ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ಮಕ್ಕಳ ಭವಿಷ್ಯದ ಬಗ್ಗೆ ಜ್ಯೊತಿಷಿಗಳ ಬಳಿ ಕೇಳುವ ಬದಲು ಮಕ್ಕಳ ಭವಿಷ್ಯ ಪೋಷಕರ ಕೈಯಲ್ಲೇ ಇದೆ ಎಂಬುದು ಅರ್ಥ ಮಾಡಿಕೊಂಡರೆ ಸಾಕು. ಅವರು ಮುಖ್ಯವಾಹಿನಿಗೆ ಬರುತ್ತಾರೆ ಎಂದು ಸರ್ಜಿ ಫೌಂಡೇಶನ್ ಮ್ಯಾನೇಜಿಂಗ್ ಟ್ರಸ್ಟಿ ಡಾ.ಧನಂಜಯ ಸರ್ಜಿ Dr. Dananjaya Sarji ಸಲಹೆ ನೀಡಿದರು.
ರೌಂಡ್ ಟೇಬಲ್ ಹಾಗೂ ಸರ್ಜಿ ಫೌಂಡೇಶನ್ ವತಿಯಿಂದ ನಗರದ ಸ್ಕೌಟ್ ಭವನದಲ್ಲಿ ಬುದ್ಧಿಮಾಂದ್ಯರು ಹಾಗೂ ವಿಶೇಷಚೇತನರ ಕಿಡ್ಸ್ ಫಿಯೆಸ್ಟಾ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.
ರೌಂಡ್ ಟೇಬಲ್ ಶಿವಮೊಗ್ಗ ಘಟಕವು ಮಾನವೀಯ ಕಳಕಳಿಯೊಂದಿಗೆ ಹಮ್ಮಿಕೊಳ್ಳುತ್ತಿರುವ ಕಾರ್ಯಕ್ರಮಗಳು ಸಮಾಜಕ್ಕೆ ಮಾದರಿಯಾಗಿವೆ. ರಕ್ತದಾನ, ನೇತ್ರದಾನ ಮಹಾದಾನವಿದ್ದಂತೆ. ಯಾಕೆಂದರೆ ಒಬ್ಬ ವ್ಯಕ್ತಿಯ ಜೀವಕ್ಕೆ ಹೊಸ ಬದುಕನ್ನು ಕೊಟ್ಟ ಭಾಗ್ಯ ದಾನಿಗೆ ಲಭಿಸುತ್ತದೆ. ಒಬ್ಬ ಮರಣಾನಂತರ ಎರಡು ಕಣ್ಣು ದಾನ ಮಾಡಿದರೆ ನಾಲ್ಕು ಮಂದಿಗೆ ಜೀವನ ಕೊಟ್ಟಂತಾಗುತ್ತದೆ ಎಂದರು.
Also read: ರಾಜ್ಯದಲ್ಲಿ ನಾವು ದ್ವೇಷದ ರಾಜಕಾರಣ ಮಾಡುತ್ತಿಲ್ಲ: ಸಿಎಂ ಸಿದ್ದರಾಮಯ್ಯ
ರಕ್ತದಾನದಿಂದ ಒಬ್ಬ ವ್ಯಕ್ತಿ ಒಟ್ಟು ಎಂಟು ಮಂದಿಗೆ ಅಂಗಾಂಗಗಳನ್ನು ದಾನ ಮಾಡುವ ಶಕ್ತಿಯನ್ನು ಭಗವಂತ ಕರುಣಿಸಿದ್ದಾನೆ. ಒಂದು ವರ್ಷಕ್ಕೆ ಭಾರತದಲ್ಲಿ 5 ಲಕ್ಷ ಜನರು ಅಂಗಾಂಗಳು ಲಭ್ಯವಾಗದೇ ಜೀವವನ್ನು ಕಳೆದುಕೊಳ್ಳುತ್ತಿದ್ದಾರೆ. 50 ಸಾವಿರ ಜನ ಹೃದಯ ಅಳವಡಿಕೆ, 1 ಲಕ್ಷದ 20 ಸಾವಿರ ಜನಕ್ಕೆ ಕಿಡ್ನಿಯ ಅಳವಡಿಕೆಯ ಅಗತ್ಯವಿದೆ. ಹೀಗೆ ಅಂಗಾಂಗಳನ್ನು ದಾನ ಮಾಡುವ ಅವಕಾಶವನ್ನು ಭಗವಂತ ನಮಗೆ ನೀಡಿರುವುದರಿಂದ ದಾನದ ಮನೋಭಾವ ಬೆಳೆಸಿಕೊಳ್ಳಬೇಕು ಎಂದು ಸಲಹೆ ನೀಡಿದರು.
ವ್ಯಾಲ್ಯೂ ಪ್ರಾಡಕ್ಟ್ ಪ್ರೈವೇಟ್ ಲಿಮಿಟೆಡ್ ವ್ಯವಸ್ಥಾಪಕ ನಿರ್ದೇಶಕರಾದ ಡಾ.ಶ್ರೀನಿವಾಸ ಮೂರ್ತಿ ಅವರು ಮಾತನಾಡಿ, ಭಗವಂತನ ಕೃಪೆ ಇದ್ದರೆ ಮಾತ್ರ ಇಂತಹ ಕಾರ್ಯಕ್ರಮಗಳನ್ನು ಮಾಡಲು ಸಾಧ್ಯ. ಇದು ಮಾನವೀಯ ಕಳಕಳಿಗೆ ಸಾಕ್ಷಿಯಾಗಿದೆ. ಇದರ ಪುಣ್ಯ ಆಯೋಜಕರಿಗೆ ಲಭಿಸುತ್ತದೆ. ಎಷ್ಟೆ ಸಾಧನೆ ಮಾಡಿದರೂ, ಎಷ್ಟೆ ಗಳಿಸಿದರೂ ಇಂತಹ ಕಾರ್ಯಗಳಿಂಧ ಮಾತ್ರ ಆತ್ಮ ಸಂತೃಪ್ತಿ ಸಿಗುತ್ತದೆ ಎಂದರು.
ಬುದ್ಧಿಮಾಂದ್ಯತೆ ಹಾಗೂ ವಿಶೇಷಚೇತನ ಮಕ್ಕಳಿಗಾಗಿ ಇಂತಹ ಸ್ಪರ್ಧೆಗಳಲ್ಲಿ ಏರ್ಪಡಿಸುವುದರಿಂದ ಮಕ್ಕಳಲ್ಲಿ ಹೊಸ ಭಾವನೆಗಳು ಒಡಮೂಡುತ್ತವೆ, ಆಕಾಂಕ್ಷೆಗಳು ಗರಿಗೆದರುತ್ತವೆ, ವಿಭಿನ್ನ ಆಲೋಚನೆಗಳು ಬರುತ್ತವೆ ಎಂದರು.
ಶಾರದಾ ಅಂಧರ ವಿಕಾಸ ಕೇಂದ್ರ, ಸರ್ಜಿ ಫೌಂಡೇಷನ್, ತಾಯಿಮನೆ, ತರಂಗ ಕಿವುಡ ಮತ್ತು ಮೂಗರ ಶಾಲೆ, ಮಾಧವ ನೆಲೆ, ಹ್ಯಾಪಿ ಹೋಂ ಹಾಗೂ ಮೇರಿ ಇಮ್ಯಾಕ್ಯುಲೇಟ್’ನ 170 ಕ್ಕೂ ಮಕ್ಕಳು ಬುದ್ಧಿಮಾಂಧ್ಯ ಹಾಗೂ ವಿಶೇಷಚೇತನ ಮಕ್ಕಳು ಹಾಡು, ಡ್ಯಾನ್ಸ್, ಟ್ಯಾಟ್ಯೂ, ಪೇಸ್ ಪೇಯಿಂಟಿಂಗ್, ಜಂಪಿಂಗ್ ಬೆಡ್, ಕಾಟನ್ ಕ್ಯಾಂಡಿ, ಚಾಕೋಲೇಟ್ ಫೌಂಟೆನ್ ಹೀಗೆ ವಿವಿಧ ಆಟೋಟಗಳಲ್ಲಿ ಪಾಲ್ಗೊಂಡು ಮನರಂಜನೆ ನೀಡಿದರು. ಅಲ್ಲದೇ, ವಿವಿಧ ತಿನಿಸುಗಳನ್ನು ಸವಿದು ಸಂತಸಪಟ್ಟರು. ಅಮೋಘ ನೃತ್ಯ ಮಾಡುವ ಮೂಲಕ ನೆರೆದವರ ಮನ ಗೆದ್ದರು.
ಏಷ್ಯನ್ ಪ್ಯಾರಾ ಒಲಂಪಿಕ್ ಕಂಚಿನ ಪದಕ ವಿಜೇತೆ ವೃತಿ ಜೈನ್, ಏಷ್ಯನ್ ಪ್ಯಾರಾ ಒಲಿಂಪಿಕ್ ಕಂಚಿನ ಪದಕ ವಿಜೇತರಾದ ಕಿಶನ್ ಗಂಗೊಳ್ಳಿ ಅವರಿಗೆ ರೌಂಡ್ ಟೇಬಲ್ ಹಾಗೂ ಸರ್ಜಿ ಫೌಂಡೇಶನ್ ವತಿಯಿಂದ ನೀವು ನಮ್ಮ ಹೆಮ್ಮೆ ಸ್ಮರಣಿಕೆ ನೀಡಿ ಗೌರವಿಸಲಾಯಿತು.
ಜಿಲ್ಲಾ ಸ್ಕೌಟ್ ಭವನದ ಅಧ್ಯಕ್ಷರಾದ ರಮೇಶ್ ಶಾಸ್ತ್ರಿ, ಆರ್’ಟಿಐ ಏರಿಯಾ 13- ಚೇರ್ಮನ್ ದೇವಾನಂದ್, ಆರ್ಟಿಐ, ಏರಿಯಾ -13, ಸ್ಷೆಷಲ್ ಈವೆಂಟ್ಸ್ ಕನ್ವಿನರ್ ಅನಿಲ್ ರಾಜ್, ಆರ್’ಟಿಐ, ಏರಿಯಾ -13 ಎಲ್ಎಂಎಫ್ ಶುಶ್ರೂತ್, ಆರ್’ಟಿಐ ಏರಿಯಾ 13, ಎಸ್’ಆರ್’ಟಿ 166, ಚೇರ್ಮನ್ ಎಲ್ಎಂಎಫ್ ವಿಶ್ವಾಸ್ ಕಾಮ್, ಎಲ್ಎಂಎಫ್ ಈಶ್ವರ್ ಸರ್ಜಿ, ಎಲ್ಎಂಎಫ್ ಕಮಲೇಶ್, ಎಲ್ಎಂಎಫ್ ಋತ್ವಿಕ್ ಭಾಗವಹಿಸಿದ್ದರು. ಇದೇ ಸಂದರ್ಭದಲ್ಲಿ ನೂರಾರು ಜನ ನೇತ್ರದಾನ ಮಾಡುವ ಬಗ್ಗೆ ಪ್ರತಿಜ್ಞೆ ಮಾಡಿದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post