ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ
ಶಿವಮೊಗ್ಗ: ಮಂಗಳೂರು ವಿಶ್ವವಿದ್ಯಾನಿಲಯ ಮಹಾಕವಿ ರತ್ನಾಕರವರ್ಣಿ ಅಧ್ಯಯನ ಪೀಠ ಹಾಗೂ ಕುವೆಂಪು ವಿಶ್ವ ವಿದ್ಯಾಲಯದ ಕನ್ನಡ ವಿಭಾಗವು ಮಾರ್ಚ್ 5ರ ನಾಳೆ ರತ್ನಾಕರವರ್ಣಿ ಭರತೇಶವೈಭವನ : ತಾತ್ವಿಕ ನಿಲುವುಗಳ ಮರುಪರಿಶೀಲನೆ ಎಂಬ ವಿಷಯದ ಕುರಿತು ನಗರದ ಸಹ್ಯಾದ್ರಿ ವಿಜ್ಞಾನ ಕಾಲೇಜಿನ ಪಾಥ್ವೇ ಸಭಾಂಗಣದಲ್ಲಿ ಒಂದು ದಿನದ ರಾಷ್ಟ್ರೀಯ ವಿಚಾರ ಸಂಕಿರಣವನ್ನು ಆಯೋಜಿಸಿದೆ.
ಕಾರ್ಯಕ್ರಮವನ್ನು ಅಂದು ಬೆಳಿಗ್ಗೆ 10:30ಕ್ಕೆ ಕುವೆಂಪು ವಿವಿಯ ಕುಲಪತಿ ಪ್ರೊ. ಬಿ.ಪಿ. ವೀರಭದ್ರಪ್ಪ ಉದ್ಘಾಟಿಸುವರು. ಬೆಂಗಳೂರು ವಿಶ್ವವಿದ್ಯಾಲಯದ ವಿದ್ವಾಂಸ ಡಾ. ರಾಜಪ್ಪ ದಳವಾಯಿ ಆಶಯ ಭಾಷಣ ಮಾಡುವರು. ಕಾಲೇಜಿನ ಪ್ರಾಚಾರ್ಯೆ ಪ್ರೊ. ಹೆಚ್.ಎಂ. ವಾಗ್ದೇವಿ ಅಧ್ಯಕ್ಷತೆ ವಹಿಸುವರು.
ಮಂಗಳೂರು ವಿಶ್ವವಿದ್ಯಾನಿಲಯದ ರತ್ನಾಕರವರ್ಣಿ ಅಧ್ಯಯನ ಪೀಠದ ಸಂಯೋಜಕ ಪ್ರೊ.ಸೋಮಣ್ಣ ಹೊಂಗಳ್ಳಿ, ಸಹ್ಯಾದ್ರಿ ಕಾಲೇಜು ಪಾಥ್ವೇ ಘಟಕದ ನಿರ್ದೇಶಕ ಡಾ. ಸಿ.ಕೆ.ರಮೇಶ್, ಕನ್ನಡ ವಿಭಾಗದ ಮುಖ್ಯಸ್ಥ ಡಾ. ಹಾ.ಮ. ನಾಗಾರ್ಜುನ ಉಪಸ್ಥಿತರಿರುವರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9481252093 – info@kalpa.news
Discussion about this post