ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ಕಾಂಗ್ರೆಸ್ ಸರ್ಕಾರ ಮತಾಂತರ ನಿಷೇಧ ಕಾನೂನನ್ನು ಹಿಂಪಡೆಯಲು ಸಚಿವ ಸಂಪುಟದಲ್ಲಿ ತೀರ್ಮಾನಿಸಿರುವುದನ್ನು ವಿಶ್ವ ಹಿಂದೂ ಪರಿಷದ್ ಖಂಡಿಸುತ್ತದೆಯಲ್ಲದೆ, ತಕ್ಷಣವೇ ವಾಪಾಸು ತೆಗೆದುಕೊಳ್ಳಲು ಆಗ್ರಹಿಸುತ್ತದೆ ಎಂದು ಪರಿಷದ್ ಜಿಲ್ಲಾಧ್ಯಕ್ಷ ಜೆ.ಆರ್. ವಾಸುದೇವ್ ಹೇಳಿದರು.
ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಭಾರತವು ಹಿಂದೂ ರಾಷ್ಟçವಾಗಿದ್ದು ಇಲ್ಲಿ ಹಿಂದುಗಳೊಡನೆ ಅನ್ಯ ಧರ್ಮೀಯರೂ ಸಹ ಸಹಬಾಳ್ವೆಗೆ ಸಂವಿಧಾನ ಅವಕಾಶ ಮಾಡಿಕೊಟ್ಟಿದೆ. ಅದರಂತೆ ಕರ್ನಾಟಕದಲ್ಲೂ ಸಹ ಹಿಂದೂಗಳೊಡನೆ ಅನ್ಯ ಧರ್ಮೀಯರೂ ಸಹ ತಮ್ಮ ಧರ್ಮ-ಮತಾಚರಣೆ ಮಾಡಲು ಅವಕಾಶವಿದೆ. ಇದನ್ನು ನಾವು ಒಪ್ಪುತ್ತೇವೆ ಮತ್ತು ಪ್ರಶ್ನಿಸುವುದಿಲ್ಲ ಎಂದರು.
ಆದರೆ ಹಿಂದೂಗಳಿಗೆ ಆಮಿಷ ತೋರಿಸಿ ಅಥವಾ ಹೆದರಿಸಿ ಬಲವಂತವಾಗಿ ಮತಾಂತರಿಸುವುದನ್ನು ಅಥವಾ ಮರುಳು ಮಾಡಿ ಮತಾಂತರಿಸುವುದನ್ನು ನಾವು ಖಂಡಿಸುತ್ತೇವೆ. ಭಾರತವು ಹಿಂದೂ ರಾಷ್ಟçವಾಗಿ ಮತ್ತು ಕರ್ನಾಟಕವು ಭಾರತದ್ದೇ ಒಂದು ಭಾಗವಾಗಿದೆ. ಇಲ್ಲಿನ ಹಿಂದೂಗಳನ್ನು ಮತಾಂತರದಿಂದ ರಕ್ಷಿಸಿ ನಮ್ಮ ಧರ್ಮವನ್ನು ಕಾಪಾಡುವುದು ಪ್ರತಿಯೊಬ್ಬ ಹಿಂದುವಿನ ಕರ್ತವ್ಯವಾಗಿದೆ. ಆದರೆ ಗ್ಯಾರಂಟಿಯ ಹೆಸರಿನಲ್ಲಿ ಅಧಿಕಾರಕ್ಕೆ ಬಂದ ಕಾಂಗ್ರೆಸ್ ಸರ್ಕಾರ ಜ್ವಲಂತ ಸಮಸ್ಯೆಗಳ ಗಮನಹರಿಸುವುದು ಬಿಟ್ಟು ಇಂತಹ ಓಲೈಕೆಯ ನಿರ್ಧಾರಗಳನ್ನು ತೆಗೆದುಕೊಳ್ಳುತ್ತಿದೆ ಎಂದರು.
Also read: ಮಕ್ಕಳೆದುರೇ ಪತ್ನಿಯನ್ನು ದೊಣ್ಣೆಯಿಂದ ಹೊಡೆದು ಕೊಂದ ಪತಿ
ಕಾಂಗ್ರೆಸ್ ಸರ್ಕಾರಕ್ಕೆ ಅನ್ಯ ಧರ್ಮೀಯರಲ್ಲದೆ ಅತಿ ಸಂಖ್ಯೆಯಲ್ಲಿ ಹಿಂದೂಗಳೂ ಸಹ ಮತ ಹಾಕಿದ್ದು ಅವರ ಮತದಿಂದಲೇ ಕಾಂಗ್ರೆಸ್ ಅಧಿಕಾರಕ್ಕೆ ಬಂದಿದೆಯೇ ಹೊರತು ಕೇವಲ ಅಲ್ಪಸಂಖ್ಯಾತರಿಂದಲ್ಲ. ಇದು ಕಾಂಗ್ರೆಸ್ ತನಗೆ ಮತ ನೀಡಿದ ಸಮಸ್ತ ಹಿಂದೂ ಸಮಾಜಕ್ಕೆ ದ್ರೋಹ ಬಗೆದಂತಾಗಿದೆ ಎಂದು ಆರೋಪಿಸಿದರು.
ಈ ಹಿಂದಿನ ಸರ್ಕಾರವು ಶಾಲಾ ಪಠ್ಯದಲ್ಲಿ ರಾಷ್ಟ್ರ ಪುರುಷರ ಪರಿಚಯವನ್ನು ಸೇರಿಸಿದ್ದನ್ನೂ ಸಹ ಸಂಕುಚಿತ ಭಾವನೆಯಿಂದ ಮತ್ತು ಅಲ್ಪ ಸಂಖ್ಯಾತರನ್ನು ತುಷ್ಟೀಕರಿಸುವ ಸಲುವಾಗಿ ಸಾವರ್ಕರ್ರವರಂತಹ ಅಪ್ರತಿಮ ದೇಶಭಕ್ತರ ಪರಿಚಯದ ಪಾಠಗಳನ್ನು ತೆಗೆಯಲು ನಿರ್ಧರಿಸಿರುವುದನ್ನೂ ಸಹ ನಾವು ಖಂಡಿಸುತ್ತೇವೆ. ಈ ರೀತಿ ಸಮಾಜದಲ್ಲಿ ಶಾಂತಿಯನ್ನು ಕದಡುವ ನಿರ್ಧಾರ ತೆಗೆದುಕೊಳ್ಳುವುದನ್ನು ಕೂಡಲೇ ನಿಲ್ಲಿಸಬೇಕು. ಇಲ್ಲದಿದ್ದಲ್ಲಿ ರಾಜ್ಯದಾದ್ಯಂತ ಹೋರಾಟ ಅನಿವಾರ್ಯ ಎಂದು ಎಚ್ಚರಿಸಿದರು.
ಪದಾಧಿಕಾರಿಗಳಾದ ನಾರಾಯಣ ಜಿ. ವರ್ಣೇ’ಕರ್, ಎಸ್.ಆರ್. ನಟರಾಜ್, ಸಚಿನ್ ನಾಯಕ್, ಕುಮಾರಸ್ವಾಮಿ, ಸುರೇಶ್ ಬಾಬು, ಸತೀಶ್ಇದ್ದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

















