No Result
View All Result
Minister Somanna Inspects & Inaugurates Road Under Bridges in Tumkur District eliminating level Crossing gates
English Articles

Minister Somanna Inspects & Inaugurates Road Under Bridges in Tumkur District eliminating level Crossing gates

by ಕಲ್ಪ ನ್ಯೂಸ್
February 26, 2026
0

Kalpa Media House  |  Bengaluru  | Union Minister of State for Railways and Jal Shakti, V. Somanna, today inaugurated three...

Read moreDetails
Le Méridien Dehradun in the Foothills of the Himalayas, Inviting Guests to Slow Down and Savour the Good Life

Le Méridien Dehradun in the Foothills of the Himalayas, Inviting Guests to Slow Down and Savour the Good Life

February 25, 2026
From Complex Revisions to Robotic Spine Care: Narayana Health City Marks 10,000 Surgery Milestone

From Complex Revisions to Robotic Spine Care: Narayana Health City Marks 10,000 Surgery Milestone

February 24, 2026
Amazon Opens Its Second Largest Office in Asia in Bengaluru

Amazon Opens Its Second Largest Office in Asia in Bengaluru

February 24, 2026
ಪೊಂಗಲ್ ಹಬ್ಬದ ಪ್ರಯುಕ್ತ ಕೊಟ್ಟಾಯಂ – ಬೆಂಗಳೂರು ಕ್ಯಾಂಟೋನ್ಮೆಂಟ್ ನಡುವೆ ವಿಶೇಷ ರೈಲು ಸಂಚಾರ

SWR Opens Makajipalli–Dharmavaram Double Line Project

February 23, 2026
  • Advertise With Us
  • Grievances
  • About Us
  • Contact Us
Friday, February 27, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ

ಪ್ರಪಂಚದ ಮೊದಲ ಕ್ವಿಜ್ ಯಾವುದು? ನಡೆದಿದ್ದೆಲ್ಲಿ? ನಾ. ಸೋಮೇಶ್ವರ ಅದ್ಬುತವಾಗಿ ವಿವರಿಸಿದ್ದಾರೆ ಓದಿ

ಸುಬ್ಬಯ್ಯ ಮೆಡಿಕಲ್ ಕಾಲೇಜಿನಲ್ಲಿ ನಿರೀಕ್ಷೆಗೂ ಮೀರಿ ಯಶಸ್ವಿಯಾದ ಕ್ವಿಜ್ | ಅಚ್ಚುಕಟ್ಟಾದ ವ್ಯವಸ್ಥೆಗೆ ಪ್ರಶಂಸೆ

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
January 21, 2025
in ಶಿವಮೊಗ್ಗ
0
ಪ್ರಪಂಚದ ಮೊದಲ ಕ್ವಿಜ್ ಯಾವುದು? ನಡೆದಿದ್ದೆಲ್ಲಿ? ನಾ. ಸೋಮೇಶ್ವರ ಅದ್ಬುತವಾಗಿ ವಿವರಿಸಿದ್ದಾರೆ ಓದಿ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ  |

ಪ್ರಪಂಚದಲ್ಲಿ ಮೊಟ್ಟ ಮೊದಲ ಕ್ವಿಜ್ ಎಂಬ ಪರಿಕಲ್ಪನೆ ಜನಿಸಿ, ಅದು ಸಾಕಾರಗೊಂಡಿದ್ದು ನಮ್ಮ ಭಾರತದಲ್ಲಿ ಎಂಬುದು ಸಮಸ್ತ ಭಾರತೀಯರಿಗೆ ಹೆಮ್ಮೆಯ ವಿಚಾರ ಎಂದು ಥಟ್ ಅಂತ ಹೇಳಿ ಖ್ಯಾತಿಯ ನಾ. ಸೋಮೇಶ್ವರ #Na Someshwar ಹೇಳಿದರು.

ಸುಬ್ಬಯ್ಯ ವೈದ್ಯಕೀಯ ಮಹಾವಿದ್ಯಾಲಯದಲ್ಲಿ #Subbaiah Medical College ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರಿಗಾಗಿ ಆಯೋಜಿಸಲಾಗಿದ್ದ ರಸಪ್ರಶ್ನೆ ಸ್ಪರ್ಧಾ ಕಾರ್ಯಕ್ರಮ ಕ್ವಿಜ್ ಮಾಸ್ಟರ್ ಆಗಿ ಪಾಲ್ಗೊಂಡು ಅವರು ಮಾತನಾಡಿದರು.

ರಸಪ್ರಶ್ನೆ #Quiz ಎನ್ನುವ ಪರಿಕಲ್ಪನೆ ನಮ್ಮ ದೇಶದ್ದಾಗಿದ್ದು, ನಮ್ಮ ಪ್ರಶ್ನೋಪನಿಷತ್ ಎಂಬ ಗ್ರಂಥದಿಂದ ಬಂದಿದೆ. ಇದರಲ್ಲಿ ಪ್ರಶ್ನೆ ಮತ್ತು ಉತ್ತರ ರೂಪದಲ್ಲಿ ಬಂದ ಕಲ್ಪನೆ ನಂತರದ ಎಲ್ಲ ಉಪನಿಷತ್’ಗಳಲ್ಲಿ ಇದು ಉಲ್ಲೇಖವಾಗಿವೆ ಎಂದರು.
ಆರಂಭದಲ್ಲಿ ನಮ್ಮ ದೇಶದಲ್ಲಿ ಕ್ವಿಜ್ ನಡೆದಿದ್ದು ಮಹಾಭಾರತ ಕಾಲದಲ್ಲಿ. ಮೊದಲ ಕ್ವಿಜ್ ಮಾಸ್ಟರ್ ಯಮಧರ್ಮ, ಪಂಚ ಪಾಂಡವರು ಸ್ಪರ್ಧಿಗಳಾಗಿದ್ದರು. ಐವರಲ್ಲಿ ನಾಲ್ವರು ಸೋತಾಗ ಯುಧಿಷ್ಠಿತ ಮಾತ್ರ ಎಲ್ಲ ಪ್ರಶ್ನೆಗಳಿಗೆ ಉತ್ತರ ಕೊಟ್ಟು ವಿಜಯಿಯಾಗುತ್ತಾನೆ. ಜಯಶಾಲಿಯಾದ ಆತನಿಗೆ ಏನು ಬಹುಮಾನ ಅಥವಾ ವರ ಬೇಕು ಎಂದು ಕೋರಿದಾಗ, ನನಗೇನು ಬೇಡ, ಬದಲಾಗಿ ನಮ್ಮ ಸಹೋದರರು ಮರಳಿ ಜೀವಂತ ಬೇಕು ಎಂದು ಕೋರುತ್ತಾನೆ ಎಂದು ವಿವರಿಸಿದರು.

ಅದೇ ರೀತಿಯಲ್ಲಿ ಭಗವದ್ಗೀತೆಯಲ್ಲಿಯೂ ಸಹ ಕ್ವಿಜ್ ಇದೆ. ಅರ್ಜುನ ಕೇಳುವ ಪ್ರಶ್ನೆಗಳಿಗೆ ಶ್ರೀ ಕೃಷ್ಣ ಉತ್ತರ ನೀಡುತ್ತಾ ಹೋಗುತ್ತಾನೆ ಎಂದರು.

ಇನ್ನು, ವಿದೇಶಗಳಲ್ಲಿ ನೋಡುವುದಾದರೆ ಪಾಶ್ಚಾತ್ಯ ದೇಶಗಳಲ್ಲಿ ಮೊದಲ ಬಾರಿಗೆ ಕ್ವಿಜ್ ನಡೆದಿದ್ದು ಈಡಿಪಸ್ ಕತೆಯಲ್ಲಿದೆ. ತನ್ನ ತಂದೆಯನ್ನು ಕೊಂದು ತಾಯಿಯನ್ನೇ ಮದುವೆಯಾಗಿ ಮಕ್ಕಳನ್ನು ಪಡೆದ ಪರಮ ಪಾಪಿಯೊಬ್ಬನ ಕಥೆಯದೆ. ಆತನ ಊರಿನ ಬಳಿಯಲ್ಲಿ ಓರ್ವ ರಾಕ್ಷಸಿ ಇರುತ್ತಾಳೆ. ಆ ದಾರಿಯಲ್ಲಿ ಬರುವ ಪ್ರತಿಯೊಬ್ಬರಿಗೂ ಆಕೆ ಪ್ರಶ್ನೆ ಕೇಳುತ್ತಿರುತ್ತಾಳೆ. ಸರಿ ಉತ್ತರ ನೀಡದವರನ್ನು ತಿನ್ನುತ್ತಿರುತ್ತಾಳೆ. ಅದೇ ದಾರಿಯಲ್ಲಿ ಬಂದ ಈಡಿಪಸ್ ಬಂದಾಗ ಆತನಿಗೂ ಆ ರಾಕ್ಷಸಿ ಕೇಳಿದ ಎಲ್ಲಾ ಪ್ರಶ್ನೆಗೆ ಈಡಿಪಸ್ ಸರಿಯಾದ ಉತ್ತರ ನೀಡುತ್ತಾನೆ. ಹೀಗಾಗಿ, ಆ ರಾಕ್ಷಸಿ ಬೆಟ್ಟದ ಮೇಲಿನಿಂದ ಬಿದ್ದು ಸಾವನ್ನಪ್ಪುತ್ತದೆ. ಸಾಯುವ ಮುನ್ನ ನೀನು ನಿನ್ನ ಊರಿಗೆ ಹೋಗಿ, ನನ್ನನ್ನು ಕೊಂದ ಕಥೆ ಹೇಳು. ನೀನು ರಾಜನಾಗುತ್ತೀಯಾ ಎಂದಿರುತ್ತದೆ. ಅದರಂತೆ, ಊರಿಗೆ ಹೋದ ಆತನನ್ನು ಜನರು ರಾಜನನ್ನಾಗಿ ಮಾಡುತ್ತಾರೆ. ಈಡಿಪಸ್ ಹಾಗೂ ರಾಕ್ಷಸಿ ನಡುವೆ ನಡೆದ ಪ್ರಶ್ನೋತ್ತರವೇ ಪಾಶ್ಚಾತ್ಯ ದೇಶಗಳ ಮೊದಲ ಕ್ವಿಜ್ ಎಂದು ತಿಳಿಸಿದರು.

Also Read: ಕೃಷಿ ವಿವಿ ವಿದ್ಯಾರ್ಥಿಗಳಿಂದ ಭತ್ತ ಬೆಳೆಯುವ ವಿಧಾನಗಳ ಪ್ರಾತ್ಯಕ್ಷಿಕೆ

ಪ್ರಶ್ನೆ ಮತ್ತು ಉತ್ತರ ಎನ್ನುವುದು ಅತ್ಯಂತ ವೈಜ್ಞಾನಿಕ ಸ್ವರೂಪದ್ದಾಗಿದ್ದು, ಓದಿದ್ದನ್ನುನೆನಪಾಗಲು, ನೆನಪಾಗಿದ್ದು ಉತ್ತರಿಸಲು ಪ್ರಶ್ನೋತ್ತರ ಸಹಕಾರಿ. ಇದನ್ನು ನಮ್ಮ ಪೂರ್ವಜರು ಸಾವಿರಾರು ವರ್ಷಗಳ ಹಿಂದೆಯೇ ಮಾಡಿದ್ದರು ಎನ್ನುವುದು ನಮ್ಮ ಹೆಮ್ಮೆ ಎಂದರು.

ಕಾಲೇಜಿನ ಡೀನ್ ಡಾ.ವಿನಾಯಕ್ ಮಾತನಾಡಿ, ಇಂದಿನ ರಸಪ್ರಶ್ನೆ ಕ್ವಿಜ್ ಕಾರ್ಯಕ್ರಮದಲ್ಲಿ ಭಾಗವಹಿಸುತ್ತಿರುವುದು ನನಗೆ ಅತ್ಯಂತ ಸಂತೋಷ ಹಾಗೂ ಗೌರವದ ಸಂಗತಿಯಾಗಿದೆ. ಜ್ಞಾನವನ್ನು ಸನ್ಮಾನಿಸುವ ಮತ್ತು ನಮ್ಮ ಕನ್ನಡ ನಾಡು ನುಡಿ ಮತ್ತು ಸಂಸ್ಕೃತಿಯ ಪರಂಪರೆಯೊಂದಿಗೆ ಶೈಕ್ಷಣಿಕ ಕ್ಷೇತ್ರವನ್ನು ಬೆಸೆಯುವ ಈ ಕಾರ್ಯಕ್ರಮವು ನಿಜಕ್ಕೂ ಮಹತ್ತರವಾದದ್ದಾಗಿದೆ ಎಂದರು.

ನಾವು, ನಮ್ಮ ಸಂಸ್ಥೆ, ಪಠ್ಯ ಪುಸ್ತಕಗಳು ಮತ್ತು ಪರೀಕ್ಷೆಗಳ ಪರಿಮಿತಿಯನ್ನು ಮೀರಿದ ಶಿಕ್ಷಣದ ಮಹತ್ವವನ್ನು ಬೆಳೆಸಲು ನಿಷ್ಠರಾಗಿದ್ದೇವೆ. ವಿಭಿನ್ನ ಆಲೋಚನೆಗಳನ್ನು ಅನ್ವೇಷಿಸುವುದು, ನಾವು ವಾಸಿಸುವ ನೆಲದ ಸಂಸ್ಕೃತಿಗಳನ್ನು ಹಂಚಿಕೊಳ್ಳುವುದು, ಮತ್ತು ಭಾಷೆಗಳ ಮಹತ್ವವನ್ನು ಅರ್ಥಮಾಡಿಕೊಳ್ಳುವುದು ಸಮಗ್ರ ವ್ಯಕ್ತಿತ್ವವನ್ನು ರೂಪಿಸುವ ಪ್ರಕ್ರಿಯೆಯ ಭಾಗವಾಗಿದೆ. ರಸಪ್ರಶ್ನೆ ಕಾರ್ಯಕ್ರಮವು ನಮ್ಮ ಕನ್ನಡದ ಹಿರಿಮೆ ಗರಿಮೆಯ ಪತೀಕವಾಗಿದೆ. ಸಾಹಿತ್ಯ ಮತ್ತು ಸಾಧಕರ ಕಿರುಪರಿಚಯ ನಮ್ಮದಾಗಿದೆ. ನಮ್ಮ ಸಾಂಸ್ಕೃತಿಕ ಪರಂಪರೆಯ ಶ್ರೀಮಂತಿಕೆಯನ್ನು ಶೈಕ್ಷಣಿಕ ಮೇಲುಗ್ಗಲ್ಲಾಗಿಸಲು ಇಂತಹ ಕಾರ್ಯಕ್ರಮ ಸಹಾಯಕವಾಗುತ್ತದೆ, ಇದರಿಂದ ವಿದ್ಯಾರ್ಥಿಗಳು ಹಾಗೂ ಅಸಕ್ತರು ಕೇವಲ ಜ್ಞಾನವನ್ನು ಗಳಿಸುವುದಲ್ಲ, ಜಾಗತಿಕ ಜವಾಬ್ದಾರಿಯುತ ನಾಗರಿಕರಾಗಿ ಬೆಳೆಯಲು ಸಹ ಅವಕಾಶವನ್ನು ಪಡೆಯುತ್ತಾರೆ.

ಕ್ವಿಜ್ ಸ್ವರೂಪವು ಸ್ವತಃ ನಮ್ಮ ಸಂಸ್ಥೆಯ ಮೌಲ್ಯಗಳ ಪ್ರತಿಬಿಂಬವಾಗಿದೆಬುದ್ಧಿವAತಿಕೆಯ ಕುತೂಹಲ, ತರ್ಕಶಕ್ತಿಯ ಚಿಂತನೆ, ಮತ್ತು ಕಲಿಕೆಯ ಅಭಿಮಾನ. ಇದು ಸಮಾನ ಮನಸ್ಕರುಗಳನ್ನು ಒಟ್ಟು ಸೇರಿಸಿ, ವೈವಿಧ್ಯಮಯ ವಿಷಯಗಳ ಕುರಿತು ಚರ್ಚೆ ಮಾಡಲು ಒಂದು ವೇದಿಕೆ ಕಲ್ಪಸಿದಂತಾಗಿದೆ, ಇಲ್ಲಿ ಹೊಸ ಅಂಶಗಳನ್ನು ಅರಿಯಲು ಮತ್ತು ಪ್ರಶ್ನಿಸುವ ಮನೋವೃತ್ತಿಯನ್ನು ಬೆಳೆಸಲು ಪ್ರೇರೇಪಿಸುತ್ತದೆ ಎಂದರು.

ದಂತ ವೈದ್ಯಕೀಯ ಕಾಲೇಜಿನ ಕಾರ್ಯನಿರ್ವಾಹಕ ನಿರ್ದೇಶಕರಾದ ಡಾ. ವಿನಯ ಶ್ರೀನಿವಾಸ್ ಮಾತನಾಡಿ, ಚಂದನ ವಾಹಿನಿಯಲ್ಲಿ ನಡೆಯುವ ಥಟ್ ಅಂತ ಹೇಳಿ ಕಾರ್ಯಕ್ರಮಕ್ಕೆ ತೆರಳಲು ಆಗದೇ ಇರುವವರಿಗೆ ಹಾಗೂ ಜ್ಞಾನ ಪ್ರಸಾರದ ಉದ್ದೇಶದಿಂದ ನಮ್ಮ ಕಾಲೇಜಿನಲ್ಲಿ ಈ ಕ್ವಿಜ್ ಕಾರ್ಯಕ್ರಮ ಆಯೋಜಿಸಿದ್ದೆವು. ನಮ್ಮ ಸಂಸ್ಕಾರ, ಸಂಸ್ಕೃತಿ, ನಾಡು, ಭಾಷೆಯ ಹಿರಿಮೆಯನ್ನು ತಿಳಿಸಲು ಇದು ಸಹಕಾರಿಯಾಗಿದೆ ಎಂದರು.
ಕಾಲೇಜಿನ ವಿದ್ಯಾರ್ಥಿಗಳು ಮಾತ್ರವಲ್ಲದೇ ಸಾರ್ವಜನಿಕ ವಲಯದಿಂದ 60ಕ್ಕೂ ಅಧಿಕ ಮಂದಿ ಸ್ಪರ್ಧೆಯಲ್ಲಿ ಪಾಲ್ಗೊಂಡಿದ್ದರು. ಹಿರಿಯ ಪತ್ರಕರ್ತ ಹಾಲಸ್ವಾಮಿ ಸಹ ಸ್ಪರ್ಧೆಯಲ್ಲಿ ಭಾಗವಹಿಸಿದ್ದರು.

ಇಂಗ್ಲಿಷ್ ಸ್ನಾತಕೋತ್ತರ ಪದವಿ ಕಲಿಯುತ್ತಿರುವ ಜನ್ಮತಃ ಅಂಧ ವಿದ್ಯಾರ್ಥಿ ಕೆ. ಅಭಿರಾಮ್ ಭಾಗವತ್ ಅವರು ಲಿಖಿತ ಪರೀಕ್ಷೆ ಬರೆದು, ಸ್ಪರ್ಧಿಯಾಗಿ ಪಾಲ್ಗೊಂಡಿದ್ದು ವಿಶೇಷವಾಗಿತ್ತು.

ನಾ. ಸೋಮೇಶ್ವರ ಅವರು ಚಂದನ ವಾಹಿನಿಯಲ್ಲಿ ಥಟ್ ಅಂತ ಹೇಳಿ ರೀತಿಯಲ್ಲಿಯೇ ಇಲ್ಲಿಯೂ ಸಹ ಕಾರ್ಯಕ್ರಮ ನಡೆಸಿಕೊಟ್ಟಿದ್ದು ವಿಶೇಷವಾಗಿತ್ತು. ಸ್ಪರ್ಧೆಗಾಗಿ ಚಂದನ ವಾಹಿನಿಯಲ್ಲಿರುವ ರೀತಿಯಲ್ಲಿಯೇ ವ್ಯವಸ್ಥೆ ಮಾಡಲಾಗಿತ್ತು. ವಿಜೇತರಿಗೆ ಸುಮಾರು 150ಕ್ಕೂ ಅಧಿಕ ಪುಸ್ತಕಗಳನ್ನು ಬಹುಮಾನವಾಗಿ ನೀಡಲಾಯಿತು. ಸ್ಪರ್ಧಾರ್ಥಿಗಳಿಗೆ ಕಾಲೇಜು ವತಿಯಿಂದ ಭೋಜನ ವ್ಯವಸ್ಥೆಯನ್ನೂ ಸಹ ಮಾಡಲಾಗಿತ್ತು.

ಸುಬ್ಬಯ್ಯ ವೈದ್ಯಕೀಯ ಕಾಲೇಜಿನ ವೈದ್ಯಕೀಯ ನಿರ್ದೇಶಕ ಡಾ.ಎಸ್. ನಾಗೇಂದ್ರ, ಕಾರ್ಯನಿರ್ವಾಹಕ ನಿರ್ದೇಶಕರಾದ ಡಾ.ಲತಾ ನಾಗೇಂದ್ರ, ಪೆಥಾಲಜಿ ವಿಭಾಗದ ಡಾ.ವೈಭವ್ ನಾಯಕ್, ಸಿಮ್ಸ್ ಸಂಸ್ಥೆ ಡಾ. ಶ್ರೀಧರ್, ನರ್ಸಿಂಗ್ ಪ್ರಾಂಶುಪಾಲರಾದ ಡಾ. ವನಮಾಲ ಸತೀಶ್ ಸೇರಿದಂತೆ ಹಲವರು ಇದ್ದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

http://kalpa.news/wp-content/uploads/2024/04/VID-20240426-WA0008.mp4

 

Tags: Kannada_NewsKannada_News_LiveKannada_News_Online ShivamoggaKannada_WebsiteKannadaNewsWebsiteLatestNewsKannadaLocalNewsMalnadNewsNa SomeshwarNews_in_KannadaNews_KannadaQuizShimogaShivamoggaNewsSubbaiah Medical Collegeಥಟ್ ಅಂತ ಹೇಳಿ ಖ್ಯಾತಿಯ ನಾ. ಸೋಮೇಶ್ವರಮಲೆನಾಡು_ಸುದ್ಧಿರಸಪ್ರಶ್ನೆಶಿವಮೊಗ್ಗಶಿವಮೊಗ್ಗ_ನ್ಯೂಸ್ಸುಬ್ಬಯ್ಯ ವೈದ್ಯಕೀಯ ಮಹಾವಿದ್ಯಾಲಯ
Share196Tweet123Send
Previous Post

ಕೃಷಿ ವಿವಿ ವಿದ್ಯಾರ್ಥಿಗಳಿಂದ ಭತ್ತ ಬೆಳೆಯುವ ವಿಧಾನಗಳ ಪ್ರಾತ್ಯಕ್ಷಿಕೆ

Next Post

ಕಟೀಲ್ ಅಶೋಕ್ ಪೈ ಕಾಲೇಜಿಗೆ ಮೂರು ರ‍್ಯಾಂಕ್ | ಇವರೇ ಮೂವರು ಸಾಧಕರು

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ಕಟೀಲ್ ಅಶೋಕ್ ಪೈ ಕಾಲೇಜಿಗೆ ಮೂರು ರ‍್ಯಾಂಕ್ | ಇವರೇ ಮೂವರು ಸಾಧಕರು

ಕಟೀಲ್ ಅಶೋಕ್ ಪೈ ಕಾಲೇಜಿಗೆ ಮೂರು ರ‍್ಯಾಂಕ್ | ಇವರೇ ಮೂವರು ಸಾಧಕರು

Leave a Reply Cancel reply

Your email address will not be published. Required fields are marked *

  • Trending
  • Latest
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

January 16, 2026
ತಾಳಗುಪ್ಪ-ಬೆಂಗಳೂರು ರೈಲಿನಲ್ಲಿ ದರೋಡೆಕೋರನ ದಾಂಧಲೆ | ಮಾರಕಾಸ್ತ್ರದಿಂದ ಹಲ್ಲೆ ಯತ್ನ

ತಾಳಗುಪ್ಪ-ಬೆಂಗಳೂರು ರೈಲಿನಲ್ಲಿ ದರೋಡೆಕೋರನ ದಾಂಧಲೆ | ಮಾರಕಾಸ್ತ್ರದಿಂದ ಹಲ್ಲೆ ಯತ್ನ

February 12, 2026
ಪೊಂಗಲ್ ಹಬ್ಬದ ಪ್ರಯುಕ್ತ ಕೊಟ್ಟಾಯಂ – ಬೆಂಗಳೂರು ಕ್ಯಾಂಟೋನ್ಮೆಂಟ್ ನಡುವೆ ವಿಶೇಷ ರೈಲು ಸಂಚಾರ

ಈ ಎಲ್ಲಾ ದಿನಗಳು ಮೈಸೂರು-ಶಿವಮೊಗ್ಗ ಎಕ್ಸ್’ಪ್ರೆಸ್, ಅರಸೀಕೆರೆ ರೈಲುಗಳ ಬಿಗ್ ಅಪ್ಡೇಟ್

February 6, 2026
ಚಾಮರಾಜನಗರ | ಡಾ. ರಾಜ್ ಒಡನಾಡಿ ಕೃಷ್ಣ ಟಾಕೀಸ್ ಚಂದ್ರಣ್ಣರವರಿಗೆ ಗೌರವ ಸನ್ಮಾನ

ಚಾಮರಾಜನಗರ | ಡಾ. ರಾಜ್ ಒಡನಾಡಿ ಕೃಷ್ಣ ಟಾಕೀಸ್ ಚಂದ್ರಣ್ಣರವರಿಗೆ ಗೌರವ ಸನ್ಮಾನ

February 27, 2026
40 ಗ್ರೀನ್ ಹೈಡ್ರೋಜನ್ ಚಾಲಿತ ಹೆವಿ ಡ್ಯೂಟಿ ಟ್ರಕ್‌’ಗಳ ನಿಯೋಜನೆಗೆ ವಿ.ಒ. ಚಿದಂಬರನಾರ್ ಬಂದರು ಪ್ರಾಧಿಕಾರದ ಜೊತೆ ಎಂಓಯುಗೆ ಸಹಿ ಹಾಕಿದ ಟಾಟಾ ಮೋಟಾರ್ಸ್‌

40 ಗ್ರೀನ್ ಹೈಡ್ರೋಜನ್ ಚಾಲಿತ ಹೆವಿ ಡ್ಯೂಟಿ ಟ್ರಕ್‌’ಗಳ ನಿಯೋಜನೆಗೆ ವಿ.ಒ. ಚಿದಂಬರನಾರ್ ಬಂದರು ಪ್ರಾಧಿಕಾರದ ಜೊತೆ ಎಂಓಯುಗೆ ಸಹಿ ಹಾಕಿದ ಟಾಟಾ ಮೋಟಾರ್ಸ್‌

February 27, 2026
ಪ್ರಧಾನ ಮಠದ ಪುನರ್ ನಿರ್ಮಾಣ ಸಹಸ್ರಮಾನದ ಕಾರ್ಯ: ರಾಘವೇಶ್ವರ ಶ್ರೀ

ಪ್ರಧಾನ ಮಠದ ಪುನರ್ ನಿರ್ಮಾಣ ಸಹಸ್ರಮಾನದ ಕಾರ್ಯ: ರಾಘವೇಶ್ವರ ಶ್ರೀ

February 27, 2026
ವಿದ್ಯಾರ್ಥಿಗಳಿಗೆ ಸ್ಥಳೀಯ ಸಾಧಕರ ಪರಿಚಯ ಅತ್ಯಗತ್ಯ: ಡಾ. ಶ್ರೀನಿವಾಸ್ ಅಭಿಪ್ರಾಯ

ವಿದ್ಯಾರ್ಥಿಗಳಿಗೆ ಸ್ಥಳೀಯ ಸಾಧಕರ ಪರಿಚಯ ಅತ್ಯಗತ್ಯ: ಡಾ. ಶ್ರೀನಿವಾಸ್ ಅಭಿಪ್ರಾಯ

February 27, 2026
ನರೇಂದ್ರ ಮೋದಿಯವರನ್ನು ಪ್ರಧಾನಿ ಹುದ್ದೆಯಿಂದ ವಜಾಗೊಳಿಸಬೇಕು: ರಾಷ್ಟ್ರಪತಿಗಳಿಗೆ ಮನವಿ

ಸಾಮಾಜಿಕ ಜಾಲತಾಣಗಳಲ್ಲಿ ಪ್ರಧಾನಮಂತ್ರಿಯವರ ಅವಹೇಳನ ಹಿನ್ನೆಲೆ: ದೂರು ದಾಖಲು

February 27, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL