Saturday, July 5, 2025
  • Advertise With Us
  • Grievances
  • About Us
  • Contact Us
kalpa.news
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು
No Result
View All Result
kalpa.news
No Result
View All Result
Home ಜಿಲ್ಲೆ ಶಿವಮೊಗ್ಗ

ಟ್ರೈನಿ ವೈದ್ಯೆ ಅತ್ಯಾಚಾರ, ಹತ್ಯೆ ಪ್ರಕರಣ | ಸುಬ್ಬಯ್ಯ ಕಾಲೇಜಿನಲ್ಲಿ ವೈದ್ಯರಿಂದ ಒಂದು ದಿನ ಉಪವಾಸ ಸತ್ಯಾಗ್ರಹ

ನ್ಯಾಯಕ್ಕಾಗಿ ಹಾಗೂ ಮಹಿಳಾ ವೈದ್ಯೆಯರ ರಕ್ಷಣೆಗಾಗಿ ಕಾಲೇಜಿನಲ್ಲಿ ಧರಣಿ | ಐಎಂಎ ಸಹಯೋಗ

October 15, 2024
in ಶಿವಮೊಗ್ಗ
0 0
0
Share on facebookShare on TwitterWhatsapp
Read - 3 minutes

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ  |

ಕೋಲ್ಕತ್ತಾದ ಆರ್ ಜಿ ಕಾರ್ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯಲ್ಲಿ ಕಳೆದ ತಿಂಗಳು ನಡೆದ ಟ್ರೈನಿ ವೈದ್ಯೆ ಮೇಲಿನ ಅತ್ಯಾಚಾರ ಹಾಗೂ ಹತ್ಯೆ ಪ್ರಕರಣದಲ್ಲಿ #Tainee Doctor Rape and Murder Case ನ್ಯಾಯಕ್ಕಾಗಿ ಒತ್ತಾಯಿಸಿ ಸುಬ್ಬಯ್ಯ ವೈದ್ಯಕೀಯ ಕಾಲೇಜು ಆಸ್ಪತ್ರೆ ಹಾಗೂ ಐಎಂಎ ಶಿವಮೊಗ್ಗ ವತಿಯಿಂದ ಪ್ರತಿಭಟನೆ ನಡೆಸಿ, ನೈತಿಕ ಬೆಂಬಲ ಘೋಷಿಸಲಾಯಿತು.

ಈ ವೇಳೆ ಮಾತನಾಡಿದ ಡಾ. ಹರೀಶ್ ದೆಲಂತಬೆಟ್ಟು, ಯಾವುದೇ ಪ್ರಕರಣದಲ್ಲಿ ನ್ಯಾಯಾಲಯಕ್ಕೆ ಸತ್ಯ ಗೊತ್ತಿದ್ದರೂ, ಸಾಕ್ಷಿ ಹಾಗೂ ಆಧಾರ ಸರಿಯಾಗಿ ಇಲ್ಲದೇ ಇದ್ದರೆ ಏನೂ ಮಾಡಲು ಸಾಧ್ಯವಿಲ್ಲ. ಇಂತಹ ಸಂದರ್ಭದಲ್ಲಿ ಟ್ರೈನಿ ವೈದ್ಯೆ ಅತ್ಯಾಚಾರ ಹಾಗೂ ಹತ್ಯೆ ಪ್ರಕರಣದಲ್ಲಿ ಸಾಕ್ಷಿಗಳನ್ನು ನಾಶ ಮಾಡಲಾಗಿದೆ. ಹೀಗಿರುವಾಗ ನ್ಯಾಯ ಹೇಗೆ ಸಿಗುತ್ತದೆ ಎಂದು ಪ್ರಶ್ನಿಸಿದರು.
ಘಟನೆ ನಡೆದ ದಿನ ಅಲ್ಲಿ ಏನಾಯಿತು ಎಂಬುದು ಯಾರಿಗೂ ತಿಳಿದಿಲ್ಲ. ಯಾರನ್ನೋ ಅಪರಾಧಿಯನ್ನಾಗಿ ಮಾಡಲಾಗಿದ್ದು, ಸಿಸಿಟಿವಿ ಸೇರಿದಂತೆ ಹಲವು ಸಾಕ್ಷಿಗಳನ್ನು ನಾಶ ಮಾಡಲಾಗಿದೆ. ಇಂತಹ ಘಟನೆಗಳಲ್ಲಿ ಸಿಸಿಟಿವಿ ದೃಶ್ಯಗಳೇ ಪ್ರಮುಖ ಆಧಾರವಾಗುತ್ತವೆ. ಆದರೆ, ಇಲ್ಲಿ ಇಂತಹ ಸಾಕ್ಷಿಗಳನ್ನೇ ನಾಶ ಮಾಡಿರುವುದು ಆತಂಕಕ್ಕೆ ಕಾರಣವಾಗಿದೆ ಎಂದರು.

Also read: ‘ಪಂಚಮಿ ಪುರಸ್ಕಾರ-2025’ ಪ್ರಶಸ್ತಿಗೆ ನಟ ಮಂಡ್ಯ ರಮೇಶ್ ಆಯ್ಕೆ

ಅಲ್ಲಿ ನಡೆದ ಘಟನೆ ಬಗ್ಗೆ ಇಲ್ಲಿ ನಮಗೇ ನೋವಾಗಿದೆ. ಹೀಗಿರುವಾಗ ಆಕೆಯ ಜೊತೆಯಲ್ಲಿ ಕೆಲಸ ಮಾಡಿದವರಿಗೆ ಎಷ್ಟು ನೋವಾಗಿರುತ್ತದೆ. ಹೀಗಾಗಿಯೇ ಅವರು ನ್ಯಾಯಕ್ಕಾಗಿ ಆಮರಣಾಂತ ಉಪವಾಸ ಸತ್ಯಾಗ್ರಹ ಮಾಡುತ್ತಾ, ಬಲಿದಾನಕ್ಕೂ ಸಹ ಸಿದ್ದರಾಗಿದ್ದಾರೆ. ಇದರಿಂದ ಕೆಲವರ ಆರೋಗ್ಯದಲ್ಲೂ ಸಹ ವ್ಯತ್ಯಾಸವಾಗಿದೆ. ಇದಕ್ಕೆ ಪೂರಕವಾಗಿ ನ್ಯಾಯ ದೊರೆಯಬೇಕು, ಮಹಿಳಾ ವೈದ್ಯೆಯರಿಗೆ, ಮಹಿಳಾ ಸಿಬ್ಬಂದಿಗಳಿಗೆ ರಕ್ಷಣೆ ನೀಡುವ ಕಠಿಣ ನಿಯಮ ಜಾರಿಗಬೇಕು ಎಂದು ದೇಶದಲ್ಲಿ ನಡೆಯುತ್ತಿರುವ ಪ್ರತಿಭಟನೆಗೆ ನಾವೂ ಸಹ ನೈತಿಕ ಬೆಂಬಲ ನೀಡುತ್ತಿದ್ದೇವೆ ಎಂದರು.

ಕಾಲೇಜಿನ ಡೀನ್ ಡಾ.ವಿನಾಯಕ್ ಮಾತನಾಡಿ, ಇಂತಹ ಅಮಾನುಷ ಕೃತ್ಯವನ್ನು ಖಂಡಿಸಬೇಕಾದ್ದು ನಮ್ಮೆಲ್ಲರ ಕರ್ತವ್ಯ. ಈ ರೀತಿಯ ಪೈಶಾಚಿಕ ಕೃತ್ಯಗಳು ಭವಿಷ್ಯದಲ್ಲಿ ನಡೆಯದಂತೆ, ಮಹಿಳಾ ವೈದ್ಯೆಯರು ಹಾಗೂ ಸಿಬ್ಬಂದಿಗಳಿಗೆ ಸರ್ಕಾರ ಸುರಕ್ಷತೆಯನ್ನು ಖಾತ್ರಿ ಪಡಿಸಬೇಕು. ಇದಕ್ಕಾಗಿ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದರು.

ಸಿಮ್ಸ್ ವೈದ್ಯಕೀಯ ಅಧೀಕ್ಷಕ ಡಾ. ಶ್ರೀಧರ್ ಮಾತನಾಡಿ, ಟ್ರೈನಿ ವೈದ್ಯೆ ಹತ್ಯೆ ಪ್ರಕರಣದಲ್ಲಿ ನ್ಯಾಯಕ್ಕಾಗಿ ದೇಶದಾದ್ಯಂತ ತಿಂಗಳುಗಳಿಂದ ನಡೆಯುತ್ತಿದ್ದರೂ ಸರ್ಕಾರ ಸರಿಯಾಗಿ ಸ್ಪಂದನೆ ನೀಡಿಲ್ಲ. ಹೀಗಾಗಿ, ಆಮರಣಾಂತ ಉಪವಾಸ ಸತ್ಯಾಗ್ರಹ ದೇಶದಾದ್ಯಂತ ನಡೆಯುತ್ತಿದೆ. ಈ ರೀತಿಯ ನಡೆಯುತ್ತಿರುವ ಪ್ರತಿಭಟನೆಗೆ ನೈತಿಕ ಬೆಂಬಲ ನೀಡುವ ಉದ್ದೇಶದಿಂದ ನಾವೂ ಸಹ ಪ್ರತಿಭಟನೆ ನಡೆಸುತ್ತಿದ್ದು, ಹಲವರು ಉಪವಾಸ ಸತ್ಯಾಗ್ರಹ ನಡೆಸುತ್ತಿದ್ದಾರೆ. ಮಹಿಳಾ ವೈದ್ಯೆಯರ ಹಾಗೂ ಸಿಬ್ಬಂದಿಗಳ ಸುರಕ್ಷತೆಗಾಗಿ ಸರ್ಕಾರ ಕಠಿಣ ನಿಯಮ ರೂಪಿಸಿ ಜಾರಿಗೆ ತರಬೇಕು ಎಂಬ ಬೇಡಿ ಈಡೇರುವವರೆಗೂ ನಮ್ಮ ಪ್ರತಿಭಟನೆ ಹಾಗೂ ನೈತಿಕ ಬೆಂಬಲ ಮುಂದುವರೆಯುತ್ತದೆ ಎಂದರು.
ಇನ್ನು, ಸುಬ್ಬಯ್ಯ ವೈದ್ಯಕೀಯ ಕಾಲೇಜಿನಲ್ಲಿ ಬೆಳಗ್ಗೆ 6ರಿಂದ ಸಂಜೆ 6 ರವರೆಗೆ ಹತ್ತಕ್ಕೂ ಹೆಚ್ಚು ವೈದ್ಯರು ಉಪವಾಸ ಸತ್ಯಾಗ್ರಹದಲ್ಲಿ ನಿರತರಾಗಿದ್ದಾರೆ. ಸತ್ಯಾಗ್ರಹ ನಿರತ ವೈದ್ಯರಿಗೆ ಸುಬ್ಬಯ್ಯ ವೈದ್ಯಕೀಯ ಕಾಲೇಜು,ಆಸ್ಪತ್ರೆಯ ವೈದ್ಯರು ಹಾಗೂ ಐಎಂಎ ವೈದ್ಯರು ನೈತಿಕ ಬೆಂಬಲ ಘೋಷಿಸಿದ್ದಾರೆ.

ಆಗಸ್ಟ್ 9 ರಂದು 31 ವರ್ಷದ ಟ್ರೈನಿ ಡಾಕ್ಟರ್ ಮೇಲೆ ಅತ್ಯಾಚಾರವೆಸಗಿ, ಕೊಂದ ನಂತರ ರಾಷ್ಟ್ರವ್ಯಾಪಿ ಪ್ರತಿಭಟನೆ ನಡೆಯುತ್ತಿದೆ. ಈ ಸಂಬಂಧ ಸಂತ್ರಸ್ತೆ ವ್ಯಾಸಂಗ ಮಾಡುತ್ತಿದ್ದ ಕಾಲೇಜಿನ ಮಾಜಿ ಪ್ರಾಂಶುಪಾಲರೊಂದಿಗೆ ಶಂಕಿತ ಆರೋಪಿಯನ್ನು ಬಂಧಿಸಲಾಗಿದೆ. ಕರ್ತವ್ಯದಲ್ಲಿದ್ದ ಯುವ ಟ್ರೈನಿ ಡಾಕ್ಟರ್ ಮೇಲೆ ಮಾಡಿದ ಈ ಘೋರ ಅಪರಾಧದ ಸುದ್ದಿಯು ನಮ್ಮಲ್ಲಿ ಪ್ರತಿಯೊಬ್ಬರನ್ನು ಮಾನವ ಜೀವನದ ಕಡೆಗಣನೆಯಿಂದ ಬೆಚ್ಚಿ ಬೀಳಿಸಿದೆ.

http://kalpa.news/wp-content/uploads/2024/04/VID-20240426-WA0008.mp4

ಸುಬ್ಬಯ್ಯ ದಂತ ವೈದ್ಯಕೀಯ ಕಾಲೇಜಿನ ಕಾರ್ಯನಿರ್ವಾಹಕ ನಿರ್ದೇಶಕರೂ, ಶಿವಮೊಗ್ಗ ಐಎಂಎ ಕಾರ್ಯದರ್ಶಿಗಳು ಆದ ಡಾ. ವಿನಯ ಶ್ರೀನಿವಾಸ್, ಪ್ರೊಫೆಸರ್ ಡಾ.ಶುಭ್ರತಾ ಸೇರಿದಂತೆ ಹಲವರು ಇದ್ದರು.

ಡಾ. ದಯಾನಂದ ಸಾಗರ್, ಡಾ.ಎಂ.ಆರ್. ರಾಗಶ್ರೀ, ಡಾ. ಸ್ವಾತಿ, ಡಾ. ಲಾವಣ್ಯ ಎಸ್. ಪೂಜಾರ್, ಡಾ.ಜೆಯೀನ್, ಡಾ. ಅರ್ಶಾನಾ, ಡಾ. ರಿಯಾಜ್ ಅಹ್ಮದ್, ಡಾ. ಶ್ರೇಯಸ್ ಹರೀಶ್, ಅನೀಶ್ ಫಾತಿಮಾ ಅವರುಗಳು ಇಂದು ಮುಂಜಾನೆ 6 ಗಂಟೆಯಿಂದ ಸಂಜೆ 6 ಗಂಟೆಯವರೆಗೂ ಉಪವಾಸ ಸತ್ಯಾಗ್ರಹ ನಡೆಸುವ ಮೂಲಕ ದೇಶವ್ಯಾಪಿ ನಡೆಯುತ್ತಿರುವ ಪ್ರತಿಭಟನೆ ನೈತಿಕ ಬೆಂಬಲ ಸೂಚಿಸಿದ್ದಾರೆ.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news                                                     

Tags: Kannada_NewsKannada_News_LiveKannada_News_Online ShivamoggaKannada_WebsiteKannadaNewsWebsiteLatestNewsKannadaLocalNewsMalnadNewsNews_in_KannadaNews_KannadaShimogaShivamoggaNewsTainee Doctor Rape and Murder Caseಟ್ರೈನಿ ವೈದ್ಯೆ ಅತ್ಯಾಚಾರ ಹಾಗೂ ಹತ್ಯೆ ಪ್ರಕರಣಮಲೆನಾಡು_ಸುದ್ಧಿಶಿವಮೊಗ್ಗಶಿವಮೊಗ್ಗ_ನ್ಯೂಸ್
Previous Post

‘ಪಂಚಮಿ ಪುರಸ್ಕಾರ-2025’ ಪ್ರಶಸ್ತಿಗೆ ನಟ ಮಂಡ್ಯ ರಮೇಶ್ ಆಯ್ಕೆ

Next Post

ಎನ್ ಐಎಗೆ ನೀಡಿರುವ ಪ್ರಕರಣ ವಾಪಸ್ ಪಡೆಯಲು ರಾಜ್ಯ ಸರ್ಕಾರಕ್ಕೆ ಅಧಿಕಾರ ಇಲ್ಲ: ಬಸವರಾಜ ಬೊಮ್ಮಾಯಿ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post

ಎನ್ ಐಎಗೆ ನೀಡಿರುವ ಪ್ರಕರಣ ವಾಪಸ್ ಪಡೆಯಲು ರಾಜ್ಯ ಸರ್ಕಾರಕ್ಕೆ ಅಧಿಕಾರ ಇಲ್ಲ: ಬಸವರಾಜ ಬೊಮ್ಮಾಯಿ

Discussion about this post

ಆಡಿಯನ್ಸ್ ಪೋಲ್

ಹಿಜಾಬ್ ವಿವಾದ/ಗಲಭೆ ಮತಾಂಧ ಶಕ್ತಿಗಳ ಷಡ್ಯಂತ್ರವೇ?

View Results

Loading ... Loading ...
https://kalahamsa.in/services/ https://kalahamsa.in/services/ https://kalahamsa.in/services/

Recent News

ತೀರ್ಥಹಳ್ಳಿ | ಕೋಣೆ ಒಳಗೆ ಸೇರಿವೆ ಶಾಲಾ ಮಕ್ಕಳಿಗಾಗಿ ಬಂದಿರುವ ಬ್ಯಾಗ್

July 5, 2025

ಗಮನಿಸಿ! ಈ ದಿನಗಳು ಅರಸೀಕೆರೆ-ಮೈಸೂರು, ಬೆಂಗಳೂರು-ಮೈಸೂರು ಪ್ಯಾಸೆಂಜರ್ ರೈಲುಗಳು ರದ್ದು

July 5, 2025

ವಿದ್ಯುತ್ ಕಂಬಕ್ಕೆ ಕಾರು ಡಿಕ್ಕಿ | ತಪ್ಪಿದ ಭಾರೀ ಅನಾಹುತ

July 5, 2025

134ನೇ ಫುಟ್ಬಾಲ್ ದುರಂದ್ ಕಪ್’ಗೆ ರಾಷ್ಟ್ರಪತಿಗಳಿಂದ ಚಾಲನೆ | ಏನಿದರ ವಿಶೇಷ?

July 5, 2025
kalpa.news

Reproduction, in whole or in part, in any form or medium without the express written permission of Kapla News is strictly prohibited.

Follow Us

Browse by Category

  • Army
  • Counter
  • Editorial
  • English Articles
  • Others
  • Photo Gallery
  • Small Bytes
  • Special Articles
  • video
  • ಅಂಕಣ
  • ಅಜೇಯ್ ಕಿರಣ್ ಆಚಾರ್
  • ಅಂತಾರಾಷ್ಟ್ರೀಯ
  • ಅಧ್ಯಾತ್ಮ ಸಾಧನೆ
  • ಆನಂದ ಕಂದ
  • ಆರೋಗ್ಯ – ಜೀವನ ಶೈಲಿ
  • ಇದೊಂದು ಜಗತ್ತು
  • ಉಡುಪಿ
  • ಉತ್ತರ ಕನ್ನಡ
  • ಕಲಬುರಗಿ
  • ಕೈ ರುಚಿ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕ ಬಳ್ಳಾಪುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜಾಬ್-ಸ್ಟ್ರೀಟ್
  • ಜಿಲ್ಲೆ
  • ಜ್ಯೋತಿರ್ವಿಜ್ಞಾನ
  • ಡಾ.ಗುರುರಾಜ ಪೋಶೆಟ್ಟಿಹಳ್ಳಿ
  • ತೀರ್ಥಹಳ್ಳಿ
  • ತುಮಕೂರು
  • ದಕ್ಷ
  • ದಕ್ಷಿಣ ಕನ್ನಡ
  • ದಾವಣಗೆರೆ
  • ಧಾರವಾಡ
  • ನಾದ ಕಲ್ಪ
  • ನಿತ್ಯಾನಂದ ವಿವೇಕವಂಶಿ
  • ಪೀಪಲ್ ರಿಪೋರ್ಟಿಂಗ್
  • ಪುನೀತ್ ಜಿ. ಕೂಡ್ಲೂರು
  • ಪುರಾಣ ಮತ್ತು ಚರಿತ್ರೆ
  • ಪ್ರಕಾಶ್ ಅಮ್ಮಣ್ಣಾಯ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂ. ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಭದ್ರಾವತಿ
  • ಮಂಡ್ಯ
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಮನಗರ
  • ರಾಯಚೂರು
  • ರಾಷ್ಟ್ರೀಯ
  • ಲೈಫ್-ಸ್ಟೈಲ್
  • ವಾಣಿಜ್ಯ
  • ವಿಜಾಪುರ
  • ವಿಜ್ಞಾನ-ತಂತ್ರಜ್ಞಾನ
  • ವಿನಯ್ ಶಿವಮೊಗ್ಗ
  • ವೈದ್ಯೋ ನಾರಾಯಣೋ ಹರಿಃ
  • ವೈಶಿಷ್ಟ್ಯ
  • ಶಿಕಾರಿಪುರ
  • ಶಿವಮೊಗ್ಗ
  • ಸಚಿನ್ ಪಾರ್ಶ್ವನಾಥ್
  • ಸಾಗರ
  • ಸಿನೆಮಾ
  • ಸೊರಬ
  • ಹಾವೇರಿ
  • ಹಾಸನ
  • ಹೊಸನಗರ

Recent News

ತೀರ್ಥಹಳ್ಳಿ | ಕೋಣೆ ಒಳಗೆ ಸೇರಿವೆ ಶಾಲಾ ಮಕ್ಕಳಿಗಾಗಿ ಬಂದಿರುವ ಬ್ಯಾಗ್

July 5, 2025

ಗಮನಿಸಿ! ಈ ದಿನಗಳು ಅರಸೀಕೆರೆ-ಮೈಸೂರು, ಬೆಂಗಳೂರು-ಮೈಸೂರು ಪ್ಯಾಸೆಂಜರ್ ರೈಲುಗಳು ರದ್ದು

July 5, 2025

ವಿದ್ಯುತ್ ಕಂಬಕ್ಕೆ ಕಾರು ಡಿಕ್ಕಿ | ತಪ್ಪಿದ ಭಾರೀ ಅನಾಹುತ

July 5, 2025
  • About
  • Advertise
  • Privacy & Policy
  • Contact

© 2025 Kalpa News - All Rights Reserved | Powered by Kalahamsa Infotech Pvt. ltd.

No Result
View All Result
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು

© 2025 Kalpa News - All Rights Reserved | Powered by Kalahamsa Infotech Pvt. ltd.

Welcome Back!

Login to your account below

Forgotten Password?

Create New Account!

Fill the forms below to register

All fields are required. Log In

Retrieve your password

Please enter your username or email address to reset your password.

Log In
error: Content is protected by Kalpa News!!