೇ ನಾನು ತಪ್ಪು ಮಾಡಿದ್ದೆ ಅಂತಾ ಒಪ್ಪಿಕೊಂಡಿದ್ದಾರೆ. ಬಜರಂಗದಳ ವಿಚಾರ ಸೇರ್ಪಡೆ ಅನಿವಾರ್ಯವಾಗಿದೆ ಎಂದರು.
ಪಿ.ಎಫ್.ಐ. ಬ್ಯಾನ್ ಮಾಡಿದ್ದಕ್ಕೆ ಪ್ರಶ್ನೆ ಮಾಡಲಾಗಿದೆ. ಅವರು ಸುಪ್ರೀಂ ಕೋರ್ಟ್ ಗೆ ಹೋಗ್ತಾರೆ. ನೈತಿಕ ಪೊಲೀಸ್ ಗಿರಿ ಸೇರಿದಂತೆ ಕೇಸು ಹಾಕಿಕೊಂಡ ಸಂಘಟನೆಗಳನ್ನು ನಿಷೇಧ ಮಾಡುತ್ತೆವೆಂದು ಹೇಳಿದ್ದೇವೆ. ನಮ್ಮ ಪ್ರಣಾಳಿಕೆಯನ್ನು ಮಾಜಿ ಸಚಿವ ಕೆ.ಎಸ್. ಈಶ್ವರಪ್ಪ ಸುಟ್ಟು ಹಾಕಿದ್ದಾರೆ. ಚಳಿಯಲ್ಲಿ ಬೆಂಕಿ ಕಾಯಿಸಿಕೊಳ್ಳುವ ಚಟ ನನಗಿಲ್ಲ. ಅದು ಈಶ್ವರಪ್ಪರಿಗೆ ಇದೆ. ಹಾಗಾಗಿ ನಮ್ಮ ಪ್ರಣಾಳಿಕೆಗೆ ಬೆಂಕಿ ಹಾಕಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
ನಾನು ಕೈಯಲ್ಲಿ ನೀರು ಹಿಡಿದು ತಣ್ಣಗೆ ಕುಡಿಯುತ್ತಿದ್ದೇನೆ. ಈಶ್ವರಪ್ಪ ಅವರ ಬಗ್ಗೆ ನಿಮಗೆ ಗೊತ್ತಿದೆ. ಬಿಜೆಪಿಯವರಿಗೆ ಮಾನ, ಮರ್ಯಾದೆ ಇಲ್ಲ. ಜನರನ್ನು ತಪ್ಪು ದಾರಿಗೆ ಎಳೆದು ಸಮಾಜದಲ್ಲಿ ಅಶಾಂತಿ ವಾತಾವರಣ ಹುಟ್ಟು ಹಾಕುವುದೇ ಅವರ ಉದ್ದೇಶ ಎಂದು ದೂರಿದರು.
ಈ ಬಾರಿ ಜಿಲ್ಲೆಯಾದ್ಯಂತ ಕಾಂಗ್ರೆಸ್ ಪರವಾಗಿ ಇದೆ. ಶಿವಮೊಗ್ಗ ಜಿಲ್ಲೆಯಲ್ಲಿ ಅತಿ ಹೆಚ್ಚು ಕ್ಷೇತ್ರಗಳಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳು ಗೆಲುವು ಸಾಧಿಸುತ್ತಾರೆ ಎಂಬ ವಿಶ್ವಾಸ ತಮಗಿದೆ ಎಂದರು.
ಗೋಷ್ಠಿಯಲ್ಲಿ ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್, Shivrajkumar ವಿಧಾನ ಪರಿಷತ್ ಮಾಜಿ ಸದಸ್ಯ ಆರ್. ಪ್ರಸನ್ನ ಕುಮಾರ್, ಗ್ರಾಮಾಂತರ ಅಭ್ಯರ್ಥಿ ಶ್ರೀನಿವಾಸ್ ಕರಿಯಣ್ಣ, ಪ್ರಮುಖರಾದ ಎಸ್.ಪಿ. ದಿನೇಶ್, ಎನ್. ರಮೇಶ್, ಜಿ.ಡಿ. ಮಂಜುನಾಥ್, ಸಂತೆಕಡೂರು ವಿಜಿ ಮತ್ತಿತರರು ಉಪಸ್ಥಿತರಿದ್ದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post