Wednesday, June 25, 2025
  • Advertise With Us
  • Grievances
  • About Us
  • Contact Us
kalpa.news
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು
No Result
View All Result
kalpa.news
No Result
View All Result
Home ಜಿಲ್ಲೆ ಶಿವಮೊಗ್ಗ

ಎಲ್ಲ ಕ್ಷೇತ್ರದಲ್ಲಿ ಹೆಣ್ಣುಮಕ್ಕಳು ಸಾಧನೆ ಮಾಡಿರುವುದು ನಮ್ಮೆಲ್ಲರ ಹೆಮ್ಮೆಯಾಗಿದೆ: ಸಂಸದ ರಾಘವೇಂದ್ರ

ಎಸ್‍ಸಿ/ಎಸ್‍ಟಿ ವಿದ್ಯಾರ್ಥಿನಿಯರಿಗೆ ವಿದ್ಯಾರ್ಥಿವೇತನ ಸೌಲಭ್ಯ ವಿತರಣೆ

August 17, 2021
in ಶಿವಮೊಗ್ಗ
0 0
0
Share on facebookShare on TwitterWhatsapp
Read - 3 minutes

ಕಲ್ಪ ಮೀಡಿಯಾ ಹೌಸ್

ಶಿವಮೊಗ್ಗ: ಮಹಿಳೆಯರು ಇಂದು ಸ್ಪರ್ಧಾತ್ಮಕ ಪರೀಕ್ಷೆಗಳು, ಒಲಂಪಿಕ್ ಕ್ರೀಡೆಗಳು, ಶಿಕ್ಷಣ, ಆರೋಗ್ಯ ಹೀಗೆ ಎಲ್ಲ ಕ್ಷೇತ್ರಗಳಲ್ಲಿ ಉತ್ತಮ ಸಾಧನೆ ಮಾಡುತ್ತಿದ್ದು, ಕೆನರಾ ಜ್ಯೋತಿ ಯೋಜನೆಯಡಿ ಶಿಷ್ಯವೇತನ ಪಡೆದ ಗ್ರಾಮೀಣ ಭಾಗದ ಹೆಣ್ಣುಮಕ್ಕಳು ತಮ್ಮದೇ ಆದ ಸಾಧನೆ ಮೂಲಕ ಹೊರಹೊಮ್ಮಬೇಕೆಂದು ಸಂಸದರಾದ ಬಿ.ವೈ.ರಾಘವೇಂದ್ರ ವಿದ್ಯಾರ್ಥಿನಿಯರಿಗೆ ಹಾರೈಸಿದರು.

ಮೈ-ಮನಗಳನ್ನು ರೋಮಾಂಚನಗೊಳಿಸುವ ಈ ದೇಶ ಭಕ್ತಿ ಗೀತೆಯನ್ನೊಮ್ಮೆ ನೋಡಿ

ಇಂದು ಕೆನರಾ ಬ್ಯಾಂಕ್ ಕಟ್ಟಡದಲ್ಲಿರುವ ಲೀಡ್ ಬ್ಯಾಂಕ್ ಕಾನ್ಫರೆನ್ಸ್ ಹಾಲ್‍ನಲ್ಲಿ ಕೆನರಾ ಬ್ಯಾಂಕಿನ ಸಾಂಸ್ಥಿಕ ಸಾಮಾಜಿಕ ಜವಾಬ್ದಾರಿ(ಕಾರ್ಪೊರೇಟ್ ಸೋಷಿಯಲ್ ರೆಸ್ಪಾನ್ಸಿಬಿಲಿಟಿ-ಸಿಎಸ್‍ಆರ್) ಅಂಗವಾದ ಕೆನರಾ ವಿದ್ಯಾಜ್ಯೋತಿ ಯೋಜನೆಯಡಿ ಎಸ್‍ಸಿ/ಎಸ್‍ಟಿ ಗ್ರಾಮೀಣ ಭಾಗದ ವಿದ್ಯಾರ್ಥಿನಿಯರಿಗೆ ವಿದ್ಯಾರ್ಥಿವೇತನ ಸೌಲಭ್ಯ ವಿತರಿಸುವ ಸಮಾರಂಭವನ್ನು ಉದ್ಘಾಟಿಸಿ, ವಿದ್ಯಾರ್ಥಿನಿಯರಿಗೆ ಶಿಷ್ಯವೇತನ ಸೌಲಭ್ಯ ವಿತರಣೆ ಮಾಡಿ ಮಾತನಾಡಿದರು.


ಬ್ಯಾಂಕಿನ ಲಾಭದಲ್ಲಿ ಸಿಎಸ್‍ಆರ್ ನಿಧಿ ಮೂಲಕ ವಿದ್ಯಾರ್ಥಿನಿಯರ ಶಿಕ್ಷಣಕ್ಕೆ ಅನುಕೂಲವಾಗುವಂತಹ ಶಿಷ್ಯವೇತನ ಯೋಜನೆ ಮೂಲಕ ಹಿಂದುಳಿದ ವರ್ಗದ ಗ್ರಾಮೀಣ ಭಾಗದ ಹೆಣ್ಣುಮಕ್ಕಳಿಗೆ ಶಿಷ್ಯವೇತನ ನೀಡುವ ಮೂಲಕ ಕೆನರಾ ಬ್ಯಾಂಕ್ ಉತ್ತಮ ಕೆಲಸ ಮಾಡುತ್ತಿದೆ. ಪ್ರಸ್ತುತ ಒಬ್ಬ ವಿದ್ಯಾರ್ಥಿಯ ಶಿಕ್ಷಣಕ್ಕೆ ಸರ್ಕಾರ ಸಾಕಷ್ಟು ಖರ್ಚು ಮಾಡುತ್ತಿದೆ. ಮೊರಾರ್ಜಿ, ಕಿತ್ತೂರು ರಾಣಿ ಚೆನ್ನಮ್ಮ ಹೀಗೆ ಅನೇಕ ವಸತಿ ಶಾಲೆಗಳ ಮೂಲಕ ಉತ್ತಮ ಶಿಕ್ಷಣ ಮತ್ತು ಪೌಷ್ಟಿಕ ಆಹಾರವನ್ನು ನೀಡಲಾಗುತ್ತಿದೆ. ನಾವೆಲ್ಲಾ ನಮ್ಮ ಹಿರಿಯರು ಓದಿದ ಪಠ್ಯವನ್ನೇ ಓದಿದೆವು. ಆದರೆ ಈಗ ಹೊಸ ಶಿಕ್ಷಣ ನೀತಿಯನ್ವಯ ಪಠ್ಯ ಬದಲಾವಣೆ ಆಗುತ್ತಿದೆ. ಜಾಗತಿಕ ಮಟ್ಟದಲ್ಲಿ ಸ್ಪರ್ಧಿಸಲು ಹೊಸ ಶಿಕ್ಷಣ ನೀತಿಯ ಅಗತ್ಯತೆ ಇದ್ದು, ಎಲ್ಲರೂ ಈ ಕಡೆ ಗಮನ ಹರಿಸಬೇಕು ಎಂದರು.


ಮಹಿಳೆಯರು ಪ್ರಸ್ತುತದಲ್ಲಿ ಎಲ್ಲ ಕ್ಷೇತ್ರದಲ್ಲಿ ಉತ್ತಮ ಸ್ಪರ್ಧೆ ನೀಡುತ್ತಿದ್ದಾರೆ. ಉದಾಹರಣೆಗೆ 2019 ರ ಯುಪಿಎಸ್‍ಸಿ ಸ್ಪರ್ಧಾತ್ಮಕ ಪರೀಕ್ಷೆಯಲ್ಲಿ ಟಾಪ್ 10 ರ್ಯಾಂಕುಗಳು ಹೆಣ್ಣುಮಕ್ಕಳೇ ಪಡೆದಿರುವುದು ಹಾಗೂ ಒಲಂಪಿಕ್ಸ್ ಕ್ರೀಡೆಗಳಲ್ಲಿ ನಮ್ಮ ದೇಶದ ಹೆಣ್ಣುಮಕ್ಕಳು ಮಾಡಿರುವ ಸಾಧನೆ ನಮ್ಮೆಲ್ಲರ ಹೆಮ್ಮೆಯಾಗಿದೆ ಎಂದು ಶ್ಲಾಘಿಸಿದ ಅವರು ಎಲ್ಲೆಡೆ ನಾವು ಪುರುಷ ಸಾಧಕರ ಪ್ರತಿಮೆಯನ್ನೇ ಕಾಣುತ್ತೇವೆ, ಆದರೆ ಶಿಕಾರಿಪುರ ತಾಲ್ಲೂಕಿನ ಉಡುಗಣಿಯಲ್ಲಿ ಪ್ರಥಮ ಕವಿಯತ್ರಿ, ವಚನಗಾರ್ತಿ ಅಕ್ಕಮಹಾದೇವಿಯವರ 75 ಅಡಿ ಎತ್ತರದ ಪ್ರತಿಮೆ ಸ್ಥಾಪಿಸಲಾಗುತ್ತಿದ್ದು, 12 ನೇ ಶತಮಾನದ ಇತಿಹಾಸ ಸಾರುವ ಯೋಜನೆಯು ಪ್ರಗತಿಯಲ್ಲಿದೆ. ಇನ್ನು ವರ್ಷದಲ್ಲಿ ಪೂರ್ಣಗೊಂಡು ಲೋಕಾರ್ಪಣೆಗೊಳ್ಳಲಿದೆ ಎಂದರು.

ಕೆನರಾ ಬ್ಯಾಂಕ್ ಸೇರಿದಂತೆ ರಾಷ್ಟ್ರೀಕೃತ ಬ್ಯಾಂಕುಗಳು ಕೇಂದ್ರ ಸರ್ಕಾರದ ಯೋಜನೆಗಳು, ಎಂಎಸ್‍ಎಂಇ ಇತರೆ ಯೋಜನೆಗಳನ್ನು ಪರಿಣಾಮಕಾರಿಯಾಗಿ ಜಾರಿಗೊಳಿಸುತ್ತಾ ಉತ್ತಮ ಸೇವೆ ನೀಡುತ್ತಿವೆ. ಆದರೆ ಬ್ಯಾಂಕಿಗೆ ದಾಖಲಾತಿಗಳನ್ನು ಸಲ್ಲಿಸುವುದು ಸ್ವಲ್ಪ ಕಷ್ಟವೇ ಆಗಿದ್ದು, ಸಾರ್ವಜನಿಕರಿಗೆ ತೊಂದರೆ ಆಗದಂತೆ ಸೇವೆ ಸಲ್ಲಿಸಬೇಕೆಂದರು.

ಕೆನರಾ ಬ್ಯಾಂಕ್‍ನ ಶಿವಮೊಗ್ಗ ಪ್ರಾದೇಶಿಕ ಮುಖ್ಯಸ್ಥರಾದ ಸಂದೀಪ್ ರಾವ್ ಪಿ ಮಾತನಾಡಿ, ಪ್ರಸಕ್ತ ಸಾಲಿನಲ್ಲಿ ಗ್ರಾಮೀಣ ಮತ್ತು ಅರೆ ಗ್ರಾಮೀಣ ಪ್ರದೇಶದ ಒಟ್ಟು 450 ವಿದ್ಯಾರ್ಥಿನಿಯರಿಗೆ ಈ ವಿದ್ಯಾರ್ಥಿ ವೇತನ ನೀಡಲಾಗುತ್ತಿದೆ. ಸ್ವಾತಂತ್ರ್ಯೋತ್ಸವ ಅಮೃತ ಮಹೋತ್ಸವದ ಅಂಗವಾಗಿ ಇಂದು ಇಲ್ಲಿ 75 ವಿದ್ಯಾರ್ಥಿನಿಯರಿಗೆ ಒಟ್ಟು ರೂ. 2.67 ಲಕ್ಷ ಮೊತ್ತದ ವಿದ್ಯಾರ್ಥಿವೇತನ ಸೌಲಭ್ಯ ವಿತರಣೆ ಮಾಡಲಾಗಿದೆ ಎಂದರು.

ಸಿಎಸ್‍ಆರ್ ನಿಧಿಯಲ್ಲಿ ವಿಶೇಷವಾಗಿ ಆರ್ಥಿಕವಾಗಿ ಮತ್ತು ಸಾಮಾಜಿಕವಾಗಿ ಹಿಂದುಳಿದ ಗ್ರಾಮೀಣ ಭಾಗದ ಹೆಣ್ಣುಮಕ್ಕಳ ವಿದ್ಯಾಭ್ಯಾಸಕ್ಕೆ ಒತ್ತು ನೀಡಿ ಉತ್ತೇಜಿಸಲು ಕೆನರಾ ವಿದ್ಯಾಜ್ಯೋತಿ ಯೋಜನೆಯನ್ನು ಜಾರಿಗೆ ತಂದು ಈವರೆಗೆ ದೇಶಾದ್ಯಂತ 50,514 ವಿದ್ಯಾರ್ಥಿನಿಯರಿಗೆ ವಿದ್ಯಾರ್ಥಿವೇತನ ನೀಡಲಾಗಿದೆ. 5ನೇ ತರಗತಿಯಿಂದ 7ನೇ ತರಗತಿವರೆಗೆ ರೂ.2500 ಮತ್ತು 8 ರಿಂದ 10 ತರಗತಿವರೆಗೆ ರೂ.5000 ವಿದ್ಯಾರ್ಥಿವೇತನ ನೀಡಲಾಗುತ್ತಿದೆ ಎಂದರು.

ಕೆನರಾ ಬ್ಯಾಂಕ್ ಆರಂಭವಾಗಿ 115 ವರ್ಷಗಳಾಗಿದ್ದು, ದೇಶದಲ್ಲೇ 3 ನೇ ಅತಿ ದೊಡ್ಡ ಸಾರ್ವಜನಿಕ ವಲಯದ ಬ್ಯಾಂಕ್ ಆಗಿ ಹೊರಹೊಮ್ಮಿದೆ. ಜಿಲ್ಲೆಯಲ್ಲಿ 9 ಸಾವಿರ ಕೋಟಿ ವ್ಯವಹಾರ ಹೊಂದಿದ್ದು, 82 ಬ್ರಾಂಚ್‍ಗಳು ಕಾರ್ಯ ನಿರ್ವಹಿಸುತ್ತಿವೆ ಎಂದ ಅವರು ಪೋಷಕರು ಮತ್ತು ಶಿಕ್ಷಕರು ಹೆಣ್ಣುಮಕ್ಕಳ ವಿದ್ಯಾಭ್ಯಾಸಕ್ಕೆ ಹೆಚ್ಚಿನ ಮಹತ್ವ ನೀಡಿ ಉತ್ತೇಜಿಸಿದಲ್ಲಿ ಮಕ್ಕಳಿಗೆ ಮಾತ್ರವಲ್ಲ ಇಡೀ ಊರಿಗೆ ಒಳಿತಾಗಲಿದೆ ಎಂದರು.

ಲೀಡ್ ಬ್ಯಾಂಕ್ ಮ್ಯಾನೇಜರ್ ಯತೀಶ್ ಮಾತನಾಡಿ, ಕೆನರಾ ಬ್ಯಾಂಕ್ ಲೀಡ್ ಬ್ಯಾಂಕ್ ಆಗಿ ಹತ್ತು ಹಲವು ಸರ್ಕಾರದ ಯೋಜನೆಗಳನ್ನು ಅನುಷ್ಟಾನಕ್ಕೆ ತರುವಲ್ಲಿ ಯಶಸ್ವಿಯಾಗಿದೆ. ಕೃಷಿ ಕ್ಷೇತ್ರದ ಸಾಲ ವಿತರಣೆಯಲ್ಲಿ ಶೇ.115, ಶಿಕ್ಷಣ ಕ್ಷೇತ್ರದಲ್ಲಿ ಶೇ.100 ಪ್ರಗತಿ ಸಾಧಿಸಿದ್ದು, ವಸತಿ ಸಾಲ ನೀಡುವಲ್ಲಿ ಸಹ ಮುಂಚೂಣಿಯಲ್ಲಿದೆ. ಪ್ರಧಾನಮಂತ್ರಿ ಸ್ವನಿಧಿ ಯೋಜನೆಯಡಿ ಸುಮಾರು 1700 ಕ್ಕೂ ಹೆಚ್ಚು ಬೀದಿ ಬದಿ ವ್ಯಾಪಾರಸ್ಥರಿಗೆ ಸಾಲ ಸೌಲಭ್ಯವನ್ನು ಬ್ಯಾಂಕ್ ನೀಡಿದ್ದು ಜಿಲ್ಲೆಯ ನಿಗದಿತ ಗುರಿಯಲ್ಲಿ ಶೇ.50 ರಷ್ಟು ಸಾಲವನ್ನು ಕೆನರಾ ಬ್ಯಾಂಕ್ ಒಂದೇ ನೀಡಿದೆ. ವಿದ್ಯಾರ್ಥಿಗಳಿಗೆ ಶಿಕ್ಷಣ ಸಾಲ ಮತ್ತು ಇತರೆ ಸರ್ಕಾರಿ ಯೋಜನೆಗಳನ್ನು ಬ್ಯಾಂಕ್ ಅನುಷ್ಟಾನಗೊಳಿಸುತ್ತಿದ್ದು ಇದರ ಸದುಪಯೋಗವನ್ನು ಮಾಡಿಕೊಳ್ಳಬೇಕೆಂದರು.

ಅಸಿಸ್ಟೆಂಟ್ ಜನರಲ್ ಮ್ಯಾನೇಜರ್ ಪೂರ್ಣಿಮಾ ಎನ್.ರಾವ್, ಇತರೆ ಅಧಿಕಾರಿ ಸಿಬ್ಬಂದಿಗಳು, ವಿದ್ಯಾರ್ಥಿಗಳು, ಪೋಷಕರು ಹಾಜರಿದ್ದರು. ಬ್ಯಾಂಕ್ ಸಿಬ್ಬಂದಿ ಮೋಹನ್ ಪ್ರಾರ್ಥಿಸಿಸಿದರು. ಧನಪಾಲ್ ನಾಯಕ್ ಸ್ವಾಗತಿಸಿದರು, ಶ್ರೀಕಾಂತ್ ನಿರೂಪಿಸಿದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

Tags: Kannada NewsKannada News LiveKannada News OnlineKannada News WebsiteKannada WebsiteLatest News KannadaLocal NewsMalnad NewsMP RaghavendraNews in KannadaNews KannadaShimogaShivamoggaShivamogga Newsಮಲೆನಾಡು_ಸುದ್ಧಿಶಿವಮೊಗ್ಗಶಿವಮೊಗ್ಗ_ನ್ಯೂಸ್ಸಂಸದ ರಾಘವೇಂದ್ರ
Previous Post

ಬೆಂಗಳೂರು: ನಗರ ಪ್ರದಕ್ಷಿಣೆ ಮೂಲಕ ಸಂಭ್ರಮದ ಸ್ವಾತಂತ್ರ್ಯದಿನ ಆಚರಣೆ…

Next Post

ಭದ್ರಾವತಿ ನಗರಸಭೆ ವಾರ್ಡ್ ನಂ.29ರ ಚುನಾವಣಾ ವೇಳಾಪಟ್ಟಿ ಪ್ರಕಟ…

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post

ಭದ್ರಾವತಿ ನಗರಸಭೆ ವಾರ್ಡ್ ನಂ.29ರ ಚುನಾವಣಾ ವೇಳಾಪಟ್ಟಿ ಪ್ರಕಟ...

Discussion about this post

ಆಡಿಯನ್ಸ್ ಪೋಲ್

ಹಿಜಾಬ್ ವಿವಾದ/ಗಲಭೆ ಮತಾಂಧ ಶಕ್ತಿಗಳ ಷಡ್ಯಂತ್ರವೇ?

View Results

Loading ... Loading ...
https://kalahamsa.in/services/ https://kalahamsa.in/services/ https://kalahamsa.in/services/

Recent News

ಬಹುಮುಖ ಪ್ರತಿಭೆ ಲಕ್ಷ್ಮೀ ಭದ್ರಾವತಿ ಅವರಿಗೆ ರಂಗಭೂಮಿ ರತ್ನ ರಾಷ್ಟ್ರ ಪ್ರಶಸ್ತಿ

June 24, 2025

ಮಹತ್ವದ ನಿರ್ಧಾರ | ರೈಲು ಪ್ರಯಾಣ ದರ ಹೆಚ್ಚಳ | ಎಷ್ಟು ಏರಿಕೆ? ಎಲ್ಲ ಪ್ರಯಾಣಕ್ಕೂ ಅನ್ವಯವೇ?

June 24, 2025

HSVಯವರಿಗೆ ಭಾವ ನಮನ | ಸಾಹಿತ್ಯಾಸಕ್ತರ ಮನಗೆದ್ದ ಅದ್ಭುತ ಆಯೋಜನೆ

June 24, 2025

ಬೆಂಗಳೂರು-ಕಲಬುರಗಿ ವಂದೇ ಭಾರತ್ ರೈಲು ಕುರಿತಾಗಿ ಮಹತ್ವದ ಮಾಹಿತಿ ಇಲ್ಲಿದೆ

June 24, 2025
kalpa.news

Reproduction, in whole or in part, in any form or medium without the express written permission of Kapla News is strictly prohibited.

Follow Us

Browse by Category

  • Army
  • Counter
  • Editorial
  • English Articles
  • Others
  • Photo Gallery
  • Small Bytes
  • Special Articles
  • video
  • ಅಂಕಣ
  • ಅಜೇಯ್ ಕಿರಣ್ ಆಚಾರ್
  • ಅಂತಾರಾಷ್ಟ್ರೀಯ
  • ಅಧ್ಯಾತ್ಮ ಸಾಧನೆ
  • ಆನಂದ ಕಂದ
  • ಆರೋಗ್ಯ – ಜೀವನ ಶೈಲಿ
  • ಇದೊಂದು ಜಗತ್ತು
  • ಉಡುಪಿ
  • ಉತ್ತರ ಕನ್ನಡ
  • ಕಲಬುರಗಿ
  • ಕೈ ರುಚಿ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕ ಬಳ್ಳಾಪುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜಾಬ್-ಸ್ಟ್ರೀಟ್
  • ಜಿಲ್ಲೆ
  • ಜ್ಯೋತಿರ್ವಿಜ್ಞಾನ
  • ಡಾ.ಗುರುರಾಜ ಪೋಶೆಟ್ಟಿಹಳ್ಳಿ
  • ತೀರ್ಥಹಳ್ಳಿ
  • ತುಮಕೂರು
  • ದಕ್ಷ
  • ದಕ್ಷಿಣ ಕನ್ನಡ
  • ದಾವಣಗೆರೆ
  • ಧಾರವಾಡ
  • ನಾದ ಕಲ್ಪ
  • ನಿತ್ಯಾನಂದ ವಿವೇಕವಂಶಿ
  • ಪೀಪಲ್ ರಿಪೋರ್ಟಿಂಗ್
  • ಪುನೀತ್ ಜಿ. ಕೂಡ್ಲೂರು
  • ಪುರಾಣ ಮತ್ತು ಚರಿತ್ರೆ
  • ಪ್ರಕಾಶ್ ಅಮ್ಮಣ್ಣಾಯ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂ. ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಭದ್ರಾವತಿ
  • ಮಂಡ್ಯ
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಮನಗರ
  • ರಾಯಚೂರು
  • ರಾಷ್ಟ್ರೀಯ
  • ಲೈಫ್-ಸ್ಟೈಲ್
  • ವಾಣಿಜ್ಯ
  • ವಿಜಾಪುರ
  • ವಿಜ್ಞಾನ-ತಂತ್ರಜ್ಞಾನ
  • ವಿನಯ್ ಶಿವಮೊಗ್ಗ
  • ವೈದ್ಯೋ ನಾರಾಯಣೋ ಹರಿಃ
  • ವೈಶಿಷ್ಟ್ಯ
  • ಶಿಕಾರಿಪುರ
  • ಶಿವಮೊಗ್ಗ
  • ಸಚಿನ್ ಪಾರ್ಶ್ವನಾಥ್
  • ಸಾಗರ
  • ಸಿನೆಮಾ
  • ಸೊರಬ
  • ಹಾವೇರಿ
  • ಹಾಸನ
  • ಹೊಸನಗರ

Recent News

ಬಹುಮುಖ ಪ್ರತಿಭೆ ಲಕ್ಷ್ಮೀ ಭದ್ರಾವತಿ ಅವರಿಗೆ ರಂಗಭೂಮಿ ರತ್ನ ರಾಷ್ಟ್ರ ಪ್ರಶಸ್ತಿ

June 24, 2025

ಮಹತ್ವದ ನಿರ್ಧಾರ | ರೈಲು ಪ್ರಯಾಣ ದರ ಹೆಚ್ಚಳ | ಎಷ್ಟು ಏರಿಕೆ? ಎಲ್ಲ ಪ್ರಯಾಣಕ್ಕೂ ಅನ್ವಯವೇ?

June 24, 2025

HSVಯವರಿಗೆ ಭಾವ ನಮನ | ಸಾಹಿತ್ಯಾಸಕ್ತರ ಮನಗೆದ್ದ ಅದ್ಭುತ ಆಯೋಜನೆ

June 24, 2025
  • About
  • Advertise
  • Privacy & Policy
  • Contact

© 2025 Kalpa News - All Rights Reserved | Powered by Kalahamsa Infotech Pvt. ltd.

No Result
View All Result
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು

© 2025 Kalpa News - All Rights Reserved | Powered by Kalahamsa Infotech Pvt. ltd.

Welcome Back!

Login to your account below

Forgotten Password?

Create New Account!

Fill the forms below to register

All fields are required. Log In

Retrieve your password

Please enter your username or email address to reset your password.

Log In
error: Content is protected by Kalpa News!!