ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ವಾಸವಿ ಮಹಿಳಾ ಸಂಘದಿಂದ ಸುವರ್ಣ ಮಹೋತ್ಸವದ ಅಂಗವಾಗಿ ಜೂನ್ 11 ಮತ್ತು 12 ರಂದು “ಸಿಂಧೂರ ಭಜನಾರ್ಚನೆ” ಎಂಬ “ಅಖಂಡ ಭಜನೆ” (ಅಹೋರಾತ್ರಿ ಭಜನೆ) ಕಾರ್ಯಕ್ರಮವನ್ನು ನಗರದ ಬಜಾರಿನಲ್ಲಿರುವ ಕನ್ಯಕಾಪರಮೇಶ್ವರಿ ದೇವಸ್ಥಾದಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು ಸಂಘದ ಅಧ್ಯಕ್ಷೆ ಪ್ರತಿಭಾ ಅರುಣ್ ಹೇಳಿದರು.
ಅವರು ಇಂದು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ನಮ್ಮ ಮಹಿಳಾ ಸಂಘವು 1976ರಲ್ಲಿ ಆರಂಭವಾಯಿತು. ಕಳೆದ 50 ವರ್ಷಗಳಿಂದ ಸಮಾಜಮುಖಿ ಕೆಲಸ ಜೊತೆ ಧಾರ್ಮಿಕ ಕಾರ್ಯಕ್ರಮಗಳನ್ನು ನಾವು ಮಾಡುತ್ತಾ ಬಂದಿದ್ದೇವೆ. ಹಳೆಯ ಕಾರ್ಯಕ್ರಮಗಳನ್ನೇ ಮುಂದುವರೆಸುತ್ತಾ, ನಾವು ಅಧಿಕಾರಕ್ಕೆ ಬಂದ ಮೊದಲ ಕಾರ್ಯಕ್ರಮವಾಗಿ ಸಿಂಧೂರ ಭಜನಾರ್ಚನೆ ಎಂಬ ಕಾರ್ಯಕ್ರಮವನ್ನು ನಮ್ಮ ದೇಶದ ಸೈನಿಕರಿಗಾಗಿ ಅರ್ಪಣೆ ಮಾಡುತ್ತಿದ್ದೇವೆ ಎಂದರು.

ಕಾರ್ಯಕ್ರಮದ ಉದ್ಘಾಟನೆಯನ್ನು ಶಾಸಕರಾದ ಎಸ್.ಎನ್. ಚನ್ನಬಸಪ್ಪ ಮತ್ತು ಡಿ.ಎಸ್. ಅರುಣ್ ಉದ್ಘಾಟಿಸಲಿದ್ದಾರೆ. ಸಂಘದ ಅಧ್ಯಕ್ಷ ಭೂಪಾಳಂ, ಶಶಿಧರ್, ಅಶ್ವತ್ಥ್ ನಾರಾಯಣ ಶೆಟ್ಟಿ ಸೇರಿದಂತೆ ಜನಪ್ರತಿನಿಧಿಗಳು, ನಮ್ಮ ಸಮಾಜದ ಮುಖಂಡರುಗಳು ಭಾಗವಹಿಸಲಿದ್ದಾರೆ ಎಂದರು.

ಪತ್ರಿಕಾಗೋಷ್ಠಿಯಲ್ಲಿ ಮಹಿಳಾ ಸಂಘದ ಪದಾಧಿಕಾರಿಗಳಾದ ಕವಿತಾ ಸಂತೋಷ್, ರಾಧಿಕಾ ಮಾಲ್ತೇಶ್, ನಮ್ರತಾ ಪ್ರಶಾಂತ್, ಅನಿತಾ ರಘು, ವಿಜಯಾ ದತ್ತಕುಮಾರ್, ಸುಷ್ಮಾ ಅರವಿಂದ್, ಗೀತಾ, ಸುಮಾ ನಟರಾಜ್ ಇದ್ದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news











Discussion about this post