No Result
View All Result
Marriott Bonvoy Expands ICC Partnership to Include Women’s T20 World Cup 2026
English Articles

Marriott Bonvoy Expands ICC Partnership to Include Women’s T20 World Cup 2026

by ಕಲ್ಪ ನ್ಯೂಸ್
May 19, 2026
0

Kalpa Media House  |  Special Article | Marriott Bonvoy, the global travel platform by Marriott International, has announced the expansion...

Read moreDetails
Indriya Launches Customer-Owned Gold Exchange Programme to Promote Responsible Gold Consumption

Indriya Launches Customer-Owned Gold Exchange Programme to Promote Responsible Gold Consumption

May 19, 2026
Ashwini Vaishnaw Flags Off Bengaluru–Mumbai Express; Announces Vande Bharat Sleeper Soon

Ashwini Vaishnaw Flags Off Bengaluru–Mumbai Express; Announces Vande Bharat Sleeper Soon

May 18, 2026
Amazon India to deploy 1,000 Eicher electric trucks for Amazon Now operations

Amazon India to deploy 1,000 Eicher electric trucks for Amazon Now operations

May 18, 2026
South Western Railway, Mysuru Division Hosts Inter Department Drama Competition

South Western Railway, Mysuru Division Hosts Inter Department Drama Competition

May 16, 2026
  • Advertise With Us
  • Grievances
  • About Us
  • Contact Us
Tuesday, May 19, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ

ಮೆಗ್ಗಾನ್ ಆಸ್ಪತ್ರೆ, ಬಾಣಂತಿ ಸಾವು, ನೆಹರು ಸ್ಟೇಡಿಯಂ ಕುರಿತಾಗಿ ನಾಗಲಕ್ಷ್ಮೀ ಚೌದರಿ ಹೇಳಿದ್ದೇನು?

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
November 26, 2025
in ಶಿವಮೊಗ್ಗ
0
ಮೆಗ್ಗಾನ್ ಆಸ್ಪತ್ರೆ, ಬಾಣಂತಿ ಸಾವು, ನೆಹರು ಸ್ಟೇಡಿಯಂ ಕುರಿತಾಗಿ ನಾಗಲಕ್ಷ್ಮೀ ಚೌದರಿ ಹೇಳಿದ್ದೇನು?
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ  |

ಶಿವಮೊಗ್ಗ ಪೊಲೀಸರು ಹೆಣ್ಣುಮಕ್ಕಳೊಂದಿಗೆ ಸೂಕ್ಷ್ಮತೆ ಮತ್ತು ಸಮಾಧಾನದಿಂದ ನಡೆದುಕೊಳ್ಳಬೇಕು. ಹಾಗೂ ಅವರಿಗೆ ಆಪ್ತಸಮಾಲೋಚನಾ ತರಬೇತಿಯನ್ನು ಕಡ್ಡಾಯವಾಗಿ ನೀಡಬೇಕೆಂದು ಕರ್ನಾಟಕ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ಡಾ. ನಾಗಲಕ್ಷ್ಮಿ ಚೌದರಿ #Nagalakshmi Choudari ಸೂಚಿಸಿದರು.

ಕರ್ನಾಟಕ ರಾಜ್ಯ ಮಹಿಳಾ ಆಯೋಗ ಬೆಂಗಳೂರು, ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಶಿವಮೊಗ್ಗ ಇವರ ಸಂಯುಕ್ತಾಶ್ರಯದಲ್ಲಿ ಜಿ.ಪಂ. ಸಭಾಂಗಣದಲ್ಲಿ ಮಂಗಳವಾರ ಏರ್ಪಡಿಸಲಾಗಿದ್ದ ಲೈಂಗಿಕ ದೌರ್ಜನ್ಯ ತಡೆ ಕಾಯ್ದೆ 2013(POSH) ಅನುಷ್ಟಾನ, ಮಹಿಳಾ ಸ್ಪಂದನ ಮತ್ತು ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಪೊಲೀಸರು ಮಹಿಳೆಯರು, ಮಕ್ಕಳಸ್ನೇಹಿ ಮತ್ತು ಜನಸ್ನೇಹಿಯಾಗಿರಬೇಕು, ಸ್ಥಳೀಯ ಠಾಣೆಗಳಲ್ಲಿ ಹೆಣ್ಣು ಮಕ್ಕಳೊಂದಿಗೆ ಸಮಾಧಾನ, ಸೂಕ್ಷ್ಮತೆಯಿಂದ ನಡೆದುಕೊಳ್ಳಬೇಕು. ಪೊಲೀಸ್ ಸಿಬ್ಬಂದಿಗಳಿಗೆ ಆಪ್ತಸಮಾಲೋಚನಾ ತರಬೇತಿಯನ್ನು ಕಡ್ಡಾಯವಾಗಿ ಮಾಡಿಸಬೇಕು. ತರಬೇತಿ ನೀಡಿದ ಬಗ್ಗೆ ಆಯೋಗಕ್ಕೆ ವರದಿ ನೀಡಬೇಕು ಎಂದ ಅವರು ಹೆಣ್ಣು ಮಕ್ಕಳು ಸಹ ಪೊಲೀಸ್ ಠಾಣೆಗಳ ಬಗ್ಗೆ ಭಯ ತೊರೆದು ಉತ್ತಮ ಸಂಬAಧ ಹೊಂದಬೇಕು ಎಂದರು.

ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆ ಉಪ ನಿರ್ದೇಶಕಿ ಭಾರತಿ ಬಣಕಾರ್ ಮಾತನಾಡಿ, ಜಿಲ್ಲೆಯಲ್ಲಿ 3612 ಸರ್ಕಾರಿ ಕಚೇರಿಗಳಿದ್ದು 10 ಜನಕ್ಕಿಂತ ಹೆಚ್ಚು ಮಹಿಳೆಯರು ಕಾರ್ಯ ನಿರ್ವಹಿಸುತ್ತಿರುವ 1050 ಕಚೇರಿಗಳಲ್ಲಿ ಆಂತರಿಕ ದೂರು ಸಮಿತಿ ರಚಿಸಲಾಗಿದೆ ಎಂದರು.
ಅಧ್ಯಕ್ಷರು, ಕಚೇರಿಗಳಲ್ಲಿ ಕಾರ್ಯ ನಿರ್ವಹಿಸುತ್ತಿರುವ ಹೆಣ್ಣುಮಕ್ಕಳು, ಹಿರಿಯ ಅಧಿಕಾರಿಗಳು, ಸಹೋದ್ಯೋಗಿಗಳು ಯಾವುದೇ ರೀತಿಯಲ್ಲಿ ದೈಹಿಕ, ಮಾನಸಿಕ ದೌರ್ಜನ್ಯ, ಕಿರುಕುಳ ನೀಡುತ್ತಿದ್ದರೆ ಯಾವುದೇ ಭಯ-ಆತಂಕಕ್ಕೆ ಒಳಗಾಗದೇ ಆಂತರಿಕ ದೂರು ಸಮಿತಿಗೆ ದೂರು ನೀಡಬೇಕೆಂದು ತಿಳಿಸಿದರು.

ಮೆಗ್ಗಾನ್ ಆಸ್ಪತ್ರೆಯಲ್ಲಿ ಓಪಿಡಿ, ಔಷಧಿ ಕೌಂಟರ್‌ಗಳ ಬಳಿ ಗರ್ಭಿಣಿಯರು, ಮಕ್ಕಳು ಸರತಿ ಸಾಲಿನಲ್ಲಿ ತುಂಬಾ ಹೊತ್ತು ನಿಲ್ಲುವ ಸ್ಥಿತಿ ಇದ್ದು, ಹೆಚ್ಚುವರಿ ಕೌಂಟರ್‌ನ್ನು ತೆರೆಯಲು ಕೂಡಲೇ ಕ್ರಮ ವಹಿಸಬೇಕು ಎಂದು ಸೂಚನೆ ನೀಡಿದರು.

ಜಿಲ್ಲಾ ಮೆಗ್ಗಾನ್ ಆಸ್ಪತ್ರೆ ಸೇರಿದಂತೆ ತಾಲ್ಲೂಕು ಆಸ್ಪತ್ರೆಗಳು, ಪಿಹೆಚ್‌ಸಿ, ಸಿಹೆಚ್‌ಸಿ ಗಳ ಎಲ್ಲ ಹೊರಗುತ್ತಿಗೆ ನೌಕರರಿಗೆ ನಿಯಮಿತವಾಗಿ ಪಿಎಫ್ ಮತ್ತು ಇಎಸ್‌ಐ ಸೌಲಭ್ಯ ನೀಡಿರುವ ವರದಿ ನೀಡುವಂತೆ ತಿಳಿಸಿದರು.
ಶೌಚಾಲಯ ನಿರ್ಮಿಸಿ : ಮೆಗ್ಗಾನ್ ಆಸ್ಪತ್ರೆಯ ಮಹಿಳಾ ಜನರಲ್ ವಾರ್ಡಿನಲ್ಲಿ ಮಹಿಳೆಯರಿಗೆ ಶೌಚಾಲಯ ಇಲ್ಲದೇ ಮಹಿಳೆಯರು ತುಂಬಾ ತೊಂದರೆ ಅನುಭವಿಸುತ್ತಿದ್ದಾರೆ. ವಾರ್ಡಿನಿಂದ ಹೊರಗಡೆ ಹೋಗಿ ಅಲ್ಲಿರುವ ಶೌಚಾಲಯ ಬಳಕೆ ಮಾಡಿ ಮತ್ತೆ ವಾರ್ಡಿಗೆ ಬರಬೇಕು. ಆದ್ದರಿಂದ ಶೀಘ್ರದಲ್ಲೇ ವಾರ್ಡಿನಲ್ಲಿ ಶೌಚಾಲಯ ವ್ಯವಸ್ಥೆ ಮಾಡುವಂತೆ ಸೂಚನೆ ನೀಡಿದರು.

ಕೂಡಲೇ ಲೈಟ್ ಹಾಕಿಸಿ : ನೆಹರು ಸ್ಟೇಡಿಯಂ ನ ಒಳಗೆ ವ್ಯವಸ್ಥಿತವಾದ ಬೆಳಕು ಇಲ್ಲ. ಸಂಜೆ ಆಗುತ್ತಿದ್ದ ಹಾಗೆ ಸಂಪೂರ್ಣ ಕತ್ತಲು ಆವರಿಸುತ್ತಿದೆ. ಕ್ರೀಡಾ ವಸತಿ ನಿಲಯದ ಹೆಣ್ಣುಮಕ್ಕಳು À ಕತ್ತಲಲ್ಲೇ ಅಭ್ಯಾಸ ಮಾಡುತ್ತಿದ್ದು, ಈ ಕೂಡಲೇ ಲೈಟ್‌ಗಳನ್ನು ಹಾಕಿಸಿ, ಸುರಕ್ಷತಾ ಕ್ರಮಗಳನ್ನು ತೆಗೆದುಕೊಳ್ಳಬೇಕು. ಸಿಸಿ ಟಿವಿ ಕಡ್ಡಾಯವಾಗಿ ಅಳವಡಿಸಬೇಕು. ಕುಡಿಯುವ ನೀರು, ಶೌಚಾಲಯ, ಲೈಟ್‌ಗಳು, ಕ್ರೀಡಾ ವಸತಿನಿಲಯಗಳಲ್ಲಿ ವಿದ್ಯಾರ್ಥಿಗಳಿಗೆ ಕಬೋರ್ಡ್, ಹೆಣ್ಣುಮಕ್ಕಳಿಗೆ ಸ್ಯಾನಿಟರಿ ಪ್ಯಾಡ್ ನೀಡುವುದು ಸೇರಿದಂತೆ ಸಣ್ಣಪುಟ್ಟ ದೋಷಗಳನ್ನು ಸರಿಪಡಿಸಿಕೊಳ್ಳಬೇಕು ಎಂದು ಯುವಜನ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕರಿಗೆ ಸೂಚನೆ ನೀಡಿದರು.

ತಂದೆ ರೀತಿ ಜವಾಬ್ದಾರಿ ವಹಿಸಿ : ಸಕ್ರೆಬೈಲು ಬಳಿಯ ಮೊರಾರ್ಜಿ ದೇಸಾಯಿ ವಸತಿ ನಿಲಯದ ಅವ್ಯವಸ್ಥೆ ಸರಿಪಡಿಸಬೇಕು. ಸಮಾಜ ಕಲ್ಯಾಣ ಇಲಾಖೆ ಸೇರಿದಂತೆ ಕಲ್ಯಾಣ ಇಲಾಖೆಗಳ ಮುಖ್ಯಸ್ಥರು ಪ್ರತಿ ಹಾಸ್ಟೆಲ್‌ಗಳಿಗೆ ಭೇಟಿ ನೀಡಿ ಮಕ್ಕಳ ಜೊತೆ ಮಾತನಾಡಬೇಕು. ಆಗ ಸಮಸ್ಯೆ ತಿಳಿಯುತ್ತದೆ. ನಿಯೋಜಿತ ಅಧಿಕಾರಿಗಳು ತಂದೆ ರೀತಿ ಹಾಸ್ಟೆಲ್‌ಗಳ ಜವಾಬ್ದಾರಿ ವಹಿಸಬೇಕು. ವಾರ್ಡನ್‌ಗಳು ಮಕ್ಕಳೊಂದಿಗೆ ಉತ್ತಮ ರೀತಿಯಲ್ಲಿ ನಡೆದುಕೊಳ್ಳಬೇಕು. ಹಾಸ್ಟೆಲ್‌ನಲ್ಲಿನ ಕಂಪ್ಯೂಟರ್‌ಗಳು ಸಮರ್ಪಕವಾಗಿ ಕಾರ್ಯನಿರ್ವಹಿಸುವಂತೆ ನೋಡಿಕೊಳ್ಳಬೇಕು. ಹಾಗೂ ಉತ್ತಮ ಆಹಾರ ನೀಡಬೇಕು. ಜಿಲ್ಲಾಧಿಕಾರಿ ಸೇರಿದಂತೆ ಸಂಬಂಧಿಸಿದ ಅಧಿಕಾರಿಗಳ ಹೆಸರನ್ನು ಹಾಸ್ಟೆಲ್ ಫಲಕದಲ್ಲಿ ಬರೆಸುವಂತೆ ಸೂಚನೆ ನೀಡಿದ ಅವರು ಏನಾದರೂ ಸಮಸ್ಯೆಗಳಿದ್ದಲ್ಲಿ ವಿದ್ಯಾರ್ಥಿಗಳು ಸಂಬಂಧಿಸಿದ ಅಧಿಕಾರಿಗಳು ಮತ್ತು ಜಿಲ್ಲಾಧಿಕಾರಿಗಳಿಗೆ ಕರೆ ಮಾಡಬಹುದು ಎಂದರು.
ಬಾಣಂತಿ ಸಾವು ತಗ್ಗಿಸಿ : ಡಿಹೆಚ್‌ಓ ಡಾ. ನಟರಾಜ್ ಮಾತನಾಡಿ ಜಿಲ್ಲೆಯಲ್ಲಿ ಪ್ರಸಕ್ತ ಸಾಲಿನ ಇಲ್ಲಿಯವರೆಗೆ 12 ಬಾಣಂತಿಯರ ಸಾವು ಸಂಭವಿಸಿದ್ದು, 9 ನಮ್ಮ ಜಿಲ್ಲೆ ಮತ್ತು 03 ಹೊರ ಜಿಲ್ಲೆಯ ಪ್ರಕರಣಗಳಾಗಿವೆ. ಬಿಪಿ, ಹಿಮೊಗ್ಲೋಬಿನ್ ಕೊರತೆ, ರಕ್ತಸ್ರಾವ ಸೇರಿದಂತೆ ಇತರೆ ಸಂಕೀರ್ಣತೆಗಳಿಂದ ಸಾವು ಸಂಭವಿಸುತ್ತಿದೆ ಎಂದರು.

ಅಧ್ಯಕ್ಷರು, ಬಾಣಂತಿ ಸಾವು ನಿಯಂತ್ರಣ ಮಾಡಲು ಪರಿಣಾಮಕಾರಿಯಾದ ಕ್ರಮಗಳನ್ನು ಕೈಗೊಳ್ಳಬೇಕು. ಸೂಕ್ತ ಔಷಧೋಪಚಾರ ಮತ್ತು ಚಿಕಿತ್ಸೆ ನೀಡಬೇಕು. ಶಿವಮೊಗ್ಗದಲ್ಲಿ ಬಾಣಂತಿ ಸಾವು ಪ್ರಕ್ರರಣಗಳು ಪೂರ್ಣವಾಗಿ ತಗ್ಗಬೇಕು. ನರ್ಸ್ಗಳಿಗೆ ಬಾಣಂತಿ ರಕ್ತಸ್ರಾವ ತಗ್ಗಿಸುವ ಕುರಿತಾದ ತರಬೇತಿಯನ್ನು ಕಡ್ಡಾಯವಾಗಿ ನೀಡಬೇಕೆಂದು ತಿಳಿಸಿದರು.

ಜಿಲ್ಲೆಯಲ್ಲಿ ನಾಪತ್ತೆಯಾಗಿ ಸುಳಿವು ಪತ್ತೆಯಾಗದ ಮಹಿಳೆಯರ ವಿವರವನ್ನು ಆಯೋಗಕ್ಕೆ ನೀಡಬೇಕು. ಸಮರ್ಥ ಸೇತು ಕಾರ್ಯಕ್ರಮಗಳನ್ನು ಜಿಲ್ಲೆಯ ಎಲ್ಲಾ ಕಾಲೇಜುಗಳಲ್ಲಿ ಕೈಗೊಳ್ಳಬೇಕು ಎಂದು ಎಸ್‌ಪಿ ಯವರಿಗೆ ಸೂಚನೆ ನೀಡಿದರು.

ಜಿಲ್ಲೆಯಲ್ಲಿ ಓಸಿ ಮತ್ತು ಡ್ರಗ್ಸ್ ದಂಧೆ ಹಾಗೂ ಗ್ರಾಮೀಣ ಭಾಗದಲ್ಲಿ ಹೆಂಡ ಮಾರಾಟ ಹೆಚ್ಚಿದೆ ಎಂಬ ಮಾಹಿತಿ ದೊರೆತಿದ್ದು, ಜಿಲ್ಲಾ ಪೊಲೀಸ್ ವರಿಷ್ಟಾಧಿಕಾರಿಗಳು ದೊಡ್ಡ ಮಟ್ಟದಲ್ಲಿ ಇದಕ್ಕೆಲ್ಲ ಕಡಿವಾಣ ಹಾಕಬೇಕು ಎಂದು ಸೂಚನೆ ನೀಡಿದರು.

ಎಸ್‌ಪಿ ಮಿಥುನ್ ಕುಮಾರ್ ಮಾತನಾಡಿ, ಜಿಲ್ಲೆಯಲ್ಲಿ 2023 ರಲ್ಲಿ 454 ಮಹಿಳೆಯರ ನಾಪತ್ತೆ ಪ್ರಕರಣ ದಾಖಲಾಗಿದ್ದು 450 ಮಹಿಳೆಯರನ್ನು ಪತ್ತೆ ಹಚ್ಚಿದ್ದು 8 ಮಹಿಳೆಯರು ಪತ್ತೆಯಾಗಿಲ್ಲ, 2024 ರಲ್ಲಿ 506 ನಾಪತ್ತೆ ಪ್ರಕರಣದಲ್ಲಿ 497 ಪತ್ತೆ ಹಚ್ಚಿದ್ದು, 11 ಪತ್ತೆಯಾಗಿಲ್ಲ. 2025 ರಲ್ಲಿ 395 ನಾಪತ್ತೆ ಪ್ರಕರಣದಲ್ಲಿ 374 ಪತ್ತೆ ಹಚ್ಚಿದ್ದು, 27 ಪ್ರಕರಣ ಪತ್ತೆಯಾಗಿಲ್ಲವೆಂದು ವರದಿ ನೀಡಿದರು.

ಹಾಗೂ ನಗರದ ಶಾಲಾ-ಕಾಲೇಜು, ಸಾರ್ಜಜನಿಕ ಸ್ಥಳಗಳಲ್ಲಿ ಚೆನ್ನಮ್ಮ ಪಡೆ ಕಳೆದ ವರ್ಷದಿಂದ ಕೆಲಸ ಮಾಡುತ್ತಿದೆ. ರಸ್ತೆ ಸುರಕ್ಷತೆ, ಮಹಿಳೆಯರ ಸುರಕ್ಷತೆ, ಸೈಬರ್ ಕ್ರೆöÊಂ ಕುರಿತು ಅರಿವು ಮೂಡಿಸುವ ಕಾರ್ಯಕ್ರಮಗಳನ್ನು ಮಾಡಲಾಗುತ್ತಿದೆ ಎಂದರು.
ಜಿ.ಪಂ. ಸಿಇಓ ಹೇಮಂತ್ ಎನ್ ಮಾತನಾಡಿ, ಜಿಲ್ಲೆಯಲ್ಲಿ ಮಹಾತ್ಮಾ ಗಾಂಧಿ ನರೇಗಾ ಯೋಜನೆಯಡಿ ಶೇ 75.59 ಪ್ರಗತಿ ಸಾಧಿಸಲಾಗಿದೆ. ಶೇ .55.73 ಮಹಿಳೆಯರ ಭಾಗವಹಿಸುವಿಕೆ ಇದೆ ಎಂದರು.

ಕೋಟೆಗಂಗೂರು, ಹರಮಘಟ್ಟದ ಶಾಲಾ ಕಾಲೇಜು ವಿದ್ಯಾರ್ಥಿಗಳು ತಮ್ಮ ಊರಿಗೆ ಬಸ್ ಇಲ್ಲದೇ ವಿದ್ಯಾಸಂಸ್ಥೆಗೆ ಬರುವುದು ಕಷ್ಟವಾಗುತ್ತಿದೆ ಎಂದು ದೂರಿತ್ತಿದ್ದು ಸೂಕ್ತ ಕ್ರಮ ವಹಿಸುವಂತೆ ಸೂಚಿಸಿದರು.

ಕೂಡಿ ಬಾಳೋಣ ಕಾರ್ಯಕ್ರಮ ಮಾಡಿ : ರಾಷ್ಟ್ರೀಯ ಮಹಿಳಾ ಆಯೋಗದಡಿ ಕೈಗೊಳ್ಳಲಾಗಿರುವ ‘ಕೂಡಿ ಬಾಳೋಣ’ ಎಂಬ ವಿವಾಹ ಪೂರ್ವ ಆಪ್ತ ಸಮಾಲೋಚನೆಯಂತಹ ಚಟುವಟಿಕೆಯನ್ನು ಜಿಲ್ಲೆಯಲ್ಲಿಯೂ ಕೈಗೊಳ್ಳಬೇಕು. ಇಲ್ಲಿ ವಿವಾಹ ಪೂರ್ವದಲ್ಲಿ ಗಂಡು ಮತ್ತು ಹೆಣ್ಣಿನ ಎರಡೂ ಕುಟುಂಬಗಳು ಒಬ್ಬರನ್ನೊಬ್ಬರು ಅರಿಯುವ ಅವಕಾಶ ಲಭಿಸುವುದರಿಂದ ವಿಚ್ಚೇದನದಂತಹ ಪ್ರಕರಣಗಳು ಕಡಿಮೆಯಾಗಲಿವೆ ಎಂದರು.

ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಸಂತೋಷ್ ಎಂ.ಎಸ್. ಮಾತನಾಡಿ, ಕಾನೂನು ಸೇವಾ ಪ್ರಾಧಿಕಾರದಿಂದ ಮಹಿಳೆಯರಿಗೆ ಲಭ್ಯವಿರುವ ಉಚಿತ ಸೇವೆ, ಸೌಲಭ್ಯಗಳ ಕುರಿತು ತಿಳಿಸಿ, ಪ್ರಾಧಿಕಾರದ ಸೇವೆಯಿಂದಾಗಿ ಮಹಿಳಾ ಮಧ್ಯಸ್ಥಿಕೆ ಸಂಖ್ಯೆ ಹೆಚ್ಚಿದೆ, ಲೋಕ ಅದಾಲತ್ ನಿಂದಾಗಿ ಸಾವಿರಾರು ಪ್ರಕರಣಗಳು ರಾಜೀ ಸಂಧಾನದಿAದ ಇತ್ಯರ್ಥವಾಗುತ್ತಿವೆ. ಮಹಿಳೆಯರು ಕಾನೂನಿಗೆ ಸಂಬAಧಿಸಿದ ಏನಾದರೂ ಸಮಸ್ಯೆಗಳು ಇದ್ದಲ್ಲಿ ನಾಲ್ಸಾ ಸಹಾಯವಾಣಿ ಸಂಖ್ಯೆ 15100 ಕರೆ ಮಾಡಿ ಉಚಿತವಾಗಿ ಕಾನೂನಿನ ನೆರವು ಪಡೆಯಬಹುದು ಎಂದರು.

http://kalpa.news/wp-content/uploads/2025/09/Vedic-Maths-New.mp4

ಆಸಿಡ್ ದಾಳಿಗೆ ಒಳಗಾದ ಸಂತ್ರಸ್ತೆಯೋರ್ವರು ಲಿಮಿಟೇಷನ್ ಅವಧಿ ಮೀರಿ ನೀಡಿದ್ದ ಅರ್ಜಿಯನ್ನು ಪ್ರಾಧಿಕಾರ ಪುರಸ್ಕರಿಸಿ ಅವರಿಗೆ ಪರಿಹಾರ ನೀಡಿದ ಬಗೆಯನ್ನು ವಿವರಿಸಿದರು.

ಅಧ್ಯಕ್ಷರು ಮಹಿಳೆಯರಿಗೆ ಕಾನೂನಿನ ಅರಿವು ಮತ್ತು ನೆರವು ನೀಡುವುದು ನಿಜವಾದ ಮಹಿಳಾ ಸಬಲೀಕರಣ. ಕಾನೂನು ಸೇವಾ ಪ್ರಾಧಿಕಾರ ಮಹಿಳೆಯರಿಗೆ ನ್ಯಾಯ ಒದಗಿಸುವಲ್ಲಿ ಉತ್ತಮ ಕಾರ್ಯವೆಸಗುತ್ತಿದೆ ಎಂದು ಶ್ಲಾಘಿಸಿದರು.

ಆಸಿಡ್ ದಾಳಿಗೆ ಒಳಗಾದ ಸಂತ್ರಸ್ತರು ಸಾಯುವವರೆಗೆ ಚಿಕಿತ್ಸೆ ಪಡೆಯುವ ಅವಶ್ಯಕತೆ ಇರುವುದರಿಂದ ಅವರಿಗೆ ಸಕ್ಷಮ ಪ್ರಾಧಿಕಾರವು ಸೂಕ್ತ ಪರಿಹಾರ ,ಸೌಲಭ್ಯ ನೀಡಬೇಕೆಂದರು.

54 ಲಕ್ಷ ಸೈಬರ್ ಕ್ರೈಮ್ ಮೂಲಕ ಹಣ ಕಳೆದುಕೊಂಡ ಸಂತ್ರಸ್ತೆ, ಮಹಿಳೆಯೋರ್ವರು ಮನೆಗೆ ಹೋಗಲು ರಸ್ತೆ ಇಲ್ಲವೆಂದು, ಆಸಿಡ್ ಸಂತ್ರಸ್ತರು ಪರಿಹಾರ ಕೋರಿ, ವಿಕಲಚೇತನರು ಮನೆ, ಕೆಲಸ ಬೇಕೆಂದು, ಮಹಿಳಾ ಪೇದೆ ಪತಿಯಿಂದ ದೌರ್ಜನ್ಯ ಹಾಗೂ ಅನೇಕ ಮಹಿಳಾ ದೌರ್ಜನ್ಯದ ಪ್ರಕರಣಗಳು, ಕೌಟುಂಬಿಕ ದೌರ್ಜನ್ಯ, ಖಾಸಗಿ ವಿಷಯಗಳು, ವಿವಿಧ ಇಲಾಖೆಗಳಿಗೆ ಸಂಬಂಧಿಸಿದ ವಿಷಯಗಳು ಸೇರಿದಂತೆ 100 ಕ್ಕೂ ಹೆಚ್ಚು ಅರ್ಜಿದಾರರು ಅರ್ಜಿ ನೀಡಿದ್ದು, ಆಯುಕ್ತರು ಹಲವಾರು ಸಮಸ್ಯೆಗಳನ್ನು ಆಲಿಸಿ, ಸ್ಥಳದಲ್ಲೇ ಇದ್ದ ಜಿಲ್ಲಾಧಿಕಾರಿಗಳು, ಜಿಲ್ಲಾ ಪೊಲೀಸ್ ವರಿಷ್ಟಾಧಿಕಾರಿಗಳು, ಜಿಲ್ಲಾ ಕಾನೂನು ಸೇವಾ ಪ್ರಾಧಿಕರದ ಸದಸ್ಯ ಕಾರ್ಯದರ್ಶಿಗಳು ಹಾಗೂ ಜಿಲ್ಲಾ ಮಟ್ಟದ ಅಧಿಕಾರಿಗಳ ಬಳಿ ಸೂಕ್ತ ಪರಿಹಾರ ಮತ್ತು ನಿರ್ದೇಶನ ನೀಡಲು ಸೂಚಿಸಿದರು.

ಜಿಲ್ಲಾ ಕರ್ನಾಟಕ ರಾಜ್ಯ ಮಹಿಳಾ ಆಯೋಗದ ಕಾರ್ಯದರ್ಶಿ ರೂಪಾ, ಜಿಲ್ಲಾಧಿಕಾರಿಗಳಾದ ಗುರುದತ್ತ ಹೆಗಡೆ, ಜಿ.ಪಂ ಸಿಇಓ ಹೇಮಂತ್ ಎನ್, ಎಸ್ ಪಿ ಜಿ.ಕೆ. ಮಿಥುನ್ ಕುಮಾರ್ ಹಾಜರಿದ್ದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news     

http://kalpa.news/wp-content/uploads/2024/04/VID-20240426-WA0008.mp4

Tags: Kannada NewsKannada News LiveKannada News Online ShivamoggaKannada WebsiteKannadaNewsWebsiteLatestNewsKannadaLocalNewsMalnadNewsNagalakshmi ChoudariNews in KannadaNews KannadaShimogaShivamoggaNewsನಾಗಲಕ್ಷ್ಮಿ ಚೌದರಿಮಲೆನಾಡು_ಸುದ್ಧಿಶಿವಮೊಗ್ಗಶಿವಮೊಗ್ಗ_ನ್ಯೂಸ್
Share196Tweet123Send
Previous Post

ಹೆಣ್ಣು ಮಗು ಎಂಬ ಕಾರಣಕ್ಕೆ ಮೂರು ದಿನದ ಕಂದಮನನ್ನೇ ಕೊಂದ ಹೆತ್ತ ತಾಯಿ

Next Post

ಶಾಹಿ ಎಕ್ಸ್ಪೋರ್ಟ್ ನಿಂದ ಶಿಕಾರಿಪುರ ಆಸ್ಪತ್ರೆಗೆ 20 ಲಕ್ಷದ ಸಿಬಿ ನ್ಯಾಟ್ ಯಂತ್ರ ಕೊಡುಗೆ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ಶಾಹಿ ಎಕ್ಸ್ಪೋರ್ಟ್ ನಿಂದ ಶಿಕಾರಿಪುರ ಆಸ್ಪತ್ರೆಗೆ 20 ಲಕ್ಷದ ಸಿಬಿ ನ್ಯಾಟ್ ಯಂತ್ರ ಕೊಡುಗೆ

ಶಾಹಿ ಎಕ್ಸ್ಪೋರ್ಟ್ ನಿಂದ ಶಿಕಾರಿಪುರ ಆಸ್ಪತ್ರೆಗೆ 20 ಲಕ್ಷದ ಸಿಬಿ ನ್ಯಾಟ್ ಯಂತ್ರ ಕೊಡುಗೆ

Leave a Reply Cancel reply

Your email address will not be published. Required fields are marked *

  • Trending
  • Latest
ಭದ್ರಾವತಿಯ ಆರು ಆರೋಪಿಗಳಿಗೆ 3 & 7 ವರ್ಷ ಕಠಿಣ ಕಾರಾಗೃಹ ಶಿಕ್ಷೆ | ನಡೆದಿದ್ದ ಅಪರಾಧವೇನು?

ಭದ್ರಾವತಿಯ ಆರು ಆರೋಪಿಗಳಿಗೆ 3 & 7 ವರ್ಷ ಕಠಿಣ ಕಾರಾಗೃಹ ಶಿಕ್ಷೆ | ನಡೆದಿದ್ದ ಅಪರಾಧವೇನು?

May 5, 2026
ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

April 28, 2026
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

April 3, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
Marriott Bonvoy Expands ICC Partnership to Include Women’s T20 World Cup 2026

Marriott Bonvoy Expands ICC Partnership to Include Women’s T20 World Cup 2026

May 19, 2026
ಭಾರತದ ಮೊಟ್ಟ ಮೊದಲ ಬುಲೆಟ್ ಟ್ರೈನ್ ಫಸ್ಟ್ ಲುಕ್ ಹೇಗಿದೆ ನೋಡಿ | ಎಲ್ಲಿಂದ ಎಲ್ಲಿಗೆ?

ಬೆಂಗಳೂರಿಗೆ ಬರಲಿದೆ ಬುಲೆಟ್ ಟ್ರೈನ್ | ಎಲ್ಲೆಲ್ಲಿಗೆ? ಬಿಡುಗಡೆಯಾಯ್ತು ನಕ್ಷೆ

May 19, 2026
33 ವರ್ಷಗಳಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ!, ಏನಿದು ಕೇಸ್?

ನೀಟ್ ಪ್ರಶ್ನೆಪತ್ರಿಕೆ ಸೋರಿಕೆ | ರಸಾಯನಶಾಸ್ತ್ರ ತರಗತಿ ಸಂಸ್ಥಾಪಕ ಶಿವರಾಜ್ ಸಿಬಿಐನಿಂದ ಬಂಧನ

May 19, 2026
ದೇಶದ 18 ಮಹಾನಗರಗಳಲ್ಲಿ ವಾಟರ್ ಮೆಟ್ರೋ ಆರಂಭಿಸಲು ಕೇಂದ್ರ ಮಾಸ್ಟರ್ ಪ್ಲಾನ್

ದೇಶದ 18 ಮಹಾನಗರಗಳಲ್ಲಿ ವಾಟರ್ ಮೆಟ್ರೋ ಆರಂಭಿಸಲು ಕೇಂದ್ರ ಮಾಸ್ಟರ್ ಪ್ಲಾನ್

May 19, 2026
ಕಾಂಗ್ರೆಸ್ ಆಂತರಿಕ ರಾಜಕೀಯ ಚಟುವಟಿಕೆ ಚುರುಕು | ಮಾರ್ಚ್ 16ರಂದು ಸಚಿವರಿಗೆ ಸಿದ್ದರಾಮಯ್ಯ ಔತಣಕೂಟ

ಜೂನ್ 1ರಂದು ಶಿವಮೊಗ್ಗಕ್ಕೆ ಸಿಎಂ ಸಿದ್ಧರಾಮಯ್ಯ ಭೇಟಿ | ಯಾವೆಲ್ಲಾ ಕಾರ್ಯಕ್ರಮಗಳಲ್ಲಿ ಪಾಲ್ಗೊಳ್ಳಲಿದ್ದಾರೆ?

May 19, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL