ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ಈ ಬಾರಿ ಚುನಾವಣೆಯಲ್ಲಿ ಅತಿ ಹೆಚ್ಚು ಮತಗಳ ಅಂತರದಿಂದ ಗೆಲುವು ಸಾಧಿಸುತ್ತೇನೆ ಎಂದು ಬಿಜೆಪಿ ಅಭ್ಯರ್ಥಿ ಬಿ.ವೈ. ರಾಘವೇಂದ್ರ #B Y Raghavendra ವಿಶ್ವಾಸ ವ್ಯಕ್ತಪಡಿಸಿದ್ದಾರೆ.
ಶಿಕಾರಿಪುರದಲ್ಲಿ ಮಾಜಿ ಸಿಎಂ ಯಡಿಯೂರಪ್ಪ #B S Yadiyurappa ಅವರೊಂದಿಗೆ ಕುಟುಂಬ ಸಮೇತರಾಗಿ ಮತಗಟ್ಟೆಗೆ ಆಗಮಿಸಿ ಮತ ಚಲಾವಣೆ ಮಾಡಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಯುಪಿಎ ಸರ್ಕಾರ ಅಧಿಕಾರದಲ್ಲಿ ಇದ್ದಂತಹ ಸಂದರ್ಭದಲ್ಲಿ ಆ ಸರ್ಕಾರ ಮಾಡಿದ ತಪ್ಪನ್ನು ಸರಿಪಡಿಸಲು ಮೋದಿ ಸರ್ಕಾರಕ್ಕೆ ಒಂದು ಅವಧಿ ಬೇಕಾಯಿತು. ಎರಡನೇ ಅವಧಿಯಲ್ಲಿ ದೇಶದ ಅಭಿವೃದ್ಧಿ ಸಾಕಷ್ಟು ನಡೆದಿದೆ. ಕೋವಿಡ್ #Covid ಸಂಕಷ್ಟ ಸಂದರ್ಭವನ್ನು ಸವಾಲಾಗಿ ಸ್ವೀಕರಿಸಿದ್ದು ನಮ್ಮೆಲ್ಲರಿಗೂ ಗೊತ್ತಿದೆ. ವಿಶೇಷವಾಗಿ ಪ್ರಧಾನಿ ನರೇಂದ್ರ ಮೋದಿ ಅವರ ಅಲೆಯ ಜೊತೆಗೆ ನಮ್ಮ ಕಾರ್ಯಕರ್ತರ ಶ್ರಮ ಕೂಡ ಗೆಲುವಿಗೆ ಕಾರಣವಾಗಲಿದೆ ಎಂದರು.
ಕಳೆದ ಎರಡು ಮೂರು ತಿಂಗಳುಗಳಿಂದ ನಮ್ಮ ಕಾರ್ಯಕರ್ತರ ಪಡೆ ನಮ್ಮ ಪರವಾಗಿ ಕೆಲಸ ಮಾಡಿದ್ದಾರೆ. ಈ ರೀತಿ ಕಾರ್ಯಕರ್ತರನ್ನು ಬೇರೆ ಯಾವ ಪಕ್ಷದಲ್ಲೂ ನೋಡಲು ಸಾಧ್ಯವಿಲ್ಲ. ಅವರ ಹಾರೈಕೆಯಿಂದ ಈ ಬಾರಿ ತುಂಬಾ ದೊಡ್ಡ ಅಂತರದಲ್ಲಿ ಗೆಲುವು ಸಾಧಿಸುತ್ತೇನೆ ಎಂದು ಭರವಸೆ ವ್ಯಕ್ತಪಡಿಸಿದರು.
Also read: ಸರತಿ ಸಾಲಿನಲ್ಲಿ ನಿಂತು ಸಚಿವ ಮಧು ಬಂಗಾರಪ್ಪ ಮತ ಚಲಾವಣೆ
ಕಳೆದ ವಿಧಾನಸಭಾ ಚುನಾವಣಾ ಪೂರ್ವದಲ್ಲಿ ಕಾಂಗ್ರೆಸ್ ನೀಡಿದ ಗ್ಯಾರಂಟಿ ಯೋಜನೆಗಳಿಗೆ ಜನರು ಬೇಸತ್ತು ಹೋಗಿದ್ದಾರೆ. ಕಾಂಗ್ರೆಸ್ ನುಡಿದಂತೆ ನಂತರ ನಡೆಯಲಿಲ್ಲ ಎಂಬ ಬೇಸರ ಜನರಲ್ಲಿದೆ. ನಮ್ಮ ಜೇಬಿನಿಂದ ದುಡ್ಡನ್ನು ಕಿತ್ತುಕೊಂಡು ನಮಗೆ ನೀಡುತ್ತಿದ್ದಾರೆ ಎಂದು ಜನರು ಅಕ್ರೋಶಗೊಂಡಿದ್ದಾರೆ. ಈ ಆಕ್ರೋಶವೇ ಬಿಜೆಪಿಗೆ ವರದಾನವಾಗಲಿದೆ. ರಾಜ್ಯ ಸರ್ಕಾರದ ಆಡಳಿತ ಕಂಡು ಭ್ರಮನಿರಸನಗೊಂಡಿರುವ ಮತದಾರರು ಈ ಬಾರಿ ಬಿಜೆಪಿಗೆ ಮತ ಹಾಕುತ್ತಾರೆ ಎಂದರು.
ಶಿವಮೊಗ್ಗ ಲೋಕಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಹಾಗೂ ಬಿಜೆಪಿ ನಡುವೆ ನೇರ ಹಣಾಹಣಿ ನಡೆಯಲಿದೆ. ಚುನಾವಣೆಗೆ 16 ರಿಂದ 17 ಜನ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದಾರೆ. ಕ್ಷೇತ್ರದ ಮತದಾರರು ಬುದ್ಧಿವಂತರಿದ್ದು ಯೋಚಿಸಿ ತಮ್ಮ ತೀರ್ಮಾನವನ್ನು ಕೈಗೊಳ್ಳಲಿದ್ದಾರೆ. ಇಬ್ಬರ ಜಗಳದಲ್ಲಿ ಮೂರನೆಯವರಿಗೆ ಲಾಭ ಆಗಬಾರದು ಎಂದರಿತು ಮತ ಚಲಾವಣೆ ಮಾಡಲಿದ್ದಾರೆ. ಬಂಡಾಯದಿಂದ ನಮಗೇನು ಅಂತಹ ನಷ್ಟ ಉಂಟಾಗಲಾರದು ಎಂದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post