No Result
View All Result
Rani KoHEnur Calls Transgender Bill “Absurd”, Questions Lawmakers in Explosive Podcast Interview
English Articles

Rani KoHEnur Calls Transgender Bill “Absurd”, Questions Lawmakers in Explosive Podcast Interview

by ಕಲ್ಪ ನ್ಯೂಸ್
April 9, 2026
0

Kalpa Media House  |  Mumbai | Artist, drag performer, and activist Rani KoHEnur (Sushant Divgikar) has ignited widespread conversation following...

Read moreDetails
RPF team Seized 40.495 Kgs Ganja at Ballari Railway station

RPF team Seized 40.495 Kgs Ganja at Ballari Railway station

April 7, 2026
ಶ್ರೀ ಕೊಟ್ಟೂರೇಶ್ವರ ಜಾತ್ರೆ ಪ್ರಯುಕ್ತ | ಹೊಸಪೇಟೆ – ತೊಳಹುಣಸೆ ನಡುವೆ ವಿಶೇಷ ರೈಲು ಸಂಚಾರ

Extension of Special Train Services to Manage Summer Rush

April 7, 2026
Interior / upgradation of Next-Generation Amrit Bharat Coaches. Sample coach ready

Interior / upgradation of Next-Generation Amrit Bharat Coaches. Sample coach ready

April 6, 2026
ಶ್ರೀ ಕೊಟ್ಟೂರೇಶ್ವರ ಜಾತ್ರೆ ಪ್ರಯುಕ್ತ | ಹೊಸಪೇಟೆ – ತೊಳಹುಣಸೆ ನಡುವೆ ವಿಶೇಷ ರೈಲು ಸಂಚಾರ

Special Train Between Bengaluru Cantt and Chennai

April 3, 2026
  • Advertise With Us
  • Grievances
  • About Us
  • Contact Us
Sunday, April 12, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ

ಅಮೆರಿಕಾ ಸಾರಿರುವ ಸುಂಕ ಸಮರಕ್ಕೆ ಕೇಂದ್ರ ಬಜೆಟ್ ಉತ್ತರ ನೀಡಲಿದೆ | ವಿಜಯೇಂದ್ರ

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
February 2, 2026
in ಶಿವಮೊಗ್ಗ
0
ಅಮೆರಿಕಾ ಸಾರಿರುವ ಸುಂಕ ಸಮರಕ್ಕೆ ಕೇಂದ್ರ ಬಜೆಟ್ ಉತ್ತರ ನೀಡಲಿದೆ | ವಿಜಯೇಂದ್ರ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ  |

ನಿರ್ಮಲಾ ಸೀತಾರಾಮನ್ #Nirmala Sitaraman ಮಂಡಿಸಿರುವ 9ನೇ ಬಜೆಟ್ ವಿಕಸಿತ ಭಾರತದ ಕನಸು ನನಸು ಮಾಡುವತ್ತ ಸಾಗಿದ್ದು, ಇದು ಅಭಿವೃದ್ಧಿ ಪೂರಕ ಬಜೆಟ್ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ #B Y Vijayendra ಹೇಳಿದರು.

ಅವರು ಇಂದು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಪ್ರಧಾನಿ ಮೋದಿಯವರು #PM Modi 2047ಕ್ಕೆ ಭಾರತ ವಿಕಸಿತ ಭಾರತವಾಗುತ್ತದೆ ಎಂದು ಸಂಕಲ್ಪ ಮಾಡಿದ್ದರು. ಆ ಸಂಕಲ್ಪಕ್ಕೆ ಕೇಂದ್ರದ ಬಜೆಟ್ ಪೂರಕವಾಗಿದ್ದು, ಇದು ಆತ್ಮನಿರ್ಬರ ಸ್ವಾವಲಂಬನೆ ಭಾರತದ ಕನಸ್ಸನ್ನು ನನಸಾಗಿಸುವತ್ತ ಸಾಗಿದ್ದು, ದೇಶದೆಲ್ಲೆಡೆ ಸ್ವಾಗತವಾಗುತ್ತಿದೆ. ಇದು ಆಡಂಬರದ ಬಜೆಟ್ ಅಲ್ಲ, ಸುಧಾರಣೆಯ ಬಜೆಟ್. ಜನಪ್ರಿಯಕ್ಕಿಂತ ಜನಹಿತದ ಬಜೆಟ್ ಆಗಿದೆ. ಪ್ರಸ್ತುತ ಜಾಗತಿಕ ಪರಿಸ್ಥಿತಿಯಲ್ಲಿ ಅಮೇರಿಕಾ ಭಾರತದ ವಿರುದ್ಧ ಸಾರಿರುವ ಸುಂಕ ಸಮರಕ್ಕೆ #Tariff war by America ಉತ್ತರ ನೀಡಲಿದೆ ಎಂದರು.
ಈ ಬಜೆಟ್‌ನಲ್ಲಿ ಎಲ್ಲಾ ಕ್ಷೇತ್ರಕ್ಕೂ ಆದ್ಯತೆ ನೀಡಲಾಗಿದೆ. ಕೈಗಾರಿಕೆ, ಪ್ರವಾಸೋದ್ಯಮ, ಐ.ಟಿ.-ಬಿ.ಟಿ., ಕೃಷಿ, ರೈಲು, ವಿಮಾನ, ರಸ್ತೆ, ಹೀಗೆ ಎಲ್ಲಾ ಆದ್ಯತಾ ಕ್ಷೇತ್ರಗಳಿಗೂ ಪ್ರಾಮುಖ್ಯತೆ ನೀಡಲಾಗಿದ್ದು, ಇದೊಂದು ಆರ್ಥಿಕ ಶಿಸ್ತಿನ ಬಜೆಟ್ ಆಗಿದೆ. ಈ ಬಜೆಟ್‌ನಲ್ಲಿ ಹಣಕಾಸು ಕೊರತೆಯನ್ನು ಶೇ.4.4ಕ್ಕೆ ತರಲಾಗಿದೆ. ಮೂಲಭೂತ ಸೌಲಭ್ಯಕ್ಕೆ ಒತ್ತು ನೀಡಲಾಗಿದೆ ಎಂದರು.

ಯುಪಿಎ ಸರ್ಕಾರ ಅಧಿಕಾರದಲ್ಲಿದ್ದಾಗ, ಮೂಲಭೂತ ಸೌಲಭ್ಯಗಳಿಗೆ 2 ಲಕ್ಷ ಕೋಟಿ ಹಣವನ್ನು ಮೀಸಲಾಗಿಡಲಾಗಿತ್ತು. ಆದರೆ ಈಗ ಎನ್.ಡಿ.ಎ. ಸರ್ಕಾರ ಬಂದ ಮೇಲೆ ಅದನ್ನು 12.20 ಲಕ್ಷ ಕೋಟಿಗೆ ಏರಿಸಲಾಗಿದೆ. ಹಾಗಾಗಿ ಇದೊಂದು ಕ್ರಾಂತಿಕಾರಕ ಬಜೆಟ್ ಆಗಿದೆ. ಎಂದಿನಂತೆ 12 ಲಕ್ಷದವರೆಗೆ ಆದಾಯ ತೆರಿಗೆ ಇಲ್ಲ. ಉನ್ನತ ಶಿಕ್ಷಣಕ್ಕೂ ಆದ್ಯತೆ ನೀಡಲಾಗಿದೆ. ಮುಖ್ಯವಾಗಿ ಮಹಿಳೆಯರ ಶಿಕ್ಷಣಕ್ಕೆ ಆದ್ಯತೆ ನೀಡಲಾಗಿದ್ದು, ಮಹಿಳೆಯರಿಗೆ ಉದ್ಯಮ ಆರಂಬಿಸಲು ಕೂಡ ಯೋಜನೆಗಳನ್ನು ರೂಪಿಸಲಾಗಿದೆ. ದೇಶಾದ್ಯಂತ ಪ್ರತಿ ಜಿಲ್ಲೆಯಲ್ಲೂ ಹಾಸ್ಟೆಲ್‌ಗಳನ್ನು ತೆರೆಯಲು ತೀರ್ಮಾನಿಸಲಾಗಿದೆ. ಪ್ರಮುಖವಾಗಿ ಯುವಜನತೆಗೆ ಆದ್ಯತೆ ನೀಡಲಾಗಿದೆ. ಇದರಿಂದ ಸಹಜವಾಗಿಯೇ ಭಾರತ ಅಭಿವೃದ್ಧಿಯಾಗುತ್ತದೆ ಎಂದರು.
ರಾಜ್ಯ ಸರ್ಕಾರ ವಿನಾಕಾರಣ ಕೇಂದ್ರದ ಮೇಲೆ ಪದೇ ಪದೇ ಅನುದಾನ ಕುರಿತು ಮಾತನಾಡುತ್ತಲೇ ಇದೆ. ಕೇಂದ್ರದಿAದ ರಾಜ್ಯಕ್ಕೆ ಅನ್ಯಾಯವಾಗಿದೆ ಎಂದು ಹೇಳುತ್ತಿದ್ದಾರೆ. ಈ ಬಜೆಟ್ಟನ್ನು ಅವರು ಸರಿಯಾಗಿ ಗಮನಿಸಲಿ, ಅವರಿಗೆ ಗೊತ್ತಾಗುತ್ತದೆ. ರಾಜ್ಯಗಳಿಗೆ ನೀಡುವ ತೆರಿಗೆಯ ಅನುದಾನವನ್ನು ಶೇ.3.6ರಿಂದ 4.13ಕ್ಕೆ ಹೆಚ್ಚಳ ಮಾಡಲಾಗಿದೆ. ಈ ಹೆಚ್ಚಳದಿಂದ ರಾಜ್ಯಕ್ಕೆ ಸುಮಾರು 7387 ಕೋಟಿ ರೂ. ಹೆಚ್ಚಾಗುತ್ತಿದ್ದು, 5ವರ್ಷದಲ್ಲಿ ಅದು 63.050 ಕೋಟಿ ಹೆಚ್ಚಾಗುತ್ತದೆ. ಇದು ಕೇಂದ್ರ ಸರ್ಕಾರದ ಕೊಡುಗೆ ಅಲ್ಲವೇ ಎಂದ ಅವರು, ರಾಜ್ಯ ಸರ್ಕಾರ ಕೇಂದ್ರದ ಮೇಲೆ ಬೊಟ್ಟು ತೋರಿಸುವ ಬದಲು ಮನವೊಲಿಸಿ ಅನುದಾನವನ್ನು ತರಿಸಿಕೊಳ್ಳಬೇಕು. ಒಕ್ಕೂಟ ವ್ಯವಸ್ಥೆಗೆ ಮೊದಲು ಗೌರವ ಕೊಡುವುದನ್ನು ಕಲಿಯಬೇಕು. ಈ ಮೊದಲು ರಾಜ್ಯ ಸರ್ಕಾರ ಕರ್ನಾಟಕ ರಾಜ್ಯಕ್ಕೆ ಮಾತ್ರ ಅನ್ಯಾಯವಾಗುತ್ತಿದೆ ಎಂದು ಹೇಳುತ್ತಿದ್ದರು. ಈಗ ಇಡೀ ದಕ್ಷಿಣ ಭಾರತಕ್ಕೆ ಅನ್ಯಾಯವಾಗುತ್ತಿದೆ ಎಂದು ಹೇಳುತ್ತಿದ್ದಾರೆ. ಇದು ಯಾವ ನ್ಯಾಯ ಎಂದು ಪ್ರಶ್ನೆ ಮಾಡಿದರು.

ಕೇಂದ್ರ ಸರ್ಕಾರ ನಕ್ಸಲ್ ಸಮಸ್ಯೆಯನ್ನು ಸಂಪೂಣವಾಗಿ ತಡೆಗಟ್ಟುವಲ್ಲಿ ಯಶಸ್ವಿಯಾಗಿದೆ. ಈ ಹಿಂದೆ 65 ಜಿಲ್ಲೆಗಳಲ್ಲಿ ನಕ್ಸಲ್ ಸಮಸ್ಯೆ ಇತ್ತು. ಈಗ ಕೇವಲ 10 ಜಿಲ್ಲೆಗಳಲ್ಲಿ ಮಾತ್ರ ಇದೆ ಎಂದ ಅವರು, ದ್ವೇಷ ಭಾಷಣ ಕುರಿತಂತೆ ಕಾಯ್ದೆ ಕುರಿತು ಮಾತನಾಡಿ, ಈ ಕಾಯ್ದೆ ವಿರೋಧ ಪಕ್ಷವನ್ನು ಮಟ್ಟಹಾಕಲೆಂದೇ ರೂಪಿಸಲಾಗಿದೆ. ಸದನದಲ್ಲಿ ಯಾವ ಚರ್ಚೆಗೂ ಒಳಪಡಿಸಲಿಲ್ಲ. ಪ್ರಜಾಪ್ರಭುತ್ವಕ್ಕೆ ಇದು ಮಾರಕವಾಗಿ ಕಾಯ್ದೆಯಾಗಿದೆ. ಈಗಾಗಲೇ ಹಿಂದೂ ಕಾರ್ಯಕರ್ತರ ಮೇಲೆ ರಾಜ್ಯ ಸರ್ಕಾರ ಕ್ರಮ ಕೈಗೊಳ್ಳುತ್ತಿರುವುದೇ ಇದಕ್ಕೆ ಸಾಕ್ಷಿ ಎಂದರು.

ಪತ್ರಿಕಾಗೋಷ್ಠಿಯಲ್ಲಿ ಬಿಜೆಪಿ ಜಿಲ್ಲಾಧ್ಯಕ್ಷ ಎನ್.ಕೆ. ಜಗದೀಶ್, ಮಾಜಿ ಶಾಸಕರಾದ ಅಶೋಕ್‌ನಾಯ್ಕ, ಎಸ್.ರುದ್ರೇಗೌಡ್ರು, ಮಾಲತೇಶ್, ಸುಧಾಕರ್, ರಘು, ಎಸ್.ಚಂದ್ರಶೇಖರ್, ಮಂಜುನಾಥ್ ಇದ್ದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news     

http://kalpa.news/wp-content/uploads/2024/04/VID-20240426-WA0008.mp4

Tags: B Y VijayendraKannada NewsKannada News LiveKannada News Online ShivamoggaKannada WebsiteKannadaNewsWebsiteLatestNewsKannadaLocalNewsMalnadNewsNews in KannadaNews KannadaNirmala SitaramanPM ModiShimogaShivamoggaNewsTariff war by Americaಅಮೇರಿಕಾ ಸುಂಕ ಸಮರನಿರ್ಮಲಾ ಸೀತಾರಾಮನ್ಪ್ರಧಾನಿ ಮೋದಿಬಿ.ವೈ. ವಿಜಯೇಂದ್ರಮಲೆನಾಡು_ಸುದ್ಧಿಶಿವಮೊಗ್ಗಶಿವಮೊಗ್ಗ_ನ್ಯೂಸ್
Share198Tweet124Send
Previous Post

ಆರ್ಥಿಕ ಶಿಸ್ತನ್ನು ಒಳಗೊಳ್ಳದ ನಿರಾಸೆಯ ಬಜೆಟ್ | ಆರ್ಥಿಕ ವಿಶ್ಲೇಷಕ ಡಾ. ಮಂಜುನಾಥ್ ವಿಶ್ಲೇಷಣೆ

Next Post

ರಾಜ್ಯ ಸಾರಿಗೆ ಬಸ್‌ಗಳ ಮೇಲಿನ ಗುಟ್ಕಾ ಜಾಹೀರಾತು ತೆರವು ಆದೇಶ: ಕರವೇ ಸಿಂಹಸೇನೆ ಅಭಿನಂದನೆ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ರಾಜ್ಯ ಸಾರಿಗೆ ಬಸ್‌ಗಳ ಮೇಲಿನ ಗುಟ್ಕಾ ಜಾಹೀರಾತು ತೆರವು ಆದೇಶ: ಕರವೇ ಸಿಂಹಸೇನೆ ಅಭಿನಂದನೆ

ರಾಜ್ಯ ಸಾರಿಗೆ ಬಸ್‌ಗಳ ಮೇಲಿನ ಗುಟ್ಕಾ ಜಾಹೀರಾತು ತೆರವು ಆದೇಶ: ಕರವೇ ಸಿಂಹಸೇನೆ ಅಭಿನಂದನೆ

Leave a Reply Cancel reply

Your email address will not be published. Required fields are marked *

  • Trending
  • Latest
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

April 3, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
ಶಿವಮೊಗ್ಗ | ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ | ಕಾರ್ಕಳ ಮೂಲದ ವಿದ್ಯಾರ್ಥಿನಿ ದುರ್ಮರಣ

ಶಿವಮೊಗ್ಗ | ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ | ಕಾರ್ಕಳ ಮೂಲದ ವಿದ್ಯಾರ್ಥಿನಿ ದುರ್ಮರಣ

March 12, 2026
ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

January 16, 2026
ಸಂಗೀತ ಲೋಕದ ಧ್ರುವತಾರೆ, ಖ್ಯಾತ ಗಾಯಕಿ ಆಶಾ ಭೋಂಸ್ಲೆ ವಿಧಿವಶ

ಸಂಗೀತ ಲೋಕದ ಧ್ರುವತಾರೆ, ಖ್ಯಾತ ಗಾಯಕಿ ಆಶಾ ಭೋಂಸ್ಲೆ ವಿಧಿವಶ

April 12, 2026
ಶರಾವತಿ ಪಂಪ್ಡ್ ಸ್ಟೋರೇಜ್ ಯೋಜನೆ ವಿರೋಧಿಸಿ ಏ.16ರಂದು ಬೃಹತ್ ರ್‍ಯಾಲಿ

ಶರಾವತಿ ಪಂಪ್ಡ್ ಸ್ಟೋರೇಜ್ ಯೋಜನೆ ವಿರೋಧಿಸಿ ಏ.16ರಂದು ಬೃಹತ್ ರ್‍ಯಾಲಿ

April 11, 2026
ಶ್ರೀ ರವಿಶಂಕರ್ ಗುರೂಜಿಯವರ 70ನೇ ಜನ್ಮೋತ್ಸವ | ಏ.14ರಿಂದ ಆರು ದಿನ ವಿಶೇಷ ಸುದರ್ಶನ ಕ್ರಿಯಾ ಶಿಬಿರ

ಶ್ರೀ ರವಿಶಂಕರ್ ಗುರೂಜಿಯವರ 70ನೇ ಜನ್ಮೋತ್ಸವ | ಏ.14ರಿಂದ ಆರು ದಿನ ವಿಶೇಷ ಸುದರ್ಶನ ಕ್ರಿಯಾ ಶಿಬಿರ

April 11, 2026
ಉತ್ತಮ ವ್ಯಕ್ತಿತ್ವ ರೂಪಿಸುವುದೇ ಎನ್‌ಎಸ್‌ಎಸ್‌ ಮುಖ್ಯ ಉದ್ದೇಶ: ಶುಭ ಮರವಂತೆ ಅಭಿಪ್ರಾಯ

ಉತ್ತಮ ವ್ಯಕ್ತಿತ್ವ ರೂಪಿಸುವುದೇ ಎನ್‌ಎಸ್‌ಎಸ್‌ ಮುಖ್ಯ ಉದ್ದೇಶ: ಶುಭ ಮರವಂತೆ ಅಭಿಪ್ರಾಯ

April 11, 2026
ಪಾರಂಪರಿಕ ಕಲೆಯ ಪುನರುಜ್ಜೀವನ ಅಭಿನಂದನೀಯ: ಹೊಂದಾಸನ ಧರ್ಮಪ್ಪ ಮೆಚ್ಚುಗೆ

ಪಾರಂಪರಿಕ ಕಲೆಯ ಪುನರುಜ್ಜೀವನ ಅಭಿನಂದನೀಯ: ಹೊಂದಾಸನ ಧರ್ಮಪ್ಪ ಮೆಚ್ಚುಗೆ

April 11, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL