ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ಶಿವಮೊಗ್ಗ ನಮಗೆ ಪ್ರತಿಷ್ಠೆಯ ಕಣವಾಗಿದ್ದು, ನೂರಕ್ಕೆ ನೂರು ಗೆಲ್ಲುತ್ತೇವೆ. ಕಾಂಗ್ರೆಸ್ ನವರು ಏನೋ ಹೇಳಬೇಕು ಹೇಳ್ತಿದ್ದಾರೆ. ಮತದಾರರು ಬಿಜೆಪಿ ಪರವಾಗಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ BSYadiyurappa ಪ್ರತಿಕ್ರಿಯೆ ನೀಡಿದ್ದಾರೆ.
ನಗರದಲ್ಲಿ ಸುದ್ಧಿಗಾರರೊಂದಿಗೆ ಮಾತನಾಡಿದ ಅವರು, ಹಿಂದುಳಿದ ವರ್ಗದ ಎಲ್ಲಾ ಸಮಾಜ ಬೆಂಬಲ ನೀಡುತ್ತಿದ್ದು, ಬೇರೆ ಬೇರೆ ಸಮಾಜದ ಸಭೆ ಮಾಡಲು ಯೋಜನೆ ರೂಪಿಸಿದ್ದೇವೆ ಎಂದರು.
ಪ್ರಸ್ತುತ ರಾಜ್ಯದಲ್ಲಿ ರಾಜಕೀಯ ವಾತಾವರಣ ಚೆನ್ನಾಗಿದೆ. ಅಮಿತ್ ಶಾ, ಮೋದಿ ರಾಜ್ಯ ಪ್ರವಾಸ ಕೈಗೊಳ್ಳಲಿದ್ದು, ನಮಗೆ ಕನಿಷ್ಟ 125-130 ಸ್ಥಾನ ಬರುತ್ತದೆ. ರಾಜ್ಯದಲ್ಲಿ ಮತ್ತೆ ನಾವು ಸರ್ಕಾರ ರಚನೆ ಮಾಡುತ್ತೇವೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.
ಸಿದ್ದರಾಮಯ್ಯ Siddaramaiah ಹೇಳಿಕೆಗೆ ಪ್ರತಿಕ್ರಿಯೆ ನೀಡಿದ ಯಡಿಯೂರಪ್ಪ, ವಿಪಕ್ಷದ ನಾಯಕ ಅನ್ನುವ ಬಗ್ಗೆ ಅರಿವಿಲ್ಲದೇ ಸಿದ್ದರಾಮಯ್ಯ ಲಿಂಗಾಯತ ಸಮಾಜದ ಬಗ್ಗೆ ಹಗುರವಾಗಿ ಮಾತನಾಡಿದ್ದಾರೆ. ಜನ ಸಿದ್ದರಾಮಯ್ಯ ಅವರಿಗೆ ತಕ್ಕ ಉತ್ತರ ಕೊಡುತ್ತಾರೆ. ಸಿದ್ದರಾಮಯ್ಯ ಗೆಲ್ಲೋದು ಕಷ್ಟ ಆಗುತ್ತದೆ. ಆ ರೀತಿ ನಾವು ತಂತ್ರ ಮಾಡುತ್ತಿದ್ದೇವೆ. ಜನ ಈ ಬಾರಿ ಕಾಂಗ್ರೆಸ್ ಗೆ ರಾಜ್ಯದಾದ್ಯಂತ ತಕ್ಕ ಪಾಠ ಕಲಿಸುತ್ತಾರೆ ಎಂದು ತಿರುಗೇಟು ನೀಡಿದ್ದಾರೆ.
ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಸಂತೋಷ್ BLSanthosh ಬಗ್ಗೆ ಆರೋಪಕ್ಕೆ ಸ್ಪಂದಿಸಿದ ಅವರು, ಸಂತೋಷ್ ನಮ್ಮ ಹಿರಿಯ ಮುಖಂಡರು. ಬಿಜೆಪಿ ಮುತ್ಸದಿ, ನಮ್ಮ ನಾಯಕರು. ಅವರ ಬಗ್ಗೆ ಹಗುರವಾಗಿ ಮಾತನಾಡಿದರೆ ಸಹಿಸಲ್ಲ. ಅವರ ಬಗ್ಗೆ ಟೀಕೆ ಮಾಡಲು ಯೋಗ್ಯತೆ ಇಲ್ಲ. ಸಂತೋಷ್ ಸಂಘಟನೆಗಾಗಿ ಕೆಲಸ ಮಾಡ್ತಿದ್ದಾರೆ. ಅವರ ಬಗ್ಗೆ ಮಾತನಾಡೋದು ಸರಿಯಲ್ಲ ಎಂದರು.
Also read: ಜೆಡಿಎಸ್ ಪಕ್ಷದ ಕಾರ್ಯಕರ್ತರೇ ನಮ್ಮ ಶಕ್ತಿ: ಶಾಸಕ ಬಂಡೆಪ್ಪ ಖಾಶೆಂಪುರ್
ರಾಹುಲ್ ಗಾಂಧಿಗೆ Rahul Gandhi ತಲೆ ತಿರುಗಿದೆ. ವೀರಶೈವರ ಬಗ್ಗೆ ರಾಹುಲ್ ಗಾಂಧಿಗೆ ಏನು ಗೊತ್ತಿದೆ? ಬಸವಣ್ಣನವರ ತತ್ವ ಸಿದ್ದಾಂತ ಏನು ಗೊತ್ತಿದೆ? ಈಗ ವೀರಶೈವರ ಬಗ್ಗೆ ಏನೋ ತಿಳಿದವರ ರೀತಿ ಮಾತನಾಡುತ್ತಿದ್ದಾರೆ. ಅಮಿತ್ ಶಾ, ಮೋದಿ ಮುಂದೆ ರಾಹುಲ್ ಗಾಂಧಿ ಯಾವ ಲೆಕ್ಕ. ಇದು ಎಲ್ಲಾ ನಡೆಯುವುದಿಲ್ಲ, ಎಂದು ರಾಹುಲ್ ಗಾಂಧಿ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post