No Result
View All Result
ಶಿವಮೊಗ್ಗದಲ್ಲಿ ಕ್ರೀಡಾಪಟುಗಳ ಸಾಧನೆ | ದಕ್ಷಿಣ ಭಾರತ ಕುಸ್ತಿ ಚಾಂಪಿಯನ್‌ಶಿಪ್‌ನಲ್ಲಿ ಇಬ್ಬರಿಗೆ ಚಿನ್ನ
English Articles

Shivamogga: Two Wrestlers Win Gold at South India Championship

by ಕಲ್ಪ ನ್ಯೂಸ್
June 8, 2026
0

Kalpa Media House  |  Shivamogga   | Two athletes from the District Youth Empowerment and Sports Department Sports School in Shivamogga...

Read moreDetails
ಫಿಲಿಪೈನ್ಸ್‌ನಲ್ಲಿ ಭೂಕಂಪ | 7.8 ತೀವ್ರತೆಯ ಕಂಪನಕ್ಕೆ 12 ಸಾವು | ಹಲವು ದೇಶಗಳಲ್ಲಿ ಸುನಾಮಿ ಎಚ್ಚರಿಕೆ

Magnitude 7.8 Earthquake Hits Southern Philippines, Kills 12; Tsunami Alerts Issued

June 8, 2026
ದೇಶದ ಭದ್ರತೆಗೆ ಪೂರಕವಾದ ಜೋಜಿಲಾ ಸುರಂಗ ಕಾಮಗಾರಿ ಅಂತಿಮ ಘಟ್ಟಕ್ಕೆ | ಏನಿದರ ವಿಶೇಷತೆ?

Zojila Tunnel Nears Completion | A Milestone in India’s Infrastructure & National Security

June 8, 2026
ವಿಶ್ವ ಯೋಗಾಸನ ಚಾಂಪಿಯನ್‌ಶಿಪ್ | ಭಾರತಕ್ಕೆ ಭರ್ಜರಿ ಜಯ, ಚಿನ್ನದ ಪದಕ ಗೆದ್ದ ಹೀನಾ ರಾಜಗೋರ್!

World Yogasana Championships 2026: Hosts India extend lead at top of medals tally with 22 gold

June 7, 2026
ಮೈಸೂರು ರೈಲ್ವೆ ಸಂಗ್ರಹಾಲಯದಲ್ಲಿ ಐತಿಹಾಸಿಕ ತೂಕದ ಯಂತ್ರ ಅನಾವರಣ | ಏನಿದರ ವಿಶೇಷತೆ?

Heritage Weighing Machine Restored, Unveiled at Mysuru Railway Museum

June 7, 2026
  • Advertise With Us
  • Grievances
  • About Us
  • Contact Us
Monday, June 8, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ

ಎಡದಂಡೆ ನಾಲೆಗೆ ಜ.10 ಮತ್ತು ಬಲದಂಡೆ ನಾಲೆಗೆ ಜ.20 ರಿಂದ ನೀರು: ಸಚಿವ ಮಧು ಬಂಗಾರಪ್ಪ

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
January 6, 2024
in ಶಿವಮೊಗ್ಗ
0
ಎಡದಂಡೆ ನಾಲೆಗೆ ಜ.10 ಮತ್ತು ಬಲದಂಡೆ ನಾಲೆಗೆ ಜ.20 ರಿಂದ ನೀರು: ಸಚಿವ ಮಧು ಬಂಗಾರಪ್ಪ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  | ಶಿವಮೊಗ್ಗ |

ಭದ್ರಾ ಜಲಾಶಯದ ಎಡದಂಡೆ ನಾಲೆಗೆ ಜ.10 ರಿಂದ ಮತ್ತು ಬಲದಂಡೆ ನಾಲೆ ಜ.20 ರಿಂದ ನೀರು ಹರಿಸಲಾಗುವುದು ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಎಸ್. ಮಧು ಬಂಗಾರಪ್ಪ Minister Madhu Bangarappa ತಿಳಿಸಿದರು.

ಇಂದು ಮಲವಗೊಪ್ಪದ ಭದ್ರಾ ಅಚ್ಚುಕಟ್ಟು ಅಭಿವೃದ್ದಿ ಪ್ರಾಧಿಕಾರ ಕಚೇರಿಯಲ್ಲಿ ಏರ್ಪಡಿಸಲಾಗಿದ್ದ 2023-24 ನೇ ಸಾಲಿನ ಭದ್ರಾ ಯೋಜನಾ ನೀರಾವರಿ ಸಲಹಾ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿದ್ದ ಅವರು ಅಧಿಕಾರಿಗಳು ಮತ್ತು ರೈತ ಮುಖಂಡರೊಂದಿಸಿ ಈ ತೀರ್ಮಾನ ಕೈಗೊಳ್ಳಲಾಗಿದೆ ಎಂದರು.
ಎಡದಂಡ ನಾಲೆಗೆ ಜ.10 ರಿಂದ ನೀರು ಹರಿಸಲಾಗುತ್ತಿದ್ದು, ಆನ್ ಮತ್ತು ಆಫ್ ಮಾದರಿ ಅನುಸರಿಸಲಾಗುವುದು. ಜ.10 ರಿಂದ 16 ದಿನ ಆನ್ ಮತ್ತು 15 ದಿನ ಆಫ್, ನಂತರ 17 ದಿನ ಆನ್, 15 ದಿನ ಆಫ್, 18 ದಿನ ಆನ್ 15 ದಿನ ಆಫ್ ಮತ್ತು 20 ದಿನ ಆನ್, 15 ದಿನ ಆಫ್ ಇರುತ್ತದೆ.

ಬಲದಂಡ ನಾಲೆಗೆ ಜ.20 ರಿಂದ ನೀರು ಹರಿಸಲಾಗುತ್ತಿದ್ದು ಮೊದಲಿಗೆ 12 ದಿನ ಆನ್, 20 ದಿನ ಆಫ್, 12 ದಿನ ಆನ್ 20 ದಿನ ಆಫ್, 14 ದಿನ ಆನ್ 20 ದಿನ ಆಫ್ ಮತ್ತು 15 ದಿನ ಆನ್ 20 ದಿನ ಆಫ್ ಇರುತ್ತದೆ ಎಂದರು.

ಪ್ರಸಕ್ತ ಸಾಲಿನಲ್ಲಿ ಸಾಕಷ್ಟು ಪ್ರಮಾಣದ ಮಳೆಯಾಗದ ಕಾರಣ ಭದ್ರಾ ಜಲಾಶಯದಲ್ಲಿ ನೀರಿನ ಕೊರತೆಯಾಗಿದೆ. ಜಲಾಶಯದ ಗರಿಷ್ಟ ನೀರಿನ ಸಂಗ್ರಹಣಾ ಮಟ್ಟ 186 ಅಡಿ, ಪ್ರಸ್ತುತ 35.370 ಅಡಿ ಸಂಗ್ರಹವಿದೆ. ಪ್ರಸ್ತತ ಜಲಾಶಯದಲ್ಲಿ ನೀರಾವರಿ ಬಳಕೆಗೆ ಬರುವ 12.50 ಟಿಎಂಸಿ ಪ್ರಮಾಣದ ನೀರನ್ನು ಬಲದಂಡ ನಾಲೆಗೆ 2650 ಕ್ಯೂಸೆಕ್ಸ್ ಮತ್ತು ಎಡದಂಡ ನಾಲೆಗೆ 380 ಕ್ಯೂಸೆಕ್ಸ್ ಮತ್ತು ಗೊಂದಿ ನಾಲೆ ಸೇರಿದಂತೆ ಪ್ರತಿದಿನ 0.27 ಟಿಎಂಸಿ ನೀರು ಹರಿಸಿದಲ್ಲಿ ಒಟ್ಟು 47 ದಿನಗಳಿಗೆ ನೀರು ಹರಿಸಬಹುದಾಗಿದೆ.
Kalahamsa Infotech private limitedಪ್ರಸ್ತತ ಚಳಿ ಇದ್ದು ವಾತಾವರಣ ತಂಪಿದೆ. ಮಾರ್ಚ್ ನಂತರ ಬೇಸಿಗೆ ಹೆಚ್ಚಲಿದ್ದು, ಕುಡಿಯುವ ನೀರು ಮತ್ತು ತೋಟಗಾರಿಕೆ ಬೆಳೆ ಉಳಿಸಿಕೊಳ್ಳಲು ಕಷ್ಟವಾಗಬಹುದು. ಆದ್ದರಿಂದ ಕಟ್ಟಕಡೆಯ ಅಚ್ಚುಕಟ್ಟುದಾರರ ಅನುಕೂಲವನ್ನೂ ಪರಿಗಣಿಸಿ ಈಗ ಸ್ವಲ್ಪ ತಡವಾಗಿ ನೀರು ಹರಿಸುವ ಬಗ್ಗೆ ಅಧಿಕಾರಿಗಳು, ರೈತರು ತಮ್ಮ ಸಲಹೆ-ಸೂಚನೆಗಳನ್ನು ನೀಡಬೇಕು. ಹಾಗೂ ನೀರಿನ ಅಭಾವವಿರುವ ಕಾರಣ ಪ್ರಸ್ತುತ ರೈತರು ಭತ್ತ ಬೆಳೆದಿದ್ದರೆ ಒಳಿತು ಎಂದರು.

ಶಿವಮೊಗ್ಗ ಜಿಲ್ಲಾಧಿಕಾರಿ ಡಾ.ಸೆಲ್ವಮಣಿ ಆರ್ ಮಾತನಾಡಿ, ಮುಂಬರುವ ಮಾನ್ಸೂನ್ ಮಳೆಗಾಲ ಸ್ವಲ್ಪ ವಿಳಂಬವಾದರೂ ಅಲ್ಲಿಯವರೆಗೆ ನೀರು ನೀಡಲು ಅನುಕೂಲವಾಗುವಂತೆ ನೀರು ವಿತರಣೆಯ ಯೋಜನೆ ಹಾಕಿಕೊಳ್ಳಬೇಕು. ಬೇಸಿಗೆಗೆ ನೀರು ಪೂರೈಕೆಯಾಗುವಂತೆ ನಿರ್ವಹಣೆ ಮಾಡುವ ಅಗತ್ಯವಿದೆ ಎಂದರು.

ದಾವಣಗೆರೆ ಜಿಲ್ಲಾಧಿಕಾರಿ ವೆಂಕಟೇಶ್ ಮಾತನಾಡಿ, ಪ್ರಸ್ತುತ ಜಲಾಶಯದಲ್ಲಿರುವ ನೀರನ್ನು ಕುಡಿಯುವ ನೀರು ಮತ್ತು ತೋಟಗಾರಿಕೆ ಬೆಳೆಗಳಾದ ಅಡಿಕೆ, ತೆಂಗು ಸಂರಕ್ಷಣೆ ಮಾಡಿಕೊಳ್ಳಬಹುದಾಗಿದ್ದು, ಜಿಲ್ಲೆಯಲ್ಲಿ ಭತ್ತ ಬೆಳೆಯದಿರುವಂತೆ ರೈತರಿಗೆ ಸೂಚನೆ ನೀಡಲಾಗಿದೆ.
ರಾಜ್ಯ ರೈತ ಸಂಘದ ಅಧ್ಯಕ್ಷ ಹೆಚ್.ಆರ್.ಬಸವರಾಜಪ್ಪ ಮಾತನಾಡಿ, ಮೇ 15 ರವರೆಗೆ ನೀರು ಬೇಕೇ ಬೇಕು. 47 ದಿನಗಳಿಗೆ ಆಗಬಹುದಾದ ನೀರನ್ನು ಸಮರ್ಪಕವಾಗಿ ನೀಡಲು ಜ.15 ರಿಂದ ಆನ್ ಮತ್ತು ಆಫ್ ಮಾದರಿಯಲ್ಲಿ ಮೇ ತಿಂಗಳವರೆಗೆ ನೀಡುವುದು ಉತ್ತಮ. ಹಾಗೂ ತುಂಗಾ ನದಿಯಿಂದ ಅಪ್ಪರ್ ಭದ್ರಾ ಯೋಜನೆಗೆ ನೀರು ನೀಡಲು ಕ್ರಮ ಕೈಗೊಳ್ಳಬೇಕು. ಇಂಜಿನಿಯರುಗಳು ಸಭೆ ಕೈಗೊಂಡು ತುಂಗಾ ಜಲಾಶಯದಿಂದ ನೀರೆತ್ತಲು ಕ್ರಮ ವಹಿಸಬೇಕೆಂದರು.

ರೈತ ಮುಖಂಡ ಕೆ.ಟಿ.ಗಂಗಾಧರ್ ಮಾತನಾಡಿ, ಕಟ್ಟಕಡೆಯ ಅಚ್ಚುಕಟ್ಟುದಾರರವರೆಗೆ ನೀರು ನೀಡುವ ವ್ಯವಸ್ಥೆ ಸಮರ್ಪಕವಾಗಿ ಆಗಬೇಕು. ಅಚ್ಚುಕಟ್ಟು ಪ್ರದೇಶದಲ್ಲಿ ಒಟ್ಟು 31739 ಹೆಕ್ಟೇರ್ ತೋಟಗಾರಿಕೆ ಬೆಳೆಯಿದ್ದು, ಇದನ್ನು ಉಳಿಸಿಕೊಳ್ಳಬೇಕಾಗಿದೆ. ಡಿಸ್ಚಾರ್ಜ್ ನೀರನ್ನು ನಿರ್ವಹಿಸಲು, ಅಕ್ರಮವಾಗಿ ನೀರೆತ್ತುವುದನ್ನು ನಿಲ್ಲಿಸಲು ವಾಹನ ನಿಯೋಜಿಸಬೇಕು, ಸೋಡಿಗಳನ್ನು ಮತ್ತು ಕಾನ್ಸ್‍ಟೇಬಲ್‍ನ್ನು ನೇಮಿಸಬೇಕೆಂದರು.

Also read: Unveiling the Epic Tale Through Art-Mahabharat Series by Mr. Swamy C.J

ಮತ್ತು ತುಂಗಾ ಜಲಾಶಯದಿಂದ 19.5 ನೀರನ್ನು ಲಿಫ್ಟ್ ಮಾಡಿದಲ್ಲಿ ಭದ್ರಾ ಜಲಾಶಯಕ್ಕೆ ನೀರು ಉಳಿಯುತ್ತದೆ. ಆದ್ದರಿಂದ ಸಚಿವರು, ಶಾಸಕರು ಸೇರಿ ಮುಖ್ಯಮಂತ್ರಿಗಳು ಮತ್ತು ನೀರಾವರಿ ಸಚಿವರ ಬಳಿ ಈ ಬಗ್ಗೆ ಮಾತನಾಡಿ ತುಂಗಾ ನದಿಯಿಂದ ಮೇಲ್ದಂಡ ಯೋಜನೆಗೆ ನೀರು ನೀಡಲು ಕ್ರಮ ವಹಿಸಬೇಕು ಎಂದು ಒತ್ತಾಯಿಸಿದರು.

ಮುಖಂಡರಾದ ತೇಜಸ್ವಿ ಪಟೇಲ್ ಮಾತನಾಡಿ, ಭದ್ರಾ ಜಲಾಶಯದಲ್ಲಿ ನೀರನ್ನು ಆನ್ ಮತ್ತು ಆಫ್ ಜೊತೆಗೆ ಡಿಸ್ಚಾರ್ಜ್ ನಿರ್ವಹಣೆ ಮಾಡಬೇಕು. ಹಾಗೂ ನೀರಿನ ಸಂಗ್ರಹಕ್ಕಿಂತ ಮುಖ್ಯವಾಗಿ ನಿರ್ವಹನೆ ಕಡೆ ಹೆಚ್ಚಿನ ಒತ್ತು ನೀಡಬೇಕೆಂದರು.

ದಾವಣಗೆರೆ ಭಾಗದ ರೈತ ಮುಖಂಡರಾದ ಲಿಂಗರಾಜ್ ಮಾತನಾಡಿ, ಅಕ್ರಮ ಪಂಪ್‍ಸೆಟ್‍ನಿಂದ ನೀರೆತ್ತುವವರ ವಿರುದ್ದ ಪ್ರಕರಣ ದಾಖಲಿಸಿ ಕ್ರಮ ಕೈಗೊಂಡು ಬಿಗಿ ಮಾಡಿದಲ್ಲಿ ಎಲ್ಲ ರೈತರಿಗೆ ಅನುಕೂಲವಾಗುವುದು ಎಂದರು.

ರೈತ ಮುಖಂಡರಾದ ರಘು ಮಾತನಾಡಿ, ನೀರು ನಿಲ್ಲಿಸಿ 90 ದಿನಗಳಾಗಿದ್ದು ಬೆಳೆ ಉಳಿಸಿಕೊಳ್ಳಲು ತಕ್ಷಣದಿಂದ ನೀರನ್ನು ಬಿಡಬೇಕು ಎಂದರು.

ಶಾಸಕರಾದ ಎಸ್.ಎನ್.ಚನ್ನಬಸಪ್ಪ, ಶಾರದಾ ಪೂರ್ಯಾನಾಯ್ಕ, ಲತಾ ಮಲ್ಲಿಕಾರ್ಜುನ್, ಬಿ.ಕೆ.ಸಂಗಮೇಶ್, ಡಿ.ಜೆ. ಶಾಂತನಗೌಡ, ಬಸವರಾಜಪ್ಪ, ಶ್ರೀನಿವಾಸ್, ಬಸವರಾಜು ಶಿವಗಂಗ, ಕಾಡಾ ಮುಖ್ಯ ಇಂಜಿನಿಯರ್ ಶಿವಾನಂದ ಬಣಕಾರ್, ಆಡಳಿತಾಧಿಕಾರಿ ಮುರಳೀಧರ್, ಅಭಿಯಂತರರು, ಅಧಿಕಾರಿಗಳು, ರೈತ ಮುಖಂಡರು ಹಾಜರಿದ್ದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

Tags: Kannada News WebsiteKannadaNewsKannadaNewsLiveKannadaNewsOnline ShivamoggaKannadaWebsiteLatest News KannadaLocal NewsMalnad NewsNewsinKannadaNewsKannadaShimogaShivamoggaShivamogga Newsಮಲೆನಾಡು_ಸುದ್ಧಿಶಿವಮೊಗ್ಗಶಿವಮೊಗ್ಗ_ನ್ಯೂಸ್
Share197Tweet123Send
Previous Post

Unveiling the Epic Tale Through Art-Mahabharat Series by Mr. Swamy C.J

Next Post

ಭದ್ರಾ ನಾಲೆಗೆ ನೀರು | ಸಭೆ ತೀರ್ಮಾನ ವಿರೋಧಿಸಿ ಅರ್ಧಗಂಟೆ ರಸ್ತೆ ತಡೆ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ಭದ್ರಾ ನಾಲೆಗೆ ನೀರು | ಸಭೆ ತೀರ್ಮಾನ ವಿರೋಧಿಸಿ ಅರ್ಧಗಂಟೆ ರಸ್ತೆ ತಡೆ

ಭದ್ರಾ ನಾಲೆಗೆ ನೀರು | ಸಭೆ ತೀರ್ಮಾನ ವಿರೋಧಿಸಿ ಅರ್ಧಗಂಟೆ ರಸ್ತೆ ತಡೆ

Leave a Reply Cancel reply

Your email address will not be published. Required fields are marked *

  • Trending
  • Latest
ಭದ್ರಾವತಿಯ ಆರು ಆರೋಪಿಗಳಿಗೆ 3 & 7 ವರ್ಷ ಕಠಿಣ ಕಾರಾಗೃಹ ಶಿಕ್ಷೆ | ನಡೆದಿದ್ದ ಅಪರಾಧವೇನು?

ಭದ್ರಾವತಿಯ ಆರು ಆರೋಪಿಗಳಿಗೆ 3 & 7 ವರ್ಷ ಕಠಿಣ ಕಾರಾಗೃಹ ಶಿಕ್ಷೆ | ನಡೆದಿದ್ದ ಅಪರಾಧವೇನು?

May 5, 2026
ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

April 28, 2026
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

April 3, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
ವಿಶ್ವ ಯೋಗಾಸನ ಚಾಂಪಿಯನ್‌ಶಿಪ್ 2026: ಜಾಗತಿಕ ವೇದಿಕೆಯಲ್ಲಿ ಹೊಸ ಇತಿಹಾಸ ಸೃಷ್ಟಿಸಿದ ಭಾರತ

ವಿಶ್ವ ಯೋಗಾಸನ ಚಾಂಪಿಯನ್‌ಶಿಪ್ 2026: ಜಾಗತಿಕ ವೇದಿಕೆಯಲ್ಲಿ ಹೊಸ ಇತಿಹಾಸ ಸೃಷ್ಟಿಸಿದ ಭಾರತ

June 8, 2026
5 ದಿನಗಳ ‘ಕಾಯಕ ಸೇತು’ ಉದ್ಯೋಗ ಮೇಳಕ್ಕೆ ಚಾಲನೆ: 2,000ಕ್ಕೂ ಹೆಚ್ಚು ಮಹಿಳೆಯರಿಗೆ ಅವಕಾಶ

5 ದಿನಗಳ ‘ಕಾಯಕ ಸೇತು’ ಉದ್ಯೋಗ ಮೇಳಕ್ಕೆ ಚಾಲನೆ: 2,000ಕ್ಕೂ ಹೆಚ್ಚು ಮಹಿಳೆಯರಿಗೆ ಅವಕಾಶ

June 8, 2026
ಕೆಸಿಇಟಿ ಫಲಿತಾಂಶ | ಕಾರ್ಕಳದ ಕ್ರಿಯೇಟಿವ್ ಕಾಲೇಜಿನ ಅತ್ಯುತ್ತಮ ಸಾಧನೆ

ಕೆಸಿಇಟಿ ಫಲಿತಾಂಶ | ಕಾರ್ಕಳದ ಕ್ರಿಯೇಟಿವ್ ಕಾಲೇಜಿನ ಅತ್ಯುತ್ತಮ ಸಾಧನೆ

June 8, 2026
ಮದ್ಯ ಸೇವಿಸಿ ಶಾಲಾ ವಾಹನ ಚಾಲನೆ : ನಾಲ್ವರು ಚಾಲಕರ ವಿರುದ್ಧ ಕೇಸ್

ಮದ್ಯ ಸೇವಿಸಿ ಶಾಲಾ ವಾಹನ ಚಾಲನೆ : ನಾಲ್ವರು ಚಾಲಕರ ವಿರುದ್ಧ ಕೇಸ್

June 8, 2026
ಶಿವಮೊಗ್ಗದಲ್ಲಿ ಕ್ರೀಡಾಪಟುಗಳ ಸಾಧನೆ | ದಕ್ಷಿಣ ಭಾರತ ಕುಸ್ತಿ ಚಾಂಪಿಯನ್‌ಶಿಪ್‌ನಲ್ಲಿ ಇಬ್ಬರಿಗೆ ಚಿನ್ನ

Shivamogga: Two Wrestlers Win Gold at South India Championship

June 8, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL