No Result
View All Result
26 ವರ್ಷದ ಯುವಕನಿಗೆ ಮರುಜೀವ ಕೊಟ್ಟ ಮೆಡಿಕವರ್ ಆಸ್ಪತ್ರೆ | ಏನಾಗಿತ್ತು ಯುವಕನಿಗೆ?
English Articles

Critical Condition Turned Around with Timely Medical Intervention

by ಕಲ್ಪ ನ್ಯೂಸ್
March 27, 2026
0

Kalpa Media House  |  Bengaluru(WhiteFiled)  | A 26-year-old man from West Bengal, who had been suffering from a serious condition...

Read moreDetails
Yogada Satsang Society brings out Kannada version on Kriya Yoga today

Yogada Satsang Society brings out Kannada version on Kriya Yoga today

March 25, 2026
Sagara Engulfed In The Ocean of Music

Sagara Engulfed In The Ocean of Music

March 23, 2026
MAHE Introduces ‘MAGIC’ to Power AI-Driven Academic and Administrative Transformation

MAHE Introduces ‘MAGIC’ to Power AI-Driven Academic and Administrative Transformation

March 23, 2026
Manipal Institute of Technology, Manipal Concludes NCIIPC–AICTE Pentathon 2026 Advanced Cybersecurity Bootcamp

Manipal Institute of Technology, Manipal Concludes NCIIPC–AICTE Pentathon 2026 Advanced Cybersecurity Bootcamp

March 18, 2026
  • Advertise With Us
  • Grievances
  • About Us
  • Contact Us
Saturday, March 28, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ

ಈಸೂರು ಗ್ರಾಮದಲ್ಲಿ ಕಲ್ಯಾಣ ಚಾಲುಕ್ಯರ ಎರಡು ಶಾಸನಗಳು ಪತ್ತೆ

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
April 16, 2021
in ಶಿವಮೊಗ್ಗ
0
ಈಸೂರು ಗ್ರಾಮದಲ್ಲಿ ಕಲ್ಯಾಣ ಚಾಲುಕ್ಯರ ಎರಡು ಶಾಸನಗಳು ಪತ್ತೆ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್

ಶಿವಮೊಗ್ಗ: ಜಿಲ್ಲೆ ಶಿಕಾರಿಪುರ ತಾಲ್ಲೂಕಿನ ಈಸೂರು ಗ್ರಾಮದಲ್ಲ್ಲಿ ಪುರಾತತ್ವ ಸಂಗ್ರಹಾಲಯಗಳು ಮತ್ತು ಪರಂಪರೆ ಇಲಾಖೆ ಸಹಾಯಕ ನಿರ್ದೇಶಕ ಆರ್. ಶೇಜೇಶ್ವ್ವರ ಅವರು, ತಾಲ್ಲೂಕು ಪಂಚಾಯತಿ ಸದಸ್ಯ ಈಸೂರು ಜಯಣ ಹಾಗೂ ಚುರ್ಚಿಗುಂಡಿ ಮಂಜಪ್ಪ್ಪ ಇವರು ಕ್ಷೇತ್ರ್ರಕಾರ್ಯ ಕೈಗೊಂಡಾಗ ಈಸೂರು ಗ್ರಾಮ ಠಾಣಾದ ಹತ್ತಿರ ಸ್ಥಳೀಯರು ಕರೆಯುವ ಸೊಂಟ ಮುರುಕ ವೀರಭದ್ರ್ರ ಮೂರ್ತಿಯ ಹತ್ತಿರ 12-13ನೆಯ ಶತಮಾನದ ಆತ್ಮಬಲಿದಾನದ ಸೂರ್ಯಗ್ರಹಣದ 176 ಸೆಂ.ಮೀ ಉದ್ದವಿರುವ ಶಾಸನ, ಈಸೂರು ಗ್ರಾಮದ ಗಡಿ ಬಸವೇಶ್ವರ ದೇವಾಲಯದ ಹತ್ತಿರ 145 ಸೆಂ.ಮೀ ಉದ್ದ, 50 ಸೆಂ.ಮೀ ಆಗಲವಿರುವ ದಾನ ಶಾಸನ, ಸರ್ಕಾರಿ ಪ್ರೌಢಶಾಲೆ ಹತ್ತಿರ 142 ಸೆಂ.ಮೀ ಉದ್ದ ಹಾಗೂ 48 ಸೆಂ.ಮೀ ಆಗಲವಿರುವ ದಾನ ಶಾಸನ ಪತ್ತೆಯಾಗಿವೆ.
ಆತ್ಮಬಲಿದಾನ:
ಆತ್ಮಬಲಿದಾನ ಹಿಂದೂಗಳ ದೃಷ್ಟಿಯಲ್ಲಿ ಮಹತ್ವ ಪೂರ್ಣವಾಗಿದ್ದು, ಆತ್ಮಬಲಿದಾನ ಮಾಡಿಕೊಳ್ಳಲು ಶುಭತಿಥಿಗಳು ಒಳ್ಳೆಯವು ಎಂಬ ನಂಬಿಕೆಯಿದ್ದು, ಆತ್ಮಬಲಿದಾನಗಳಿಗೆ ಭಾರತೀಯ ಧಾರ್ಮಿಕ ಗ್ರಂಥಗಳಲಿ ಅವಕಾಶ ಮಾಡಿಕೊಟ್ಟಿವೆ ಎನ್ನಬಹುದು.

ವ್ಯಕ್ತಿಗಳು ತಮ್ಮ ಪ್ರಾಣವನ್ನು ತಾವೇ ತೆಗೆದುಕೊಳ್ಳುವಂತಹ ಅಥವಾ ಇನ್ನೊಬ್ಬರ ಸಹಾಯದಿಂದ ಮಾಡಿಕೊಳ್ಳುವಂತಹದ್ದು ಆತ್ಮ ಬಲಿದಾನ (ದೇಹತ್ಯಾಗ) ಎನ್ನಬಹುದು. ಆತ್ಮಬಲಿದಾನವು ಆತ್ಮಹತ್ಯೆಗಿಂತ ವಿಶೇಷವಾಗಿದ್ದು, ಇದು ಸಮಾಜದ ಒಳತಿಗೋಸ್ಕರ ಆಗಿರುವಂತಹದ್ದು ಹಾಗೂ ಪೂರ್ವ ನಿಯೋಜಿತವಾಗಿರುತ್ತದೆ.
ಭಾರತದಲ್ಲಿ ಆತ್ಮ ಬಲಿದಾನದ ತ್ಯಾಗವು ಪುರಾತನ ಕಾಲದಿಂದಲೂ ಬಂದಿರುವಂತಹದ್ದಾಗಿದೆ. ಈ ಆತ್ಮ ಬಲಿದಾನದಲ್ಲ್ಲಿ ಹಲವು ಬಗೆಗಳಿದ್ದು, ಅವುಗಳಲ್ಲ್ಲಿ ಪ್ರಮುಖವಾಗಿ ಸೂರ್ಯಗ್ರಹಣದಂದು ಆತ್ಮಬಲಿದಾನ ಮಾಡಿಕೊಳ್ಳುವುದು ವಿಶೇಷವಾಗಿತ್ತು ಎನ್ನಬಹುದು. ಆತ್ಮಬಲಿದಾನವನ್ನು ಮಾಡಿಕೊಂಡ ವೀರರು ಯಾವುದೇ ಹೋರಾಟದಲ್ಲಿ ಹೋರಾಡಿ ಮಡಿದವರಾಗಿರುವುದಿಲ್ಲ. ಆದರೆ ಯಾವುದೇ ಹೋರಾಟದಲ್ಲಿ ಮಡಿದ ವೀರರಿಗಿಂತ ಇವರೇನು ಕಡಿಮೆಯಿರುವುದಿಲ್ಲ ಎನ್ನಬಹುದು.

ಅವುಗಲ್ಲಿ ಚಿತಾಪ್ರವೇಶ, ಜಲಪ್ರವೇಶ, ಊರ್ದ್ವಪತನ ಇವುಗಳ ಮೂಲಕ ಸೂರ್ಯಗ್ರಹಣದಂದು ಆತ್ಮಬಲಿದಾನವನ್ನು ಮಾಡಿಕೊಳ್ಳುತ್ತಿದ್ದರು. ಚಿತಾಪ್ರವೇಶ ಎಂದರೆ ಬೆಂಕಿಗೆ ಹಾರಿ ಆತ್ಮ ಬಲಿದಾನ ಮಾಡಿಕೊಳ್ಳುವಂತಹದ್ದು. ಜಲ ಪ್ರವೇಶ ಎಂದರೆ ಗಂಗೆ, ವಾರಣಾಸಿ, ಪ್ರಯಾಗ, ತುಂಗಭದ್ರೆ ಮೊದಲಾದೆಡೆ ನೀರಿನಲ್ಲಿ ಮುಳುಗಿ ಆತ್ಮಬಲಿದಾನ ಮಾಡಿಕೊಳ್ಳುವುದು. ಹಾಗೂ ಊರ್ದ್ವ ಬಲಿದಾನವು ಬೆಟ್ಟ, ಮರ ಹಾಗೂ ದೇವಾಲಯಗಳ ಶಿಖರಗಳಿಂದ ಕೆಳಗೆ ಬಿದ್ದು ಅಥವಾ ಹಾರಿ ಆತ್ಮ ಬಲಿದಾನ ಮಾಡಿಕೊಳ್ಳುವಂತಹದ್ದು ಎನ್ನಬಹುದು. ಈ ಆತ್ಮ ಬಲಿದಾನದಲ್ಲಿ ಸಹಗಮನ ಪದ್ಧತಿ, ಗರುಡ ಪದ್ಧತಿ ಹಾಗೂ ಜೈನರ ಸಮಾದಿ ಮರಣಗಳು ಪ್ರಮುಖವಾಗಿವೆ.
ಸೂರ್ಯಗ್ರಹಣದ ಸಂಕೇತ:
ಸೂರ್ಯಗ್ರಹಣದ ಸಂಕೇತವಾಗಿ ರಾಹು ಅಂದರೆ ಹಾವು ಸೂರ್ಯನನ್ನು ನುಂಗುತ್ತಿರುವುದನ್ನು ಶಿಲ್ಪದಲ್ಲಿ ಕೆತ್ತಿ ತೋರಿಸಲಾಗಿರುತ್ತದೆ. ಸೂರ್ಯನನ್ನು ರಾಹು ನುಂಗುವ ಸಂದರ್ಭ, ಆಗ ಸೂರ್ಯ ಸಂಕಟಪಡುತ್ತಿರುವಂತೆ ತೋರಿಸುವ ಸಹಾನುಭೂತಿಯ ದಿನದಂದು ಆತ ಬಲಿದಾನ ಮಾಡಿಕೊಂಡರೆ ಮೋಕ್ಷ ಪ್ರಾಪ್ತಿಯೆಂದು ಹಿಂದೂಗಳ ಭಾವನೆಯಾಗಿದ್ದು, ಸಮಾಜಕ್ಕೆ ರಾಜ್ಯಕ್ಕೆ, ರಾರಿಗೆ ಜನಸಾಮಾನ್ಯರಿಗೆ ಒಳ್ಳೆಯದು ಆಗುತ್ತೆ ಎಂಬ ಕಲ್ಪನೆಯಿಂದ ಈ ದಿನ ಆತ್ಮಬಲಿದಾನ ಮಾಡಿಕೊಳ್ಳುತ್ತಿದ್ದರು ಎನ್ನಬಹುದು.

ಆತ್ಮಬಲಿದಾನದ ಸೂರ್ಯಗ್ರಹಣ ಶಾಸನ:
ಈ ಶಾಸನವು ತುಂಬಾ ತೃಟಿತವಾದ್ದು ಕ್ರಿಶ. 12-13ನೆಯ ಶತಮಾನದ ಹೊಯ್ಸಳರ ಕಾಲದ್ದಾಗಿದ್ದು, ಈ ಶಾಸನದಲ್ಲಿ ಸೂರ್ಯಗ್ರಹಣದ ಉಲ್ಲೇಖ ಕಂಡುಬರುತ್ತದೆ. ಈ ಸೂರ್ಯಗ್ರಹಣದ ಶಿಲ್ಪವು ಚೌಕಾಕಾರದಲ್ಲಿದುದ, ಕೆಳಭಾಗದಲ್ಲಿ ಅಗ್ನಿಜ್ವಾಲೆಯಿದ್ದು, ಇದು ದೀಪದ ರೀತಿಯಿದೆ. ಜ್ವಾಲೆಯ ಮೇಲೆ ವೀರ ಕೈಮುಗಿದು ನಿಂತಿರುವುದು, ಇದರ ಪಕ್ಕದಲ್ಲಿ ಪೂಜೆ ಮಾಡಿ ನಿಲ್ಲಿಸಿದ ಕೋಲು, ಇದರ ಮೇಲೆ ಶಾಸನವಿರುವುದು ಮತ್ತು ಇದರ ಮೇಲೆ ವೀರ ಕುಳಿತಿರುವುದು, ಅಕ್ಕಪಕ್ಕದಲ್ಲಿ ಚಾಮರಧಾರಣೆಯರು ಮೇಲ್ಭಾಗದಲ್ಲಿ ಸೂರ್ಯನನ್ನು ಹಾಗೂ ನುಂಗುತಿರುವುದು ಕಂಡುಬರುತ್ತದೆ. ಬಲಭಾಗದಲ್ಲಿ ಚಂದ್ರನಿದ್ದಾನೆ.

ಈಗಾಗಲೇ ಶಿವಮೊಗ್ಗ ಜಿಲ್ಲೆಯ ಭದ್ರಾವತಿ ತಾಲೂಕಿನ ಹಾಗಲಮನೆಯಲ್ಲಿ ಹೊಯ್ಸಳರ ಕಾಲದ ಎರಡು ಆತ್ಮಬಲಿದಾನದ ಸೂರ್ಯಗ್ರಹಣ ಶಾಸನಗಳನ್ನು ಪತ್ತೆ ಮಾಡಲಾಗಿತ್ತು.

ಈಸೂರು ಗಡಿ ಬಸವೇಶ್ವರ ದೇವಾಲಯದ ಹತ್ತಿರದ ಶಾಸನ:
ಈ ಶಾಸನವು ತೃಟಿತವಾಗಿದ್ದು, 49 ಸಾಲಿನ ದಾನ ಶಾಸನವಾಗಿದ್ದು, ಕ್ರಿ.ಶ. 1162ರ ಕಲ್ಯಾಣ ಚಾಲುಕ್ಯರ ಕಾಲದ ಆರನೆಯ ವಿಕ್ರಮಾದಿತ್ಯನ ಕಾಲದ ಶಾಸನವಾಗಿದ್ದು, ಇದರಲ್ಲಿ ಈಸೂರನ್ನು ಈಸಪುರ ಎಂದು ಕರೆಯಲಾಗಿದ್ದು, ಮಲ್ಲಿಕಾರ್ಜುನ ದೇವಾಲಯಕ್ಕೆ ವಡ್ಡರಾವುಳ ಸುಂಕ, ಪೆರ್ಜುಂಕ ಸುಂಕ, ಎರಡು ಬಿಲ್ಕೊಡೆ ಸುಂಕ ಮೊದಲಾದವನ್ನು ದಾನವಾಗಿ ಬಿಟ್ಟಿರುವುದು ತಿಳಿದುಬರುತ್ತದೆ.
ಸರ್ಕಾರಿ ಫ್ರೌಢಶಾಲೆ ಹತ್ತಿರದ ದಾನ ಶಾಸನ:
ಈ ಶಾಸನವು ತುಂಬಾ ತೃಟಿತವಾಗಿದ್ದು, ಕ್ರಿ.ಶ.11-12ನೆಯ ಶತಮಾನದ ಶಾಸನವಾಗಿದ್ದು, ಇದರಲ್ಲಿ ಗದ್ದೆಯನ್ನು ದಾನದ ನೀಡಿರುವ ಉಲ್ಲೇಖ ಕಂಡುಬರುತ್ತದೆ.

ಈ ಶಾಸನಗಳನ್ನು ಪತ್ತೆ ಹಚ್ಚುವಲ್ಲಿ ಸಹಕರಿಸಿದ ಶಿಕಾರಿಪುರ ತಾಲೂಕು ಪಂಚಾಯಿತಿ ಸದಸ್ಯರಾದ ಈಸೂರು ಜಯಣ್ಣ, ಚುರ್ಚಿಗುಂಡಿ ಮಂಜಪ್ಪ, ಎಮ್. ಆರ್. ರಘು, ಶಿಕಾರಿಪುರ ಹಾಗೂ ಎಸ್.ಎಂ. ಪ್ರಕಾಶ್, ಶಾಸನವನ್ನು ಓದಿಕೊಟ್ಟ ಡಾ. ಜಗದೀಶ ಅಗಸಿನಬಾಗಿಲು ಇವರುಗಳಿಗೆ ಸಹಾಯಕ ನಿರ್ದೇಶಕ ಆರ್. ಶೇಜೇಶ್ವರ ಧನ್ಯವಾದ ತಿಳಿಸಿದ್ದಾರೆ.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9481252093 – info@kalpa.news

Tags: Esuru VillageKannada News WebsiteLatest News KannadaLocal NewsMalnad NewsShikaripuraShimogaShivamoggaShivamogga Newsಈಸೂರುಮಲೆನಾಡು_ಸುದ್ಧಿಶಿಕಾರಿಪುರಶಿವಮೊಗ್ಗಶಿವಮೊಗ್ಗ_ನ್ಯೂಸ್
Share210Tweet123Send
Previous Post

ಸಾಗರದ ಐತಿಹಾಸಿಕ ಮಹಾಗಣಪತಿ ವಿಜೃಂಭಣೆಯ ರಥೋತ್ಸವ: ಶಾಸಕ ಹಾಲಪ್ಪ ಭಾಗಿ

Next Post

ಮೊಬೈಲ್ ಟವರ್ ಬ್ಯಾಟರಿ ಕಳ್ಳರ ಬಂಧನ: 48 ಬ್ಯಾಟರಿ-ಎರಡು ವಾಹನಗಳು ವಶಕ್ಕೆ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ಮೊಬೈಲ್ ಟವರ್ ಬ್ಯಾಟರಿ ಕಳ್ಳರ ಬಂಧನ: 48 ಬ್ಯಾಟರಿ-ಎರಡು ವಾಹನಗಳು ವಶಕ್ಕೆ

ಮೊಬೈಲ್ ಟವರ್ ಬ್ಯಾಟರಿ ಕಳ್ಳರ ಬಂಧನ: 48 ಬ್ಯಾಟರಿ-ಎರಡು ವಾಹನಗಳು ವಶಕ್ಕೆ

Leave a Reply Cancel reply

Your email address will not be published. Required fields are marked *

  • Trending
  • Latest
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
ಶಿವಮೊಗ್ಗ | ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ | ಕಾರ್ಕಳ ಮೂಲದ ವಿದ್ಯಾರ್ಥಿನಿ ದುರ್ಮರಣ

ಶಿವಮೊಗ್ಗ | ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ | ಕಾರ್ಕಳ ಮೂಲದ ವಿದ್ಯಾರ್ಥಿನಿ ದುರ್ಮರಣ

March 12, 2026
ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

January 16, 2026
ತಾಳಗುಪ್ಪ-ಬೆಂಗಳೂರು ರೈಲಿನಲ್ಲಿ ದರೋಡೆಕೋರನ ದಾಂಧಲೆ | ಮಾರಕಾಸ್ತ್ರದಿಂದ ಹಲ್ಲೆ ಯತ್ನ

ತಾಳಗುಪ್ಪ-ಬೆಂಗಳೂರು ರೈಲಿನಲ್ಲಿ ದರೋಡೆಕೋರನ ದಾಂಧಲೆ | ಮಾರಕಾಸ್ತ್ರದಿಂದ ಹಲ್ಲೆ ಯತ್ನ

February 12, 2026
ಶ್ರೀ ರಾಮನವಮಿ | ಭಕ್ತರಿಗೆ ಕೋಸಂಬರಿ, ಪಾನಕ ವಿತರಣೆ

ಶ್ರೀ ರಾಮನವಮಿ | ಭಕ್ತರಿಗೆ ಕೋಸಂಬರಿ, ಪಾನಕ ವಿತರಣೆ

March 27, 2026
ಮಾ.30ರಂದು ರಾಷ್ಟ್ರೀಯ ಯೋಗೋತ್ಸವ ವಿಶೇಷ ಕಾರ್ಯಕ್ರಮ: ಡಾ. ರಾಘವೇಂದ್ರ ಪೈ

ಮಾ.30ರಂದು ರಾಷ್ಟ್ರೀಯ ಯೋಗೋತ್ಸವ ವಿಶೇಷ ಕಾರ್ಯಕ್ರಮ: ಡಾ. ರಾಘವೇಂದ್ರ ಪೈ

March 27, 2026
ಏ.4 | ವಾಸವಿ ಮಹಿಳಾ ಸಂಘದ 50ನೇ ವರ್ಷದ ಸುವರ್ಣ ಮಹೋತ್ಸವ ಸಂಭ್ರಮ

ಏ.4 | ವಾಸವಿ ಮಹಿಳಾ ಸಂಘದ 50ನೇ ವರ್ಷದ ಸುವರ್ಣ ಮಹೋತ್ಸವ ಸಂಭ್ರಮ

March 27, 2026
ಲೋಕಕಲ್ಯಾಣರ್ಥ ಮಾ.30ರಂದು ಶ್ರೀ ವಿಷ್ಣು ಸಹಸ್ರನಾಮ ಪಾರಾಯಣ

ಲೋಕಕಲ್ಯಾಣರ್ಥ ಮಾ.30ರಂದು ಶ್ರೀ ವಿಷ್ಣು ಸಹಸ್ರನಾಮ ಪಾರಾಯಣ

March 27, 2026
ಉದ್ಯೋಗಖಾತ್ರಿ ಯೋಜನೆ ರದ್ದು | ಗ್ರಾಪಂ ಮಟ್ಟದಿಂದ ಕಾಂಗ್ರೆಸ್ ಹೋರಾಟ | ಸಚಿವ ಮಧುಬಂಗಾರಪ್ಪ

SSLC ಪರೀಕ್ಷೆ ಅಂತಿಮ ಅಂಕ ಕುರಿತು ಶಿಕ್ಷಣ ಸಚಿವರ ಬಿಗ್ ಸ್ಟೇಟ್ಮೆಂಟ್

March 27, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL