ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ವಿವಿಧ ಸಂಘ ಸಂಸ್ಥೆಗಳ ಸಹಯೋಗದಲ್ಲಿ ನಗರದ ಪ್ರತಿಷ್ಠಿತ ಜೆಎನ್’ಎನ್’ಸಿಇ ಹಾಗೂ ಸುಬ್ಬಯ್ಯ ವೈದ್ಯಕೀಯ ಬೋಧನಾ ಆಸ್ಪತ್ರೆಯಲ್ಲಿ ಮತದಾನ ಜಾಗೃತಿ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು.
ಜಿಲ್ಲಾಡಳಿತ, ಜಿಲ್ಲಾ ಪಂಚಾಯ್ತಿ, ಜಿಲ್ಲಾ ಸ್ವೀಪ್ ಸಮಿತಿ, ರೇಡಿಯೋ ಶಿವಮೊಗ್ಗ, ಪರಿಸರ ಅಧ್ಯಯನ ಕೇಂದ್ರ, ಕೊಡಚಾದ್ರಿ ಇಂಟಿಗ್ರೇಟೆಡ್ ಡೆವೆಲೆಪ್ ಮೆಂಟ್ ಸೊಸೈಟಿ (ಕಿಡ್ಸ್) ಹಾಗೂ ರಾಷ್ಟ್ರೀಯ ಶಿಕ್ಷಣ ಸಮಿತಿ ಸಹಯೋಗದಲ್ಲಿ ಶಿವಮೊಗ್ಗದ ಜೆಎನ್’ಎನ್’ಸಿಇ ಕಾಲೇಜಿನ ಎಂಸಿಎ ವಿಭಾಗದಲ್ಲಿ ಮತದಾನ ಜಾಗೃತಿ ಹಾಗೂ ಪ್ರಥಮ ಬಾರಿಗೆ ಮತದಾನ ಮಾಡುತ್ತಿರುವವರಿಗೆ ಮತದಾನದ ಅರಿವು ಮೂಡಿಸುವ ಸರಣಿ ಕಾರ್ಯಕ್ರಮವನ್ನು ನಡೆಸಲಾಯಿತು.
ಜಿಲ್ಲಾ ಸ್ವೀಪ್ ಸಮಿತಿಯ ರಾಜ್ಯ ಮಟ್ಟದ ತರಬೇತುದಾರ ನವೀದ್ ಅಹ್ಮದ್ ಪರ್ವೇಜ್ ಮತದಾನದ ಅರಿವು ನೀಡಿ, ಮತದಾನದ ಪ್ರತಿಜ್ಞೆ ಬೋಧಿಸಿದರು. ಇದರ ಜೊತೆಗೆ ಪಿಪಿಟಿ ಮುಖಾಂತರವಾಗಿ ಚುನಾವಣಾ ರಸಪ್ರಶ್ನೆ ನಡೆಸಿಕೊಟ್ಟರು.
Also read: ಲೈಂಗಿಕ ದೌರ್ಜನ್ಯ ಪ್ರಕರಣ | ಪ್ರಜ್ವಲ್ ರೇವಣ್ಣ ವಿರುದ್ಧ ಲುಕ್ ಔಟ್ ನೋಟೀಸ್
ರಾಷ್ಟ್ರೀಯ ಶಿಕ್ಷಣ ಸಮಿತಿ ಕಾರ್ಯದರ್ಶಿ ನಾಗರಾಜ ರಾವ್, ಪ್ರಾಚಾರ್ಯ ವೈ. ವಿಜಯಕುಮಾರ್, ಸಹಾಯಕ ಪ್ರಾಧ್ಯಾಪಕ ಶ್ರೀನಿವಾಸಮೂರ್ತಿ, ಪರಿಸರ ಅಧ್ಯಯನ ಕೇಂದ್ರದ ಸಂಯೋಜಕ ದಿನೇಶ್ ಹೊಸನಗರ, ರೇಡಿಯೋ ಶಿವಮೊಗ್ಗದ ಕಾರ್ಯಕ್ರಮ ಸಂಯೋಜಕ ಕೆ.ವಿ. ಅಜೇಯ ಸಿಂಹ, ಅಭಿನಾಟ್ಯ ಇನ್ನಿತರರಿದ್ದರು.
ಏಪ್ರಿಲ್ 30ರಂದು ಮತದಾನ ಜಾಗೃತಿ ಕಾರ್ಯಕ್ರಮವನ್ನು ಶಿವಮೊಗ್ಗ ಮಹಾನಗರ ಪಾಲಿಕೆಯ ಸಹಯೋಗದೊಂದಿಗೆ ಪುರಲೆಯ ಸುಬ್ಬಯ್ಯ ಬೋಧನಾ ಆಸ್ಪತ್ರೆಯಲ್ಲಿ ನಡೆಸಲಾಯಿತು. ವೈದ್ಯಕೀಯ ವಿದ್ಯಾರ್ಥಿಗಳಿಗೆ ಮತದಾನದ ಮಹತ್ವವನ್ನು ಪಾಲಿಕೆಯ ಅಧಿಕಾರಿಗಳಾದ ಅನುಪಮಾ ಹಾಗೂ ಸುಪ್ರಿಯಾ ತಿಳಿಸಿಕೊಟ್ಟರು. ಸುಬ್ಬಯ್ಯ ಬೋಧನಾ ಆಸ್ಪತ್ರೆಯ ಪ್ರಾಚಾರ್ಯ ಡಾ. ಸಿ.ಎಂ. ಸಿದ್ದಲಿಂಗಪ್ಪ, ಆಸ್ಪತ್ರೆಯ ಸಾರ್ವಜನಿಕ ಸಂಪರ್ಕಾಧಿಕಾರಿ ನಿರಂಜನ ಮೂರ್ತಿ, ಅಭಿನಾಟ್ಯ ಇದ್ದರು
ರೇಡಿಯೋ ಶಿವಮೊಗ್ಗದ ಕಾರ್ಯಕ್ರಮ ಸಂಯೋಜಕ ಕೆ.ವಿ. ಅಜೇಯ ಸಿಂಹ ಚುನಾವಣಾ ರಸಪ್ರಶ್ನೆ ನಡೆಸಿಕೊಟ್ಟರು. ರೇಡಿಯೋ ಶಿವಮೊಗ್ಗ ನಿಲಯ ಸಂಯೋಜಕ ಗುರುಪ್ರಸಾದ್, ಬಾಲಕೃಷ್ಣ ಕಾರ್ಯಕ್ರಮವನ್ನು ನಿರೂಪಣೆ ಮಾಡಿದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post