Read - 2 minutes
ಸಿಎಂ ಸಿದ್ದರಾಮಯ್ಯ CM Siddaramaiah ಹಿಜಾಬ್ ಬಗ್ಗೆ ಮಾತನಾಡಿದ್ದಾರೆ. ಹೃದಯ ಶ್ರೀಮಂತಿಕೆ ತೋರಿದ್ದಾರೆ. ಈ ಬಗ್ಗೆ ಅಧಿಕಾರಿಗಳು ಏನು ತೀರ್ಮಾನ ತೆಗೆದುಕೊಳ್ಳುತ್ತಾರೆ ನೋಡೋಣ. ಎಲ್ಲಾ ಧರ್ಮಗಳಿಗೂ ಗೌರವ ಕೊಡಬೇಕು. ಕೋರ್ಟ್ನಲ್ಲಿ ಏನಿದೆ ನೋಡಿಕೊಂಡು ತೀರ್ಮಾನ ಕೈಗೊಳ್ಳುತ್ತೇವೆ. ಬಿಜೆಪಿಯವರು ಚುನಾವಣೆ ಸಂದರ್ಭ ಬಂದಾಗ ಹಿಜಾಬ್ ತರಬೇಕಾ ಎಂದು ಪ್ರಶ್ನೆ ಮಾಡಿದರು.
ಬಿಜೆಪಿಯವರು ಬರ ಅಧ್ಯಯನ ಮಾಡಿದ್ರಲ್ಲ ಎಲ್ಲಿಟ್ಟೀರಿ, ಕಸದ ಬುಟ್ಟಿಗೆ ಹೋಯ್ತ. ರಾಜ್ಯದಿಂದ 4 ಲಕ್ಷ ಕೋಟಿ ತೆರಿಗೆ ಕೇಂದ್ರಕ್ಕೆ ಹೋಗುತ್ತದೆ. ಅಷ್ಟು ಪರಿಹಾರ ನಮಗೆ ವಾಪಸ್ ಕೊಡ್ತಿದ್ದೀರಾ ಎಂದು ಪ್ರಶ್ನೆ ಮಾಡಿದರು.
![](data:image/svg+xml,%3Csvg%20xmlns='http://www.w3.org/2000/svg'%20viewBox='0%200%201995%201192'%3E%3C/svg%3E)
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
![](data:image/svg+xml,%3Csvg%20xmlns='http://www.w3.org/2000/svg'%20viewBox='0%200%201600%20475'%3E%3C/svg%3E)
ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ಎಲ್ಲಾ ಧರ್ಮಗಳಿಗೂ ಗೌರವ ಕೊಡಬೇಕು, ಅದೇ ರೀತಿ ಹಿಜಾಬ್ ಕೂಡ ಎಂದು ಸಚಿವ ಮಧುಬಂಗಾರಪ್ಪ Minister Madhu Bangarappa ಹೇಳಿದರು.
ಅವರು ಇಂದು ವಿಮಾನ ನಿಲ್ದಾಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ, ಹಿಜಾಬ್ ನಿಷೇಧ ಹಿಂಪಡೆದ ವಿಚಾರ ಕುರಿತು ಪ್ರತಿಕ್ರಿಯಿಸಿ ಎಲ್ಲಾ ಧರ್ಮದವರಿಗೂ ನಾವು ಗೌರವ ಕೊಡಬೇಕಾಗಿದೆ. ಬಿಜೆಪಿಯವರು ಸೋತಿದ್ದು ಇದೇ ಕಾರಣಕ್ಕೆ ಎಂದರು.
Also read: ಹಿಜಾಬ್ ವಿಷಯ ಪ್ರಸ್ತಾಪದಿಂದ ರಾಜ್ಯದಲ್ಲಿ ಗೊಂದಲ ವಾತಾವರಣ ಸೃಷ್ಠಿ: ಮಾಜಿ ಡಿಸಿಎಂ ಈಶ್ವರಪ್ಪ
ಹಿಜಾಬ್ Hijab ವಿಚಾರದಲ್ಲಿ ರಾಜ್ಯದಲ್ಲಿ ಗಲಭೆಯಾದ್ರೆ ಸಿಎಂ ಸಿದ್ದರಾಮಯ್ಯ ಕಾರಣ ಎಂದು ಈಶ್ವರಪ್ಪ ಆರೋಪ ಮಾಡಿದ್ದಾರೆ. ಆದರೆ, ದಂಗೆ ಮಾಡುವವರೇ ಹೀಗೆ ಹೇಳೋದು. ಕಾನೂನು ಬಹಳ ಗಟ್ಟಿಯಾಗಿದೆ ತಲೆ ಕೆಡಿಸಿಕೊಳ್ಳಲು ಹೋಗಬಾರದು ಎಂದರು.
Discussion about this post