ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ಜನರಲ್ಲಿ ಇವಿಎಂ/ವಿವಿಪ್ಯಾಟ್ ಸೇರಿದಂತೆ ಮತದಾನ ಪ್ರಕ್ರಿಯೆ ಕುರಿತು ಜಾಗೃತಿ ಮೂಡಿಸುವುದು ಹಾಗೂ ಮತದಾನ ಪ್ರಮಾಣ ಹೆಚ್ಚಿಸುವುದು ಈ ‘ಸ್ವೀಪ್ ಎಕ್ಸ್ಪ್ರೆಸ್ ಬಸ್’ SVEEP Express Bus ಸಂಚಾರದ ಮುಖ್ಯ ಉದ್ದೇಶವಾಗಿದೆ ಎಂದು ಜಿಲ್ಲಾಧಿಕಾರಿ ಡಾ. ಸೆಲ್ವಮಣಿ . ಆರ್ DC Selvamani ತಿಳಿಸಿದರು.
ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಮತ್ತು ಶಿವಮೊಗ್ಗ ಜಿಲ್ಲಾ ಸ್ವೀಪ್ ಸಮಿತಿ ವತಿಯಿಂದ ಮತದಾನ ಜಾಗೃತಿ ಕಾರ್ಯಕ್ರಮದಡಿಯಲ್ಲಿ ಇಂದು ಜಿಲ್ಲಾ ಪಂಚಾಯತ್ ಆವರಣದಲ್ಲಿ ‘ಸ್ವೀಪ್ ಎಕ್ಸ್ಪ್ರೆಸ್ ಬಸ್’ ಗೆ ಹಸಿರು ನಿಶಾನೆ ತೋರುವ ಮೂಲಕ ಚಾಲನೆ ನೀಡಿ ಮಾತನಾಡಿದರು.

‘ಸ್ವೀಪ್ ಎಕ್ಸ್ಪ್ರೆಸ್ ಬಸ್’ ಒಳಗೆ ಮಾದರಿ ಮತದಾನ ಕೇಂದ್ರ, ಮತದಾನ ಕೇಂದ್ರಗಳಲ್ಲಿನ ಮೂಲಭೂತ ಸೌಕರ್ಯಗಳು, ಇವಿಎಂ/ವಿವಿಪ್ಯಾಟ್(ಇಗಿಒ/ಗಿಗಿPಂಖಿ) ಪ್ರತಿಕೃತಿಗಳು ಹಾಗು ಮತದಾನ ಜಾಗೃತಿ ಬಿತ್ತಿ ಚಿತ್ರಗಳಿವೆ. ಬಸ್ ಹೊರಮೈಯಲ್ಲಿ ಸಿವಿಜಿಲ್ ಆ್ಯಪ್ , 1950 ಟಾಲ್ಫ್ರೀ ಸಂಖ್ಯೆ, ವೋಟರ್ ಹೆಲ್ಪ್ಲೈನ್ ಪೋರ್ಟಲ್ ಹಾಗೂ ಸ್ವೀಪ್ ಕುರಿತು ಮಾಹಿತಿ ಇದೆ. ಜಿಲ್ಲಾಧಿಕಾರಿ, ಜಿಲ್ಲಾ ಪೊಲೀಸ್ ವರಿಷ್ಟಾಧಿಕಾರಿ, ಜಿ.ಪಂ. ಸಿಇಓ, ಪಾಲಿಕೆ ಆಯುಕ್ತರು ಸೇರಿದಂತೆ ಅಧಿಕಾರಿಗಳು ಬಸ್ ಒಳಗಿನ ಮತದಾನ ಕೇಂದ್ರದಲ್ಲಿ ಕುಳಿತು ಪರಿವೀಕ್ಷಿಸಿದರು.

Also read: ಏ.27ರಿಂದ ಭದ್ರಾ ಜಲಾಶಯದಿಂದ ನೀರು ಬಿಡುಗಡೆ: ನದಿ ಪಾತ್ರದ ಜನರಿಗೆ ಎಚ್ಚರಿಕೆ
ಶಿವಮೊಗ್ಗ ನಗರ ಸೇರಿದಂತೆ, ಜಿಲ್ಲೆಯ ಎಲ್ಲಾ ತಾಲ್ಲೂಕು ಕೇಂದ್ರ ಮತ್ತು ಜನ ಸಾಂದ್ರತೆ ಹೆಚ್ಚಿರುವ ಪ್ರದೇಶಗಳಿಗೆ ದಿನಾಂಕ:25/04/2023 ರಿಂದ 02/05/2023 ರ ವರೆಗೆ, ಭೇಟಿ ನೀಡಿ ಮತದಾನ ಜಾಗೃತಿ ಮೂಡಿಸಲಿದೆ.

ಕಾರ್ಯಕ್ರಮದಲ್ಲಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಜಿ.ಕೆ. ಮಿಥುನ್ ಕುಮಾರ್, ಪ್ರೊಬೇಷನರಿ ಐಎಎಸ್ ಅಧಿಕಾರಿ ದಲ್ಜೀತ್ ಕುಮಾರ್, ಪಾಲಿಕೆ ಆಯುಕ್ತರಾದ ಮಾಯಣ್ಣಗೌಡ, ಸ್ವೀಪ್ ನೋಡಲ್ ಅಧಿಕಾರಿ ಶ್ರೀಕಾಂತ್ ಸೇರಿದಂತೆ ಅಧಿಕಾರಿಗಳು, ಸಿಬ್ಬಂದಿಗಳು ಹಾಜರಿದ್ದರು.











Discussion about this post