No Result
View All Result
ಚಿತ್ರೋದ್ಯಮಕ್ಕೆ‌ ಹೊಸ ಕಳೆ ತಂದ ಹೇಮಂತ್ ಹವಾ!
English Articles

Indian Railways | Partial Cancellation of Trains on Bengaluru–Chennai

by kalpa News
July 10, 2026
0

Kalpa Media House  | Bengaluru | Southern Railway has announced the partial cancellation of certain train services to facilitate the...

Read moreDetails
ಫೆ.1 ರಿಂದ 7ರವರೆಗೆ ಈ ಪ್ರದೇಶಗಳಲ್ಲಿ ನಿಷೇಧಾಜ್ಞೆ ಜಾರಿ: ಡಿಸಿ ಪ್ರಭುಲಿಂಗ ಕವಳಿಕಟ್ಟಿ

Shivamogga SIR | District Achieves 81% e-Form Distribution

July 8, 2026
Messi Creates History Again as Argentina Reach Quarterfinals

Messi Creates History Again as Argentina Reach Quarterfinals

July 8, 2026
Culture & Tradition Shine as Rudraksham Marks Milestone Achievement

Culture & Tradition Shine as Rudraksham Marks Milestone Achievement

July 8, 2026
MEIL Completes Historic Largest Concrete Pour for PHWR at Kaiga

MEIL Completes Historic Largest Concrete Pour for PHWR at Kaiga

July 6, 2026
  • Advertise With Us
  • Grievances
  • About Us
  • Contact Us
Sunday, July 12, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ

ವೋಟ್ ಚೋರ್ ಗದ್ದಿ ಚೋಡ್’ ಅಭಿಯಾನ | ಸಚಿವ ಮಧು ಬಂಗಾರಪ್ಪ ಚಾಲನೆ

kalpa News by kalpa News
September 22, 2025
in ಶಿವಮೊಗ್ಗ
0
ವೋಟ್ ಚೋರ್ ಗದ್ದಿ ಚೋಡ್’ ಅಭಿಯಾನ | ಸಚಿವ ಮಧು ಬಂಗಾರಪ್ಪ ಚಾಲನೆ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ  |

ಶಿವಮೊಗ್ಗದಲ್ಲಿ ಜಿಲ್ಲಾ ಕಾಂಗ್ರೆಸ್ ವತಿಯಿಂದ ಇಂದು ‘ವೋಟ್ ಚೋರ್ ಗದ್ದಿ ಚೋಡ್’ ಅಭಿಯಾನಕ್ಕೆ ನಗರದ ಖಾಸಗಿ ಬಸ್ ನಿಲ್ದಾಣದ ಮುಂಭಾಗ ಜಿಲ್ಲಾ ಉಸ್ತುವಾರಿ ಸಚಿವ ಎಸ್. ಮಧು ಬಂಗಾರಪ್ಪ ಚಾಲನೆ ನೀಡಿದರು.

ಈ ಸಂದರ್ಭದಲ್ಲಿ ಮಾತನಾಡಿದ ಅವರು, ಕೇಂದ್ರ ಸರ್ಕಾರ ನಮ್ಮ ಗ್ಯಾರಂಟಿ ಸ್ಕೀಂ ಅನ್ನು ನಕಲು ಮಾಡಿದೆ. ಜಿ.ಎಸ್.ಟಿ. ಅನ್ನು ಮೊದಲು ಪ್ರಸ್ತಾಪ ಮಾಡಿದ್ದು ಯುಪಿಎ ಸರ್ಕಾರ. ಆಧಾರ್ ಕಾರ್ಡ್ ಅನ್ನು ಮೊದಲು ತರಲು ನಿರ್ಧರಿಸಿದ್ದು ಕೂಡ ಕಾಂಗ್ರೆಸ್ ಸರ್ಕಾರ. ಆದರೆ ಆಗ ವಿರೋಧಿಸಿದ್ದ ಬಿಜೆಪಿ ತಾನು ಅಧಿಕಾರಕ್ಕೆ ಬಂದ ಮೇಲೆ ಅದನ್ನೇ ನಕಲು ಮಾಡುತ್ತಿದೆ. ದೇಶದಾದ್ಯಂತ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ಪ್ರಧಾನಿ ಮೋದಿಗೆ ಸಿಂಹಸ್ವಪ್ನವಾಗಿದ್ದಾರೆ ಎಂದರು.
ಮತಗಳ್ಳತನ ಮಾಡಿ ಪ್ರಜಾಪ್ರಭುತ್ವದ ಕೊಲೆ ಮಾಡಿ ಅಧಿಕಾರಕ್ಕೆ ಬಂದ ಬಿಜೆಪಿ ಸರ್ಕಾರದ ವಿರುದ್ಧ ಎಲ್ಲಾ ತಾಲೂಕು ಮಟ್ಟದಲ್ಲೂ ಮತಗಳ್ಳತನದ ಬಗ್ಗೆ ಸಾರ್ವಜನಿಕರಲ್ಲಿ ಅರಿವು ಮೂಡಿಸುತ್ತೇವೆ. ಇಡೀ ಭಾರತ ಒಂದಾಗಲು ರಾಹುಲ್ ಗಾಂಧಿ ಅವರು ಕನ್ಯಾಕುಮಾರಿಯಿಂದ ಕಾಶ್ಮೀರದವರೆಗೆ ಪಾದಯಾತ್ರೆ ಮಾಡಿದ್ದಾರೆ. ಅದೇ ರೀತಿ ಈಗ ಮತಗಳ್ಳತನ ಅಭಿಯಾನ ಪ್ರಾರಂಭವಾಗಿದೆ. ಕಾಂಗ್ರೆಸ್ ಯಾವಾಗಲು ಜನ ಸಾಮಾನ್ಯರ ಪಕ್ಷವಾಗಿದ್ದು ಪ್ರಜಾಪ್ರಭುತ್ವ ಉಳಿಸುವ ಕೆಲಸ ಮಾಡುತ್ತಾ ಬಂದಿದೆ. ಬಿಜೆಪಿ ಜಾತಿ ಧರ್ಮದ ಹೆಸರಲ್ಲಿ ದೇಶ ಒಡೆಯುವ ಕೆಲಸ ಮಾಡುತ್ತಿದೆ. ನಾವು ಜಾತಿಗಣತಿ ಮಾಡುತ್ತಿಲ್ಲ. ಸಿಎಂ ಎಲ್ಲೂ ಕೂಡ ಜಾತಿ ಗಣತಿ ಎಂದು ಹೇಳಿಲ್ಲ. ಇವತ್ತಿನಿಂದ ಪ್ರಾರಂಭವಾದ ಸಮೀಕ್ಷೆ ರಾಜ್ಯದ ಆರ್ಥಿಕ, ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆಯಾಗಿದೆ. ಜಾತಿಗಣತಿ ಹೆಸರಲ್ಲಿ ಸಮಾಜದಲ್ಲಿ ಬೆಂಕಿ ಹಚ್ಚುವ ಕೆಲಸವನ್ನು ಬಿಜೆಪಿ ಮಾಡುತ್ತಿದೆ ಎಂದರು.

ನಮಗೆ ಹಿರಿಯರು ಕೊಟ್ಟ ಮತದಾನ ಹಕ್ಕನ್ನು ಉಳಿಸುವುದು ಪ್ರತಿ ನಾಗರಿಕರ ಕೆಲಸವಾಗಿದೆ. ನಮ್ಮ ವೋಟು ನಮ್ಮ ಹಕ್ಕು ನಮ್ಮ ಅಧಿಕಾರ ನಮ್ಮ ಕೈಯಲ್ಲೇ ಇರಬೇಕು. ಈ ಬಗ್ಗೆ ಜಾಗೃತಿ ಮೂಡಿಸುತ್ತಿದ್ದೇವೆ ಎಂದರು.
ವಿಧಾನ ಪರಿಷತ್ ಸದಸ್ಯ ಮಂಜುನಾಥ್ ಭಂಡಾರಿ ಮಾತನಾಡಿ, ಆಧಾರ್ ಕಾರ್ಡ್, ಜಿ.ಎಸ್.ಟಿ. ಸೇರಿದಂತೆ ಅನೇಕ ಅಭಿವೃದ್ಧಿ ಕಾರ್ಯಗಳನ್ನು ಹುಟ್ಟು ಹಾಕಿದ ಕಾಂಗ್ರೆಸ್ ಸರ್ಕಾರದ ವಿರುದ್ಧ ಹಿಂದೆ ಬಿಜೆಪಿ ಅಪಪ್ರಚಾರ ಮಾಡಿತ್ತು. ಈಗ ಜಾರಿಗೆ ತಂದಿದೆ. ಪ್ರಜಾಪ್ರಭುತ್ವದ ಇತಿಹಾಸದಲ್ಲಿ ಮಹದೇವಪುರ ಕ್ಷೇತ್ರವೊಂದರಲ್ಲೇ ಒಂದು ಲಕ್ಷ ಮತಗಳು ಮಾಯವಾಗಿದ್ದು, ಆಳಂದ ಕ್ಷೇತ್ರದಲ್ಲಿ 6 ಸಾವಿರ ಮತಗಳು ಮಾಯವಾಗಿದ್ದು ಎಲ್ಲವೂ ಬಿಜೆಪಿಯವರ ಮತಗಳ್ಳತನಕ್ಕೆ ಸ್ಪಷ್ಟ ಸಾಕ್ಷಿಯಾಗಿದೆ ಎಂದರು.

ಬಿಜೆಪಿ ನಾಯಕರ ವಿರುದ್ಧ ಮಾತನಾಡಿದರೆ ಕೇಂದ್ರ ಸರ್ಕಾರ ಐಟಿ, ಇಡಿ ಬಳಸಿ ಬಾಯಿ ಮುಚ್ಚುವ ಕೆಲಸ ಮಾಡುತ್ತಿದೆ. ವಿಪರ್ಯಾಸವೆಂದರೆ ಶೇ. 80ರಷ್ಟು ಮಾಧ್ಯಮದವರು ಕೇಂದ್ರ ಸರ್ಕಾರದ ವಿರುದ್ಧ ಸುದ್ದಿ ಮಾಡುವುದಿಲ್ಲ. ಮಾಧ್ಯಮ ಕ್ಷೇತ್ರ ಕೆಲವೇ ವ್ಯಕ್ತಿಗಳ ಕೈಯಲ್ಲಿದೆ. ಕೆಲವೊಂದು ಮಾಧ್ಯಮಗಳು ಮಾತ್ರ ಸರ್ಕಾರದ ವಿರುದ್ಧ ಬರೆಯುತ್ತದೆ. ಜನತೆಗೆ ಕೊಟ್ಟ ಹಕ್ಕನ್ನು ಕೇಂದ್ರ ಸರ್ಕಾರ ಕಸಿದಿದೆ. ಹಿಂದುಳಿದ, ಅಲ್ಪಸಂಖ್ಯಾತ, ದಲಿತ ಮತಗಳ ಕಾಂಗ್ರೆಸ್ ತಿಜೋರಿಗೆ ಕನ್ನ ಹಾಕಿದೆ. ಮತಗಳ್ಳತನ ಮಾಡಿದ ದಾಖಲೆಯನ್ನು ರಾಹುಲ್ ಗಾಂಧಿ ಹಲವು ಬಾರಿ ಬಹಿರಂಗಪಡಿಸಿ ಚುನಾವಣಾ ಆಯೋಗಕ್ಕೂ ದೂರು ನೀಡಿದ್ದಾರೆ. ಆದರೆ ಮತ್ತೆ ಮತ್ತೆ ಚುನಾವಣಾ ಆಯೋಗ ಸಾಕ್ಷಿ ಕೇಳುತ್ತದೆ ಎಂದರು.
ಚುನಾವಣಾ ಆಯೋಗವೇ ಈ ಮತಗಳ್ಳತನದ ಸಂಪೂರ್ಣ ಹೊಣೆ ಹೊತ್ತು ತನಿಖೆ ಮಾಡಬೇಕಾಗಿದೆ. ದೇಶದ ಜನರ ಮುಂದೆ ಸತ್ಯ ಎತ್ತಿಹಿಡಿಯಬೇಕಾಗಿದೆ ಎಂದರು.

ಈ ಸಂದರ್ಭದಲ್ಲಿ ಬೃಹತ್ ಬ್ಯಾನರ್ ಗೆ ಸಹಿ ಹಾಕುವುದರ ಮೂಲಕ ಅಭಿಯಾನಕ್ಕೆ ಚಾಲನೆ ನೀಡಲಾಯಿತು. ಕಾಂಗ್ರೆಸ್ ಜಿಲ್ಲಾಧ್ಯಕ್ಷ ಆರ್. ಪ್ರಸನ್ನಕುಮಾರ್, ಶಾಸಕಿ ಬಲ್ಕೀಶ್ ಬಾನು, ಪ್ರಮುಖರಾದ ಆಯನೂರು ಮಂಜುನಾಥ್, ಧರ್ಮಸೇನಾ, ತಿಪ್ಪೇಸ್ವಾಮಿ, ಎನ್. ರಮೇಶ್, ಹೆಚ್.ಎಸ್. ಸುಂದರೇಶ್, ರಮೇಶ್ ಶಂಕರಘಟ್ಟ, ಶ್ವೇತಾ ಬಂಡಿ, ಜಿ.ಡಿ. ಮಂಜುನಾಥ್, ಹೆಚ್.ಸಿ. ಯೋಗೀಶ್, ಎಸ್.ಕೆ. ಮರಿಯಪ್ಪ, ಶರತ್ ಮರಿಯಪ್ಪ, ಪಿ.ಒ. ಶಿವಕುಮಾರ್, ಕಲಗೋಡು ರತ್ನಾಕರ್, ಪಿ.ಎಸ್. ಗಿರೀಶ್ ರಾವ್, ಇಸ್ಮಾಯಿಲ್ ಖಾನ್, ಇಕ್ಕೇರಿ ರಮೇಶ್, ಹರ್ಷಿತ್ ಗೌಡ, ರಮೇಶ್ ಹೆಗ್ಡೆ ಮತ್ತಿತರರು ಇದ್ದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news    

http://kalpa.news/wp-content/uploads/2025/09/Vedic-Maths-New.mp4

http://kalpa.news/wp-content/uploads/2024/04/VID-20240426-WA0008.mp4

 

Tags: Kannada NewsKannada News LiveKannada News Online ShivamoggaKannada WebsiteKannadaNewsWebsiteLatestNewsKannadaLocalNewsMalnadNewsNews in KannadaNews KannadaShimogaShivamoggaNewsಮಲೆನಾಡು_ಸುದ್ಧಿಶಿವಮೊಗ್ಗಶಿವಮೊಗ್ಗ_ನ್ಯೂಸ್
Share196Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಜಾತಿ ಗಣತಿ ಮಾಡಲೇ ಬೇಡಿ, ಆರ್ಥಿಕ ಶೈಕ್ಷಣಿಕ ಸಮೀಕ್ಷೆ ಮುಂದೂಡಿ: ಈಶ್ವರಪ್ಪ ಮನವಿ

Next Post

ಸೆ.23 ಹಾಗೂ 24 | ಮೈಸೂರು-ಶಿವಮೊಗ್ಗ ಎಕ್ಸ್’ಪ್ರೆಸ್ ರೈಲು ಪ್ರಯಾಣಿಕರಿಗೆ ಇಲ್ಲಿದೆ ಮಹತ್ವದ ಮಾಹಿತಿ

kalpa News

kalpa News

Next Post
SWR to Run Special Train Services Between Bengaluru, Belagavi and Mysuru

ಸೆ.23 ಹಾಗೂ 24 | ಮೈಸೂರು-ಶಿವಮೊಗ್ಗ ಎಕ್ಸ್'ಪ್ರೆಸ್ ರೈಲು ಪ್ರಯಾಣಿಕರಿಗೆ ಇಲ್ಲಿದೆ ಮಹತ್ವದ ಮಾಹಿತಿ

Leave a Reply Cancel reply

Your email address will not be published. Required fields are marked *

No Result
View All Result
ಚಿತ್ರೋದ್ಯಮಕ್ಕೆ‌ ಹೊಸ ಕಳೆ ತಂದ ಹೇಮಂತ್ ಹವಾ!
English Articles

Indian Railways | Partial Cancellation of Trains on Bengaluru–Chennai

by kalpa News
July 10, 2026
0

Kalpa Media House  | Bengaluru | Southern Railway has announced the partial cancellation of certain train services to facilitate the...

Read moreDetails
ಫೆ.1 ರಿಂದ 7ರವರೆಗೆ ಈ ಪ್ರದೇಶಗಳಲ್ಲಿ ನಿಷೇಧಾಜ್ಞೆ ಜಾರಿ: ಡಿಸಿ ಪ್ರಭುಲಿಂಗ ಕವಳಿಕಟ್ಟಿ

Shivamogga SIR | District Achieves 81% e-Form Distribution

July 8, 2026
Messi Creates History Again as Argentina Reach Quarterfinals

Messi Creates History Again as Argentina Reach Quarterfinals

July 8, 2026
Culture & Tradition Shine as Rudraksham Marks Milestone Achievement

Culture & Tradition Shine as Rudraksham Marks Milestone Achievement

July 8, 2026
MEIL Completes Historic Largest Concrete Pour for PHWR at Kaiga

MEIL Completes Historic Largest Concrete Pour for PHWR at Kaiga

July 6, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL