ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ಶಿವಮೊಗ್ಗ ಮಹಾನಗರ ಪಾಲಿಕೆಯ ಪೌರ ಕಾರ್ಮಿಕ ಮೂರ್ತಿಯವರು ಮಹಾನಗರ ಪಾಲಿಕೆಯ ಮಾಜಿ ಸದಸ್ಯ ಪ್ರಭಾಕರ್ (ಪ್ರಭು) ಕಿರುಕುಳ ನೀಡಿದ ವಿಚಾರವಾಗಿ ಮನನೊಂದು ಆತ್ಮಹತ್ಯೆಗೆ ಪ್ರಯತ್ನಪಟ್ಟ ವಿಚಾರವಾಗಿ ಮೆಗ್ಗಾನ್ ಆಸ್ಪತ್ರೆಗೆ ದಾಖಲಾಗಿರುವ ಅವರನ್ನು ಇಂದು ನಗರಸಭೆ ಮಾಜಿ ಸದಸ್ಯ ಹೆಚ್.ಸಿ. ಯೋಗೀಶ್ ಭೇಟಿ ನೀಡಿ, ಆರೋಗ್ಯ ವಿಚಾರಿಸಿ ಸಾಂತ್ವಾನ ಹೇಳಿದರು.
ಪಾಲಿಕೆಯ ನೌಕರರಿಗೆ ಕಿರುಕುಳ ನೀಡುವುದು ಹಾಗೂ ಅವಮಾನಿಸುವುದು ಒಬ್ಬ ಮಾಜಿ ಕಾರ್ಪೋರೇಟರಿಗೆ ತರವಲ್ಲ. ನಿಮ್ಮೊಂದಿಗೆ ನಾವು ಇದ್ದೇವೆ. ನಾಡಿದ್ದು ಕಾರ್ಮಿಕ ಸಚಿವರು ಬರುತ್ತಿದ್ದಾರೆ. ಆಗ ಅವರಿಗು ದೂರು ನೀಡೋಣ ಮತ್ತು ಕರ್ತವ್ಯಕ್ಕೆ ಅಡ್ಡಿ ಮತ್ತು ಸರ್ಕಾರಿ ನೌಕರನಿಗೆ ಮಾಜಿ ಸದಸ್ಯ ಅವಮಾನ ಮಾಡಿದ್ದಕ್ಕೆ ಕೂಡಲೇ ಅವರ ಮೇಲೆ ಪೊಲೀಸರು ಕ್ರಮ ಕೈಗೊಳ್ಳಬೇಕು ಮತ್ತು ಈ ಸಂಬಂಧ ನಮ್ಮೆಲ್ಲರ ಬೆಂಬಲ ಇದೆ ಎಂದು ಭರವಸೆ ನೀಡಿದರು.
Also read: ತಾವು ದೆಹಲಿಗೆ ಹೋಗಿದ್ದೇಕೆ? ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಹೇಳಿದ್ದೇನು?
ಈ ಸಂದರ್ಭದಲ್ಲಿ ಪಾಲಿಕೆ ಮಾಜಿ ಸದಸ್ಯರಾದ ವಿಶ್ವನಾಥ್ ಕಾಶಿ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಶಿವಕುಮಾರ್, ಕಲೀಂ ಪಾಶಾ, ರಂಗೇಗೌಡ, ಮಧುಕುಮಾರ್ ಮತ್ತಿತರರು ಇದ್ದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post