ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ರಾಜ್ಯದಲ್ಲಿ ಅಹಿಂದ ನಾಯಕ ಸಿದ್ದರಾಮಯ್ಯ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರ ಸಮರ್ಥ ನಾಯಕತ್ವದೊಂದಿಗೆ ಕಾಂಗ್ರೆಸ್ ಬಹುಮತದಿಂದ ಆಯ್ಕೆಯಾಗಿದ್ದು, ಸಿದ್ದರಾಮಯ್ಯ ಅವರ ಸಚಿವ ಸಂಪುಟಲ್ಲಿ ಶಿವರಾಜ್ ತಂಗಡಗಿ ಅವರಿಗೆ ಕ್ಯಾಬಿನೆಟ್ ದರ್ಜೆಯ ಸಚಿವ ಸ್ಥಾನ ನೀಡಬೇಕೆಂದು ಭೋವಿ ಸಮಾಜ ಜಿಲ್ಲಾ ಯುವ ಮುಖಂ ಡರು ಹಾಗೂ ಶ್ರೀ ಗುರು ಸಿದ್ದರಾಮೇಶ್ವರ ಭೋವಿ ವಿವಿಧೋಶ ಸಹಕಾರ ಸಂಘದ ನಿರ್ದೇಶಕ ವೀರೇಶ್ ಕ್ಯಾತನಕೊಪ್ಪ ಒತ್ತಾಯಿಸಿದ್ದಾರೆ.
ಈ ಬಗ್ಗೆ ಪತ್ರಿಕಾ ಹೇಳಿಕೆ ನೀಡಿರುವ ಅವರು, ರಾಜ್ಯದಲ್ಲಿ ಸ್ಪಷ್ಟ ಬಹುಮತದೊಂದಿಗೆ ಅಧಿಕಾರಕ್ಕೆ ಬಂದಿರುವ ಕಾಂಗ್ರೆಸ್ ಪಕ್ಷ ರಾಜ್ಯದಲ್ಲಿ ಜನಸಂಖ್ಯೆ ಯಲ್ಲಿ ಆರನೇ ಸ್ಥಾನ ಹೊಂದಿರುವ ಭೋವಿ ಸಮಾಜವನ್ನು ಪರಿಗಣಿಸಬೇಕು. ಕಾಂಗ್ರೆಸ್ ಪಕ್ಷದಿಂದ ಸ್ಪರ್ಧಿಸಿದ್ದ ಭೋವಿ ಸಮಾಜದ ಮೂರು ಜನ ಶಾಸಕರಾಗಿ ಗೆಲುವು ಸಾಧಿಸಿದ್ದಾರೆ. ಅದರಲ್ಲಿ ಹಿರಿಯರು ಹಾಗೂ ಮಾಜಿ ಸಚಿವರಾಗಿದ್ದ ಶಿವರಾಜ್ ತಂಗಡಗಿ ರವರಿಗೆ ಕ್ಯಾಬಿನೆಟ್ ದರ್ಜೆಯ ಮಂತ್ರಿ ಸ್ಥಾನವನ್ನು ನೀಡಿ ಪಕ್ಷದಲ್ಲಿ ಸೂಕ್ತವಾದ ಗೌರವವನ್ನು ನೀಡಿ ಭೋವಿ ಸಮಾಜದ ಅಭಿವೃದ್ಧಿಗೆ ಶ್ರಮಿಸಲು ಅವಕಾಶ ನೀಡಬೇಕು ಎಂದು ಮನವಿ ಮಾಡಿದ್ದಾರೆ.
ಈ ಹಿಂದೆ ಬಿಜೆಪಿ ಸರ್ಕಾರದಲ್ಲಿ ಆಗಿರುವ ಒಳ ಮೀಸಲಾತಿ ಮಾಡುವಾಗ ಭೋವಿ ಸಮಾಜಕ್ಕೆ ಕಡಿಮೆ ಪರ್ಸೆಂಟೇಜ್ ಸಿಗುವಂತೆ ಮಾಡಿರುವ ಅವೈಜ್ಞಾನಿಕ ಪದ್ಧತಿಯನ್ನು ವಿರೋಧಿಸಲು ಹಾಗೂ ಭೋವಿ ನಿಗಮ ಮಂಡಳಿಗೆ ಅಧ್ಯಕ್ಷರನ್ನು ನೇಮಿಸಲು ನಿರಂತರ ಸರ್ಕಾರದ ಗಮನ ಸೆಳೆಯಲು ಶಿವರಾಜ್ ತಂಗಡಗಿ ಅವರಿಗೆ ಮಂತ್ರಿ ಸ್ಥಾನ ಕಲ್ಪಿಸಿ ಕೊಡಬೇಕೆಂದು ಒತ್ತಾಯಿಸಿದ್ದಾರೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post