ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ಇತ್ತೀಚೆಗೆ ಅಸ್ತಿತ್ವಕ್ಕೆ ಬಂದಿರುವ ಶ್ರೀ ಶಂಕರ ಚೈತನ್ಯ ವೇದಿಕೆ ಉದ್ಘಾಟನಾ ಸಮಾರಂಭವು ಫೆ.21ರ ಸಂಜೆ 4 ಗಂಟೆಗೆ ಶ್ರೀ ಕೋಟೆ ದುರ್ಗಾಪರಮೇಶ್ವರಿ ದೇವಸ್ಥಾನದ ಆವರಣದಲ್ಲಿರುವ ಆಚಾರ್ಯತ್ರಯರ ಭವನದಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು ವೇದಿಕೆಯ ಅಧ್ಯಕ್ಷ ಪಿ.ಎಂ.ಮಾಲತೇಶ್ ತಿಳಿಸಿದರು.
ಅವರಿಂದು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಸಾಮಾಜಿಕ ಚಟುವಟಿಕೆಗಳ ವೇದಿಕೆಯಾಗಿದ್ದು, ಅಂದು ನಡೆಯಲಿರುವ ಕಾರ್ಯಕ್ರಮವು ವಿಪ್ರ ಚೈತನ್ಯ ಸಮಾವೇಶ ಎಂಬ ನಾಮಪದದಿಂದ ನಡೆಯಲಿದೆ ಎಂದರು.
ರಾಜ್ಯ ಸರ್ಕಾರದ ವತಿಯಿಂದ ಈವರೆಗೆ ವಿಪ್ರ ಸಮುದಾಯದವರಿಗೆ ನೀಡಿರುವ ಸೌಲಭ್ಯಗಳ ಬಗ್ಗೆ ವಿಚಾರ ಸಂಕಿರಣ ನಡೆಯಲಿದ್ದು, ವಿಪ್ರ ಸಮುದಾಯದ ಹಲವು ವರ್ಗಗಳನ್ನು ಅಸಂಘಟಿತ ವರ್ಗ ಎಂದು ಘೋಷಿಸಿದ್ದು, ಈವರೆಗೆ ಅರ್ಜಿ ಸಲ್ಲಿಸಿದ್ದ ಅರ್ಚಕರು, ಪುರೋಹಿತರು, ಅಡುಗೆ ಕೆಲಸ ಮಾಡುವವರಿಗೆ ಸಾಂಕೇತಿಕ ಕಾರ್ಮಿಕ ಕಾರ್ಡ್ಗಳನ್ನು ಅಂದು ವಿತರಿಸಲಾಗುವುದು. ಅರ್ಜಿ ಹಾಕಿದವರೆಲ್ಲರೂ ಈ ಕಾರ್ಯಕ್ರಮದಲ್ಲಿ ಹಾಜರಿರಬೇಕೆಂದು ಅವರು ಕೋರಿದರು.
ಧಾರ್ಮಿಕ ದತ್ತಿ ಇಲಾಖೆ ಮತ್ತು ಕರ್ನಾಟಕ ರಾಜ್ಯ ಬ್ರಾಹ್ಮಣ ಅಭಿವೃದ್ಧಿ ಮಂಡಳಿಯಿಂದ ರೂಪಿಸಿರುವ ಅನೇಕ ಕಾರ್ಯಕ್ರಮಗಳ ಮಾಹಿತಿ ಮತ್ತು ವಿಪ್ರ ಫಲಾನುಭವಿಗಳಿಗೆ ಹಣ ಸಂದಾಯದ ಮಾಹಿತಿಯನ್ನು ಈ ಕಾರ್ಯಕ್ರಮದಲ್ಲಿ ನೀಡಲಾಗುವುದು ಎಂದರು.
ಕಂದಾಯ ಸಚಿವ ಕೃಷ್ಣಭೈರೇಗೌಡ ಉಪಸ್ಥಿತಿಯಲ್ಲಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ದಿನೇಶ್ ಗುಂಡೂರಾವ್ ಈ ಕಾರ್ಯಕ್ರಮವನ್ನು ಉದ್ಘಾಟಿಸಲಿದ್ದು, ಕಾರ್ಮಿಕ ಸಚಿವ ಸಂತೋಷ್ ಲಾಡ್ ವಿಪ್ರ ಬಾಂಧವರಿಗೆ ಕಾರ್ಡ್ ವಿತರಿಸುವರು. ಸಾರಿಗೆ ಮತ್ತು ಮುಜರಾಯಿ ಇಲಾಖೆ ಸಚಿವ ರಾಮಲಿಂಗರೆಡ್ಡಿ ವಿಪ್ರ ಬಾಂಧವರಿಗೆ ವಿವಿಧ ಸೌಲಭ್ಯಗಳ ಮಾಹಿತಿ ನೀಡಲಿದ್ದಾರೆ.
ಮುಖ್ಯ ಅತಿಥಿಯಾಗಿ ಜಿಲ್ಲಾ ಉಸ್ತುವಾರಿ ಸಚಿವ ಮಧು ಬಂಗಾರಪ್ಪ, ಯೋಜನಾ ಆಯೋಗದ ಅಧ್ಯಕ್ಷ ಆರ್.ವಿ.ದೇಶಪಾಂಡೆ, ಶಾಸಕರಾದ ಬಿ.ಕೆ.ಸಂಗಮೇಶ್ವರ್, ಗೋಪಾಲಕೃಷ್ಣ ಬೇಳೂರು, ಎಸ್.ಎನ್.ಚನ್ನಬಸಪ್ಪ, ಮಾಜಿ ಉಪಮುಖ್ಯಮಂತ್ರಿ ಕೆ.ಎಸ್.ಈಶ್ವರಪ್ಪ, ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ಮಾಜಿ ಅಧ್ಯಕ್ಷ ಜಯಪ್ರಕಾಶ ಹೆಗಡೆ, ರಾಜ್ಯ ಬ್ರಾಹ್ಮಣ ಅಭಿವೃದ್ಧಿ ಮಂಡಳಿ ಅಧ್ಯಕ್ಷ ಅಸಗೋಡು ಜಯಸಿಂಹ, ಜಿಲ್ಲಾ ಬ್ರಾಹ್ಮಣ ಮಹಾಸಭಾದ ಅಧ್ಯಕ್ಷ ಕೆ.ಸಿ.ನಟರಾಜ್ ಭಾಗವತ್, ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಆರ್.ಪ್ರಸನ್ನಕುಮಾರ್, ಮಾಜಿ ಶಾಸಕ ಕೆ.ಬಿ.ಪ್ರಸನ್ನಕುಮಾರ್, ಸೂಡಾಧ್ಯಕ್ಷ ಹೆಚ್.ಎಸ್.ಸುಂದರೇಶ್ ಹಾಗೂ ಇನ್ನಿತರರು ಆಗಮಿಸಲಿದ್ದಾರೆ ಎಂದರು.
ಪತ್ರಿಕಾಗೋಷ್ಠಿಯಲ್ಲಿ ವೇದಿಕೆಯ ಉಪಾಧ್ಯಕ್ಷ ಕೆ. ವೆಂಕಟೇಶ್ ರಾವ್, ಕಾರ್ಯದರ್ಶಿ ಸಂತೋಷ್ಕುಮಾರ್, ಖಜಾಂಚಿ ಎಂ.ಎನ್. ಸುಂದರಾಜ್, ವೇ ಬ್ರ ಶ್ರೀ ಶಂಕರಾನಂದ ಜೋಯಿಸ್, ಅಕ್ಷಯ್, ಸುವರ್ಣಾಶಾಸ್ತ್ರಿ, ಜಯಕುಮಾರ್ ಉಪಾಧ್ಯ, ಆರತಿ ತಿವಾರಿ, ಕೆ.ವಿ. ಮುರಳೀಧರ, ಅನಂತರಾವ್ ಉಪಸ್ಥಿತರಿದ್ದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news 

















