ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ಕೃಷಿ ನಮ್ಮ ದೇಶದ ಭವಿಷ್ಯವಾಗಿದ್ದು, ಕೃಷಿಗೆ ಎಂದಿಗೂ ಪ್ರಾಮುಖ್ಯತೆ ಇದೆ. ಕೃಷಿ ಮತ್ತು ತೋಟಗಾರಿಕೆ ಕೋರ್ಸ್ಗಳ ಬಗ್ಗೆ ವಿದ್ಯಾರ್ಥಿಗಳು ತಿಳಿದುಕೊಂಡು ಅದರ ಸದುಪಯೋಗ ಪಡೆಯಬೇಕೆಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಎಸ್. ಮಧು ಬಂಗಾರಪ್ಪ #Madhu Bangarappa ವಿದ್ಯಾರ್ಥಿಗಳಿಗೆ ತಿಳಿಸಿದರು.
ಕೆಳದಿ ಶಿವಪ್ಪನಾಯಕ ಕೃಷಿ ಮತ್ತು ತೋಟಗಾರಿಕೆ ವಿಶ್ವವಿದ್ಯಾಲಯ ಹಾಗೂ ಶಾಲಾ ಶಿಕ್ಷಣ ಇಲಾಖೆ(ಪದವಿಪೂರ್ವ),ಶಿವಮೊಗ್ಗ ಇವರ ಸಹಯೋಗದಲ್ಲಿ ಜೂ.29 ರಂದು ಕುವೆಂಪು ರಂಗಮಂದಿರದಲ್ಲಿ ಏರ್ಪಡಿಸಲಾಗಿದ್ದ ಕೃಷಿ ಶಿಕ್ಷಣ ಸುಗ್ಗಿ-2024 ಕಾರ್ಯ ಕ್ರಮ ಉದ್ಘಾಟಿಸಿ ಅವರುಮಾತನಾಡಿದರು.

ವಿದ್ಯಾರ್ಥಿಗಳು, ವಿಶೇಷವಾಗಿ ಪಿಯುಸಿ ಮುಗಿಸಿದ ವಿದ್ಯಾರ್ಥಿಗಳು ಕೃಷಿ, ತೋಟಗಾರಿಕೆ, ಅರಣ್ಯದಂತಹ ಪದವಿ-ಕೋರ್ಸ್ಗಳ ಬಗ್ಗೆ ತಿಳಿದುಕೊಳ್ಳಬೇಕು. ಈ ವೇದಿಕೆಯಲ್ಲಿ ಹಲವಾರು ಸಾಧಕರು, ಕೃಷಿ ತಜ್ಞರು ಕೃಷಿ ಕೋರ್ಸುಗಳು, ಉದ್ಯೋಗಾವಕಾಶಗಳ ಬಗ್ಗೆ ತಿಳಿಸಿಕೊಡಲಿದ್ದು, ವಿದ್ಯಾರ್ಥಿಗಳು ಕೃಷಿ ಕ್ಷೇತ್ರದಲ್ಲಿ ಸಾಧನೆ ಮಾಡಬೇಕೆಂಬ ಹಂಬಲ ಬೆಳೆಯುತ್ತದೆ.

ವಿದ್ಯಾರ್ಥಿಗಳೇ ದೇಶದ ಸಂಪನ್ಮೂಲ. ಯಾವುದೇ ವಿದ್ಯಾರ್ಥಿಗಳು ಎಸ್ಎಸ್ಎಲ್ಸಿ ಮತ್ತು ಪಿಯುಸಿಯಲ್ಲಿ ಅನುತ್ತೀರ್ಣರಾಗಬಾರದು ಹಾಗೂ ಉತ್ತಮ ಅಂಕ ಗಳಿಕೆಯ ಉದ್ದೇಶದಿಂದ ಮೂರು ಪರೀಕ್ಷೆಗಳನ್ನು ಮಾಡಿ ಅದರಲ್ಲಿ ಉತ್ತಮವಾಗಿ ಗಳಿಸಿದ ಅಂಕಗಳನ್ನು ಉಳಿಸಿಕೊಳ್ಳುವ ವ್ಯವಸ್ಥೆ ಪರಿಚಯಿಸಲಾಗಿದೆ. ಈ ವ್ಯವಸ್ಥೆ ರಾಷ್ಟ್ರದಲ್ಲೇ ಮೊದಲನೆ ಪ್ರಯತ್ನವಾಗಿದೆ. ಇದರಿಂದ ವಿದ್ಯಾರ್ಥಿಗಳು ಅನುತ್ತೀರ್ಣರಾಗುವ ಸಂಭವ ಕಡಿಮೆ ಇದ್ದು ಎಲ್ಲ ವಿದ್ಯಾರ್ಥಿಗಳಿಗೆ ಮುಂದಿನ ವಿದ್ಯಾಭ್ಯಾಸಕ್ಕೆ ಅನುಕೂಲಕರವಾಗಿದೆ.

Also read: ಗಮನಿಸಿ! ಈ ಎರಡು ದಿನ ಶಿವಮೊಗ್ಗ ನಗರದಲ್ಲಿ ನೀರು ಬರಲ್ಲ
ಆಡಳಿತ ಮಂಡಳಿ ಸದಸ್ಯರಾದ ಡಾ.ಪಿ.ಕೆ.ಬಸವರಾಜ್ ಮಾತನಾಡಿ, ವಿದ್ಯಾರ್ಥಿಗಳು ಕೃಷಿ ಕೋರ್ಸ್ಗಳನ್ನು ಮಾಡಿಕೊಂಡರೆ ಕೃಷಿ ಪರಿಕರ, ರಾಸಾಯನಿಕ ಗೊಬ್ಬರ, ಮಾರ್ಕೆಟಿಂಗ್ ಕಂಪೆನಿಗಳಲ್ಲಿ ಉದ್ಯೋಗಾವಕಾಶ ಲಭಿಸಲಿದೆ. ಗೊಬ್ಬರ ಸಂಶೋಧನೆಯಲ್ಲಿ ಸಹ ಕೃಷಿ ಪದವಿ ಪಡೆದವರಿಗೆ ಅವಕಾಶ ಲಭ್ಯವಿದೆ. ಸಾವಯವ ಗೊಬ್ಬರ ತಯಾರಿಕೆ ಮೂಲಕ ಸ್ವಂತ ಉದ್ದಿಮೆಗೆ ಅವಕಾಶವಿದೆ. ಸಾವಯವ ಕೃಷಿಗೆ ಸಹ ಉತ್ತೇಜನ ದೊರಕಲಿದೆ. ಹಾಗೂ ಸರ್ಕಾರದ ಸಹಾಯಧನ ಸೌಲಭ್ಯವನ್ನು ಬಳಸಿಕೊಳ್ಳಬಹುದಾಗಿದ್ದು, ಕೃಷಿ ಮತ್ತು ತೋಟಗಾರಿಕೆ ಕ್ಷೇತ್ರದಲ್ಲಿ ಉತ್ತಮ ಅವಕಾಶಗಳಿವೆ ಎಂದು ಮಾಹಿತಿ ನೀಡಿದರು.

ಶಿಕ್ಷಣ ನಿರ್ದೇಶಕ ಹೇಮ್ಲಾನಾಯ್ಕ ಪಿಯುಸಿ ವಿದ್ಯಾರ್ಥಿಗಳಿಗೆ ಕೃಷಿ ಶಿಕ್ಷಣ, ವಿವಿಧ ಕೃಷಿ ಕಾರ್ಯಕ್ರಮಗಳ ಕುರಿತು ಮಾಹಿತಿ, ಕೃಷಿ ಪದವಿಗೆ ಸೇರಲು ಬೇಕಾದ ಅರ್ಹತೆಗಳು, ಕೃಷಿ ಮತ್ತು ತೋಟಗಾರಿಕೆ, ಅರಣ್ಯ ಇತರೆ ಪದವಿ ಪಡೆದವರಿಗೆ ಇರುವ ಉದ್ಯೋಗಾವಕಾಶಗಳ ಕುರಿತು ಮಾಹಿತಿ ನೀಡಿದರು.
ಕಾರ್ಯಕ್ರಮದಲ್ಲಿ ವಿವಿಧ ಕಾಲೇಜುಗಳಿಗೆ ಕೃಷಿ ಕುರಿತು ಏರ್ಪಡಿಸಲಾಗಿದ್ದ ಸ್ಪರ್ಧೆಯಲ್ಲಿ ವಿಜೇತÀರಾದ ವಿದ್ಯಾರ್ಥಿಗಳಿಗೆ ಬಹುಮಾನ ವಿತರಿಸಲಾಯಿತು.

ಕೃಷಿ ಶಿಕ್ಷಣದ ಪ್ರಾಮುಖ್ಯತೆ ಮತ್ತು ಪಿಯುಸಿ ನಂತರ ಏನು? ಎಂಬ ಬಗ್ಗೆ ಪಿಪಿಟಿ ಪ್ರದರ್ಶನದ ಮೂಲಕ ವಿವರಸಿ, ವಿದ್ಯಾರ್ಥಿಗಳೊಂದಿಗೆ ಸಂವಾದ ನಡೆಸಿದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕೃಷಿ ವಿಶ್ವವಿದ್ಯಾಲಯದ ಕುಲಪತಿಗಳಾದ ಡಾ.ಆರ್.ಸಿ.ಜಗದೀಶ್ ವಹಿಸಿದ್ದರು. ಆಡಳಿತ ಮಂಡಳಿ ಸದಸ್ಯರಾದ ಡಾ.ಬಿ.ಕೆ.ಕುಮಾರಸ್ವಾಮಿ, ವಿಶ್ವವಿದ್ಯಾಲಯದ ಪ್ರಾಧ್ಯಾಪಕರು ಅಧಿಕಾರಿಗಳು, ಸಿಬ್ಬಂದಿಗಳು, ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news







Discussion about this post