No Result
View All Result
Rani KoHEnur Calls Transgender Bill “Absurd”, Questions Lawmakers in Explosive Podcast Interview
English Articles

Rani KoHEnur Calls Transgender Bill “Absurd”, Questions Lawmakers in Explosive Podcast Interview

by ಕಲ್ಪ ನ್ಯೂಸ್
April 9, 2026
0

Kalpa Media House  |  Mumbai | Artist, drag performer, and activist Rani KoHEnur (Sushant Divgikar) has ignited widespread conversation following...

Read moreDetails
RPF team Seized 40.495 Kgs Ganja at Ballari Railway station

RPF team Seized 40.495 Kgs Ganja at Ballari Railway station

April 7, 2026
ಶ್ರೀ ಕೊಟ್ಟೂರೇಶ್ವರ ಜಾತ್ರೆ ಪ್ರಯುಕ್ತ | ಹೊಸಪೇಟೆ – ತೊಳಹುಣಸೆ ನಡುವೆ ವಿಶೇಷ ರೈಲು ಸಂಚಾರ

Extension of Special Train Services to Manage Summer Rush

April 7, 2026
Interior / upgradation of Next-Generation Amrit Bharat Coaches. Sample coach ready

Interior / upgradation of Next-Generation Amrit Bharat Coaches. Sample coach ready

April 6, 2026
ಶ್ರೀ ಕೊಟ್ಟೂರೇಶ್ವರ ಜಾತ್ರೆ ಪ್ರಯುಕ್ತ | ಹೊಸಪೇಟೆ – ತೊಳಹುಣಸೆ ನಡುವೆ ವಿಶೇಷ ರೈಲು ಸಂಚಾರ

Special Train Between Bengaluru Cantt and Chennai

April 3, 2026
  • Advertise With Us
  • Grievances
  • About Us
  • Contact Us
Saturday, April 11, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ

ಹಾಲಿ ಸಂಸದರ ಬಗ್ಗೆ ಆಕ್ರೋಶವಿದೆ, ಪಕ್ಷ ನಿಷ್ಠೆಗಾಗಿ ಜನರಿಂದ ನನಗೆ ಬೆಂಬಲ: ಈಶ್ವರಪ್ಪ ವಿಶ್ವಾಸ

ಸ್ವತಂತ್ರ ಅಭ್ಯರ್ಥಿಯಾಗಿ ಕೆ.ಎಸ್. ಈಶ್ವರಪ್ಪ | ಚುನಾವಣಾ ಕಚೇರಿ ಉದ್ಘಾಟನೆ | ನಿವಾಸದಲ್ಲಿ ಗಣಹೋಮ

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
March 28, 2024
in ಶಿವಮೊಗ್ಗ
0
ಹಾಲಿ ಸಂಸದರ ಬಗ್ಗೆ ಆಕ್ರೋಶವಿದೆ, ಪಕ್ಷ ನಿಷ್ಠೆಗಾಗಿ ಜನರಿಂದ ನನಗೆ ಬೆಂಬಲ: ಈಶ್ವರಪ್ಪ ವಿಶ್ವಾಸ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ  |

ಕ್ಷೇತ್ರದ ಹಳಿ ಸಂಸದರ ಬಗ್ಗೆ ಜನರಲ್ಲಿ ಆಕ್ರೋಶವಿದ್ದು, ನನಗಾದ ಅನ್ಯಾಯವನ್ನು ಕಂಡು ಹೋದೆಡೆಯೆಲ್ಲಾ ಮತದಾರರು ನನಗೆ ಬೆಂಬಲ ವ್ಯಕ್ತಪಡಿಸುತ್ತಿದ್ದಾರೆ ಎಂದು ಸ್ವತಂತ್ರ ಅಭ್ಯರ್ಥಿ ಕೆ.ಎಸ್. ಈಶ್ವರಪ್ಪ #KSEshwarappa ಹೇಳಿದರು.

ತಮ್ಮ ಚುನಾವಣಾ ಕಚೇರಿ #ElectionOffice ಉದ್ಘಾಟನೆ ನಂತರ ಮಾತನಾಡಿದ ಅವರು, ಒಂದು ಕುಟುಂಬದ ಕೈಯಲ್ಲಿ ರಾಜ್ಯ ಬಿಜೆಪಿ ಇರುವುದು ಜನರಿಗೂ ಸಹ ಇಷ್ಟವಿಲ್ಲ. ಹಿಂದುತ್ವದ ಪರವಾಗಿ ಹೋರಾಟ ಮಾಡಿದ ಎಲ್ಲರಿಗೂ ಅನ್ಯಾಯವಾಗಿದೆ. ಹೀಗಾಗಿ, ನಿಮ್ಮ ಪಕ್ಷ ನಿಷ್ಠೆ, ಹಿಂದುತ್ವದ ಹೋರಾಟ ಬೆಂಬಲಿಸಿ ನಿಮ್ಮ ಹಿಂದೆ ನಾವಿದ್ದೇವೆ ಎಂದು ನಮ್ಮ ಕಾರ್ಯಕರ್ತರು ಹೇಳಿದ್ದಾರೆ ಎಂದರು.
ನನ್ನ ನಿರ್ಧಾರ ಬೆಂಬಲಿಸಿ ನಮ್ಮ ಕಾರ್ಯಕರ್ತರು ಮಾತ್ರವಲ್ಲ ಕಾಂಗ್ರೆಸ್ ಹಾಗೂ ಜೆಡಿಎಸ್ ಪಕ್ಷದ ಬಹಳಷ್ಟು ಕಾರ್ಯಕರ್ತರು ಬೆಂಬಲ ಸೂಚಿಸಿದ್ದಾರೆ ಎಂದರು.

ಈ ಚುನಾವಣೆಯಲ್ಲಿ ನನ್ನ ಗೆಲುವು ನಿಶ್ಚಿತವಾಗಿದ್ದು, ಗೆಲುವಿನ ನಂತರ ಮೋದಿ ಮತ್ತೆ ಪ್ರಧಾನಿಯಾಗಲು ಕ್ಷೇತ್ರದ ಮತದಾರರ ಪರವಾಗಿ ಕೈ ಎತ್ತುತ್ತೇನೆ ಎಂದರು.
ಕ್ಷೇತ್ರದಲ್ಲಿ ಹಾಲಿ ಸಂಸದರ ಬಗ್ಗೆ ಆಕ್ರೋಶವಿದೆ. ಅದರೊಂದಿಗೆ ನನಗಾದ ಅನ್ಯಾಯವನ್ನು ಗಮನಿಸಿ, ಅದನ್ನು ಸರಿಪಡಿಸಲು ವ್ಯಾಪಕ ಬೆಂಬಲ ವ್ಯಕ್ತವಾಗಿದೆ. ಜನರ ಪ್ರೀತಿ ಹಾಗೂ ನಂಬಿಕೆಯನ್ನು ಉಳಿಸಿಕೊಂಡು ಅಭಿವೃದ್ಧಿಗಾಗಿ ದುಡಿಯುತ್ತೇನೆ ಎಂದರು.

ಚುನಾವಣಾ ಕಚೇರಿ ಉದ್ಘಾಟನೆ
ಇನ್ನು, ತಮ್ಮ ನಿವಾಸದಲ್ಲಿಯೇ ಸ್ಥಾಪಿಸಲಾಗಿರುವ ಈಶ್ವರಪ್ಪನವರ ಚುನಾವಣಾ ಕಚೇರಿಯನ್ನು ಮುತ್ತೈದೆಯರು ಇಂದು ಉದ್ಘಾಟಿಸಿದರು.
ಇಂದು ಮುಂಜಾನೆ ಋತ್ವಿಜರಿಂದ ಸಹಸ್ರ ಮೋದಕ ಗಣ ಹೋಮವನ್ನು ನೆರವೇರಿಸಲಾಯಿತು.
ಆನಂತರ ನಡೆದ ವೇದಿಕೆ ಕಾರ್ಯಕ್ರಮದಲ್ಲಿ ಮುತ್ತೈದೆಯರ ಮೂಲಕ ತಮ್ಮ ಕಚೇರಿಯನ್ನು ಈಶ್ವರಪ್ಪನವರು ಉದ್ಘಾಟಿಸಿದರು.

ಮಾಜಿ ಪ್ರಧಾಣಿ ದಿ. ಅಟಲ್ ಬಿಹಾರಿ ವಾಜಪೇಯಿ ಹಾಗೂ ಪ್ರಧಾನಿ ನರೇಂದ್ರ ಮೋದಿ ಅವರ ಫೋಟೋಗಳು ಈ ವೇಳೆ ರಾರಾಜಿಸಿದವು.

ನನ್ನ ನಿರ್ಧಾರ ಬೆಂಬಲಿಸಿ ನಮ್ಮ ಕಾರ್ಯಕರ್ತರು ಮಾತ್ರವಲ್ಲ ಕಾಂಗ್ರೆಸ್ ಹಾಗೂ ಜೆಡಿಎಸ್ ಪಕ್ಷದ ಬಹಳಷ್ಟು ಕಾರ್ಯಕರ್ತರು ಬೆಂಬಲ ಸೂಚಿಸಿದ್ದಾರೆ ಎಂದರು.

ಈ ಚುನಾವಣೆಯಲ್ಲಿ ನನ್ನ ಗೆಲುವು ನಿಶ್ಚಿತವಾಗಿದ್ದು, ಗೆಲುವಿನ ನಂತರ ಮೋದಿ ಮತ್ತೆ ಪ್ರಧಾನಿಯಾಗಲು ಕ್ಷೇತ್ರದ ಮತದಾರರ ಪರವಾಗಿ ಕೈ ಎತ್ತುತ್ತೇನೆ. ಮೋದಿ ಹೇಳಿದ ಕೂಡಲೇ ನಾಮಪತ್ರ ವಾಪಾಸ್ಸು ಪಡೆಯಲಿದ್ದಾರೆ ಎಂದು ಸುಳ್ಳು ಸುದ್ಧಿ ಹಬ್ಬಿಸುತ್ತಿದ್ದಾರೆ. ಮೋದಿಯಲ್ಲ ಬ್ರಹ್ಮ ಬಂದು ಹೇಳಿದರು ನಾನು ಚುನಾವಣೆಗೆ ನಿಲ್ಲುವುದು ಶತಸಿದ್ಧ ಎಂದರು.

ಕ್ಷೇತ್ರದಲ್ಲಿ ಹಾಲಿ ಸಂಸದರ ಬಗ್ಗೆ ಆಕ್ರೋಶವಿದೆ. ಅದರೊಂದಿಗೆ ನನಗಾದ ಅನ್ಯಾಯವನ್ನು ಗಮನಿಸಿ, ಅದನ್ನು ಸರಿಪಡಿಸಲು ವ್ಯಾಪಕ ಬೆಂಬಲ ವ್ಯಕ್ತವಾಗಿದೆ. ಜನರ ಪ್ರೀತಿ ಹಾಗೂ ನಂಬಿಕೆಯನ್ನು ಉಳಿಸಿಕೊಂಡು ಅಭಿವೃದ್ಧಿಗಾಗಿ ದುಡಿಯುತ್ತೇನೆ. ಭದ್ರಾವತಿ, ಶಿಕಾರಿಪುರ, ಸಾಗರ ಆಶ್ಚರ್ಯಕರ ರೀತಿಯಲ್ಲಿ ಬೈಂದೂರು ಮತ್ತು ಶಿವಮೊಗ್ಗ ಗ್ರಾಮಾಂತರದ ಕಾರ್ಯಕರ್ತರು ಹೆಚ್ಚಿನ ಸಂಖ್ಯೆಯಲ್ಲಿ ಸ್ವಯಂ ಪ್ರೇರಿತರಾಗಿ ಆಗಮಿಸಿ ಬೆಂಬಲ ವ್ಯಕ್ತಪಡಿಸಿದ್ದಾರೆ. ನಾನು ಭೇಟಿಯಾದ ಎಲ್ಲಾ ಗುರುಗಳಿಗೂ ನನಗೆ ಆಶೀರ್ವಾದ ಮಾಡಿದ್ದಕ್ಕೆ ಕೆಲವರು ಅಸಹನೆ ವ್ಯಕ್ತಪಡಿಸಿದ್ದಾರೆ. ಈ ಬಗ್ಗೆ ಗುರುಗಳು ನನ್ನ ಬಳಿ ತಮಗೆ ನೋವು ಕೊಟ್ಟರು ಎಂದು ಹೇಳಿಕೊಂಡಿದ್ದಾರೆ.

ಭದ್ರಾವತಿಯ ಬಿಸಿಯೂಟದ ಕಾರ್ಯಕರ್ತೆಯರ ಸಂಘದ ಅಧ್ಯಕ್ಷೆ ಹನುಮಕ್ಕ ಕೂಡ ಸಹಸ್ರಾರು ಹೋರಾಟಗಾರರೊಂದಿಗೆ ಬೆಂಬಲ ವ್ಯಕ್ತಪಡಿಸಿದ್ದಾರೆ. ಮೊದಲ ಬಾರಿಗೆ ನಾವು ಬೇರೆ ಪಕ್ಷದವರು ಆದರೂ ಕೂಡ ಕೇಸರಿ ಸಭೆಯಲ್ಲಿ ಭಾಗವಹಿಸುತ್ತಿದ್ದೇವೆ. ಯಾವ ಪಕ್ಷವಾದರೂ ನಮ್ಮ ಬೆಂಬಲ ಈಶ್ವರಪ್ಪನವರಿಗೆ ಎಂದಿದ್ದಾರೆ. ನನ್ನನ್ನು ಕೇಸರಿ ನಾಯಕ ಎಂದು ಒಪ್ಪಿಕೊಂಡಿದ್ದು ನನಗೆ ಸಂತಸ ತಂದಿದೆ ಎಂದರು.

ಎಂಪಿಎಂ, ವಿಐಎಸ್‍ಎಲ್ ಭದ್ರಾವತಿಯ ಎರಡು ಕಣ್ಣುಗಳಾಗಿದ್ದು, ಅದನ್ನು ನೀವು ಗೆದ್ದ ಮೇಲೆ ಪುನರುಜ್ಜೀವನ ಮಾಡಬೇಕು ಎಂದು ಬಹುತೇಕ ಕಾರ್ಮಿಕರು ಆಶಯ ವ್ಯಕ್ತಪಡಿಸಿ ಬೆಂಬಲ ಘೋಷಿಸಿದ್ದಾರೆ. ಅವರ ಆಸೆಯನ್ನು ಈಡೇರಿಸಲು ನಾನು ಗೆದ್ದ ಬಳಿಕ ಪ್ರಯತ್ನಿಸುತ್ತೇನೆ. ಮೊದಲ ಬಾರಿಗೆ ನಾನು ಆರ್‍ಎಸ್‍ಎಸ್ ಪ್ರಮುಖರ ಸೂಚನೆಯನ್ನು ಮೀರಿದ್ದೇನೆ. ನನ್ನ ಜೀವನದಲ್ಲಿ ನಾನು ಯಾವತ್ತೂ ಆರ್‍ಎಸ್‍ಎಸ್ ಸೂಚನೆಯನ್ನು ಮೀರಿದ್ದಲ್ಲ. ಅನೇಕ ಆರ್.ಎಸ್.ಎಸ್. ಹಿರಿಯರು ಮನೆಗೆ ಬಂದು ಹೇಳಿದಾಗ ಅವರ ಕಾಲಿಗೆ ಬಿದ್ದು ಕ್ಷಮೆ ಕೇಳಿ ನಡೆದ ಎಲ್ಲಾ ವಿಚಾರವನ್ನು ಅವರಿಗೆ ತಿಳಿಸಿದ್ದೇನೆ. ಅವರು ಸುಮ್ಮನಾಗಿ ವಾಪಾಸ್ಸು ತೆರಳಿದ್ದಾರೆ. ರಾಜ್ಯದಲ್ಲಿ ಬಿಜೆಪಿಯ ಸ್ಥಿತಿ ಬಗ್ಗೆ ಅಮಿತ್‍ಶಾ ಅವರಿಗೂ ವಿವರಿಸಿದ್ದೇನೆ. ಮೋದಿ ಪ್ರಧಾನಿಯಾಗುವುದು ಶತಸಿದ್ಧ ಅದನ್ನು ಯಾರು ತಪ್ಪಿಸಲು ಆಗುವುದಿಲ್ಲ. ಬಿಜೆಪಿ ನನ್ನ ತಾಯಿ ಇದ್ದ ಆಗೆ. ನಾನು ಗೆದ್ದು ಮತ್ತೆ ಬಿಜೆಪಿ ಸೇರುತ್ತೇನೆ. ಗೆಲ್ಲುವಿನ ವಿಶ್ವಾಸ ನನಗೆ ಈಗ ಬಂದಿದೆ ಎಂದರು.

ಈಗ ರಾಜ್ಯ ಬಿಜೆಪಿಯಲ್ಲಿ ಕಾಂಗ್ರೆಸ್ ಸಂಸ್ಕøತಿ ಮನೆ ಮಾಡಿದೆ. ಕುಟುಂಬ ರಾಜಕಾರಣ ಬಂದಿದೆ. ಅವರ ಹಿಂಬಾಲಕರಿಗೆ ಮಾತ್ರ ಸ್ಥಾನಮಾನಗಳು ಸಿಗುತ್ತಿವೆ ಎಂದು ಕಾರ್ಯಕರ್ತರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಆದ್ದರಿಂದ ಅನಿವಾರ್ಯವಾಗಿ ಪಕ್ಷವನ್ನು ರಾಜ್ಯದಲ್ಲಿ ಉಳಿಸಲು ನಾನು ಸ್ಪರ್ಧಿಸುತ್ತಿದ್ದೇನೆ ಎಂದರು.

ವಕೀಲ ಅಶೋಕ್‍ಭಟ್ ಮಾತನಾಡಿ, ಈಶ್ವರಪ್ಪನವರ ಸ್ಪರ್ಧೆ ನೇರವಾಗಿ ಹೈಕಮಾಂಡ್ ಆದೇಶ ಮಾಡಿದೆ ಎಂದು ನಮಗೆಲ್ಲ ಅನಿಸುತ್ತಿದೆ. ಅಧಿಕಾರ ಒಂದೇ ಕುಟುಂಬದ ಪಾಳ್ಯಗಾರಿಕೆಯಾಗಬಾರದು. ಕೆಲವರು ಪಕ್ಷ ಕಟ್ಟಿ, ಹೊರಗೆ ಹೋದರು ಆದರೆ ಈಶ್ವರಪ್ಪನವರು ಬಿಜೆಪಿ ಬಿಟ್ಟಿಲ್ಲ, ತತ್ವದ ಆಧಾರದ ಮೇಲೆ ನಿಂತಿದ್ದಾರೆ. ಅವರಿಗೆ ಮತ ಹಾಕಿದರೆ ಮೋದಿಗೆ ಹಾಕಿದಾಗೆ ಎಂದರು.
ವ್ಯವಸ್ಥೆ ಸರಿಪಡಿಸಲು ನಿಂತಿರುವ ಅವರಿಗೆ ಮತದಾರ ಧ್ವನಿಯಾಗಬೇಕು ಎಂದರು. ಅನ್ಯಾಯವಾದಾಗ ಪ್ರತಿಭಟಿಸದೆ ಇದ್ದರೆ ನಾವು ಕೂಡ ಅನ್ಯಾಯದಲ್ಲಿ ಭಾಗಿಯಾದಾಗೆಯಾಗುತ್ತದೆ ಎಂದರು.

ತಾಲ್ಲೂಕು ಬ್ರಾಹ್ಮಣ ಸಮಾಜದ ಅಧ್ಯಕ್ಷ ವೆಂಕಟೇಶ್ ಮಾತನಾಡಿ, ಶಿವಮೊಗ್ಗ ಜಿಲ್ಲೆಗೆ ಒಟ್ಟು 600 ಕೋಟಿ ರೂ.ಗಳನ್ನು ಪಕ್ಷ ಭೇದ ಮರೆತು ಯಾವುದೇ ಜಾತಿಯನ್ನು ನೋಡದೆ ಎಲ್ಲಾ ಸಮುದಾಯ ಭವನಗಳಿಗೆ ಹಾಗೂ ದೇವಾಲಯಗಳ ಜೀರ್ಣೋದ್ದಾರಕ್ಕೆ ತಂದವರು. ಹಿಂದುತ್ವದ ಒಂದು ಧ್ವನಿ ಅವರಿಗೆಯಾದ ಅನ್ಯಾಯ ಸರಿಪಡಿಸಬೇಕು ಎಂದರು.

ಮಹಾಲಿಂಗಶಾಸ್ತ್ರಿ, ಭದ್ರಾವತಿಯ ನಾಯಕ ಮಹೇಶ್‍ಕುಮಾರ್, ಅಂಗನವಾಡಿ ಕಾರ್ಯಕರ್ತೆಯರ ಮುಖಂಡೆ ಶಾರದಮ್ಮ , ವೀರಶೈವ ಪ್ರಮುಖರಾದ ರುದ್ರೇಶ್, ಜಗದೀಶ್‍ಪ್ಪ, ಶಿಕಾರಿಪುರದ ರುದ್ರೇಗೌಡ, ಹೆಚ್.ಎಸ್.ಬೂದಪ್ಪ, ಗಂಗಾಧರ್, ತೇಜು, ಇ.ಈಶ್ವಸ್, ಕೆ.ಇ.ಕಾಂತೇಶ್, ಛಲವಾದಿ ಸಮಾಜದ ಅಧ್ಯಕ್ಷ ಸುರೇಶ್, ಭೂಪಾಲ್ ಮತ್ತಿತರರು ಇದ್ದರು. ಈ ಸಂದರ್ಭದಲ್ಲಿ ಛಲವಾದಿ, ಜಂಗಮ, ವೀರಶೈವ, ವಿಷ್ಣುಸಮಾಜ, ಬ್ರಾಹ್ಮಣ ಸಮಾಜ, ಜೈನ ಸಮಾಜ, ಉಪ್ಪಾರ ಸಮಾಜ, ತಮಿಳು ಸಮಾಜ ಮುಖಂಡರು ಶುಭ ಹಾರೈಸಿ ಅಭಿನಂದಿಸಿದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Kalahamsa Infotech private limited

http://kalpa.news/wp-content/uploads/2024/02/VID-20240229-WA0026.mp4

    

Tags: K E KanteeshK S EshwarappaKannada News WebsiteLatest News KannadaLoksabha Eleciton 2024Political NewsShimogaShivamoggaShivamogga Newsಅಟಲ್ ಬಿಹಾರಿ ವಾಜಪೇಯಿಕೆ.ಎಸ್. ಈಶ್ವರಪ್ಪಪ್ರಧಾನಿ ನರೇಂದ್ರ ಮೋದಿಬಿಜೆಪಿಶಿವಮೊಗ್ಗ
Share197Tweet123Send
Previous Post

ಕೀಟ ನಾಶಕ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದ ಸಂಸದ ಗಣೇಶ್ ಮೂರ್ತಿ ನಿಧನ

Next Post

ಲೋಕಸಭಾ ಚುನಾವಣೆ: ಮೈಸೂರು-ಕೊಡಗು ಕ್ಷೇತ್ರದಲ್ಲಿ ಎಷ್ಟು ಮತದಾರರಿದ್ದಾರೆ?

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ಲೋಕಸಭಾ ಚುನಾವಣೆ: ಮೈಸೂರು-ಕೊಡಗು ಕ್ಷೇತ್ರದಲ್ಲಿ ಎಷ್ಟು ಮತದಾರರಿದ್ದಾರೆ?

ಲೋಕಸಭಾ ಚುನಾವಣೆ: ಮೈಸೂರು-ಕೊಡಗು ಕ್ಷೇತ್ರದಲ್ಲಿ ಎಷ್ಟು ಮತದಾರರಿದ್ದಾರೆ?

Leave a Reply Cancel reply

Your email address will not be published. Required fields are marked *

  • Trending
  • Latest
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

April 3, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
ಶಿವಮೊಗ್ಗ | ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ | ಕಾರ್ಕಳ ಮೂಲದ ವಿದ್ಯಾರ್ಥಿನಿ ದುರ್ಮರಣ

ಶಿವಮೊಗ್ಗ | ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ | ಕಾರ್ಕಳ ಮೂಲದ ವಿದ್ಯಾರ್ಥಿನಿ ದುರ್ಮರಣ

March 12, 2026
ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

January 16, 2026
ಕೃತಕ ಬುದ್ಧಿಮತ್ತೆ ಪ್ರಯೋಜನ ಪಡೆಯುವಾಗ ಎಚ್ಚರಿಕೆ ಅಗತ್ಯ: ಪ್ರೊ. ಶರತ್  ಅನಂತಮೂರ್ತಿ

ಕೃತಕ ಬುದ್ಧಿಮತ್ತೆ ಪ್ರಯೋಜನ ಪಡೆಯುವಾಗ ಎಚ್ಚರಿಕೆ ಅಗತ್ಯ: ಪ್ರೊ. ಶರತ್  ಅನಂತಮೂರ್ತಿ

April 11, 2026
ಸಿರಿಂಜ್ ಹಿಡಿಯುವ ಕೈ ಪೆನ್ನು ಹಿಡಿದಾಗ – ಆವೃತ್ತಿ ಎರಡು ಪುಸ್ತಕ ಬಿಡುಗಡೆ

ಸಿರಿಂಜ್ ಹಿಡಿಯುವ ಕೈ ಪೆನ್ನು ಹಿಡಿದಾಗ – ಆವೃತ್ತಿ ಎರಡು ಪುಸ್ತಕ ಬಿಡುಗಡೆ

April 11, 2026
ವಿದ್ಯಾರ್ಥಿಗಳ ಆವಿಷ್ಕಾರಾತ್ಮಕ ಯೋಚನೆಗಳಿಗೆ ನಾವೀನ್ಯತೆಯ ಸ್ಪರ್ಶ

ವಿದ್ಯಾರ್ಥಿಗಳ ಆವಿಷ್ಕಾರಾತ್ಮಕ ಯೋಚನೆಗಳಿಗೆ ನಾವೀನ್ಯತೆಯ ಸ್ಪರ್ಶ

April 11, 2026
ದ್ವಿತೀಯ ಪಿಯುಸಿ ಫಲಿತಾಂಶ | ಕ್ರೈಸ್ಟ್‌ಕಿಂಗ್‌ ವಿದ್ಯಾರ್ಥಿಗಳ ಅಭೂತಪೂರ್ವ ಸಾಧನೆ

ದ್ವಿತೀಯ ಪಿಯುಸಿ ಫಲಿತಾಂಶ | ಕ್ರೈಸ್ಟ್‌ಕಿಂಗ್‌ ವಿದ್ಯಾರ್ಥಿಗಳ ಅಭೂತಪೂರ್ವ ಸಾಧನೆ

April 11, 2026
ಜಾಗತಿಕ ತಾಪಮಾನ ನಿಯಂತ್ರಣ, ಭೂಮಿ ಹಸಿರು ಸಮತೋಲನಕ್ಕೆ ಆಧುನಿಕ ತಂತ್ರಜ್ಞಾನದ ಸಕ್ರಿಯ ಪಾತ್ರ ಅನಿವಾರ್ಯ

ಜಾಗತಿಕ ತಾಪಮಾನ ನಿಯಂತ್ರಣ, ಭೂಮಿ ಹಸಿರು ಸಮತೋಲನಕ್ಕೆ ಆಧುನಿಕ ತಂತ್ರಜ್ಞಾನದ ಸಕ್ರಿಯ ಪಾತ್ರ ಅನಿವಾರ್ಯ

April 10, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL