No Result
View All Result
KRCS Shikaripura Achieves 100% Result in CBSE Class X Board Exams
English Articles

KRCS Shikaripura Achieves 100% Result in CBSE Class X Board Exams

by ಕಲ್ಪ ನ್ಯೂಸ್
April 16, 2026
0

Kalpa Media House  |  Shikaripura | Kumadvathi Residential Central School (KRCS), Shikaripura, has achieved a 100% pass result in the...

Read moreDetails
ಬೆಂಗಳೂರು–ಬಂಗಾರಪೇಟೆ ಮೆಮು ರೈಲುಗಳಿಗೆ ತಾತ್ಕಾಲಿಕ ನಿಲುಗಡೆ

Cancellation of Ashokapuram – KSR Bengaluru MEMU trains

April 16, 2026
First VALORANT Campus Cup Champions Crowned

First VALORANT Campus Cup Champions Crowned

April 15, 2026
Welfare Impossible Without Dharma; Upholding Righteousness is Everyone’s Duty: Yadugiri Yatiraja Swamiji

Welfare Impossible Without Dharma; Upholding Righteousness is Everyone’s Duty: Yadugiri Yatiraja Swamiji

April 13, 2026
Berger Paints Responds to India’s Heat Challenge with ‘Garmi Gone, Thandak On’ Home Cooling Solutions Range

Berger Paints Responds to India’s Heat Challenge with ‘Garmi Gone, Thandak On’ Home Cooling Solutions Range

April 13, 2026
  • Advertise With Us
  • Grievances
  • About Us
  • Contact Us
Friday, April 17, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ

ಬೇಸಿಗೆ ಹಂಗಾಮಿನ ಬೆಳೆಗಳಿಗಾಗಿ ಡಿ.29, 30ರಂದು ನಾಲೆಗಳಿಗೆ ನೀರು

ಭದ್ರಾ ಯೋಜನಾ ನೀರಾವರಿ ಸಲಹಾ ಸಮಿತಿ ಸಭೆ

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
December 28, 2021
in ಶಿವಮೊಗ್ಗ
0
ಬೇಸಿಗೆ ಹಂಗಾಮಿನ ಬೆಳೆಗಳಿಗಾಗಿ ಡಿ.29, 30ರಂದು ನಾಲೆಗಳಿಗೆ ನೀರು
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್   |  ಶಿವಮೊಗ್ಗ  |

ಪ್ರಸಕ್ತ ಸಾಲಿನ ಬೇಸಿಗೆ ಹಂಗಾಮಿನ ಬೆಳೆಗಳಿಗಾಗಿ ಡಿ.29 ರಂದು ಎಡದಂಡೆ ಮತ್ತು ಡಿ.30 ರಂದು ಬಲದಂಡೆ ನಾಲೆಗಳಿಗೆ 120 ದಿನಗಳ ಕಾಲ ನೀರು ಹರಿಸಲು ಭದ್ರಾ ಯೋಜನಾ ನೀರಾವರಿ ಸಲಹಾ ಸಮಿತಿ ಸಭೆ ತೀರ್ಮಾನ ಕೈಗೊಂಡಿದೆ ಎಂದು ಭದ್ರಾ ಅಚ್ಚುಕಟ್ಟು ಅಭಿವೃದ್ದಿ ಪ್ರಾಧಿಕಾರದ ಅಧ್ಯಕ್ಷೆ ಪವಿತ್ರಾ ರಾಮಯ್ಯ ತಿಳಿಸಿದರು.

ಭದ್ರಾ ಯೋಜನೆಯ ಅಚ್ಚುಕಟ್ಟು ಪ್ರದೇಶಕ್ಕೆ 2021-22 ನೇ ಸಾಲಿನ ಬೇಸಿಗೆ ಬೆಳೆಗಳಿಗಾಗಿ ಬಲದಂಡೆ, ಎಡದಂಡೆ ನಾಲೆಗಳು, ಆನವೇರಿ, ದಾವಣಗೆರೆ, ಮಲೆಬೆನ್ನೂರು ಮತ್ತು ಹರಿಹರ ಶಾಖಾ ನಾಲೆಗಳಲ್ಲಿ ನೀರನ್ನು ಹರಿಸುವ ಮತ್ತು ಬೆಳೆ ಕ್ಷೇತ್ರವನ್ನು ಪ್ರಕಟಿಸುವ ಕುರಿತು ತೀರ್ಮಾನ ಕೈಗೊಳ್ಳಲು ಭದ್ರಾ ಕಾಡಾ, ಶಿವಮೊಗ್ಗ ಇವರ ಅಧ್ಯಕ್ಷತೆಯಲ್ಲಿ ಇಂದು ಭದ್ರಾ ಅಚ್ಚುಕಟ್ಟು ಅಭಿವೃದ್ದಿ ಪ್ರಾಧಿಕಾರ ಕಚೇರಿ ಸಭಾಂಗಣ, ಮಲವಗೊಪ್ಪ, ಶಿವಮೊಗ್ಗ ಇಲ್ಲಿ ನಡೆದ 79ನೇ ಭದ್ರಾ ಯೋಜನಾ ನೀರಾವರಿ ಸಲಹಾ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ನೀರಾವರಿ ಸಲಹಾ ಸಮಿತಿಯ ಸರ್ವ ಸದಸ್ಯರೊಂದಿಗೆ ಚರ್ಚಿಸಿ ಈ ತೀರ್ಮಾನ ಕೈಗೊಳ್ಳಲಾಗಿದೆ. ಡಿ.29 ರ ರಾತ್ರಿಯಿಂದ ಎಡದಂಡೆ ನಾಲೆ ಮತ್ತು ಡಿ.30 ರ ರಾತ್ರಿಯಿಂದ ಬಲದಂಡೆ ನಾಲೆಗಳಿಗೆ 120 ದಿನಗಳ ಕಾಲ ನೀರು ಹರಿಸಲಾಗುವುದು. ಅಚ್ಚುಕಟ್ಟು ಪ್ರದೇಶದ ಯಾವುದೇ ನಾಲೆಗಳ ಭಾಗದ ರೈತರಿಗೆ ತೊಂದರೆಯಾಗದಂತೆ ನೀರು ಹರಿಸಲು ಕ್ರಮ ವಹಿಸಲಾಗಿದೆ ಎಂದು ತಿಳಿಸಿದರು.

ದಾವಣಗೆರೆ, ಮಲೆಬೆನ್ನೂರು ಶಾಖಾ ನಾಲೆಗಳಿಗೆ ಸ್ವಲ್ಪ ತಡವಾಗಿ ಅಂದರೆ ಡಿಸೆಂಬರ್ 06 ಅಥವಾ 07 ಕ್ಕೆ ನೀರು ಹರಿಸುವಂತೆ ಅಧಿಕಾರಿಗಳು ಕೇಳಿಕೊಂಡಿರುವ ಹಿನ್ನೆಲೆ ಅಭಿಯಂತರರು ಅಲ್ಲಿ ಮರಳಿನ ತಡೆ ಒಡ್ಡಿ ನೀರು ಹರಿಸುವಂತೆ ಸೂಚನೆ ನೀಡಿದ್ದೇನೆ. ಭದ್ರಾ ಜಲಾಶಯದಲ್ಲಿ ಡಿ.28 ರಂದು 57.703 ಟಿಎಂಸಿ ನೀರು ಬಳಕೆಗೆ ಲಭ್ಯವಿದೆ. ಬೇಸಿಗೆ ಅವಧಿಗೆ 51.97 ಟಿಎಂಸಿ ನೀರು ಅವಶ್ಯವಿದ್ದು, 5.733 ಟಿಎಂಸಿ ನೀರು ಜಲಾಶಯದಲ್ಲಿ ಉಳಿಯಲಿದೆ ಎಂದರು.

ಅಧಿಕಾರಿಗಳು ಅಚ್ಚುಕಟ್ಟು ಪ್ರದೇಶದ ರೈತರಿಗೆ ಪೂರಕವಾಗಿ ಸ್ಪಂದಿಸಬೇಕು. ರೈತರಿಗೆ ಬೆಲೆ ಕೊಡಬೇಕು. ರೈತರು ಹಾಗೂ ತಮ್ಮ ದೂರವಾಣಿ ಕರೆಗಳಿಗೆ ಸೂಕ್ತವಾಗಿ ಉತ್ತರಿಸಬೇಕು. ಅಧಿಕಾರಿಗಳ ಕೆಲಸವನ್ನು ನಾನು ಮಾಡಿದ್ದೇನೆ. ನರೇಗಾ ಯೋಜನೆಯಡಿ ಚಾನಲ್‍ಗಳಲ್ಲಿ ಹೂಳು ತೆಗೆಸಿದ್ದೇನೆ. ಇನ್ನು ಮುಂದೆ ಚಾನಲ್‍ಗಳ ಮೇಲೆ ಇಂಜಿನಿಯರುಗಳು ಓಡಾಡಿ ಕೆಲಸ ಮಾಡಬೇಕು ಎಂದು ಸೂಚನೆ ನೀಡಿದರು.

ರೈತ ಮುಖಂಡರಾದ ಬಸವರಾಜಪ್ಪ ಮಾತನಾಡಿ, ಭದ್ರಾ ಅಚ್ಚುಕಟ್ಟು ಪ್ರದೇಶ ವಿಭಿನ್ನ ಹವಾಮಾನ ಮತ್ತು ಮಣ್ಣಿನ ಗುಣ ಹೊಂದಿದೆ. ಈ ಪ್ರಾಧಿಕಾರದ ವ್ಯಾಪ್ತಿಯಲ್ಲಿ ಏಕ ಕಾಲದಲ್ಲಿ ನೀರು ಹರಿಸುವುದು ಮತ್ತು ಬಂದ್ ಮಾಡುವುದು ಕಷ್ಟ. ಏಕೆಂದರೆ ಭದ್ರಾವತಿ ಸುತ್ತಮುತ್ತಲಿನ ಪ್ರದೇಶದಲ್ಲಿ ಕಲ್ಲುಭೂಮಿ, ಕೆಂಪುಮಿಶ್ರತ ಮಣ್ಣಿನಲ್ಲಿ ಅಡಿಕೆ ಇತ್ಯಾದಿ ಬೆಳೆಯಲಾಗುತ್ತಿದ್ದು ಈ ಮಣ್ಣು 20 ರಿಂದ 25 ದಿನಕ್ಕೆ ಮಾತ್ರ ನೀರನ್ನು ಹಿಡಿದಿಡಲು ಸಾಧ್ಯ. ಅದೇ ದಾವಣಗೆರೆ, ಮಲೆಬೆನ್ನೂರು, ಹರಿಹರ ಭಾಗದಲ್ಲಿ ಎರೆಮಣ್ಣಿದ್ದು ಒಂದು ತಿಂಗಳವರೆಗೆ ನೀರನ್ನು ತಡೆದಿಡುವ ಸಾಮಥ್ರ್ಯ ಅಲ್ಲಿನ ಮಣ್ಣಿಗೆ ಇರುತ್ತದೆ. ಆದ್ದರಿಂದ ಆ ಭಾಗಕ್ಕೆ ಸ್ವಲ್ವ ತಡವಾಗಿ ನೀರು ಹರಿಸಬೇಕೆಂದು ಸದಸ್ಯರು ಕೇಳಿದ್ದಾರೆ.

ಸರ್ವ ಸದಸ್ಯರ ಚರ್ಚೆ ನಂತರ ಎಲ್ಲರಿಗೂ ಅನುಕೂಲ ಆಗುವ ರೀತಿಯಲ್ಲಿ ಇಂದು ತೀರ್ಮಾನ ಕೈಗೊಳ್ಳಲಾಗಿದೆ. ಜೊತೆಗೆ ವಿದ್ಯುತ್ ಎಲ್‍ಸಿ ವ್ಯವಸ್ಥೆಯಂತೆ ನೀರು ಬಿಡಲು ಕೂಡ ಒಂದೆರಡು ಮೂರು ಗೇಟ್ ವ್ಯವಸ್ಥೆ ಮಾಡಿಕೊಂಡರೆ, ಬೇಡವಾದ ಭಾಗಕ್ಕೆ ಗೇಟ್ ಹಾಕಿ, ಬೇಕಾದ ಕಡೆ ಗೇಟ್ ಓಪನ್ ಮಾಡಿ ನೀರು ಹರಿಸಬಹುದು. ಇದರಿಂದ ರೈತರಿಗೆ ಅನುಕೂಲವಾಗುತ್ತದೆ. ಆದ್ದರಿಂದ ಈ ನಿಟ್ಟಿನಲ್ಲಿ ಸಂಬಂಧಿಸಿದ ಇಂಜಿನಿಯರುಗಳು ಅಂದಾಜು ಪಟ್ಟಿ ತಯಾರಿಸುವಂತೆ ತಿಳಿಸಿದ ಅವರು ಶಾಸಕರು, ಸಂಸದರು ಮತ್ತು ಅಧ್ಯಕ್ಷರು ಇದನ್ನು ಸರ್ಕಾರದ ಗಮನಕ್ಕೆ ತಂದು ಸೂಕ್ತ ನಿರ್ಧಾರ ಕೈಗೊಳ್ಳುವಂತೆ ಮನವಿ ಮಾಡಿದರು.

ಸಭೆ ತೀರ್ಮಾನಕ್ಕೂ ಮುನ್ನ ಶಾಸಕರಾದ ಸಂಗಮೇಶ್ವರ್ ಮಾತನಾಡಿ, ಈ ಬಾರಿ ಒಳ್ಳೆಯ ಮಳೆಯಾಗಿ, ಡ್ಯಾಮ್‍ನಲ್ಲಿ ಸಾಕಷ್ಟು ನೀರಿದ್ದರೂ, ಇದುವರೆಗೆ ನಾಲೆಗಳಿಗೆ ನೀರು ಹರಿಸದೇ ಇರುವುದರಿಂದ ವಿಶೇಷವಾಗಿ ಎಡೆದಂಡೆ ಭಾಗದ ರೈತರಿಗೆ ಹಾಗೂ ಜಾನುವಾರುಗಳಿಗೆ ನೀರಿಲ್ಲದೇ ತುಂಬಾ ತೊಂದರೆಯಾಗಿದೆ. ಇಂಜಿನಿಯರುಗಳು ನೀರು ಬಂದ್ ಮಾಡಿ ಇಷ್ಟು ದಿನ ಆದರೂ ಕಾಮಗಾರಿ ಸಬೂಬು ಹೇಳಿ ನೀರು ಹರಿಸುವುದಕ್ಕೆ ಅಡ್ಡಿಪಡಿಸಿರುವುದಕ್ಕೆ ಆಕ್ಷೇಪ ವ್ಯಕ್ತಿಪಡಿಸಿದ ಅವರು, ಅಧ್ಯಕ್ಷರು ದೃಢವಾದ ನಿರ್ಧಾರ ಮಾಡಿ ನಾಳೆಯಿಂದಲೇ ನೀರು ಬಿಡುವಂತೆ ಅಧಿಕಾರಿಗಳಿಗೆ ಸೂಚನೆ ನೀಡಬೇಕು ಎಂದರು.

ಪ್ರಾಧಿಕಾರದ ನಿರ್ದೇಶಕರಾದ ಷಡಕ್ಷರಪ್ಪ ಮಾತನಾಡಿ, ಎಡದಂಡೆ ನಾಲೆ ರೈತರಿಗೆ, ಜಾನುವಾರುಗಳಿಗೆ ನೀರಿಲ್ಲದೇ ತುಂಬಾ ತೊಂದರೆಯಾಗಿದೆ ಆದ್ದರಿಂದ ಎಡದಂಡೆ ನಾಲೆಗೆ ಇಂದಿನಿಂದಲೇ ಹಾಗೂ ಬಲದಂಡೆ ನಾಲೆ ಡಿ.30 ರಿಂದ ನೀರು ಬಿಡಬೇಕು. ಸರ್ಕಾರ ಅನುದಾನ ಬಿಡುಗಡೆ ಮಾಡದೇ ಇರುವುದರಿಂದ ಚಾನಲ್‍ಗಳಲ್ಲಿ ರಿಪೇರಿ ಕಾಮಗಾರಿಗಳು ಆಗಿಲ್ಲವೆಂದು ಅಧಿಕಾರಿಗಳು ಸರ್ಕಾರವನ್ನು ದೂರುವುದು ಸರಿಯಲ್ಲ ಎಂದರು.

ಎಡದಂತೆ ನಾಲೆ ನೀರು ಬಳಕೆದಾರರ ಸಂಘದ ಅಧ್ಯಕ್ಷ ರಘುನಾಥ್ ಜೆ ಮಾತನಾಡಿ, ಪ್ರತಿ ಸಲ ನೀರು ಬಂದ್ ಮಾಡಿದಾಗ ಗೊಂದಲ ಸೃಷ್ಟಿಯಾಗುತ್ತಿದೆ. ನೀರು ನಿಲ್ಲಿಸಿದ 25 ದಿನಗಳಿಗೆ ಅಧ್ಯಕ್ಷರು ಒಂದು ಸಭೆ ಕರೆದು ನಿರ್ಧಾರ ಕೈಗೊಳ್ಳಬೇಕು. ಎಡದಂಡೆ ಭಾಗದ ಮರಳು ಮಿಶ್ರಿತ ಮಣ್ಣಿನಲ್ಲಿ ನೀರನ ತೇವ ತಡೆದಿಡುವ ಶಕ್ತಿ ಇಲ್ಲವಾದ್ದರಿಂದ ಇಂದೇ ನೀರು ಬಿಡಬೇಕು. ಇಲ್ಲವಾದಲ್ಲಿ ಧರಣಿ ಮಾಡಲಾಗುವುದು ಎಂದರು.

ಎಡದಂಡೆ ನಾಲೆ ಭಾಗದ ಸದಸ್ಯರಾದ ವೈ.ಜಿ ಮಲ್ಲಿಕಾರ್ಜುನ ಮಾತನಾಡಿ, ನೀರು ನಿಲ್ಲಿಸಿ 40 ದಿನ ಆದರೂ ನೀರು ಹರಿಸದಿರುವುದು ವಿಪರ್ಯಾಸ. ಅವೈಜ್ಞಾನಿವಕಾಗಿ ಹೀಗೆ ನೀರು ನಿಲ್ಲಿಸಿದರೆ ಬೆಳೆ ಹಾಳಾಗುತ್ತದೆ ಎಂದರು. ಎಡದಂಡೆ ನಾಲೆ ಭಾಗದ ಸದಸ್ಯರು ಯಶವಂತರಾವ್, ರಾಮಪ್ಪ, ಹನುಂತಪ್ಪ, ಶೇಖರಪ್ಪ ಹಾಗೂ ಇತರೆ ರೈತರು ಇಂದು ರಾತ್ರಿಯೇ ನೀರು ಹರಿಸುವಂತೆ ಒತ್ತಾಯಿಸಿದರು.

ದಾವಣಗೆರೆ ಮತ್ತು ಮಲೆಬೆನ್ನೂರು ನಾಲಾಭಾಗದ ಸದಸ್ಯರಾದ ತೇಜಸ್ವಿ ಪಟೇಲ್ ಮತ್ತು ಇತರರು ಮಾತನಾಡಿ, ನಮಗೆ ಜ.5 ರ ಹೊತ್ತಿಗೆ ನೀರು ಬಿಡಬಹುದು. ಸಲಹಾ ಸಮಿತಿ ಸಂಪ್ರದಾಯದಂತೆ ಅಧಿಸೂಚನೆ ಹೊರಡಿಸಿ ನೀರು ಬಿಡಬೇಕು. ಡಿ.30 ಕ್ಕೆ ನೀರು ಹರಿಸಲು ತೀರ್ಮಾನ ಕೈಗೊಂಡ ಹಿನ್ನೆಲೆಯಲ್ಲಿ ಮರಳಿನ ತಡೆ ಒಡ್ಡು ಕುರಿತಂತೆ ಸೂಕ್ತ ಕ್ರಮ ಕೈಗೊಳ್ಳುವಂತೆ ಕೋರಿದರು.

ಶಾಸಕರು, ರೈತ ಸಂಘದ ಮುಖಂಡರು, ರೈತರು ಮಾತನಾಡಿ, ಇಂಜಿನಿಯರುಗಳು ಜ.10 ರ ನಂತರ ನೀರು ಹರಿಸುವಂತೆ ತಿಳಿಸಿದ್ದು, ಅವರಿಗೆ ರೈತರ ಸಂಕಷ್ಟಗಳ ಬಗ್ಗೆ ಅರಿವಿಲ್ಲ. ತಾವು ಕೈಗೊಳ್ಳಬೇಕಾದ ಕಾಮಗಾರಿ, ರಿಪೇರಿಗಳನ್ನು ನಿಗದಿತ ವೇಳೆಗೆ ಕೈಗೊಳ್ಳದೇ ನೀರು ಹರಿಸುವುದಕ್ಕೆ ಅಡ್ಡಿಪಡಿಸುವುದು ಸರಿಯಲ್ಲ ಎಂದು ಆಕ್ಷೇಪ ವ್ಯಕ್ತಪಡಿಸಿದರು.

ಬಸವರಾಜಪ್ಪ ಮಾತನಾಡಿ, ಭದ್ರಾ ಅಚ್ಚುಕಟ್ಟಿನ ಸದಸ್ಯರಲ್ಲಿ ಭಿನ್ನತೆ ಬೇಡ. ಭದ್ರಾ ಅಚ್ಚುಕಟ್ಟುದಾರರೆಲ್ಲ ಒಂದು. ತುಂಗಾ ಮೇಲ್ದಂಡೆ ಯೋಜನೆಯಲ್ಲಿ ಮಾರ್ಚ್‍ವರೆಗೆ ನೀರು ಹರಿಸುವ ತೀರ್ಮಾನ ಕೈಗೊಂಡಿದ್ದಾರೆ. ಬೇಸಿಗೆಯಲ್ಲಿ ತುಂಗಾ ಮೇಲ್ದಂಡೆ ಮತ್ತು ನಮ್ಮ ನಡುವೆ ಹೋರಾಟ ಮಾಡಬಹುದಾದ ಸಂದರ್ಭ ಕೂಡ ಬರಬಹುದು. ಆದ್ದರಿಂದ ತುಂಗಾ ಮೇಲ್ದಂಡೆ ಯೋಜನೆಗೆ ತುಂಗಾದಿಂದ 17.5 ಟಿಎಂಸಿ ಮತ್ತು ಭದ್ರಾ ಅಣೆಕಟ್ಟಿನಿಂದ 12.4 ಟಿಎಂಸಿ ಒದಗಿಸುವ ಬದಲಾಗಿ ಸಂಪೂರ್ಣ 29.9 ಟಿಎಂಸಿ ನೀರನ್ನು ತುಂಗಾದಿಂದಲೇ ತುಂಗಾ ಮೇಲ್ದಂಡೆ ಯೋಜನೆಗೆ ನೀಡಲು ಡಿಪಿಆರ್ ಆಗಬೇಕೆಂದು ಸರ್ಕಾರಕ್ಕೆ ಒತ್ತಾಯಿಸುವ ನಿರ್ಣಯ ಇಂದು ತೆಗೆದುಕೊಳ್ಳಬೇಕೆಂದು ಒತ್ತಾಯಿಸಿದರು.

ಅಧೀಕ್ಷಕ ಇಂಜಿನಿಯರ್ ಚಂದ್ರಹಾಸ್ ಮಾತನಾಡಿ, 2021-22 ನೇ ಸಾಲಿನ ಬೇಸಿಗೆ ಬೆಳೆಗಳಿಗಾಗಿ ಬಲದಂಡೆ, ಎಡದಂಡೆ ನಾಲೆಗಳು, ಆನವೇರಿ, ದಾವಣಗೆರೆ, ಮಲೆಬೆನ್ನೂರು ಮತ್ತು ಹರಿಹರ ಶಾಖಾ ನಾಲೆಗಳಲ್ಲಿ ನೀರು ಸಮರ್ಪಕವಾಗಿ ಹರಿಯುವಂತೆ ಕ್ರಮ ವಹಿಸಲಾಗುವುದು ಎಂದು ತಿಳಿಸಿದರು.

ಸಭೆಯಲ್ಲಿ ಕಾಡಾ ನಿರ್ದೇಶಕರಾದ ರುದ್ರಮೂರ್ತಿ, ವಿನಾಯಕ್, ಹನುಮಂತಪ್ಪ, ಸದಾಶಿವಪ್ಪ ಗೌಡ್ರು, ರಾಜಪ್ಪ, ಇತರೆ ನಾಲೆಗಳ ಸದಸ್ಯರಾದ ದ್ಯಾಮಪ್ಪ ಗೌಡ್ರು, ದೇವಪ್ಪ ರೆಡ್ಡಿ, ಡಾಣಾಯಕಪುರದ ಪರಮೇಶಗೌಡ್ರು, ಆಡಳಿತಾಧಿಕಾರಿ ಅರುಣ್(ಪ್ರಭಾರ), ಭದ್ರಾ ಯೋಜನಾ ವೃತ್ತದ ಎಇಇಗಳಾದ ರವಿಚಂದ್ರ, ಪ್ರಸನ್ನ, ವೆಂಕಟೇಶ್, ಇತರೆ ಸದಸ್ಯರು, ಅಧಿಕಾರಿಗಳು, ರೈತರು ಹಾಜರಿದ್ದರು.


ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093
– info@kalpa.news

Tags: CADAKannada NewsKannada News LiveKannada News OnlineKannada News WebsiteKannada WebsiteLatest News KannadaLocal NewsMalnad NewsNews in KannadaNews KannadaShimogaShivamoggaShivamogga Newsಭದ್ರಾ ಅಚ್ಚುಕಟ್ಟು ಅಭಿವೃದ್ದಿ ಪ್ರಾಧಿಕಾರಮಲೆನಾಡು_ಸುದ್ಧಿಶಿವಮೊಗ್ಗಶಿವಮೊಗ್ಗ_ನ್ಯೂಸ್
Share197Tweet123Send
Previous Post

ಜೇನು ಕಡಿತದಿಂದ 16 ಮಕ್ಕಳಿಗೆ ಗಂಭೀರ ಗಾಯ: ಶಾಸಕಿ ರೂಪಾಲಿ ನಾಯ್ಕ ಆಸ್ಪತ್ರೆಗೆ ಭೇಟಿ

Next Post

ಭದ್ರಾವತಿ ನಗರಸಭೆ ಸ್ಥಾಯಿ ಸಮಿತಿ ನೂತನ ಅಧ್ಯಕ್ಷರಾಗಿ ಸುದೀಪ್ ಕುಮಾರ್ ಅವಿರೋಧ ಆಯ್ಕೆ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ಭದ್ರಾವತಿ ನಗರಸಭೆ ಸ್ಥಾಯಿ ಸಮಿತಿ ನೂತನ ಅಧ್ಯಕ್ಷರಾಗಿ ಸುದೀಪ್ ಕುಮಾರ್ ಅವಿರೋಧ ಆಯ್ಕೆ

ಭದ್ರಾವತಿ ನಗರಸಭೆ ಸ್ಥಾಯಿ ಸಮಿತಿ ನೂತನ ಅಧ್ಯಕ್ಷರಾಗಿ ಸುದೀಪ್ ಕುಮಾರ್ ಅವಿರೋಧ ಆಯ್ಕೆ

Leave a Reply Cancel reply

Your email address will not be published. Required fields are marked *

  • Trending
  • Latest
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

April 3, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
ಶಿವಮೊಗ್ಗ | ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ | ಕಾರ್ಕಳ ಮೂಲದ ವಿದ್ಯಾರ್ಥಿನಿ ದುರ್ಮರಣ

ಶಿವಮೊಗ್ಗ | ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ | ಕಾರ್ಕಳ ಮೂಲದ ವಿದ್ಯಾರ್ಥಿನಿ ದುರ್ಮರಣ

March 12, 2026
ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

January 16, 2026
ಯುಗಾದಿ | ಯಶವಂತಪುರ-ಹೊಸಪೇಟೆ ನಡುವೆ ವಿಶೇಷ ಎಕ್ಸ್’ಪ್ರೆಸ್ ರೈಲು

ಚಿಕ್ಕಮಗಳೂರಿಂದ ಯಶವಂತಪುರ, ಶಿವಮೊಗ್ಗ ತೆರಳುವ ರೈಲು ಪ್ರಯಾಣಿಕರಿಗೆ ಇಲ್ಲಿದೆ ಬಿಗ್ ಅಪ್ಡೇಟ್

April 17, 2026
ಸಾಗರ | ಆಟವಾಡುತ್ತಿದ್ದ ಎರಡೂವರೆ ವರ್ಷದ ಮಗುವಿಗೆ ಹಾವು ಕಚ್ಚಿ ಸಾವು

ಸಾಗರ | ಆಟವಾಡುತ್ತಿದ್ದ ಎರಡೂವರೆ ವರ್ಷದ ಮಗುವಿಗೆ ಹಾವು ಕಚ್ಚಿ ಸಾವು

April 17, 2026
ಗಣಿಗಾರಿಕೆ ಸ್ಥಗಿತಗೊಳಿಸಿ: ಬಸ್ತಿಕೊಪ್ಪ ಗ್ರಾಮಸ್ಥರ ಮನವಿ

ಗಣಿಗಾರಿಕೆ ಸ್ಥಗಿತಗೊಳಿಸಿ: ಬಸ್ತಿಕೊಪ್ಪ ಗ್ರಾಮಸ್ಥರ ಮನವಿ

April 17, 2026
ಗಮನಿಸಿ! ಜ.21-22ರಂದು ಶಿವಮೊಗ್ಗ ನಗರ, ಗ್ರಾಮಾಂತರದ ಈ ಬಡಾವಣೆಗಳಲ್ಲಿ ಕರೆಂಟ್ ಇರಲ್ಲ

ಗಮನಿಸಿ ! ಏ.19ರಂದು ಶಿವಮೊಗ್ಗ ನಗರದ ಪ್ರಮುಖ ಬಡಾವಣೆಗಳಲ್ಲಿ ಕರೆಂಟ್ ಇರಲ್ಲ

April 17, 2026
ಭೀಕರ ರಸ್ತೆ ಅಪಘಾತ | ಕಾರು ಚಾಲಕ ಸ್ಥಳದಲ್ಲೇ ಸಾವು

ಭೀಕರ ರಸ್ತೆ ಅಪಘಾತ | ಕಾರು ಚಾಲಕ ಸ್ಥಳದಲ್ಲೇ ಸಾವು

April 17, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL