ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ಲೋಕಸಭಾ ಕ್ಷೇತ್ರ ನಾಲ್ಕು ಪ್ರಮುಖ ರಾಜ್ಯ ಹೆದ್ದಾರಿಗಳನ್ನು ನಾಲ್ಕು ಪಥದ ರಸ್ತೆಯನ್ನಾಗಿ ಅಭಿವೃದ್ಧಿ ಪಡಿಸಲು ಕೇಂದ್ರ ಸರ್ಕಾರ ಸಮ್ಮತಿ ನೀಡಿದ್ದು, ಎಲ್ಲ ರೀತಿಯ ನೆರವು ನೀಡುವುದಾಗಿ ತಿಳಿಸಿದೆ.
ಈ ಕುರಿತಂತೆ ಮಾಹಿತಿ ನೀಡಿರುವ ಸಂಸದ ಬಿ.ವೈ. ರಾಘವೇಂದ್ರ, MP Raghavendra ಜಿಲ್ಲೆ ಹಾಗೂ ನಮ್ಮ ಲೋಕಸಭಾ ಕ್ಷೇತ್ರ ವ್ಯಾಪ್ತಿಯ ನಾಲ್ಕು ರಾಜ್ಯ ಹೆದ್ದಾರಿಗಳನ್ನು ನಾಲ್ಕು ಪಥದ ರಸ್ತೆಗಳನ್ನಾಗಿ ಅಗಲೀಕರಣಗೊಳಿಸಲು ಕೇಂದ್ರ ಭೂಸಾರಿಗೆ ಸಚಿವ ನಿತಿನ್ ಗಡ್ಕರಿ ಅವರನ್ನು ಕೋರಲಾಗಿತ್ತು. ಇದಕ್ಕೆ ಸಕಾರಾತ್ಮಕವಾಗಿ ಸ್ಪಂದಿಸಿರುವ ಸಚಿವರು, ಈ ಹೆದ್ದಾರಿಗಳನ್ನು ಅಗಲೀಕರಣ ಮಾಡಿ, ಅಭಿವೃದ್ಧಿಪಡಿಸಲು ಒಪ್ಪಿಗೆ ಸೂಚಿಸಿದ್ದಾರೆ. ಕ್ಷೇತ್ರ ಹೆದ್ದಾರಿಗಳ ಸಂಪೂರ್ಣ ಅಭಿವೃದ್ಧಿಗೆ ಅನುದಾನ ಹಾಗೂ ತಾಂತ್ರಿಕ ಬೆಂಬಲ ನೀಡುತ್ತಿರು ಸಚಿವರಿಗೆ ಕ್ಷೇತ್ರದ ಜನತೆಯ ಪರಿವಾಗಿ ಧನ್ಯವಾದಗಳನ್ನು ಅವರು ತಿಳಿಸಿದ್ದಾರೆ.
ಯಾವೆಲ್ಲಾ ಹೆದ್ದಾರಿಗಳು ಅಭಿವೃದ್ಧಿಯಾಗಲಿವೆ?
1. ಶಿವಮೊಗ್ಗ- ಹೊನ್ನಾಳಿ- ಮಲೆಬೆನ್ನೂರು-ಹರಿಹರ-ಹರಪನಹಳ್ಳಿ-ಮರಿಯಮ್ಮನಹಳ್ಳಿ ರಸ್ತೆ
2. ಶಿವಮೊಗ್ಗ-ಶಿಕಾರಿಪು-ಹಾನಗಲ್-ತಡಸ ರಸ್ತೆ
3. ಆಯನೂರು-ರಿಪ್ಪನ್’ಪೇಟೆ-ಹುಂಚ-ತೀರ್ಥಹಳ್ಳಿ-ಮಾಸ್ತಿಕಟ್ಟೆ- ಕುಂದಾಪುರ ರಸ್ತೆ
4. ಸಾಗರ-ಸೊರಬ-ಶಿರಾಳಕೊಪ್ಪ-ಆನವಟ್ಟಿ ರಸ್ತೆ
Also read: ಶಿವಮೊಗ್ಗ ರಿಂಗ್ ರಸ್ತೆ ಬಾಕಿ 15 ಕಿಮೀ ಕಾಮಗಾರಿಗೆ ಕೇಂದ್ರ ಒಪ್ಪಿಗೆ: ಸಂಸದ ರಾಘವೇಂದ್ರ
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post