ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ವಿಧಾನಸಭಾ ಚುನಾವಣೆಯ ಪ್ರಚಾರದ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ PM Narendra Modi ಅವರು ಮೇ 7ರ ನಾಳೆ ಆಯನೂರಿನಲ್ಲಿ ನಡೆಯಲಿರುವ ಮೆಗಾ ಸಮಾವೇಶದಲ್ಲಿ ಪಾಲ್ಗೊಳ್ಳಲಿದ್ದಾರೆ.
ಲಕ್ಷಾಂತರ ಮಂದಿ ಈ ಸಮಾವೇಶದಲ್ಲಿ ಪಾಲ್ಗೊಳ್ಳುವ ನಿರೀಕ್ಷೆಯಿದ್ದು, ಪ್ರಧಾನಿಯವರು ಭದ್ರತಾ ದೃಷ್ಠಿಯಿಂದ ಈ ಸಮಾವೇಶಕ್ಕೆ ತೆರಳುವ ಸಾರ್ವಜನಿಕರಿಗೆ ಕೆಲವೊಂದು ವಸ್ತುಗಳನ್ನು ತೆಗೆದುಕೊಂಡು ಹೋಗುವುದನ್ನು ನಿರ್ಬಂಧಿಸಲಾಗಿದೆ.
ಯಾವೆಲ್ಲಾ ವಸ್ತುಗಳಿಗೆ ನಿರ್ಬಂಧ?
ಕಾರ್ಯಕ್ರಮಕ್ಕೆ ಬರುವ ಸಾರ್ವಜನಿಕರು ತಮ್ಮ ಮೊಬೈಲ್ ಫೋನ್ ಮತ್ತು ಪರ್ಸ್’ಗಳನ್ನು ಹೊರತು ಪಡಿಸಿ, ನೀರಿನ ಬಾಟಲಿ, ಬ್ಯಾಗ್, ಪೇಪರ್(ಚೀಟಿ), ಪೆನ್, ಕಪ್ಪು ಬಣ್ಣದ ಬಟ್ಟೆ / ಶರ್ಟ್ / ಕರವಸ್ತ್ರ, ಪ್ಲೇ ಕಾರ್ಡ್, ಬೆಂಕಿ ಪೊಟ್ಟಣ / ಲೈಟರ್, ಯಾವುದೇ ಸ್ಪೋಟಕ, ಅಪಾಯಕಾರಿ ವಸ್ತುಗಳು ಹಾಗೂ ಇತರೆ ಯಾವುದೇ ವಸ್ತುಗಳನ್ನು ತರುವಂತಿರುವುದಿಲ್ಲ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post