ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ಶಿವಮೊಗ್ಗದಲ್ಲಿ ಜಿಲ್ಲಾ ಕಾಂಗ್ರೆಸ್ ವತಿಯಿಂದ ಇಂದು ‘ವೋಟ್ ಚೋರ್ ಗದ್ದಿ ಚೋಡ್’ ಅಭಿಯಾನಕ್ಕೆ ನಗರದ ಖಾಸಗಿ ಬಸ್ ನಿಲ್ದಾಣದ ಮುಂಭಾಗ ಜಿಲ್ಲಾ ಉಸ್ತುವಾರಿ ಸಚಿವ ಎಸ್. ಮಧು ಬಂಗಾರಪ್ಪ ಚಾಲನೆ ನೀಡಿದರು.
ಈ ಸಂದರ್ಭದಲ್ಲಿ ಮಾತನಾಡಿದ ಅವರು, ಕೇಂದ್ರ ಸರ್ಕಾರ ನಮ್ಮ ಗ್ಯಾರಂಟಿ ಸ್ಕೀಂ ಅನ್ನು ನಕಲು ಮಾಡಿದೆ. ಜಿ.ಎಸ್.ಟಿ. ಅನ್ನು ಮೊದಲು ಪ್ರಸ್ತಾಪ ಮಾಡಿದ್ದು ಯುಪಿಎ ಸರ್ಕಾರ. ಆಧಾರ್ ಕಾರ್ಡ್ ಅನ್ನು ಮೊದಲು ತರಲು ನಿರ್ಧರಿಸಿದ್ದು ಕೂಡ ಕಾಂಗ್ರೆಸ್ ಸರ್ಕಾರ. ಆದರೆ ಆಗ ವಿರೋಧಿಸಿದ್ದ ಬಿಜೆಪಿ ತಾನು ಅಧಿಕಾರಕ್ಕೆ ಬಂದ ಮೇಲೆ ಅದನ್ನೇ ನಕಲು ಮಾಡುತ್ತಿದೆ. ದೇಶದಾದ್ಯಂತ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ಪ್ರಧಾನಿ ಮೋದಿಗೆ ಸಿಂಹಸ್ವಪ್ನವಾಗಿದ್ದಾರೆ ಎಂದರು.

ನಮಗೆ ಹಿರಿಯರು ಕೊಟ್ಟ ಮತದಾನ ಹಕ್ಕನ್ನು ಉಳಿಸುವುದು ಪ್ರತಿ ನಾಗರಿಕರ ಕೆಲಸವಾಗಿದೆ. ನಮ್ಮ ವೋಟು ನಮ್ಮ ಹಕ್ಕು ನಮ್ಮ ಅಧಿಕಾರ ನಮ್ಮ ಕೈಯಲ್ಲೇ ಇರಬೇಕು. ಈ ಬಗ್ಗೆ ಜಾಗೃತಿ ಮೂಡಿಸುತ್ತಿದ್ದೇವೆ ಎಂದರು.

ಬಿಜೆಪಿ ನಾಯಕರ ವಿರುದ್ಧ ಮಾತನಾಡಿದರೆ ಕೇಂದ್ರ ಸರ್ಕಾರ ಐಟಿ, ಇಡಿ ಬಳಸಿ ಬಾಯಿ ಮುಚ್ಚುವ ಕೆಲಸ ಮಾಡುತ್ತಿದೆ. ವಿಪರ್ಯಾಸವೆಂದರೆ ಶೇ. 80ರಷ್ಟು ಮಾಧ್ಯಮದವರು ಕೇಂದ್ರ ಸರ್ಕಾರದ ವಿರುದ್ಧ ಸುದ್ದಿ ಮಾಡುವುದಿಲ್ಲ. ಮಾಧ್ಯಮ ಕ್ಷೇತ್ರ ಕೆಲವೇ ವ್ಯಕ್ತಿಗಳ ಕೈಯಲ್ಲಿದೆ. ಕೆಲವೊಂದು ಮಾಧ್ಯಮಗಳು ಮಾತ್ರ ಸರ್ಕಾರದ ವಿರುದ್ಧ ಬರೆಯುತ್ತದೆ. ಜನತೆಗೆ ಕೊಟ್ಟ ಹಕ್ಕನ್ನು ಕೇಂದ್ರ ಸರ್ಕಾರ ಕಸಿದಿದೆ. ಹಿಂದುಳಿದ, ಅಲ್ಪಸಂಖ್ಯಾತ, ದಲಿತ ಮತಗಳ ಕಾಂಗ್ರೆಸ್ ತಿಜೋರಿಗೆ ಕನ್ನ ಹಾಕಿದೆ. ಮತಗಳ್ಳತನ ಮಾಡಿದ ದಾಖಲೆಯನ್ನು ರಾಹುಲ್ ಗಾಂಧಿ ಹಲವು ಬಾರಿ ಬಹಿರಂಗಪಡಿಸಿ ಚುನಾವಣಾ ಆಯೋಗಕ್ಕೂ ದೂರು ನೀಡಿದ್ದಾರೆ. ಆದರೆ ಮತ್ತೆ ಮತ್ತೆ ಚುನಾವಣಾ ಆಯೋಗ ಸಾಕ್ಷಿ ಕೇಳುತ್ತದೆ ಎಂದರು.

ಈ ಸಂದರ್ಭದಲ್ಲಿ ಬೃಹತ್ ಬ್ಯಾನರ್ ಗೆ ಸಹಿ ಹಾಕುವುದರ ಮೂಲಕ ಅಭಿಯಾನಕ್ಕೆ ಚಾಲನೆ ನೀಡಲಾಯಿತು. ಕಾಂಗ್ರೆಸ್ ಜಿಲ್ಲಾಧ್ಯಕ್ಷ ಆರ್. ಪ್ರಸನ್ನಕುಮಾರ್, ಶಾಸಕಿ ಬಲ್ಕೀಶ್ ಬಾನು, ಪ್ರಮುಖರಾದ ಆಯನೂರು ಮಂಜುನಾಥ್, ಧರ್ಮಸೇನಾ, ತಿಪ್ಪೇಸ್ವಾಮಿ, ಎನ್. ರಮೇಶ್, ಹೆಚ್.ಎಸ್. ಸುಂದರೇಶ್, ರಮೇಶ್ ಶಂಕರಘಟ್ಟ, ಶ್ವೇತಾ ಬಂಡಿ, ಜಿ.ಡಿ. ಮಂಜುನಾಥ್, ಹೆಚ್.ಸಿ. ಯೋಗೀಶ್, ಎಸ್.ಕೆ. ಮರಿಯಪ್ಪ, ಶರತ್ ಮರಿಯಪ್ಪ, ಪಿ.ಒ. ಶಿವಕುಮಾರ್, ಕಲಗೋಡು ರತ್ನಾಕರ್, ಪಿ.ಎಸ್. ಗಿರೀಶ್ ರಾವ್, ಇಸ್ಮಾಯಿಲ್ ಖಾನ್, ಇಕ್ಕೇರಿ ರಮೇಶ್, ಹರ್ಷಿತ್ ಗೌಡ, ರಮೇಶ್ ಹೆಗ್ಡೆ ಮತ್ತಿತರರು ಇದ್ದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news 



















Discussion about this post