ಕೇಂದ್ರ ಸರ್ಕಾರಕ್ಕೆ 9 ವರ್ಷ ತುಂಬಿದ ಸುಸಂದರ್ಭದಲ್ಲಿ ಪ್ರಧಾನಿ ಮೋದಿ ಅವರ ಸೂಚನೆಯಂತೆ ಅಭಿವೃದ್ಧಿ ಕಾರ್ಯಗಳಿಗೆ ವೇಗ ಹೆಚ್ಚಿಸಲು ಎಲ್ಲಾ ಸಂಸದರು ವಿಕಾಸತೀರ್ಥ ರ್ಯಾಲಿ ಅಂಗವಾಗಿ ಸ್ಥಳ ವೀಕ್ಷಣೆ ಕಾರ್ಯಕ್ರಮ ಹಮ್ಮಿಕೊಂಡಿದ್ದೇವೆ ಎಂದು ಸಂಸದ ಬಿ.ವೈ. ರಾಘವೇಂದ್ರ MP Raghavendra ಹೇಳಿದರು.
ಅವರು ಇಂದು ವಿದ್ಯಾನಗರದ ರೈಲ್ವೇ ಮೇಲ್ಸೇತುವೆ ಕಾಮಗಾರಿ ವೀಕ್ಷಿಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿ, 44 ಕೋಟಿ ರೂ. ವೃತ್ತಾಕಾರದ ಸೇತುವೆ ಕಾಮಗಾರಿ ಮುಗಿಯುವ ಹಂತದಲ್ಲಿದ್ದು, ರೈಲ್ವೇ ಟ್ರ್ಯಾಕ್ ಕ್ರಾಸಿಂಗ್ ನಲ್ಲಿ ಮೇಲ್ ಕವಚ ಎತ್ತಿ ಇಡುವ ಕೆಲಸ ಬಾಕಿ ಇದೆ. ಆ.15ಕ್ಕೆ ನಾಗರಿಕರಿಗೆ ಇದು ಕೊಡುಗೆಯಾಗಿ ಸಮರ್ಪಣೆಯಾಗಲಿದೆ ಎಂದರು.
ಭದ್ರಾವತಿ ಕಡದಕಟ್ಟೆ ರೈಲ್ವೇ ಲೆವೆಲ್ ಕ್ರಾಸಿಂಗ್ ಹಂತ ಹಂತವಾಗಿ ಲೋಕಾರ್ಪಣೆಯಾಗಲಿದೆ. ಈ ಬಗ್ಗೆ ಹುಬ್ಬಳ್ಳಿಯಲ್ಲಿ ರೈಲ್ವೇ ಜಿಎಂ ಅವರೊಂದಿಗೆ ಸಭೆ ನಡೆಸಲಾಗಿದೆ. ಡಿಸೆಂಬರ್ ಒಳಗೆ ರೈಲ್ವೇ ಮೇಲ್ಸೇತುವೆ ಕಾಮಗಾರಿಗಳು ಪೂರ್ಣವಾಗಲಿವೆ ಎಂದು ಹೇಳಿದರು.
ಭದ್ರಾವತಿಯ ವಿಐಎಸ್ಎಲ್ ಕಾರ್ಖಾನೆ ಪುನಶ್ಚೇತನ ವಿಚಾರವಾಗಿ ಸಂಬಂಧಪಟ್ಟ ಸಚಿವರ ಬಳಿ ಚರ್ಚೆ ನಡೆಸಿದ್ದೇನೆ. ಹಣಕಾಸು ಸಚಿವರಿಗೂ ಮನವಿ ಮಾಡಿದ್ದು, ಸೇಲ್ ಅಧ್ಯಕ್ಷರೊಂದಿಗೆ ಈ ವಿಚಾರವಾಗಿ ಮಾತನಾಡಿದ್ದೇನೆ ಎಂದರು.
ರೈಲ್ವೆ ಕ್ಷೇತ್ರದಲ್ಲೂ ಕೂಡ ಮಹತ್ತರ ಬದಲಾವಣೆಯಾಗಿವೆ. ಶಿವಮೊಗ್ಗ-ಶಿಕಾರಿ
ಅಭಿವೃದ್ಧಿ ವಿಚಾರದಲ್ಲಿ ರಾಜಕಾರಣ ಬೇಡ ಎಂದು ಹೇಳಿದ ಸಂಸದರು, ಶಿವಮೊಗ್ಗದ ವಿಮಾನ ನಿಲ್ದಾಣದಿಂದ ಲಾಭ ಆಗಲಿದೆ. ಶಿವಮೊಗ್ಗದಿಂದ ಹಲವಾರು ಜನರು ದೆಹಲಿಗೆ ಸಂಚರಿಸುತ್ತಾರೆ. ಪ್ರವಾಸೋದ್ಯಮ, ಕೈಗಾರಿಕಾ ವಲಯ ಅಭಿವೃದ್ಧಿಗೆ ಇದು ಪೂರಕವಾಗಿದೆ. ಈಗಾಗಲೇ ನಾವು ಇಂಡಿಗೋ ಸಂಸ್ಥೆಗೆ ಸಬ್ಸಿಡಿ ನೀಡಿದ್ದೇವೆ. ಆ.11 ರಿಂದ ವಿಮಾನ ಹಾರಾಟ ಆರಂಭವಾಗಲಿದೆ. ಈಗಾಗಲೇ ಇಂಟರ್ ನ್ಯಾಷನಲ್ ಕೋಡ್ ಆರ್.ಕ್ಯೂ.ವೈ. ಶಿವಮೊಗ್ಗ ವಿಮಾನ ನಿಲ್ದಾಣಕ್ಕೆ ನೀಡಲಾಗಿದೆ ಎಂದು ಮಾಹಿತಿ ನೀಡಿದರು.
ರಾಜಕಾರಣಕ್ಕಾಗಿ ಗೋ ಹತ್ಯೆ ನಿಷೇಧ ಕಾಯ್ದೆ ಜಾರಿ ಹಿಂಪಡೆಯಲು ರಾಜ್ಯ ಕಾಂಗ್ರೆಸ್ ಸರ್ಕಾರ ನಿರ್ಧಾರ ಮಾಡಿದೆ. ಈ ಬಗ್ಗೆ ಪಶು ಸಂಗೋಪನೆ ಇಲಾಖೆ ಸಚಿವರು ಹೇಳಿದ್ದಾರೆ. ಗೋವನ್ನು ತಾಯಿಯ ಹಾಗೆ ನಾವು ಪೂಜಿಸುತ್ತೇವೆ. ಈ ಕಾಯ್ದೆ ಹಿಂಪಡೆಯುವುದು ಎಷ್ಟರ ಮಟ್ಟಿಗೆ ಸರಿ ಎಂದು ಸಂಸದರು ಪ್ರಶ್ನಿಸಿದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post