ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ನಗರದ ರಾಗಿಗುಡ್ಡದಲ್ಲಿ ಸಂಭವಿಸಿದ ಘಟನೆಗೆ ಸಂಬಂಧಿಸಿದಂತೆ ಬೆಳವಣಿಗೆಗಳು ಹಾಗೂ ವ್ಯಕ್ತಿಯೊಬ್ಬರನ ಎನ್’ಕೌಂಟರ್ ಮಾಡಲಾಗಿದೆ ಎಂಬುದು ಸುಳ್ಳು ಸುದ್ದಿಯಾಗಿದ್ದು, ಇಂತಹ ವದಂತಿ ಹಬ್ಬಿಸಿದರೆ ಕಠಿಣ ಕ್ರಮ ಕೈಗೊಳ್ಳಬೇಕಾಗುತ್ತದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಮಿಥುನ್ ಕುಮಾರ್ SPMithunKumar ಅಂತಿಮ ಎಚ್ಚರಿಕೆ ನೀಡಿದ್ದಾರೆ.
ಈ ಕುರಿತಂತೆ ಪ್ರತಿಕ್ರಿಯೆ ನೀಡಿರುವ ಅವರು, ಘಟನೆಯಲ್ಲಿ ಎರಡೂ ಕೋಮಿನ ಜನರ ಬಂಧನವಾಗಿದ್ದು, ಎರಡೂ ಕೋಮುಗಳವರೂ ಸಹ ಗಾಯಗೊಂಡಿದ್ದಾರೆ. ಎಲ್ಲರಿಗೂ ಚಿಕಿತ್ಸೆ ನೀಡಲಾಗುತ್ತಿದ್ದು, ಚೇತರಿಸಿಕೊಳ್ಳುತ್ತಿದ್ದಾರೆ ಎಂದರು.
ವ್ಯಕ್ತಿಯೊಬ್ಬರ ಎನ್ ಕೌಂಟರ್ ಮಾಡಲಾಗಿದೆ ಎಂಬುದು ಸುಳ್ಳು ಸುದ್ದಿಯಾಗಿದೆ. ಇಂತಹ ಸುಳ್ಳು ಸುದ್ದಿಗಳನ್ನು ಹರಡಿದರೆ ಅಂತಹವರ ವಿರುದ್ಧ ಕಠಿಣ ಕ್ರಮಕೈಗೊಳ್ಳಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿದ್ದಾರೆ.
Also read: ಶಿವಮೊಗ್ಗದಲ್ಲಿ ವಿಮಾನ ಲ್ಯಾಂಡ್ ಆಗದೇ ಬೆಂಗಳೂರಿಗೆ ವಾಪಾಸ್ ತೆರಳಿದ್ದೇಕೆ? ಇಷ್ಟಕ್ಕೂ ನಡೆದಿದ್ದೇನು?
ಆ ಎರಡು ಓಮ್ನಿ ಕುರಿತಾಗಿ ಎಸ್’ಪಿ ಹೇಳಿದ್ದೇನು?
ಘಟನೆಯ ವೇಳೆ ರಾಗಿ ಗುಡ್ಡದಲ್ಲಿ ಇದ್ದ ಎರಡು ಓಮ್ನಿ ವಾಹನಗಳ ಬಗ್ಗೆ ವಿಚಾರಿಸಲಾಗಿದ್ದು, ಅದು ನ್ಯಾಮತಿಗೆ ಸೇರಿದ್ದು ಎಂದು ತಿಳಿದುಬಂದಿದೆ. ವಾಹನದಲ್ಲಿ ಎರಡೂ ಸಮುದಾಯದ ಜನರು ಇದ್ದರು. ಶಿವಮೊಗ್ಗದಲ್ಲಿ ಮೆರವಣಿಗೆ ನೋಡಲು ಬಂದಿದ್ದರು. ಶಿವಮೊಗ್ಗ ನಗರದಲ್ಲಿ ಮೆರವಣಿಗೆ ನೋಡಿದ ನಂತರ ಅವರು ರಾಗಿಗುಡ್ಡಕ್ಕೆ ಬಂದಾಗ ಘಟನೆ ನಡೆದಿದ್ದು, ನಂತರ ಅವರು ತಮ್ಮ ಊರಿಗೆ ಹಿಂತಿರುಗಿದ್ದಾರೆ ಎಂದು ತಿಳಿದುಬಂದಿದೆ ಎಂದಿದ್ದಾರೆ.
ಈ ಘಟನೆಗಳ ಕುರಿತಾಗಿ ಸತ್ಯಾಸತ್ಯತೆಯನ್ನು ಪರಿಶೀಲಿಸದೇ ಯಾರೂ ಸಹ ಕಟ್ಟುಕತೆಯನ್ನು ಹರಡಬಾರದು. ಇಡೀ ಪ್ರಕರಣ ಕುರಿತಂತೆ ಎಲ್ಲ ಆಯಾಮಗಳಲ್ಲಿಯೂ ಸಹ ತನಿಖೆ ನಡೆದಿದೆ ಎಂದಿದ್ದಾರೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post