No Result
View All Result
Marriott Bonvoy Expands ICC Partnership to Include Women’s T20 World Cup 2026
English Articles

Marriott Bonvoy Expands ICC Partnership to Include Women’s T20 World Cup 2026

by ಕಲ್ಪ ನ್ಯೂಸ್
May 19, 2026
0

Kalpa Media House  |  Special Article | Marriott Bonvoy, the global travel platform by Marriott International, has announced the expansion...

Read moreDetails
Indriya Launches Customer-Owned Gold Exchange Programme to Promote Responsible Gold Consumption

Indriya Launches Customer-Owned Gold Exchange Programme to Promote Responsible Gold Consumption

May 19, 2026
Ashwini Vaishnaw Flags Off Bengaluru–Mumbai Express; Announces Vande Bharat Sleeper Soon

Ashwini Vaishnaw Flags Off Bengaluru–Mumbai Express; Announces Vande Bharat Sleeper Soon

May 18, 2026
Amazon India to deploy 1,000 Eicher electric trucks for Amazon Now operations

Amazon India to deploy 1,000 Eicher electric trucks for Amazon Now operations

May 18, 2026
South Western Railway, Mysuru Division Hosts Inter Department Drama Competition

South Western Railway, Mysuru Division Hosts Inter Department Drama Competition

May 16, 2026
  • Advertise With Us
  • Grievances
  • About Us
  • Contact Us
Wednesday, May 20, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ

ಎಲ್ಲ ಕ್ಷೇತ್ರದಲ್ಲಿ ಹೆಣ್ಣುಮಕ್ಕಳು ಸಾಧನೆ ಮಾಡಿರುವುದು ನಮ್ಮೆಲ್ಲರ ಹೆಮ್ಮೆಯಾಗಿದೆ: ಸಂಸದ ರಾಘವೇಂದ್ರ

ಎಸ್‍ಸಿ/ಎಸ್‍ಟಿ ವಿದ್ಯಾರ್ಥಿನಿಯರಿಗೆ ವಿದ್ಯಾರ್ಥಿವೇತನ ಸೌಲಭ್ಯ ವಿತರಣೆ

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
August 17, 2021
in ಶಿವಮೊಗ್ಗ
0
ಎಲ್ಲ ಕ್ಷೇತ್ರದಲ್ಲಿ ಹೆಣ್ಣುಮಕ್ಕಳು ಸಾಧನೆ ಮಾಡಿರುವುದು ನಮ್ಮೆಲ್ಲರ ಹೆಮ್ಮೆಯಾಗಿದೆ: ಸಂಸದ ರಾಘವೇಂದ್ರ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್

ಶಿವಮೊಗ್ಗ: ಮಹಿಳೆಯರು ಇಂದು ಸ್ಪರ್ಧಾತ್ಮಕ ಪರೀಕ್ಷೆಗಳು, ಒಲಂಪಿಕ್ ಕ್ರೀಡೆಗಳು, ಶಿಕ್ಷಣ, ಆರೋಗ್ಯ ಹೀಗೆ ಎಲ್ಲ ಕ್ಷೇತ್ರಗಳಲ್ಲಿ ಉತ್ತಮ ಸಾಧನೆ ಮಾಡುತ್ತಿದ್ದು, ಕೆನರಾ ಜ್ಯೋತಿ ಯೋಜನೆಯಡಿ ಶಿಷ್ಯವೇತನ ಪಡೆದ ಗ್ರಾಮೀಣ ಭಾಗದ ಹೆಣ್ಣುಮಕ್ಕಳು ತಮ್ಮದೇ ಆದ ಸಾಧನೆ ಮೂಲಕ ಹೊರಹೊಮ್ಮಬೇಕೆಂದು ಸಂಸದರಾದ ಬಿ.ವೈ.ರಾಘವೇಂದ್ರ ವಿದ್ಯಾರ್ಥಿನಿಯರಿಗೆ ಹಾರೈಸಿದರು.

ಮೈ-ಮನಗಳನ್ನು ರೋಮಾಂಚನಗೊಳಿಸುವ ಈ ದೇಶ ಭಕ್ತಿ ಗೀತೆಯನ್ನೊಮ್ಮೆ ನೋಡಿ

ಇಂದು ಕೆನರಾ ಬ್ಯಾಂಕ್ ಕಟ್ಟಡದಲ್ಲಿರುವ ಲೀಡ್ ಬ್ಯಾಂಕ್ ಕಾನ್ಫರೆನ್ಸ್ ಹಾಲ್‍ನಲ್ಲಿ ಕೆನರಾ ಬ್ಯಾಂಕಿನ ಸಾಂಸ್ಥಿಕ ಸಾಮಾಜಿಕ ಜವಾಬ್ದಾರಿ(ಕಾರ್ಪೊರೇಟ್ ಸೋಷಿಯಲ್ ರೆಸ್ಪಾನ್ಸಿಬಿಲಿಟಿ-ಸಿಎಸ್‍ಆರ್) ಅಂಗವಾದ ಕೆನರಾ ವಿದ್ಯಾಜ್ಯೋತಿ ಯೋಜನೆಯಡಿ ಎಸ್‍ಸಿ/ಎಸ್‍ಟಿ ಗ್ರಾಮೀಣ ಭಾಗದ ವಿದ್ಯಾರ್ಥಿನಿಯರಿಗೆ ವಿದ್ಯಾರ್ಥಿವೇತನ ಸೌಲಭ್ಯ ವಿತರಿಸುವ ಸಮಾರಂಭವನ್ನು ಉದ್ಘಾಟಿಸಿ, ವಿದ್ಯಾರ್ಥಿನಿಯರಿಗೆ ಶಿಷ್ಯವೇತನ ಸೌಲಭ್ಯ ವಿತರಣೆ ಮಾಡಿ ಮಾತನಾಡಿದರು.


ಬ್ಯಾಂಕಿನ ಲಾಭದಲ್ಲಿ ಸಿಎಸ್‍ಆರ್ ನಿಧಿ ಮೂಲಕ ವಿದ್ಯಾರ್ಥಿನಿಯರ ಶಿಕ್ಷಣಕ್ಕೆ ಅನುಕೂಲವಾಗುವಂತಹ ಶಿಷ್ಯವೇತನ ಯೋಜನೆ ಮೂಲಕ ಹಿಂದುಳಿದ ವರ್ಗದ ಗ್ರಾಮೀಣ ಭಾಗದ ಹೆಣ್ಣುಮಕ್ಕಳಿಗೆ ಶಿಷ್ಯವೇತನ ನೀಡುವ ಮೂಲಕ ಕೆನರಾ ಬ್ಯಾಂಕ್ ಉತ್ತಮ ಕೆಲಸ ಮಾಡುತ್ತಿದೆ. ಪ್ರಸ್ತುತ ಒಬ್ಬ ವಿದ್ಯಾರ್ಥಿಯ ಶಿಕ್ಷಣಕ್ಕೆ ಸರ್ಕಾರ ಸಾಕಷ್ಟು ಖರ್ಚು ಮಾಡುತ್ತಿದೆ. ಮೊರಾರ್ಜಿ, ಕಿತ್ತೂರು ರಾಣಿ ಚೆನ್ನಮ್ಮ ಹೀಗೆ ಅನೇಕ ವಸತಿ ಶಾಲೆಗಳ ಮೂಲಕ ಉತ್ತಮ ಶಿಕ್ಷಣ ಮತ್ತು ಪೌಷ್ಟಿಕ ಆಹಾರವನ್ನು ನೀಡಲಾಗುತ್ತಿದೆ. ನಾವೆಲ್ಲಾ ನಮ್ಮ ಹಿರಿಯರು ಓದಿದ ಪಠ್ಯವನ್ನೇ ಓದಿದೆವು. ಆದರೆ ಈಗ ಹೊಸ ಶಿಕ್ಷಣ ನೀತಿಯನ್ವಯ ಪಠ್ಯ ಬದಲಾವಣೆ ಆಗುತ್ತಿದೆ. ಜಾಗತಿಕ ಮಟ್ಟದಲ್ಲಿ ಸ್ಪರ್ಧಿಸಲು ಹೊಸ ಶಿಕ್ಷಣ ನೀತಿಯ ಅಗತ್ಯತೆ ಇದ್ದು, ಎಲ್ಲರೂ ಈ ಕಡೆ ಗಮನ ಹರಿಸಬೇಕು ಎಂದರು.


ಮಹಿಳೆಯರು ಪ್ರಸ್ತುತದಲ್ಲಿ ಎಲ್ಲ ಕ್ಷೇತ್ರದಲ್ಲಿ ಉತ್ತಮ ಸ್ಪರ್ಧೆ ನೀಡುತ್ತಿದ್ದಾರೆ. ಉದಾಹರಣೆಗೆ 2019 ರ ಯುಪಿಎಸ್‍ಸಿ ಸ್ಪರ್ಧಾತ್ಮಕ ಪರೀಕ್ಷೆಯಲ್ಲಿ ಟಾಪ್ 10 ರ್ಯಾಂಕುಗಳು ಹೆಣ್ಣುಮಕ್ಕಳೇ ಪಡೆದಿರುವುದು ಹಾಗೂ ಒಲಂಪಿಕ್ಸ್ ಕ್ರೀಡೆಗಳಲ್ಲಿ ನಮ್ಮ ದೇಶದ ಹೆಣ್ಣುಮಕ್ಕಳು ಮಾಡಿರುವ ಸಾಧನೆ ನಮ್ಮೆಲ್ಲರ ಹೆಮ್ಮೆಯಾಗಿದೆ ಎಂದು ಶ್ಲಾಘಿಸಿದ ಅವರು ಎಲ್ಲೆಡೆ ನಾವು ಪುರುಷ ಸಾಧಕರ ಪ್ರತಿಮೆಯನ್ನೇ ಕಾಣುತ್ತೇವೆ, ಆದರೆ ಶಿಕಾರಿಪುರ ತಾಲ್ಲೂಕಿನ ಉಡುಗಣಿಯಲ್ಲಿ ಪ್ರಥಮ ಕವಿಯತ್ರಿ, ವಚನಗಾರ್ತಿ ಅಕ್ಕಮಹಾದೇವಿಯವರ 75 ಅಡಿ ಎತ್ತರದ ಪ್ರತಿಮೆ ಸ್ಥಾಪಿಸಲಾಗುತ್ತಿದ್ದು, 12 ನೇ ಶತಮಾನದ ಇತಿಹಾಸ ಸಾರುವ ಯೋಜನೆಯು ಪ್ರಗತಿಯಲ್ಲಿದೆ. ಇನ್ನು ವರ್ಷದಲ್ಲಿ ಪೂರ್ಣಗೊಂಡು ಲೋಕಾರ್ಪಣೆಗೊಳ್ಳಲಿದೆ ಎಂದರು.

ಕೆನರಾ ಬ್ಯಾಂಕ್ ಸೇರಿದಂತೆ ರಾಷ್ಟ್ರೀಕೃತ ಬ್ಯಾಂಕುಗಳು ಕೇಂದ್ರ ಸರ್ಕಾರದ ಯೋಜನೆಗಳು, ಎಂಎಸ್‍ಎಂಇ ಇತರೆ ಯೋಜನೆಗಳನ್ನು ಪರಿಣಾಮಕಾರಿಯಾಗಿ ಜಾರಿಗೊಳಿಸುತ್ತಾ ಉತ್ತಮ ಸೇವೆ ನೀಡುತ್ತಿವೆ. ಆದರೆ ಬ್ಯಾಂಕಿಗೆ ದಾಖಲಾತಿಗಳನ್ನು ಸಲ್ಲಿಸುವುದು ಸ್ವಲ್ಪ ಕಷ್ಟವೇ ಆಗಿದ್ದು, ಸಾರ್ವಜನಿಕರಿಗೆ ತೊಂದರೆ ಆಗದಂತೆ ಸೇವೆ ಸಲ್ಲಿಸಬೇಕೆಂದರು.

ಕೆನರಾ ಬ್ಯಾಂಕ್‍ನ ಶಿವಮೊಗ್ಗ ಪ್ರಾದೇಶಿಕ ಮುಖ್ಯಸ್ಥರಾದ ಸಂದೀಪ್ ರಾವ್ ಪಿ ಮಾತನಾಡಿ, ಪ್ರಸಕ್ತ ಸಾಲಿನಲ್ಲಿ ಗ್ರಾಮೀಣ ಮತ್ತು ಅರೆ ಗ್ರಾಮೀಣ ಪ್ರದೇಶದ ಒಟ್ಟು 450 ವಿದ್ಯಾರ್ಥಿನಿಯರಿಗೆ ಈ ವಿದ್ಯಾರ್ಥಿ ವೇತನ ನೀಡಲಾಗುತ್ತಿದೆ. ಸ್ವಾತಂತ್ರ್ಯೋತ್ಸವ ಅಮೃತ ಮಹೋತ್ಸವದ ಅಂಗವಾಗಿ ಇಂದು ಇಲ್ಲಿ 75 ವಿದ್ಯಾರ್ಥಿನಿಯರಿಗೆ ಒಟ್ಟು ರೂ. 2.67 ಲಕ್ಷ ಮೊತ್ತದ ವಿದ್ಯಾರ್ಥಿವೇತನ ಸೌಲಭ್ಯ ವಿತರಣೆ ಮಾಡಲಾಗಿದೆ ಎಂದರು.

ಸಿಎಸ್‍ಆರ್ ನಿಧಿಯಲ್ಲಿ ವಿಶೇಷವಾಗಿ ಆರ್ಥಿಕವಾಗಿ ಮತ್ತು ಸಾಮಾಜಿಕವಾಗಿ ಹಿಂದುಳಿದ ಗ್ರಾಮೀಣ ಭಾಗದ ಹೆಣ್ಣುಮಕ್ಕಳ ವಿದ್ಯಾಭ್ಯಾಸಕ್ಕೆ ಒತ್ತು ನೀಡಿ ಉತ್ತೇಜಿಸಲು ಕೆನರಾ ವಿದ್ಯಾಜ್ಯೋತಿ ಯೋಜನೆಯನ್ನು ಜಾರಿಗೆ ತಂದು ಈವರೆಗೆ ದೇಶಾದ್ಯಂತ 50,514 ವಿದ್ಯಾರ್ಥಿನಿಯರಿಗೆ ವಿದ್ಯಾರ್ಥಿವೇತನ ನೀಡಲಾಗಿದೆ. 5ನೇ ತರಗತಿಯಿಂದ 7ನೇ ತರಗತಿವರೆಗೆ ರೂ.2500 ಮತ್ತು 8 ರಿಂದ 10 ತರಗತಿವರೆಗೆ ರೂ.5000 ವಿದ್ಯಾರ್ಥಿವೇತನ ನೀಡಲಾಗುತ್ತಿದೆ ಎಂದರು.

ಕೆನರಾ ಬ್ಯಾಂಕ್ ಆರಂಭವಾಗಿ 115 ವರ್ಷಗಳಾಗಿದ್ದು, ದೇಶದಲ್ಲೇ 3 ನೇ ಅತಿ ದೊಡ್ಡ ಸಾರ್ವಜನಿಕ ವಲಯದ ಬ್ಯಾಂಕ್ ಆಗಿ ಹೊರಹೊಮ್ಮಿದೆ. ಜಿಲ್ಲೆಯಲ್ಲಿ 9 ಸಾವಿರ ಕೋಟಿ ವ್ಯವಹಾರ ಹೊಂದಿದ್ದು, 82 ಬ್ರಾಂಚ್‍ಗಳು ಕಾರ್ಯ ನಿರ್ವಹಿಸುತ್ತಿವೆ ಎಂದ ಅವರು ಪೋಷಕರು ಮತ್ತು ಶಿಕ್ಷಕರು ಹೆಣ್ಣುಮಕ್ಕಳ ವಿದ್ಯಾಭ್ಯಾಸಕ್ಕೆ ಹೆಚ್ಚಿನ ಮಹತ್ವ ನೀಡಿ ಉತ್ತೇಜಿಸಿದಲ್ಲಿ ಮಕ್ಕಳಿಗೆ ಮಾತ್ರವಲ್ಲ ಇಡೀ ಊರಿಗೆ ಒಳಿತಾಗಲಿದೆ ಎಂದರು.

ಲೀಡ್ ಬ್ಯಾಂಕ್ ಮ್ಯಾನೇಜರ್ ಯತೀಶ್ ಮಾತನಾಡಿ, ಕೆನರಾ ಬ್ಯಾಂಕ್ ಲೀಡ್ ಬ್ಯಾಂಕ್ ಆಗಿ ಹತ್ತು ಹಲವು ಸರ್ಕಾರದ ಯೋಜನೆಗಳನ್ನು ಅನುಷ್ಟಾನಕ್ಕೆ ತರುವಲ್ಲಿ ಯಶಸ್ವಿಯಾಗಿದೆ. ಕೃಷಿ ಕ್ಷೇತ್ರದ ಸಾಲ ವಿತರಣೆಯಲ್ಲಿ ಶೇ.115, ಶಿಕ್ಷಣ ಕ್ಷೇತ್ರದಲ್ಲಿ ಶೇ.100 ಪ್ರಗತಿ ಸಾಧಿಸಿದ್ದು, ವಸತಿ ಸಾಲ ನೀಡುವಲ್ಲಿ ಸಹ ಮುಂಚೂಣಿಯಲ್ಲಿದೆ. ಪ್ರಧಾನಮಂತ್ರಿ ಸ್ವನಿಧಿ ಯೋಜನೆಯಡಿ ಸುಮಾರು 1700 ಕ್ಕೂ ಹೆಚ್ಚು ಬೀದಿ ಬದಿ ವ್ಯಾಪಾರಸ್ಥರಿಗೆ ಸಾಲ ಸೌಲಭ್ಯವನ್ನು ಬ್ಯಾಂಕ್ ನೀಡಿದ್ದು ಜಿಲ್ಲೆಯ ನಿಗದಿತ ಗುರಿಯಲ್ಲಿ ಶೇ.50 ರಷ್ಟು ಸಾಲವನ್ನು ಕೆನರಾ ಬ್ಯಾಂಕ್ ಒಂದೇ ನೀಡಿದೆ. ವಿದ್ಯಾರ್ಥಿಗಳಿಗೆ ಶಿಕ್ಷಣ ಸಾಲ ಮತ್ತು ಇತರೆ ಸರ್ಕಾರಿ ಯೋಜನೆಗಳನ್ನು ಬ್ಯಾಂಕ್ ಅನುಷ್ಟಾನಗೊಳಿಸುತ್ತಿದ್ದು ಇದರ ಸದುಪಯೋಗವನ್ನು ಮಾಡಿಕೊಳ್ಳಬೇಕೆಂದರು.

ಅಸಿಸ್ಟೆಂಟ್ ಜನರಲ್ ಮ್ಯಾನೇಜರ್ ಪೂರ್ಣಿಮಾ ಎನ್.ರಾವ್, ಇತರೆ ಅಧಿಕಾರಿ ಸಿಬ್ಬಂದಿಗಳು, ವಿದ್ಯಾರ್ಥಿಗಳು, ಪೋಷಕರು ಹಾಜರಿದ್ದರು. ಬ್ಯಾಂಕ್ ಸಿಬ್ಬಂದಿ ಮೋಹನ್ ಪ್ರಾರ್ಥಿಸಿಸಿದರು. ಧನಪಾಲ್ ನಾಯಕ್ ಸ್ವಾಗತಿಸಿದರು, ಶ್ರೀಕಾಂತ್ ನಿರೂಪಿಸಿದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

Tags: Kannada NewsKannada News LiveKannada News OnlineKannada News WebsiteKannada WebsiteLatest News KannadaLocal NewsMalnad NewsMP RaghavendraNews in KannadaNews KannadaShimogaShivamoggaShivamogga Newsಮಲೆನಾಡು_ಸುದ್ಧಿಶಿವಮೊಗ್ಗಶಿವಮೊಗ್ಗ_ನ್ಯೂಸ್ಸಂಸದ ರಾಘವೇಂದ್ರ
Share218Tweet123Send
Previous Post

ಬೆಂಗಳೂರು: ನಗರ ಪ್ರದಕ್ಷಿಣೆ ಮೂಲಕ ಸಂಭ್ರಮದ ಸ್ವಾತಂತ್ರ್ಯದಿನ ಆಚರಣೆ…

Next Post

ಭದ್ರಾವತಿ ನಗರಸಭೆ ವಾರ್ಡ್ ನಂ.29ರ ಚುನಾವಣಾ ವೇಳಾಪಟ್ಟಿ ಪ್ರಕಟ…

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ಭದ್ರಾವತಿ ನಗರಸಭೆ: ಕಾಂಗ್ರೆಸ್’ಗೆ ಸ್ಪಷ್ಟ ಬಹುಮತ, ಯಾರ್ಯಾರು, ಎಷ್ಟು ಮತ ಪಡೆದು ಗೆದ್ದರು? ಇಲ್ಲಿದೆ ಮಾಹಿತಿ

ಭದ್ರಾವತಿ ನಗರಸಭೆ ವಾರ್ಡ್ ನಂ.29ರ ಚುನಾವಣಾ ವೇಳಾಪಟ್ಟಿ ಪ್ರಕಟ...

Leave a Reply Cancel reply

Your email address will not be published. Required fields are marked *

  • Trending
  • Latest
ಭದ್ರಾವತಿಯ ಆರು ಆರೋಪಿಗಳಿಗೆ 3 & 7 ವರ್ಷ ಕಠಿಣ ಕಾರಾಗೃಹ ಶಿಕ್ಷೆ | ನಡೆದಿದ್ದ ಅಪರಾಧವೇನು?

ಭದ್ರಾವತಿಯ ಆರು ಆರೋಪಿಗಳಿಗೆ 3 & 7 ವರ್ಷ ಕಠಿಣ ಕಾರಾಗೃಹ ಶಿಕ್ಷೆ | ನಡೆದಿದ್ದ ಅಪರಾಧವೇನು?

May 5, 2026
ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

April 28, 2026
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

April 3, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
ಅರಸೀಕೆರೆಯಲ್ಲಿ RPF ಆಪರೇಷನ್ ಸತರ್ಕ ಕಾರ್ಯಾಚರಣೆ | ಮದ್ಯದ ಬಾಟಲಿಗಳ ವಶ

ಅರಸೀಕೆರೆಯಲ್ಲಿ RPF ಆಪರೇಷನ್ ಸತರ್ಕ ಕಾರ್ಯಾಚರಣೆ | ಮದ್ಯದ ಬಾಟಲಿಗಳ ವಶ

May 19, 2026
ಮೈಸೂರು | ಅಧಿಕ ಮಾಸೋತ್ಸವ | ಮೇ 20ರಂದು ಕೌಸಲ್ಯಾ – ಅಪ್ರಮೇಯ ಗಾಯನ

ಮೈಸೂರು | ಅಧಿಕ ಮಾಸೋತ್ಸವ | ಮೇ 20ರಂದು ಕೌಸಲ್ಯಾ – ಅಪ್ರಮೇಯ ಗಾಯನ

May 19, 2026
Marriott Bonvoy Expands ICC Partnership to Include Women’s T20 World Cup 2026

Marriott Bonvoy Expands ICC Partnership to Include Women’s T20 World Cup 2026

May 19, 2026
ಭಾರತದ ಮೊಟ್ಟ ಮೊದಲ ಬುಲೆಟ್ ಟ್ರೈನ್ ಫಸ್ಟ್ ಲುಕ್ ಹೇಗಿದೆ ನೋಡಿ | ಎಲ್ಲಿಂದ ಎಲ್ಲಿಗೆ?

ಬೆಂಗಳೂರಿಗೆ ಬರಲಿದೆ ಬುಲೆಟ್ ಟ್ರೈನ್ | ಎಲ್ಲೆಲ್ಲಿಗೆ? ಬಿಡುಗಡೆಯಾಯ್ತು ನಕ್ಷೆ

May 19, 2026
33 ವರ್ಷಗಳಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ!, ಏನಿದು ಕೇಸ್?

ನೀಟ್ ಪ್ರಶ್ನೆಪತ್ರಿಕೆ ಸೋರಿಕೆ | ರಸಾಯನಶಾಸ್ತ್ರ ತರಗತಿ ಸಂಸ್ಥಾಪಕ ಶಿವರಾಜ್ ಸಿಬಿಐನಿಂದ ಬಂಧನ

May 19, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL