No Result
View All Result
Rani KoHEnur Calls Transgender Bill “Absurd”, Questions Lawmakers in Explosive Podcast Interview
English Articles

Rani KoHEnur Calls Transgender Bill “Absurd”, Questions Lawmakers in Explosive Podcast Interview

by ಕಲ್ಪ ನ್ಯೂಸ್
April 9, 2026
0

Kalpa Media House  |  Mumbai | Artist, drag performer, and activist Rani KoHEnur (Sushant Divgikar) has ignited widespread conversation following...

Read moreDetails
RPF team Seized 40.495 Kgs Ganja at Ballari Railway station

RPF team Seized 40.495 Kgs Ganja at Ballari Railway station

April 7, 2026
ಶ್ರೀ ಕೊಟ್ಟೂರೇಶ್ವರ ಜಾತ್ರೆ ಪ್ರಯುಕ್ತ | ಹೊಸಪೇಟೆ – ತೊಳಹುಣಸೆ ನಡುವೆ ವಿಶೇಷ ರೈಲು ಸಂಚಾರ

Extension of Special Train Services to Manage Summer Rush

April 7, 2026
Interior / upgradation of Next-Generation Amrit Bharat Coaches. Sample coach ready

Interior / upgradation of Next-Generation Amrit Bharat Coaches. Sample coach ready

April 6, 2026
ಶ್ರೀ ಕೊಟ್ಟೂರೇಶ್ವರ ಜಾತ್ರೆ ಪ್ರಯುಕ್ತ | ಹೊಸಪೇಟೆ – ತೊಳಹುಣಸೆ ನಡುವೆ ವಿಶೇಷ ರೈಲು ಸಂಚಾರ

Special Train Between Bengaluru Cantt and Chennai

April 3, 2026
  • Advertise With Us
  • Grievances
  • About Us
  • Contact Us
Sunday, April 12, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ

ಟೂಲ್ ಕಿಟ್ ರಾಜಕೀಯ: ಭಾರತದ ಹೆಸರು ಹಾಳು ಮಾಡ ಹೊರಟಿರುವ ಕಾಂಗ್ರೆಸ್: ಎಸ್. ದತ್ತಾತ್ರಿ ಕಿಡಿ

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
May 24, 2021
in ಶಿವಮೊಗ್ಗ
0
ಸಣ್ಣ ಕೈಗಾರಿಕೆಗಳ ಅಭಿವೃದ್ಧಿ ನಿಗಮದ ಉಪಾಧ್ಯಕ್ಷರಾಗಿ ಎಸ್. ದತ್ತಾತ್ರಿ ನೇಮಕ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್

ಶಿವಮೊಗ್ಗ: ಇಡೀ ದೇಶಕ್ಕೆ ಸಂಕಷ್ಟ ಬಂದಿರುವ ಸಂದರ್ಭದಲ್ಲಿ ಕಾಂಗ್ರೆಸ್ ಪಕ್ಷ ತನ್ನ ಕೆಟ್ಟ ಬುದ್ಧಿಯನ್ನು ತೋರಿಸಿದೆ. ಕೊರೋನಾ ಸಂಕಷ್ಟದ ಈ ಸಂದರ್ಭವನ್ನು ತನ್ನ ಲಾಭವಾಗಿಟ್ಟುಕೊಂಡು ಪ್ರಧಾನಿ ನರೇಂದ್ರ ಮೋದಿಯವರನ್ನು ಹಾಗೂ ಬಿಜೆಪಿಯನ್ನು ಹೇಗೆ ಹಣಿಯಬೇಕೆಂದು ಕಾರ್ಯತಂತ್ರವನ್ನು ರೂಪಿಸಿ ಟೂಲ್ ಕಿಟ್ ಅನ್ನು ತಯಾರು ಮಾಡಿದೆ. ಇದು ಒಂದು ದುರಂತವೇ ಸರಿ ಎಂದು ರಾಜ್ಯ ಸಣ್ಣ ಕೈಗಾರಿಕೆ ಅಭಿವೃದ್ಧಿ ನಿಗಮ ನಿಯಮಿತದ ಉಪಾಧ್ಯಕ್ಷ ಎಸ್. ದತ್ತಾತ್ರಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಸಾರ್ವಜನಿಕರಿಗೆ ಬೆಡ್ ಸಿಗುತ್ತಿಲ್ಲ, ಆಕ್ಸಿಜನ್ ಸಿಗುತ್ತಿಲ್ಲ, ಔಷದಿಗಳು ಸರಿಯಾದ ಸಮಯಕ್ಕೆ ಲಭ್ಯವಿಲ್ಲ ಇಂತಹ ಸಂದರ್ಭದಲ್ಲಿ ಕಾಂಗ್ರೆಸ್ ಹೇಗಾದರೂ ಇದರ ಲಾಭ ಪಡೆದು ಅಧಿಕಾರದಲ್ಲಿರುವ ಬಿಜೆಪಿಗೆ ಅವಮಾನಿಸಬೇಕು ಹಾಗೂ ಅಂತರಾಷ್ಟ್ರೀಯ ಮಟ್ಟದಲ್ಲಿ ನಷ್ಟವನ್ನುಂಟುಮಾಡಬೇಕು ಎಂದು ಪ್ರಯತ್ನಿಸುತ್ತಿದೆ ಎಂದು ಅಭಿಪ್ರಾಯಪಟ್ಟಿದ್ದಾರೆ.

ದುರಂತವೆಂದರೆ ಈ ಸಂದರ್ಭದಲ್ಲಿ ದೇಶದಲ್ಲಿ ಎಲ್ಲಾ ಪಕ್ಷಗಳು ಜೊತೆಗೆ ನಿಂತು ಮನುಕುಲದ ಉಳಿವಿಗೆ ಹೊರಡಬೇಕು ಅನ್ನೋ ಸಮಷ್ಟಿ ಪ್ರಜ್ಞೆ, ಸದ್ಭಾವನೆ, ಜನತೆಗೆ ಕುರಿತಾದ ಒಂದು ಅಂತಃಕರಣ ಎಲ್ಲಾ ಪಕ್ಷದವರಿಗೂ ಇರಬೇಕು. ಏಕೆಂದರೆ ಜನತೆಯ ಸೇವೆಗಾಗಿಯೇ ಈ ಎಲ್ಲಾ ಪಕ್ಷಗಳು ಇರುವುದು. ಆದರೆ ಕಾಂಗ್ರೆಸ್ ಪಕ್ಷ ಸೇವೆಯ ಬದಲು ಟೂಲ್ ಕಿಟ್ ಮಾಡುತ್ತಿದೆ. ಹಾಗೂ ಸಾಕ್ಷಿ ಸಮೇತ ಇದು ರುಜುವಾತಾಗಿದೆ ಎಂದು ಆರೋಪಿಸಿದ್ದಾರೆ.

ಕಾಂಗ್ರೆಸ್ ತನ್ನ ಕಾರ್ಯಕರ್ತರಿಗೆ ಬರೆದಿರುವ ಪತ್ರದ (ಟೂಲ್ ಕಿಟ್)ಕೆಲ ವಿವರ ಈ ಕೆಳಗಿನಂತಿದೆ:
ಕೋವಿಡ್‌ನ ಈ ಹೊಸ ರೂಪಾಂತರಕ್ಕೆ “ಮೋದಿ ತಳಿ, ಭಾರತದ ತಳಿ” ಎಂದು ಹೆಸರಿಡುವುದು…
ಕುಂಭಮೇಳವನ್ನು “ಸೂಪರ್ ಸ್ಪೆಂಡರ್” ಎಂಬಂತೆ ಎಲ್ಲಾ ಮಾಧ್ಯಮಗಳಲ್ಲಿಯೂ ನಿರಂತರ ಸುದ್ದಿ ಬರುವಂತೆ ನೋಡಿಕೊಳ್ಳುವುದು.
ಈದ್ ಹಬ್ಬದಲ್ಲಿ ಭಾಗವಹಿಸಿದವರ ವಿರುದ್ಧ ಯಾವುದೇ ಸುದ್ದಿಗಳು ಬಾರದಂತೆ ನೋಡಿಕೊಳ್ಳುವುದು.
ಶವಸಂಸ್ಕಾರ ಅಥವಾ ಹೆಣ ಸುಡುವ ಸನ್ನಿವೇಶಗಳನ್ನು ಸಿನಿಮಾ ರೀತಿ ಚಿತ್ರಿಕರಿಸಿ ಮಾಧ್ಯಮಗಳು ಹಾಗೂ ಸಾಮಾಜಿಕ ಜಾಲತಾಣಗಳ ಮೂಲಕ ಬಿಜೆಪಿ ಸರ್ಕಾರದ ವಿರುದ್ಧ ಜನಾಕ್ರೋಶ ಹೆಚ್ಚಾಗುವಂತೆ ಮಾಡುವುದು.
ಪಿಎಂ ಕೇರ್‌ನಿಂದ ಬಂದಂತ ಹಣದಲ್ಲಿ ಸಪ್ಲೈ ಮಾಡಲಾಗಿರುವಂತಹ ವೆಂಟಿಲೇಟರ್‌ಗಳು “ಕಳಪೆಮಟ್ಟದ್ದು” ಎಂದು ಸೋಶಿಯಲ್ ಮೀಡಿಯಾದಲ್ಲಿ ಹರಿಬಿಡುವುದು.
ಬಿಜೆಪಿ ಗೆದ್ದ ಕ್ಷೇತಕ್ಕೆ ಹೆಚ್ಚು ವೆಂಟಿಲೇಟರ್ ಗಳನ್ನು ಕೊಟ್ಟು ಕಾಂಗ್ರೆಸ್ ಗೆದ್ದ ಕ್ಷೇತ್ರಕ್ಕೆ ವೆಂಟಿಲೇಟರ್ ಗಳನ್ನು ಕೊಡದೆ ಬಿಜೆಪಿ “ತಾರತಮ್ಯ ನೀತಿಯನ್ನು” ಅನುಸರಿಸುತ್ತಿದೆ ಎಂದು ಬಿಂಬಿಸುವುದು.
ವ್ಯವಸ್ಥಿತವಾಗಿ ಸುಳ್ಳು ಸುದ್ದಿಗಳನ್ನು, ಫೋಟೋಗಳನ್ನು ಅಂತರಾಷ್ಟ್ರೀಯ ಮಟ್ಟದಲ್ಲಿ ಟ್ವಿಟ್ಟರ್ ಅನ್ನು ಬಳಸಿ ಹೇಗೆ ಹರಡಬೇಕು ಅದರಿಂದ ಭಾರತ ಹಾಗೂ ಮೋದಿಯವರ ವ್ಯಕ್ತಿತ್ವವನ್ನು ಹೇಗೆ ಹಾಳು ಮಾಡಬೇಕು ಎನ್ನುವುದರ ಕುರಿತು ಸವಿಸ್ತಾರವಾದ ವರದಿಗಳು.

ಇಂತಹ ಹತ್ತು ಅಂಶಗಳನ್ನು ತನ್ನ ಕಾರ್ಯಕರ್ತರಿಗೆ ಕಾಂಗ್ರೆಸ್ ನೀಡಿದೆ. ಜೊತೆಗೆ “ಸೆಂಟ್ರಲ್ ವಿಸ್ತ” ಯೋಜನೆಯ ಬಗ್ಗೆ ಕಾಂಗ್ರೆಸ್ ಪ್ರಧಾನಿಯ ವಸತಿಗಾಗಿ ಹಣ ವ್ಯಯ ಮಾಡುತ್ತಿದೆ ಎಂದು ಆರೋಪಿಸಿ, ಇಷ್ಟೊಂದು ಹಣವನ್ನು ಅನಗತ್ಯವಾಗಿ ಖರ್ಚು ಮಾಡುತ್ತಿದ್ದಾರೆ ಈ ಹಣದಲ್ಲಿ ವ್ಯಾಕ್ಸಿನ್, ಆಕ್ಸಿಜನ್ ಖರೀದಿಸಬಹುದಿತ್ತು ಆಸ್ಪತ್ರೆಗಳನ್ನು ನಿರ್ಮಿಸಬಹುದಿತ್ತು ಅನ್ನುವಂತಹ ಸಂದೇಶವನ್ನು ರವಾನೆ ಮಾಡಲು ಕಾಂಗ್ರೆಸ್ ತಿಳಿಸಿದೆ ಎಂದು ಹೇಳಿದ್ದಾರೆ.

ಇನ್ನೊಂದು ಚಾಣಾಕ್ಷ ತಂತ್ರವೆಂದರೆ ಅವರ ಕಾರ್ಯಕರ್ತರಿಗೆ ಸೋಶಿಯಲ್ ಮೀಡಿಯಾಗಳಲ್ಲಿ ಮೊದಲಿಗೆ ಮೋದಿ ಅವರ ಅಭಿಮಾನಿಯಂತೆ ಹೆಚ್ಚು ಹೆಚ್ಚು ಮೋದಿಯವರ ಪರ ಟ್ವಿಟ್ ಮಾಡಿ ನಂತರ ಅವರಿಂದಲೇ ಮೋದಿಯ ವಿರುದ್ಧವಾಗಿ ಟ್ವೀಟ್ ಮಾಡಿಸಿ ಜನರನ್ನು ದಿಕ್ಕುತಾಪ್ಪಿಸುವಂತೆ ಸೂಚಿಸಿದೆ ಕಾಂಗ್ರೆಸ್. ಈ ಎಲ್ಲಾ ಅಂಶಗಳ ಕುರಿತು ಜೆ ಪಿ ನಡ್ಡ ಅವರು ಹಾಗೂ ಸಂಬಿತ್ ಪಾತ್ರಾ ಆರೋಪಿಸಿದ್ದಾರೆ ಎಂದು ದತ್ತಾತ್ರಿ ಹೇಳಿದ್ದಾರೆ.

ಆದರೆ ಕಾಂಗ್ರೆಸ್‌ನ ರೀಸರ್ಚರ್ ಹಾಗೂ ಸೋಶಿಯಲ್ ಮೀಡಿಯಾದ ಮುಖ್ಯಸ್ಥ ರಾಜೀವ್ ಗೌಡ ಇದನ್ನ ನಿರಾಕರಿಸಿದ್ದು, ಏನೇ ಆದರೂ ಈ ಸಂದರ್ಭದಲ್ಲಿ ಕಾಂಗ್ರೆಸ್ ಮನುಕುಲದ ಉಳಿವಿಗೆ ಹೊರಾಡಬೇಕು ಅನ್ನೋ ಸದ್ಭಾವನೆ ಇಟ್ಟುಕೊಂಡಿದ್ದರೆ ಇಂತ ಅನಗತ್ಯವಾದಂತ ಯಾವ ಆರೋಪಗಳು ಬರುತ್ತಿರಲಿಲ್ಲ, ಯಾವ ವಿವಾದವು ಇರುತ್ತಿರಲಿಲ್ಲ. ಪ್ರಾರಂಭದಿಂದ ಇಲ್ಲಿಯವರೆಗೂ ಕಾಂಗ್ರೆಸ್ ಇದನ್ನೇ ಮಾಡಿಕೊಂಡು ಬಂದಿದೆ. ಕಿಸಾನ್ ಆಂದೋಲನ ಸಂಧರ್ಭದಲ್ಲೂ ಇಂತಹದ್ದೇ ಅಪಪ್ರಚಾರದ ಟೂಲ್ ಕಿಟ್ ಸೃಷ್ಟಿಸಿದ್ದರು. ಈ ಎರಡು ಟೂಲ್ ಕಿಟ್ ದೇಶವಿರೋಧಿ ಟೂಲ್ ಕಿಟ್ ಆಗಿದೆ ಎಂದು ಹೇಳಿದ್ದಾರೆ.

ಇಂದಿನ ಸಂದರ್ಭದಲ್ಲಿ ಎಲ್ಲಾ ಪಕ್ಷಗಳು ಜೊತೆಯಲ್ಲಿ ಸೇರಿ ಈ ಕಂಟಕದಿಂದ ಪಾರಾಗುವ ಜವಾಬ್ದಾರಿ ಇದೆ. ಆದರೆ ಕಾಂಗ್ರೆಸ್ ಇದರಿಂದ ದೂರ ಉಳಿದು ದೇಶದ ನಾಗರಿಕರ ಅಂದರೆ ನಮ್ಮ ಬಂಧು ಬಳಗ, ನಮ್ಮ ಮಿತ್ರರ ಹೆಣದ ಫೋಟೋಗಳನ್ನು ಹಾಕಿ ಅದರ ಮೇಲೆ ಅಧಿಕಾರದ ಗದ್ದುಗೆ ಏರುವ ಕನಸು ಕಾಣುತ್ತಿದೆ. ಇಂತಹ ಒಂದು ದೊಡ್ಡ ಪಕ್ಷ, ಸ್ವತಂತ್ರ ಪೂರ್ವದ ಪಕ್ಷ ಶೋಚನೀಯ ಸ್ಥಿತಿಗೆ ತಲುಪಿ, ದೇಶದ್ರೋಹಿ ಟೂಲ್ ಕಿಟ್ ಮಾಡುವ ಕೆಳಮಟ್ಟಕ್ಕೆ ಇಳಿದು ಜನತೆಗೆ ನಂಬಿಕೆ ದ್ರೋಹ ಮಾಡಿದೆ. ಒಂದು ಅದ್ಭುತವಾದಂತಹ ವಿಶ್ವಾಸಾರ್ಹ ವಿರೋಧಪಕ್ಷ ಇರಬೇಕೆಂದು ದೇಶದ ಜನತೆ ಬಯಸಿದರೆ ಕಾಂಗ್ರೆಸ್ ಅದರ ಅರ್ಹತೆಯನ್ನೇ ಕಳೆದುಕೊಂಡಿದೆ ಎಂದು ತಿಳಿಸಿದ್ದಾರೆ.

ಇವರು ಏನೇ ಟೂಲ್ ಕಿಟ್ ಮಾಡಿದರು ಎಷ್ಟೇ ಅಪಪ್ರಚಾರ ಮಾಡಿದರು ದೇಶದ ಜನತೆಗೆ ಪ್ರಧಾನಿ ಮೋದಿಯವರ ನಿಸ್ವಾರ್ಥ ಸೇವೆಯ ಬಗ್ಗೆ ದೃಢವಾದ ನಂಬಿಕೆಯಿದೆ. ಹಾಗಾಗಿ ಕಾಂಗ್ರೆಸ್, ಕೋವಿಡ್‌ನ ನಿರ್ಮೂಲನೆಗಾಗಿ ಸಮಾಜದ ನಡುವೆ ಸೇವಾ ಕಾರ್ಯಗಳನ್ನು ಮಾಡಿ ಪುಣ್ಯ ಸಂಪಾದಿಸಿಕೊಳ್ಳಬೇಕೆ ಹೊರತು ಈ ರೀತಿ ಬಿಜೆಪಿಯ ಮೇಲೆ ನರೇಂದ್ರ ಮೋದಿಯವರ ಮೇಲೆ ಆರೋಪ ಮಾಡುವುದನ್ನು ನಿಲ್ಲಿಸಬೇಕೆಂದು ದತ್ತಾತ್ರಿ ಆಗ್ರಹಿಸಿದ್ದಾರೆ.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9481252093 – info@kalpa.news

Tags: Congress Tool KitCoronaKannada NewsKannada News LiveKannada News OnlineKannada News WebsiteKannada WebsiteLatest News KannadaLocal NewsMalnad NewsNews in KannadaNews KannadaPM Narendra ModiShimogaShivamoggaShivamogga Newsಕಾಂಗ್ರೆಸ್ ಟೂಲ್ ಕಿಟ್ಕೊರೋನಾಪ್ರಧಾನಿ ನರೇಂದ್ರ ಮೋದಿಮಲೆನಾಡು_ಸುದ್ಧಿಶಿವಮೊಗ್ಗಶಿವಮೊಗ್ಗ_ನ್ಯೂಸ್
Share197Tweet123Send
Previous Post

ಸಾಗರ: ಇಂದಿರಾ ಕ್ಯಾಂಟೀನ್ ಗೆ ಶಾಸಕ ಹರತಾಳು ಹಾಲಪ್ಪರಿಂದ ಚಾಲನೆ…

Next Post

ಆನಂದಪುರದಲ್ಲಿ ಮೇ 26ರಿಂದ ಒಂದು ವಾರ ಕಠಿಣ ಲಾಕ್‌ಡೌನ್…

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ಆನಂದಪುರದಲ್ಲಿ ಮೇ 26ರಿಂದ ಒಂದು ವಾರ ಕಠಿಣ ಲಾಕ್‌ಡೌನ್…

ಆನಂದಪುರದಲ್ಲಿ ಮೇ 26ರಿಂದ ಒಂದು ವಾರ ಕಠಿಣ ಲಾಕ್‌ಡೌನ್...

Leave a Reply Cancel reply

Your email address will not be published. Required fields are marked *

  • Trending
  • Latest
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

April 3, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
ಶಿವಮೊಗ್ಗ | ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ | ಕಾರ್ಕಳ ಮೂಲದ ವಿದ್ಯಾರ್ಥಿನಿ ದುರ್ಮರಣ

ಶಿವಮೊಗ್ಗ | ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ | ಕಾರ್ಕಳ ಮೂಲದ ವಿದ್ಯಾರ್ಥಿನಿ ದುರ್ಮರಣ

March 12, 2026
ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

January 16, 2026
ಶರಾವತಿ ಪಂಪ್ಡ್ ಸ್ಟೋರೇಜ್ ಯೋಜನೆ ವಿರೋಧಿಸಿ ಏ.16ರಂದು ಬೃಹತ್ ರ್‍ಯಾಲಿ

ಶರಾವತಿ ಪಂಪ್ಡ್ ಸ್ಟೋರೇಜ್ ಯೋಜನೆ ವಿರೋಧಿಸಿ ಏ.16ರಂದು ಬೃಹತ್ ರ್‍ಯಾಲಿ

April 11, 2026
ಶ್ರೀ ರವಿಶಂಕರ್ ಗುರೂಜಿಯವರ 70ನೇ ಜನ್ಮೋತ್ಸವ | ಏ.14ರಿಂದ ಆರು ದಿನ ವಿಶೇಷ ಸುದರ್ಶನ ಕ್ರಿಯಾ ಶಿಬಿರ

ಶ್ರೀ ರವಿಶಂಕರ್ ಗುರೂಜಿಯವರ 70ನೇ ಜನ್ಮೋತ್ಸವ | ಏ.14ರಿಂದ ಆರು ದಿನ ವಿಶೇಷ ಸುದರ್ಶನ ಕ್ರಿಯಾ ಶಿಬಿರ

April 11, 2026
ಉತ್ತಮ ವ್ಯಕ್ತಿತ್ವ ರೂಪಿಸುವುದೇ ಎನ್‌ಎಸ್‌ಎಸ್‌ ಮುಖ್ಯ ಉದ್ದೇಶ: ಶುಭ ಮರವಂತೆ ಅಭಿಪ್ರಾಯ

ಉತ್ತಮ ವ್ಯಕ್ತಿತ್ವ ರೂಪಿಸುವುದೇ ಎನ್‌ಎಸ್‌ಎಸ್‌ ಮುಖ್ಯ ಉದ್ದೇಶ: ಶುಭ ಮರವಂತೆ ಅಭಿಪ್ರಾಯ

April 11, 2026
ಪಾರಂಪರಿಕ ಕಲೆಯ ಪುನರುಜ್ಜೀವನ ಅಭಿನಂದನೀಯ: ಹೊಂದಾಸನ ಧರ್ಮಪ್ಪ ಮೆಚ್ಚುಗೆ

ಪಾರಂಪರಿಕ ಕಲೆಯ ಪುನರುಜ್ಜೀವನ ಅಭಿನಂದನೀಯ: ಹೊಂದಾಸನ ಧರ್ಮಪ್ಪ ಮೆಚ್ಚುಗೆ

April 11, 2026
ಕೃತಕ ಬುದ್ಧಿಮತ್ತೆ ಪ್ರಯೋಜನ ಪಡೆಯುವಾಗ ಎಚ್ಚರಿಕೆ ಅಗತ್ಯ: ಪ್ರೊ. ಶರತ್  ಅನಂತಮೂರ್ತಿ

ಕೃತಕ ಬುದ್ಧಿಮತ್ತೆ ಪ್ರಯೋಜನ ಪಡೆಯುವಾಗ ಎಚ್ಚರಿಕೆ ಅಗತ್ಯ: ಪ್ರೊ. ಶರತ್  ಅನಂತಮೂರ್ತಿ

April 11, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL